Categories: ಕೋಲಾರ

ಹಾಪ್ ಕಾಮ್ಸ್ ನಲ್ಲಿ ಭ್ರಷ್ಟಾಚಾರ ತನಿಖೆಗೆ ಒತ್ತಾಯಿಸಿ ಲಾಲ್ ಬಾಗ್ ಮುತ್ತಿಗೆಗೆ ಹೊರಟ ಬಿಜೆಪಿ ರೈತ ಮೋರ್ಚಾ ಪದಾಧಿಕಾರಿಗಳು

ಕೋಲಾರ: ರೈತರ ಹಾಗೂ ಗ್ರಾಹಕರ ವಿರೋಧಿಯಾಗಿರುವ ರಾಜ್ಯದ ಹಾಪ್ ಕಾಮ್ಸ್ ಸಂಸ್ಥೆಯಲ್ಲಿ ನಡೆದಿರುವ ಭ್ರಷ್ಟಾಚಾರವನ್ನು ತನಿಖೆಗೆ ಒತ್ತಾಯಿಸಿ ರಾಜ್ಯ ಬಿಜೆಪಿ ರೈತ ಮೋರ್ಚಾದಿಂದ ಹಮ್ಮಿಕೊಂಡಿರುವ ಬೆಂಗಳೂರಿನ ಲಾಲ್ ಬಾಗ್ ಮುತ್ತಿಗೆಗೆ ಜಿಲ್ಲೆಯ ರೈತ ಮೋರ್ಚಾ ಪದಾಧಿಕಾರಿಗಳು ಹಾಗೂ ಪ್ರಗತಿಪರ ರೈತರು ಶುಕ್ರವಾರ ನಗರದ ಅಂಬೇಡ್ಕರ್ ವೃತ್ತದಿಂದ ತೆರಳಿದರು.

ಈ ಸಂದರ್ಭದಲ್ಲಿ ಬಿಜೆಪಿ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿಜೆಪಿ ಶಿವಣ್ಣ ಮಾತನಾಡಿ ಸರ್ಕಾರಿ ಸ್ವಾಮ್ಯದ ತೋಟಗಾರಿಕಾ ಉತ್ಪಾದಕರ ಸಹಕಾರ ಮಾರುಕಟ್ಟೆ ಮತ್ತು ಸಂಸ್ಕರಣಾ ಸೊಸೈಟಿ ಹಾಪ್ ಕಾಮ್ಸ್ ಮಳಿಗೆಗಳಲ್ಲಿ ಭ್ರಷ್ಟಾಚಾರ ಹೆಚ್ಚಾಗಿ ಮುಂಚುವ ಹಂತಕ್ಕೆ ತಲುಪಿದೆ ಕಳೆದ ಐದು ವರ್ಷಗಳಲ್ಲಿ ಸುಮಾರು 140 ಮಳಿಗೆಗಳನ್ನು ಮುಚ್ಚಲಾಗಿದ್ದು ಇದರಿಂದಾಗಿಯೇ ರೈತರಿಗೆ ಹಾಗೂ ಗ್ರಾಹಕರಿಗೆ ತೊಂದರೆಯಾಗಿದೆ ಇದಕ್ಕೆ ಕಾರಣವಾದವರ ವಿರುದ್ದ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ರೈತ ಮೋರ್ಚಾ ನಗರ ಘಟಕದ ಉಪಾಧ್ಯಕ್ಷ ಕೆ.ಅಮರೇಶ್ ಮಾತನಾಡಿ ರಾಜ್ಯದ ಹಾಪ್ ಕಾಮ್ಸ್ ಸಂಸ್ಥೆಯು ಕಾಂಗ್ರೆಸ್ ಸರ್ಕಾರದ ವೈಫಲ್ಯದಿಂದಾಗಿ ಇವತ್ತು ನಿಷ್ಕ್ರಿಯವಾಗಿದೆ ಜೊತೆಗೆ ದಲ್ಲಾಳಿಗಳ ಕೂಪವಾಗಿದೆ ಸಂಸ್ಥೆಯನ್ನು ಕೂಡಲೇ ಸೂಪರ್ ಸೀಡ್ ಮಾಡಿ ಆಡಳಿತಾಧಿಕಾರಿಯನ್ನು ನೇಮಿಸಿ ಸೂಕ್ತವಾದ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ರೈತ ಮೋರ್ಚಾ ರಾಜ್ಯ ಕಾರ್ಯಕಾರಣಿ ಸದಸ್ಯ ನಾರಾಯಣಶೆಟ್ಟಿ, ಜಿಲ್ಲಾ ಉಪಾಧ್ಯಕ್ಷರಾದ ವೇಣುಗೋಪಾಲ್, ಸತೀಶ್ ರೆಡ್ಡಿ, ನಾರಾಯಣಸ್ವಾಮಿ, ವಿಜಯ ಭಾಸ್ಕರ್ ರೆಡ್ಡಿ, ಜಿಲ್ಲಾ ಕಾರ್ಯದರ್ಶಿ ಶ್ರೀರಾಮಪ್ಪ, ನಗರ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್, ಕಾರ್ಯದರ್ಶಿ ಶ್ರೀಧರ್, ಕೆಜಿಎಫ್ ತಾಲೂಕು ಪ್ರಧಾನ ಕಾರ್ಯದರ್ಶಿ ಸುರೇಶ್ ರೆಡ್ಡಿ, ಮುಖಂಡರಾದ ಓಹಿಲೇಶ್, ಪವನ್ ಚಂದ್ರಶೇಖರ್ ಗೌಡ ಹಾಗೂ ಪ್ರಗತಿಪರ ರೈತ ಮುಂತಾದವರು ಇದ್ದರು.

Ramesh Babu

Journalist

Recent Posts

NWKRTC ಮುಖ್ಯ ಯಾಂತ್ರಿಕ ಮೆಕ್ಯಾನಿಕಲ್ ಇಂಜಿನಿಯರ್ ಮನೆಯಲ್ಲಿ ಲಕ್ಷಾಂತರ ನಗದು-ಚಿನ್ನ ಪತ್ತೆ‌..!

ದಾವಣಗೆರೆ: ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ಮೂವರು ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ…

7 hours ago

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ: MLC ಚುನಾವಣೆ, ಎಸ್‌ಐಆರ್ ಕುರಿತ ಚರ್ಚೆ

ಬಿಡದಿಯ ಖಾಸಗಿ ರೆಸಾರ್ಟ್ ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪಾಲ್ಗೊಂಡು, ಮುಂಬರುವ ವಿಧಾನ…

7 hours ago

ಹೆದ್ದಾರಿಯಲ್ಲಿ ಭೀಕರ ಸರಣಿ ಅಪಘಾತ: ಲಾರಿ ಚಾಲಕನ ಅಜಾಗರೂಕತೆಯಿಂದ ಅನಾಹುತ: ದೃಶ್ಯ ಸಿಸಿಟಿವಿಯಲ್ಲಿ ಸೆರೆ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಲಕ್ಷ್ಮೀಪುರ ಗೇಟ್ ಸಮೀಪದ ರಾಷ್ಟ್ರೀಯ ಹೆದ್ದಾರಿ–648ರಲ್ಲಿ ಲಾರಿ ಚಾಲಕನ ಅಜಾಗರೂಕತೆಯಿಂದ ಭೀಕರ…

13 hours ago

ಯೂರಿಯಾ ಖರೀದಿಗೆ ಎಫ್‌ಐಡಿ ಕಡ್ಡಾಯ: ಎಕರೆಗೆ ತಿಂಗಳಿಗೆ ಒಂದು ಬ್ಯಾಗ್ ವಿತರಣೆ

ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…

22 hours ago

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

1 day ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

1 day ago