ಹಾಲಿನ ಖರೀದಿ ದರ ಹೆಚ್ಚಿಸಿ, ಪಶು ಆಹಾರದ ಬೆಲೆ ಕಡಿತಗೊಳಿಸುವಂತೆ ಒತ್ತಾಯಿಸಿ ರೈತರ ಪ್ರತಿಭಟನೆ

ಹಾಲಿನ ಖರೀದಿ ದರ ಹೆಚ್ಚಿಸಿ, ಪಶು ಆಹಾರದ ಬೆಲೆ ಕಡಿತಗೊಳಿಸಬೇಕು ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ನೇತೃತ್ವದಲ್ಲಿ ನೂರಾರು ರೈತರು ಕರ್ನಾಟಕ ಹಾಲು ಒಕ್ಕೂಟ ಮಹಮಂಡಳ( ಕೆಎಂಎಫ್) ಕೇಂದ್ರ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

ಸಹಕಾರಿ ಕ್ಷೇತ್ರದಲ್ಲಿ ಬಹಳ ಗಟ್ಟಿಯಾಗಿ ಬೇರೂರಿರುವ ನಮ್ಮ ಹೆಮ್ಮೆಯ ಕರ್ನಾಟಕ ಹಾಲು ಮಹಾ ಮಂಡಲಿ ಸಂಸ್ಥೆಯ ಬೃಹತ್ ಉದ್ಯಮವಾಗಿ ಬೆಳೆದು ಸಾವಿರಾರು ಜನರಿಗೆ ಉದ್ಯೋಗವನ್ನು ನೀಡಿ, ಲಕ್ಷಾಂತರ ಜನ ರೈತರ ಆಶಾಕಿರಣವಾಗಿದೆ. ಈಗ ಈ ಸಂಸ್ಥೆ ವೈಜ್ಞಾನಿಕವಾಗಿ ರೈತರಿಗೆ ಹಾಲಿನ ದರವನ್ನು ನೀಡಿದ್ದರೆ ನಮಗೆ ಸರ್ಕಾರದಿಂದ ಯಾವುದೇ ಸಹಾಯಧನ ಬೇಕಾಗಿರಲಿಲ್ಲ. ಆದರೆ, ರೈತರಿಗೆ ನೀಡುವ ಯೋಗ್ಯ ಬೆಲೆಯನ್ನು ನೀಡದೆ ಸಂಸ್ಥೆಯು ಲಾಭದಾಯಕವಾಗಿ ನಿಲ್ಲದೆ ರೈತರನ್ನು ಸಂಕಷ್ಟಕ್ಕೆ ಪದೇ ಪದೇ ದೂಡುವ ಚಾಳಿ ನಮ್ಮ ಸಂಸ್ಥೆಯಾದ್ದಗಿದೆ. ಯಾವಗಲು ಉತ್ಪಾದಕನ ಆರ್ಥಿಕ ಸ್ಥಿತಿ ಉತ್ತಮವಾಗಿರಬೇಕು, ಈ ಉತ್ತಮ ಕಾರ್ಯಕ್ಕೆ ನಮ್ಮ ಮಹಾ ಮಂಡಲಿ ಮುಂದಾಗಬೇಕು. ಅದನ್ನು ಬಿಟ್ಟು ಪದೇ ಪದೇ ಹಾಲಿನ ದರವನ್ನು ಕಡಿತ ಮಾಡುವುದು, ಇಂಡಿ, ಬೂಸ ಮತ್ತು ಪಶು ಆಹಾರದ ಬೆಲೆಯನ್ನು ಹೆಚ್ಚು ಮಾಡುವುದು ಇದು ಸರಿಯಾದ ಮಾರ್ಗವಲ್ಲ. ಈ ವಾಸ್ತವ ವಿಚಾರಗಳನ್ನು ತಿಳಿಸಲು ನಾವು ಬಂದಿದ್ದೇವೆ ರೈತ ಸಂಘ ಹೇಳಿದೆ.

-:ಹಕ್ಕೊತ್ತಾಯಗಳು:-

1. ರೈತರು ಸರಬರಾಜು ಮಾಡುವ ಪ್ರತೀ ಲೀಟರ್ ಹಾಲಿಗೆ ಕನಿಷ್ಠ 50 ರೂ. ನೀಡಬೇಕು.

2. ಪಶು ಆಹಾರದ ಬೆಲೆ ಪದೇ ಪದೇ ಹೆಚ್ಚಿಸಬಾರದು. ಹಾಲಿನ ದರದ ಪ್ರಮಾಣವನ್ನು ನೋಡಿ ಪಶು ಆಹಾರದ ಬೆಲೆ ನಿಗದಿಯಾಗಬೇಕು.

3. ರೈತರ ಬೆಳೆಯುವ ಜೋಳವನ್ನ ಪಶು ಆಹಾರಕ್ಕೆ ನೇರವಾಗಿ ಖರೀದಿಸಬೇಕು.

4. ಸ್ಥಳೀಯ ಹಾಲು ಮಾರಾಟಕ್ಕೆ ವಿಧಿಸುವ ಲೇವಿಯನ್ನು ರದ್ದುಗೊಳಿಸಬೇಕು.

5. ಹಾಲಿನ ದರ MSP ಶಾಸನಬದ್ದ ಮಾಡುವವರೆಗೆ ಪ್ರೋತ್ಸಹ ಧನ 10ರೂ. ನೀಡಬೇಕು.

6. ಹಾಲಿನ ಬೆಲೆ ನಿಗದಿಯಲ್ಲಿ ಒಕ್ಕೂಟಗಳು ಸ್ವತಂತ್ರವಾಗಿರಬೇಕು.

7. ಈ ಸಂಸ್ಥೆಯ ನೇಮಕಾತಿಯಲ್ಲಿ ಹಾಲು ಉತ್ಪಾದಕರ ಮಕ್ಕಳಿಗೆ ಮಾತ್ರ ಸಿಮಿತವಾಗಿರಬೇಕು.

8. ಸ್ಥಳೀಯ ಪ್ರಾಥಮಿಕ ಸಹಕಾರಿ ಸಂಘಗಳ ನೌಕರರನ್ನು ಒಕ್ಕೂಟದ ನೌಕರರೆಂದು ಪರಿಗಣಿಸಬೇಕು.

Ramesh Babu

Journalist

Recent Posts

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ…?

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಎಲೆಕ್ಷನ್: ಗೆದ್ದ ಅಭ್ಯರ್ಥಿ ಪಡೆದ ಮತ ಎಷ್ಟು ಗೊತ್ತಾ...? ವಾರ್ಡ್ ನಂ.: 1 ಹೆಸರು: ಶ್ವೇತಾ…

37 minutes ago

ಮರ್ಯಾದಾ ಹತ್ಯೆ……..

  ಮರ್ಯಾದಾ ಹತ್ಯೆ........ ಕ್ಷಮಿಸಿ ಬಿಡು ಮಾನ್ಯ ಎಂಬ ಹುಬ್ಬಳ್ಳಿ ಹತ್ತಿರದ ನನ್ನ ಗರ್ಭಿಣಿ ತಂಗಿಯೇ..... ನಮ್ಮದೇ ದೇಶದ, ನಮ್ಮದೇ…

10 hours ago

ಅಪಘಾತದಲ್ಲಿ ಪ್ರಜ್ಞೆ ತಪ್ಪಿಬಿದ್ದ ವ್ಯಕ್ತಿ: ಆಸ್ಪತ್ರೆಗೆ ದಾಖಲಿಸುವುದಾಗಿ ನಂಬಿಸಿ ಫೋನ್ ಪೇ ಮೂಲಕ 80 ಸಾವಿರ ವಸೂಲಿ: ಆಸ್ಪತ್ರೆಗೆ ದಾಖಲಿಸದೇ ಪರಾರಿಯಾಗಿದ್ದ ಐನಾತಿಗಳ ಬಂಧನ

ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…

21 hours ago

ಚಿನ್ನಾಭರಣ ಮಳಿಗೆಯಲ್ಲಿ ದರೋಡೆ….3 ಕೋಟಿ ಮೌಲ್ಯದ 140 ಕೆಜಿ ಬೆಳ್ಳಿ ಅಭರಣಗಳ ಕಳವು

ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…

1 day ago

ಕಾಲೇಜಿನಿಂದ ಸಹೋದರನನ್ನು ಮನೆಗೆ ಕರೆದುಕೊಂಡು ಬರುವಾಗ ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ನಲ್ಲಿದ್ದ ಅಣ್ಣ ಸಾವು, ತಮ್ಮನಿಗೆ ಗಾಯ

ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…

1 day ago