ಹಾಲಿನ ಖರೀದಿ ದರ ಹೆಚ್ಚಿಸಿ, ಪಶು ಆಹಾರದ ಬೆಲೆ ಕಡಿತಗೊಳಿಸಬೇಕು ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ನೇತೃತ್ವದಲ್ಲಿ ನೂರಾರು ರೈತರು ಕರ್ನಾಟಕ ಹಾಲು ಒಕ್ಕೂಟ ಮಹಮಂಡಳ( ಕೆಎಂಎಫ್) ಕೇಂದ್ರ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.
ಸಹಕಾರಿ ಕ್ಷೇತ್ರದಲ್ಲಿ ಬಹಳ ಗಟ್ಟಿಯಾಗಿ ಬೇರೂರಿರುವ ನಮ್ಮ ಹೆಮ್ಮೆಯ ಕರ್ನಾಟಕ ಹಾಲು ಮಹಾ ಮಂಡಲಿ ಸಂಸ್ಥೆಯ ಬೃಹತ್ ಉದ್ಯಮವಾಗಿ ಬೆಳೆದು ಸಾವಿರಾರು ಜನರಿಗೆ ಉದ್ಯೋಗವನ್ನು ನೀಡಿ, ಲಕ್ಷಾಂತರ ಜನ ರೈತರ ಆಶಾಕಿರಣವಾಗಿದೆ. ಈಗ ಈ ಸಂಸ್ಥೆ ವೈಜ್ಞಾನಿಕವಾಗಿ ರೈತರಿಗೆ ಹಾಲಿನ ದರವನ್ನು ನೀಡಿದ್ದರೆ ನಮಗೆ ಸರ್ಕಾರದಿಂದ ಯಾವುದೇ ಸಹಾಯಧನ ಬೇಕಾಗಿರಲಿಲ್ಲ. ಆದರೆ, ರೈತರಿಗೆ ನೀಡುವ ಯೋಗ್ಯ ಬೆಲೆಯನ್ನು ನೀಡದೆ ಸಂಸ್ಥೆಯು ಲಾಭದಾಯಕವಾಗಿ ನಿಲ್ಲದೆ ರೈತರನ್ನು ಸಂಕಷ್ಟಕ್ಕೆ ಪದೇ ಪದೇ ದೂಡುವ ಚಾಳಿ ನಮ್ಮ ಸಂಸ್ಥೆಯಾದ್ದಗಿದೆ. ಯಾವಗಲು ಉತ್ಪಾದಕನ ಆರ್ಥಿಕ ಸ್ಥಿತಿ ಉತ್ತಮವಾಗಿರಬೇಕು, ಈ ಉತ್ತಮ ಕಾರ್ಯಕ್ಕೆ ನಮ್ಮ ಮಹಾ ಮಂಡಲಿ ಮುಂದಾಗಬೇಕು. ಅದನ್ನು ಬಿಟ್ಟು ಪದೇ ಪದೇ ಹಾಲಿನ ದರವನ್ನು ಕಡಿತ ಮಾಡುವುದು, ಇಂಡಿ, ಬೂಸ ಮತ್ತು ಪಶು ಆಹಾರದ ಬೆಲೆಯನ್ನು ಹೆಚ್ಚು ಮಾಡುವುದು ಇದು ಸರಿಯಾದ ಮಾರ್ಗವಲ್ಲ. ಈ ವಾಸ್ತವ ವಿಚಾರಗಳನ್ನು ತಿಳಿಸಲು ನಾವು ಬಂದಿದ್ದೇವೆ ರೈತ ಸಂಘ ಹೇಳಿದೆ.
-:ಹಕ್ಕೊತ್ತಾಯಗಳು:-
1. ರೈತರು ಸರಬರಾಜು ಮಾಡುವ ಪ್ರತೀ ಲೀಟರ್ ಹಾಲಿಗೆ ಕನಿಷ್ಠ 50 ರೂ. ನೀಡಬೇಕು.
2. ಪಶು ಆಹಾರದ ಬೆಲೆ ಪದೇ ಪದೇ ಹೆಚ್ಚಿಸಬಾರದು. ಹಾಲಿನ ದರದ ಪ್ರಮಾಣವನ್ನು ನೋಡಿ ಪಶು ಆಹಾರದ ಬೆಲೆ ನಿಗದಿಯಾಗಬೇಕು.
3. ರೈತರ ಬೆಳೆಯುವ ಜೋಳವನ್ನ ಪಶು ಆಹಾರಕ್ಕೆ ನೇರವಾಗಿ ಖರೀದಿಸಬೇಕು.
4. ಸ್ಥಳೀಯ ಹಾಲು ಮಾರಾಟಕ್ಕೆ ವಿಧಿಸುವ ಲೇವಿಯನ್ನು ರದ್ದುಗೊಳಿಸಬೇಕು.
5. ಹಾಲಿನ ದರ MSP ಶಾಸನಬದ್ದ ಮಾಡುವವರೆಗೆ ಪ್ರೋತ್ಸಹ ಧನ 10ರೂ. ನೀಡಬೇಕು.
6. ಹಾಲಿನ ಬೆಲೆ ನಿಗದಿಯಲ್ಲಿ ಒಕ್ಕೂಟಗಳು ಸ್ವತಂತ್ರವಾಗಿರಬೇಕು.
7. ಈ ಸಂಸ್ಥೆಯ ನೇಮಕಾತಿಯಲ್ಲಿ ಹಾಲು ಉತ್ಪಾದಕರ ಮಕ್ಕಳಿಗೆ ಮಾತ್ರ ಸಿಮಿತವಾಗಿರಬೇಕು.
8. ಸ್ಥಳೀಯ ಪ್ರಾಥಮಿಕ ಸಹಕಾರಿ ಸಂಘಗಳ ನೌಕರರನ್ನು ಒಕ್ಕೂಟದ ನೌಕರರೆಂದು ಪರಿಗಣಿಸಬೇಕು.
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಲಕ್ಷ್ಮೀಪುರ ಗೇಟ್ ಸಮೀಪದ ರಾಷ್ಟ್ರೀಯ ಹೆದ್ದಾರಿ–648ರಲ್ಲಿ ಲಾರಿ ಚಾಲಕನ ಅಜಾಗರೂಕತೆಯಿಂದ ಭೀಕರ…
ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…