ಹಾಲಿನ ಖರೀದಿ ದರ ಹೆಚ್ಚಿಸಿ, ಪಶು ಆಹಾರದ ಬೆಲೆ ಕಡಿತಗೊಳಿಸುವಂತೆ ಒತ್ತಾಯಿಸಿ ರೈತರ ಪ್ರತಿಭಟನೆ

ಹಾಲಿನ ಖರೀದಿ ದರ ಹೆಚ್ಚಿಸಿ, ಪಶು ಆಹಾರದ ಬೆಲೆ ಕಡಿತಗೊಳಿಸಬೇಕು ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ನೇತೃತ್ವದಲ್ಲಿ ನೂರಾರು ರೈತರು ಕರ್ನಾಟಕ ಹಾಲು ಒಕ್ಕೂಟ ಮಹಮಂಡಳ( ಕೆಎಂಎಫ್) ಕೇಂದ್ರ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

ಸಹಕಾರಿ ಕ್ಷೇತ್ರದಲ್ಲಿ ಬಹಳ ಗಟ್ಟಿಯಾಗಿ ಬೇರೂರಿರುವ ನಮ್ಮ ಹೆಮ್ಮೆಯ ಕರ್ನಾಟಕ ಹಾಲು ಮಹಾ ಮಂಡಲಿ ಸಂಸ್ಥೆಯ ಬೃಹತ್ ಉದ್ಯಮವಾಗಿ ಬೆಳೆದು ಸಾವಿರಾರು ಜನರಿಗೆ ಉದ್ಯೋಗವನ್ನು ನೀಡಿ, ಲಕ್ಷಾಂತರ ಜನ ರೈತರ ಆಶಾಕಿರಣವಾಗಿದೆ. ಈಗ ಈ ಸಂಸ್ಥೆ ವೈಜ್ಞಾನಿಕವಾಗಿ ರೈತರಿಗೆ ಹಾಲಿನ ದರವನ್ನು ನೀಡಿದ್ದರೆ ನಮಗೆ ಸರ್ಕಾರದಿಂದ ಯಾವುದೇ ಸಹಾಯಧನ ಬೇಕಾಗಿರಲಿಲ್ಲ. ಆದರೆ, ರೈತರಿಗೆ ನೀಡುವ ಯೋಗ್ಯ ಬೆಲೆಯನ್ನು ನೀಡದೆ ಸಂಸ್ಥೆಯು ಲಾಭದಾಯಕವಾಗಿ ನಿಲ್ಲದೆ ರೈತರನ್ನು ಸಂಕಷ್ಟಕ್ಕೆ ಪದೇ ಪದೇ ದೂಡುವ ಚಾಳಿ ನಮ್ಮ ಸಂಸ್ಥೆಯಾದ್ದಗಿದೆ. ಯಾವಗಲು ಉತ್ಪಾದಕನ ಆರ್ಥಿಕ ಸ್ಥಿತಿ ಉತ್ತಮವಾಗಿರಬೇಕು, ಈ ಉತ್ತಮ ಕಾರ್ಯಕ್ಕೆ ನಮ್ಮ ಮಹಾ ಮಂಡಲಿ ಮುಂದಾಗಬೇಕು. ಅದನ್ನು ಬಿಟ್ಟು ಪದೇ ಪದೇ ಹಾಲಿನ ದರವನ್ನು ಕಡಿತ ಮಾಡುವುದು, ಇಂಡಿ, ಬೂಸ ಮತ್ತು ಪಶು ಆಹಾರದ ಬೆಲೆಯನ್ನು ಹೆಚ್ಚು ಮಾಡುವುದು ಇದು ಸರಿಯಾದ ಮಾರ್ಗವಲ್ಲ. ಈ ವಾಸ್ತವ ವಿಚಾರಗಳನ್ನು ತಿಳಿಸಲು ನಾವು ಬಂದಿದ್ದೇವೆ ರೈತ ಸಂಘ ಹೇಳಿದೆ.

-:ಹಕ್ಕೊತ್ತಾಯಗಳು:-

1. ರೈತರು ಸರಬರಾಜು ಮಾಡುವ ಪ್ರತೀ ಲೀಟರ್ ಹಾಲಿಗೆ ಕನಿಷ್ಠ 50 ರೂ. ನೀಡಬೇಕು.

2. ಪಶು ಆಹಾರದ ಬೆಲೆ ಪದೇ ಪದೇ ಹೆಚ್ಚಿಸಬಾರದು. ಹಾಲಿನ ದರದ ಪ್ರಮಾಣವನ್ನು ನೋಡಿ ಪಶು ಆಹಾರದ ಬೆಲೆ ನಿಗದಿಯಾಗಬೇಕು.

3. ರೈತರ ಬೆಳೆಯುವ ಜೋಳವನ್ನ ಪಶು ಆಹಾರಕ್ಕೆ ನೇರವಾಗಿ ಖರೀದಿಸಬೇಕು.

4. ಸ್ಥಳೀಯ ಹಾಲು ಮಾರಾಟಕ್ಕೆ ವಿಧಿಸುವ ಲೇವಿಯನ್ನು ರದ್ದುಗೊಳಿಸಬೇಕು.

5. ಹಾಲಿನ ದರ MSP ಶಾಸನಬದ್ದ ಮಾಡುವವರೆಗೆ ಪ್ರೋತ್ಸಹ ಧನ 10ರೂ. ನೀಡಬೇಕು.

6. ಹಾಲಿನ ಬೆಲೆ ನಿಗದಿಯಲ್ಲಿ ಒಕ್ಕೂಟಗಳು ಸ್ವತಂತ್ರವಾಗಿರಬೇಕು.

7. ಈ ಸಂಸ್ಥೆಯ ನೇಮಕಾತಿಯಲ್ಲಿ ಹಾಲು ಉತ್ಪಾದಕರ ಮಕ್ಕಳಿಗೆ ಮಾತ್ರ ಸಿಮಿತವಾಗಿರಬೇಕು.

8. ಸ್ಥಳೀಯ ಪ್ರಾಥಮಿಕ ಸಹಕಾರಿ ಸಂಘಗಳ ನೌಕರರನ್ನು ಒಕ್ಕೂಟದ ನೌಕರರೆಂದು ಪರಿಗಣಿಸಬೇಕು.

Ramesh Babu

Journalist

Recent Posts

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

13 hours ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

1 day ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

2 days ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

2 days ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

2 days ago