Categories: ಕೋಲಾರ

ಹಾಪ್ ಕಾಮ್ಸ್ ನಲ್ಲಿ ಭ್ರಷ್ಟಾಚಾರ ತನಿಖೆಗೆ ಒತ್ತಾಯಿಸಿ ಲಾಲ್ ಬಾಗ್ ಮುತ್ತಿಗೆಗೆ ಹೊರಟ ಬಿಜೆಪಿ ರೈತ ಮೋರ್ಚಾ ಪದಾಧಿಕಾರಿಗಳು

ಕೋಲಾರ: ರೈತರ ಹಾಗೂ ಗ್ರಾಹಕರ ವಿರೋಧಿಯಾಗಿರುವ ರಾಜ್ಯದ ಹಾಪ್ ಕಾಮ್ಸ್ ಸಂಸ್ಥೆಯಲ್ಲಿ ನಡೆದಿರುವ ಭ್ರಷ್ಟಾಚಾರವನ್ನು ತನಿಖೆಗೆ ಒತ್ತಾಯಿಸಿ ರಾಜ್ಯ ಬಿಜೆಪಿ ರೈತ ಮೋರ್ಚಾದಿಂದ ಹಮ್ಮಿಕೊಂಡಿರುವ ಬೆಂಗಳೂರಿನ ಲಾಲ್ ಬಾಗ್ ಮುತ್ತಿಗೆಗೆ ಜಿಲ್ಲೆಯ ರೈತ ಮೋರ್ಚಾ ಪದಾಧಿಕಾರಿಗಳು ಹಾಗೂ ಪ್ರಗತಿಪರ ರೈತರು ಶುಕ್ರವಾರ ನಗರದ ಅಂಬೇಡ್ಕರ್ ವೃತ್ತದಿಂದ ತೆರಳಿದರು.

ಈ ಸಂದರ್ಭದಲ್ಲಿ ಬಿಜೆಪಿ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿಜೆಪಿ ಶಿವಣ್ಣ ಮಾತನಾಡಿ ಸರ್ಕಾರಿ ಸ್ವಾಮ್ಯದ ತೋಟಗಾರಿಕಾ ಉತ್ಪಾದಕರ ಸಹಕಾರ ಮಾರುಕಟ್ಟೆ ಮತ್ತು ಸಂಸ್ಕರಣಾ ಸೊಸೈಟಿ ಹಾಪ್ ಕಾಮ್ಸ್ ಮಳಿಗೆಗಳಲ್ಲಿ ಭ್ರಷ್ಟಾಚಾರ ಹೆಚ್ಚಾಗಿ ಮುಂಚುವ ಹಂತಕ್ಕೆ ತಲುಪಿದೆ ಕಳೆದ ಐದು ವರ್ಷಗಳಲ್ಲಿ ಸುಮಾರು 140 ಮಳಿಗೆಗಳನ್ನು ಮುಚ್ಚಲಾಗಿದ್ದು ಇದರಿಂದಾಗಿಯೇ ರೈತರಿಗೆ ಹಾಗೂ ಗ್ರಾಹಕರಿಗೆ ತೊಂದರೆಯಾಗಿದೆ ಇದಕ್ಕೆ ಕಾರಣವಾದವರ ವಿರುದ್ದ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ರೈತ ಮೋರ್ಚಾ ನಗರ ಘಟಕದ ಉಪಾಧ್ಯಕ್ಷ ಕೆ.ಅಮರೇಶ್ ಮಾತನಾಡಿ ರಾಜ್ಯದ ಹಾಪ್ ಕಾಮ್ಸ್ ಸಂಸ್ಥೆಯು ಕಾಂಗ್ರೆಸ್ ಸರ್ಕಾರದ ವೈಫಲ್ಯದಿಂದಾಗಿ ಇವತ್ತು ನಿಷ್ಕ್ರಿಯವಾಗಿದೆ ಜೊತೆಗೆ ದಲ್ಲಾಳಿಗಳ ಕೂಪವಾಗಿದೆ ಸಂಸ್ಥೆಯನ್ನು ಕೂಡಲೇ ಸೂಪರ್ ಸೀಡ್ ಮಾಡಿ ಆಡಳಿತಾಧಿಕಾರಿಯನ್ನು ನೇಮಿಸಿ ಸೂಕ್ತವಾದ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ರೈತ ಮೋರ್ಚಾ ರಾಜ್ಯ ಕಾರ್ಯಕಾರಣಿ ಸದಸ್ಯ ನಾರಾಯಣಶೆಟ್ಟಿ, ಜಿಲ್ಲಾ ಉಪಾಧ್ಯಕ್ಷರಾದ ವೇಣುಗೋಪಾಲ್, ಸತೀಶ್ ರೆಡ್ಡಿ, ನಾರಾಯಣಸ್ವಾಮಿ, ವಿಜಯ ಭಾಸ್ಕರ್ ರೆಡ್ಡಿ, ಜಿಲ್ಲಾ ಕಾರ್ಯದರ್ಶಿ ಶ್ರೀರಾಮಪ್ಪ, ನಗರ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್, ಕಾರ್ಯದರ್ಶಿ ಶ್ರೀಧರ್, ಕೆಜಿಎಫ್ ತಾಲೂಕು ಪ್ರಧಾನ ಕಾರ್ಯದರ್ಶಿ ಸುರೇಶ್ ರೆಡ್ಡಿ, ಮುಖಂಡರಾದ ಓಹಿಲೇಶ್, ಪವನ್ ಚಂದ್ರಶೇಖರ್ ಗೌಡ ಹಾಗೂ ಪ್ರಗತಿಪರ ರೈತ ಮುಂತಾದವರು ಇದ್ದರು.

Ramesh Babu

Journalist

Recent Posts

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

6 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

2 days ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

3 days ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

4 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

4 days ago