ಹಾಲಿನ ಖರೀದಿ ದರ ಹೆಚ್ಚಿಸಿ, ಪಶು ಆಹಾರದ ಬೆಲೆ ಕಡಿತಗೊಳಿಸುವಂತೆ ಒತ್ತಾಯಿಸಿ ರೈತರ ಪ್ರತಿಭಟನೆ

ಹಾಲಿನ ಖರೀದಿ ದರ ಹೆಚ್ಚಿಸಿ, ಪಶು ಆಹಾರದ ಬೆಲೆ ಕಡಿತಗೊಳಿಸಬೇಕು ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ನೇತೃತ್ವದಲ್ಲಿ ನೂರಾರು ರೈತರು ಕರ್ನಾಟಕ ಹಾಲು ಒಕ್ಕೂಟ ಮಹಮಂಡಳ( ಕೆಎಂಎಫ್) ಕೇಂದ್ರ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

ಸಹಕಾರಿ ಕ್ಷೇತ್ರದಲ್ಲಿ ಬಹಳ ಗಟ್ಟಿಯಾಗಿ ಬೇರೂರಿರುವ ನಮ್ಮ ಹೆಮ್ಮೆಯ ಕರ್ನಾಟಕ ಹಾಲು ಮಹಾ ಮಂಡಲಿ ಸಂಸ್ಥೆಯ ಬೃಹತ್ ಉದ್ಯಮವಾಗಿ ಬೆಳೆದು ಸಾವಿರಾರು ಜನರಿಗೆ ಉದ್ಯೋಗವನ್ನು ನೀಡಿ, ಲಕ್ಷಾಂತರ ಜನ ರೈತರ ಆಶಾಕಿರಣವಾಗಿದೆ. ಈಗ ಈ ಸಂಸ್ಥೆ ವೈಜ್ಞಾನಿಕವಾಗಿ ರೈತರಿಗೆ ಹಾಲಿನ ದರವನ್ನು ನೀಡಿದ್ದರೆ ನಮಗೆ ಸರ್ಕಾರದಿಂದ ಯಾವುದೇ ಸಹಾಯಧನ ಬೇಕಾಗಿರಲಿಲ್ಲ. ಆದರೆ, ರೈತರಿಗೆ ನೀಡುವ ಯೋಗ್ಯ ಬೆಲೆಯನ್ನು ನೀಡದೆ ಸಂಸ್ಥೆಯು ಲಾಭದಾಯಕವಾಗಿ ನಿಲ್ಲದೆ ರೈತರನ್ನು ಸಂಕಷ್ಟಕ್ಕೆ ಪದೇ ಪದೇ ದೂಡುವ ಚಾಳಿ ನಮ್ಮ ಸಂಸ್ಥೆಯಾದ್ದಗಿದೆ. ಯಾವಗಲು ಉತ್ಪಾದಕನ ಆರ್ಥಿಕ ಸ್ಥಿತಿ ಉತ್ತಮವಾಗಿರಬೇಕು, ಈ ಉತ್ತಮ ಕಾರ್ಯಕ್ಕೆ ನಮ್ಮ ಮಹಾ ಮಂಡಲಿ ಮುಂದಾಗಬೇಕು. ಅದನ್ನು ಬಿಟ್ಟು ಪದೇ ಪದೇ ಹಾಲಿನ ದರವನ್ನು ಕಡಿತ ಮಾಡುವುದು, ಇಂಡಿ, ಬೂಸ ಮತ್ತು ಪಶು ಆಹಾರದ ಬೆಲೆಯನ್ನು ಹೆಚ್ಚು ಮಾಡುವುದು ಇದು ಸರಿಯಾದ ಮಾರ್ಗವಲ್ಲ. ಈ ವಾಸ್ತವ ವಿಚಾರಗಳನ್ನು ತಿಳಿಸಲು ನಾವು ಬಂದಿದ್ದೇವೆ ರೈತ ಸಂಘ ಹೇಳಿದೆ.

-:ಹಕ್ಕೊತ್ತಾಯಗಳು:-

1. ರೈತರು ಸರಬರಾಜು ಮಾಡುವ ಪ್ರತೀ ಲೀಟರ್ ಹಾಲಿಗೆ ಕನಿಷ್ಠ 50 ರೂ. ನೀಡಬೇಕು.

2. ಪಶು ಆಹಾರದ ಬೆಲೆ ಪದೇ ಪದೇ ಹೆಚ್ಚಿಸಬಾರದು. ಹಾಲಿನ ದರದ ಪ್ರಮಾಣವನ್ನು ನೋಡಿ ಪಶು ಆಹಾರದ ಬೆಲೆ ನಿಗದಿಯಾಗಬೇಕು.

3. ರೈತರ ಬೆಳೆಯುವ ಜೋಳವನ್ನ ಪಶು ಆಹಾರಕ್ಕೆ ನೇರವಾಗಿ ಖರೀದಿಸಬೇಕು.

4. ಸ್ಥಳೀಯ ಹಾಲು ಮಾರಾಟಕ್ಕೆ ವಿಧಿಸುವ ಲೇವಿಯನ್ನು ರದ್ದುಗೊಳಿಸಬೇಕು.

5. ಹಾಲಿನ ದರ MSP ಶಾಸನಬದ್ದ ಮಾಡುವವರೆಗೆ ಪ್ರೋತ್ಸಹ ಧನ 10ರೂ. ನೀಡಬೇಕು.

6. ಹಾಲಿನ ಬೆಲೆ ನಿಗದಿಯಲ್ಲಿ ಒಕ್ಕೂಟಗಳು ಸ್ವತಂತ್ರವಾಗಿರಬೇಕು.

7. ಈ ಸಂಸ್ಥೆಯ ನೇಮಕಾತಿಯಲ್ಲಿ ಹಾಲು ಉತ್ಪಾದಕರ ಮಕ್ಕಳಿಗೆ ಮಾತ್ರ ಸಿಮಿತವಾಗಿರಬೇಕು.

8. ಸ್ಥಳೀಯ ಪ್ರಾಥಮಿಕ ಸಹಕಾರಿ ಸಂಘಗಳ ನೌಕರರನ್ನು ಒಕ್ಕೂಟದ ನೌಕರರೆಂದು ಪರಿಗಣಿಸಬೇಕು.

Ramesh Babu

Journalist

Recent Posts

ನಾಯಿ, ಹಾವು/ ಇತರೆ ಪ್ರಾಣಿಗಳ ದಾಳಿ ಪ್ರಕರಣಗಳಲ್ಲಿ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳು

ನಮ್ಮ‌ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…

2 hours ago

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು….ಮನಸ್ಸಿನ ದಾರಿಯಲ್ಲಿ ಅನಂತ ಪಯಣ….

ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…

5 hours ago

ನಿರ್ಜನ ಪ್ರದೇಶದಲ್ಲಿ ದೊರೆತಿದ್ದ ನವಜಾತ ಶಿಶುವಿನ ಆರೋಗ್ಯ ಸ್ಥಿರ: ಜಿಲ್ಲಾ ಸರ್ಕಾರಿ ದತ್ತು ಕೇಂದ್ರಕ್ಕೆ ಹಸ್ತಾಂತರ

ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…

6 hours ago

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

17 hours ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

17 hours ago

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆ: ಮಕ್ಕಳು, ಶಿಕ್ಷಕ ಭಾವುಕ

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…

20 hours ago