ಹಾಲಿನ ಖರೀದಿ ದರ ಹೆಚ್ಚಿಸಿ, ಪಶು ಆಹಾರದ ಬೆಲೆ ಕಡಿತಗೊಳಿಸುವಂತೆ ಒತ್ತಾಯಿಸಿ ರೈತರ ಪ್ರತಿಭಟನೆ

ಹಾಲಿನ ಖರೀದಿ ದರ ಹೆಚ್ಚಿಸಿ, ಪಶು ಆಹಾರದ ಬೆಲೆ ಕಡಿತಗೊಳಿಸಬೇಕು ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ನೇತೃತ್ವದಲ್ಲಿ ನೂರಾರು ರೈತರು ಕರ್ನಾಟಕ ಹಾಲು ಒಕ್ಕೂಟ ಮಹಮಂಡಳ( ಕೆಎಂಎಫ್) ಕೇಂದ್ರ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

ಸಹಕಾರಿ ಕ್ಷೇತ್ರದಲ್ಲಿ ಬಹಳ ಗಟ್ಟಿಯಾಗಿ ಬೇರೂರಿರುವ ನಮ್ಮ ಹೆಮ್ಮೆಯ ಕರ್ನಾಟಕ ಹಾಲು ಮಹಾ ಮಂಡಲಿ ಸಂಸ್ಥೆಯ ಬೃಹತ್ ಉದ್ಯಮವಾಗಿ ಬೆಳೆದು ಸಾವಿರಾರು ಜನರಿಗೆ ಉದ್ಯೋಗವನ್ನು ನೀಡಿ, ಲಕ್ಷಾಂತರ ಜನ ರೈತರ ಆಶಾಕಿರಣವಾಗಿದೆ. ಈಗ ಈ ಸಂಸ್ಥೆ ವೈಜ್ಞಾನಿಕವಾಗಿ ರೈತರಿಗೆ ಹಾಲಿನ ದರವನ್ನು ನೀಡಿದ್ದರೆ ನಮಗೆ ಸರ್ಕಾರದಿಂದ ಯಾವುದೇ ಸಹಾಯಧನ ಬೇಕಾಗಿರಲಿಲ್ಲ. ಆದರೆ, ರೈತರಿಗೆ ನೀಡುವ ಯೋಗ್ಯ ಬೆಲೆಯನ್ನು ನೀಡದೆ ಸಂಸ್ಥೆಯು ಲಾಭದಾಯಕವಾಗಿ ನಿಲ್ಲದೆ ರೈತರನ್ನು ಸಂಕಷ್ಟಕ್ಕೆ ಪದೇ ಪದೇ ದೂಡುವ ಚಾಳಿ ನಮ್ಮ ಸಂಸ್ಥೆಯಾದ್ದಗಿದೆ. ಯಾವಗಲು ಉತ್ಪಾದಕನ ಆರ್ಥಿಕ ಸ್ಥಿತಿ ಉತ್ತಮವಾಗಿರಬೇಕು, ಈ ಉತ್ತಮ ಕಾರ್ಯಕ್ಕೆ ನಮ್ಮ ಮಹಾ ಮಂಡಲಿ ಮುಂದಾಗಬೇಕು. ಅದನ್ನು ಬಿಟ್ಟು ಪದೇ ಪದೇ ಹಾಲಿನ ದರವನ್ನು ಕಡಿತ ಮಾಡುವುದು, ಇಂಡಿ, ಬೂಸ ಮತ್ತು ಪಶು ಆಹಾರದ ಬೆಲೆಯನ್ನು ಹೆಚ್ಚು ಮಾಡುವುದು ಇದು ಸರಿಯಾದ ಮಾರ್ಗವಲ್ಲ. ಈ ವಾಸ್ತವ ವಿಚಾರಗಳನ್ನು ತಿಳಿಸಲು ನಾವು ಬಂದಿದ್ದೇವೆ ರೈತ ಸಂಘ ಹೇಳಿದೆ.

-:ಹಕ್ಕೊತ್ತಾಯಗಳು:-

1. ರೈತರು ಸರಬರಾಜು ಮಾಡುವ ಪ್ರತೀ ಲೀಟರ್ ಹಾಲಿಗೆ ಕನಿಷ್ಠ 50 ರೂ. ನೀಡಬೇಕು.

2. ಪಶು ಆಹಾರದ ಬೆಲೆ ಪದೇ ಪದೇ ಹೆಚ್ಚಿಸಬಾರದು. ಹಾಲಿನ ದರದ ಪ್ರಮಾಣವನ್ನು ನೋಡಿ ಪಶು ಆಹಾರದ ಬೆಲೆ ನಿಗದಿಯಾಗಬೇಕು.

3. ರೈತರ ಬೆಳೆಯುವ ಜೋಳವನ್ನ ಪಶು ಆಹಾರಕ್ಕೆ ನೇರವಾಗಿ ಖರೀದಿಸಬೇಕು.

4. ಸ್ಥಳೀಯ ಹಾಲು ಮಾರಾಟಕ್ಕೆ ವಿಧಿಸುವ ಲೇವಿಯನ್ನು ರದ್ದುಗೊಳಿಸಬೇಕು.

5. ಹಾಲಿನ ದರ MSP ಶಾಸನಬದ್ದ ಮಾಡುವವರೆಗೆ ಪ್ರೋತ್ಸಹ ಧನ 10ರೂ. ನೀಡಬೇಕು.

6. ಹಾಲಿನ ಬೆಲೆ ನಿಗದಿಯಲ್ಲಿ ಒಕ್ಕೂಟಗಳು ಸ್ವತಂತ್ರವಾಗಿರಬೇಕು.

7. ಈ ಸಂಸ್ಥೆಯ ನೇಮಕಾತಿಯಲ್ಲಿ ಹಾಲು ಉತ್ಪಾದಕರ ಮಕ್ಕಳಿಗೆ ಮಾತ್ರ ಸಿಮಿತವಾಗಿರಬೇಕು.

8. ಸ್ಥಳೀಯ ಪ್ರಾಥಮಿಕ ಸಹಕಾರಿ ಸಂಘಗಳ ನೌಕರರನ್ನು ಒಕ್ಕೂಟದ ನೌಕರರೆಂದು ಪರಿಗಣಿಸಬೇಕು.

Ramesh Babu

Journalist

Recent Posts

ಮಳೆ ಕೈಕೊಟ್ಟಿತು, ರಾಗಿ ಕೈಬಿಟ್ಟಿತು: ಬೆಳೆಗೇ ಟ್ರ್ಯಾಕ್ಟರ್ ಹರಿಸಿದ ರೈತ: ದೊಡ್ಡಬಳ್ಳಾಪುರವನ್ನೂ ಬರಪೀಡಿತ ತಾಲೂಕು ಎಂದು ಘೋಷಿಸಲು ಆಗ್ರಹ: 3.5 ಎಕರೆ ರಾಗಿ ಬೆಳೆ ನಾಶ

ದೊಡ್ಡಬಳ್ಳಾಪುರ: ಮಳೆ ಕೈಕೊಟ್ಟ ಪರಿಣಾಮ ಬಿತ್ತಿದ್ದ ರಾಗಿ ಬೆಳೆ ಒಣಗಿ, ಕೈಗೆ ಬಾರದ ಸ್ಥಿತಿಗೆ ತಲುಪಿದ ಹಿನ್ನೆಲೆಯಲ್ಲಿ ಬೇಸರಗೊಂಡ ರೈತರೊಬ್ಬರು…

8 hours ago

ಚಿಕ್ಕನಹಳ್ಳಿ ಡೇರಿಗೆ 2.07 ಲಕ್ಷ ನಿವ್ವಳ ಲಾಭ: ಹೈನುಗಾರಿಕೆ ರೈತರ ಆರ್ಥಿಕ ಮೂಲ- ಸಿ.ಅಮರೇಶ್

ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…

13 hours ago

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

1 day ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

2 days ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

2 days ago

ಹೃದಯ ವೈಶಾಲ್ಯತೆ ಮತ್ತು ಶುದ್ಧತೆ…

" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…

2 days ago