ಹಾಲಿನ ಖರೀದಿ ದರ ಹೆಚ್ಚಿಸಿ, ಪಶು ಆಹಾರದ ಬೆಲೆ ಕಡಿತಗೊಳಿಸಬೇಕು ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ನೇತೃತ್ವದಲ್ಲಿ ನೂರಾರು ರೈತರು ಕರ್ನಾಟಕ ಹಾಲು ಒಕ್ಕೂಟ ಮಹಮಂಡಳ( ಕೆಎಂಎಫ್) ಕೇಂದ್ರ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.
ಸಹಕಾರಿ ಕ್ಷೇತ್ರದಲ್ಲಿ ಬಹಳ ಗಟ್ಟಿಯಾಗಿ ಬೇರೂರಿರುವ ನಮ್ಮ ಹೆಮ್ಮೆಯ ಕರ್ನಾಟಕ ಹಾಲು ಮಹಾ ಮಂಡಲಿ ಸಂಸ್ಥೆಯ ಬೃಹತ್ ಉದ್ಯಮವಾಗಿ ಬೆಳೆದು ಸಾವಿರಾರು ಜನರಿಗೆ ಉದ್ಯೋಗವನ್ನು ನೀಡಿ, ಲಕ್ಷಾಂತರ ಜನ ರೈತರ ಆಶಾಕಿರಣವಾಗಿದೆ. ಈಗ ಈ ಸಂಸ್ಥೆ ವೈಜ್ಞಾನಿಕವಾಗಿ ರೈತರಿಗೆ ಹಾಲಿನ ದರವನ್ನು ನೀಡಿದ್ದರೆ ನಮಗೆ ಸರ್ಕಾರದಿಂದ ಯಾವುದೇ ಸಹಾಯಧನ ಬೇಕಾಗಿರಲಿಲ್ಲ. ಆದರೆ, ರೈತರಿಗೆ ನೀಡುವ ಯೋಗ್ಯ ಬೆಲೆಯನ್ನು ನೀಡದೆ ಸಂಸ್ಥೆಯು ಲಾಭದಾಯಕವಾಗಿ ನಿಲ್ಲದೆ ರೈತರನ್ನು ಸಂಕಷ್ಟಕ್ಕೆ ಪದೇ ಪದೇ ದೂಡುವ ಚಾಳಿ ನಮ್ಮ ಸಂಸ್ಥೆಯಾದ್ದಗಿದೆ. ಯಾವಗಲು ಉತ್ಪಾದಕನ ಆರ್ಥಿಕ ಸ್ಥಿತಿ ಉತ್ತಮವಾಗಿರಬೇಕು, ಈ ಉತ್ತಮ ಕಾರ್ಯಕ್ಕೆ ನಮ್ಮ ಮಹಾ ಮಂಡಲಿ ಮುಂದಾಗಬೇಕು. ಅದನ್ನು ಬಿಟ್ಟು ಪದೇ ಪದೇ ಹಾಲಿನ ದರವನ್ನು ಕಡಿತ ಮಾಡುವುದು, ಇಂಡಿ, ಬೂಸ ಮತ್ತು ಪಶು ಆಹಾರದ ಬೆಲೆಯನ್ನು ಹೆಚ್ಚು ಮಾಡುವುದು ಇದು ಸರಿಯಾದ ಮಾರ್ಗವಲ್ಲ. ಈ ವಾಸ್ತವ ವಿಚಾರಗಳನ್ನು ತಿಳಿಸಲು ನಾವು ಬಂದಿದ್ದೇವೆ ರೈತ ಸಂಘ ಹೇಳಿದೆ.
-:ಹಕ್ಕೊತ್ತಾಯಗಳು:-
1. ರೈತರು ಸರಬರಾಜು ಮಾಡುವ ಪ್ರತೀ ಲೀಟರ್ ಹಾಲಿಗೆ ಕನಿಷ್ಠ 50 ರೂ. ನೀಡಬೇಕು.
2. ಪಶು ಆಹಾರದ ಬೆಲೆ ಪದೇ ಪದೇ ಹೆಚ್ಚಿಸಬಾರದು. ಹಾಲಿನ ದರದ ಪ್ರಮಾಣವನ್ನು ನೋಡಿ ಪಶು ಆಹಾರದ ಬೆಲೆ ನಿಗದಿಯಾಗಬೇಕು.
3. ರೈತರ ಬೆಳೆಯುವ ಜೋಳವನ್ನ ಪಶು ಆಹಾರಕ್ಕೆ ನೇರವಾಗಿ ಖರೀದಿಸಬೇಕು.
4. ಸ್ಥಳೀಯ ಹಾಲು ಮಾರಾಟಕ್ಕೆ ವಿಧಿಸುವ ಲೇವಿಯನ್ನು ರದ್ದುಗೊಳಿಸಬೇಕು.
5. ಹಾಲಿನ ದರ MSP ಶಾಸನಬದ್ದ ಮಾಡುವವರೆಗೆ ಪ್ರೋತ್ಸಹ ಧನ 10ರೂ. ನೀಡಬೇಕು.
6. ಹಾಲಿನ ಬೆಲೆ ನಿಗದಿಯಲ್ಲಿ ಒಕ್ಕೂಟಗಳು ಸ್ವತಂತ್ರವಾಗಿರಬೇಕು.
7. ಈ ಸಂಸ್ಥೆಯ ನೇಮಕಾತಿಯಲ್ಲಿ ಹಾಲು ಉತ್ಪಾದಕರ ಮಕ್ಕಳಿಗೆ ಮಾತ್ರ ಸಿಮಿತವಾಗಿರಬೇಕು.
8. ಸ್ಥಳೀಯ ಪ್ರಾಥಮಿಕ ಸಹಕಾರಿ ಸಂಘಗಳ ನೌಕರರನ್ನು ಒಕ್ಕೂಟದ ನೌಕರರೆಂದು ಪರಿಗಣಿಸಬೇಕು.
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…