ಹಾಲಿನ ದರ ಏರಿಕೆ ಮಾಡಲಾಗಿದೆ ಎಂದು ಆರೋಪಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು, ಹಸುಗಳನ್ನು ಹಿಡಿದು ವಿಭಿನ್ನವಾಗಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ನಗರದ ತಾಲೂಕು ಕಚೇರಿ ವೃತ್ತದಲ್ಲಿ ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ಸೋಮವಾರ ಪ್ರತಿಭಟನೆ ನಡೆಸಿದರು.
ಬೆಂಗಳೂರು ಗ್ರಾಮಾಂತರ ಬಿಜೆಪಿ ಜಿಲ್ಲಾಧ್ಯಕ್ಷ ರಾಮಕೃಷ್ಣ ಮಾತನಾಡಿ, ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅಗತ್ಯ ವಸ್ತುಗಳ ಬೆಲೆಗಳನ್ನು ಹೆಚ್ಚಳ ಮಾಡಿದೆ. ಅದರಲ್ಲಿಯೂ 50 ಮಿ.ಲೀ ಹಾಲನ್ನು ಕೊಟ್ಟಂತೆ ಮಾಡಿ ಪ್ರತಿ ಹಾಲಿನ ಪ್ಯಾಕೆಟ್ ಮೇಲೆ 2.10 ರೂ. ಹೆಚ್ಚಳ ಮಾಡಿರುವುದು ಮನೆ ಮುರುಕ ನಿರ್ಧಾರವಾಗಿದೆ ಎಂದು ದೂರಿದರು.
ಕಾಂಗ್ರೆಸ್ ಸರಕಾರ ಹಾಲಿನ ದರ ಹೆಚ್ಚು ಮಾಡಿರುವುದು ಮನೆ ಮುರುಕ ನಿರ್ಧಾರ. ಕೇವಲ 50 ಮಿಲಿ ಲೀಟರ್ ಹೆಚ್ಚು ಹಾಲು ಬೇಕು ಎಂದು ಯಾರು ಕೇಳಿದ್ದರು. ಜನರು ಕೇಳಿದ್ದನ್ನು ಮೊದಲು ಕೊಡಿ. ರಾಜ್ಯ ಸರ್ಕಾರಕ್ಕೆ ಜ್ವರ ಬಂದರೆ, ರಾಜ್ಯದ ಜನತೆಗೆ ಬರೆ ಹಾಕುತ್ತಿದೆ. ಇದು ಬರೆ ಹಾಕುವ ಸರ್ಕಾರ. ಜನರ ವಿರೋಧಿ ಸರಕಾರ. ನೀವು ಹಾಲಿನ ಬೆಲೆ ಹೆಚ್ಚಳ ಮಾಡಿದ್ದಕ್ಕೆ ಕಾಫಿ, ಟೀ ಬೆಲೆಗಳು ಕೂಡ ಹೆಚ್ಚಳ ಆಗತ್ತಿದೆ. ಇದು ಎಲ್ಲರ ಮೇಲೆ ಪರಿಣಾಮ ಬೀರುತ್ತದೆ ಎಂದು ಪ್ರತಿಭಟನಾಕಾರರು ಕಿಡಿಕಾರಿದರು.
ಡೀಸೆಲ್, ಪೆಟ್ರೋಲ್ ದರವನ್ನೂ ಹೆಚ್ಚಳ ಮಾಡಿದ್ದಾರೆ. ಇದರಿಂದ ಸರಕು ಸಾಗಣೆ ಬೆಲೆ ಹೆಚ್ಚಳವಾಗಿದೆ. ಸರಕಾರ ರಾಜ್ಯದ ಜನ ಜೀವನದ ಮೇಲೆ ಚೆಲ್ಲಾಟ ಆಡುತ್ತಿದೆ. ನೀವು ಬೆಲೆ ನಿಯಂತ್ರಣ ಮಾಡುವುದಾಗಿ ಭರವಸೆ ಕೊಟ್ಟು ಅಧಿಕಾರಕ್ಕೆ ಬಂದು ನೀವು ಅಗತ್ಯ ವಸ್ತುಗಳ ಬೆಲೆಗಳನ್ನು ಇಳಿಕೆ ಮಾಡಬೇಕು. ಸರಕಾರಕ್ಕೆ ಮನುಷ್ಯತ್ವ ಇದ್ದರೆ ಬೆಲೆಗಳನ್ನು ಇಳಿಕೆ ಮಾಡಿ. ಇನ್ನು ಸಿದ್ದರಾಮಯ್ಯ ದೀನ ದಲಿತರ ಪರ ಎನ್ನುತ್ತಿದ್ದರು. ಆದರೆ, ಈ ಸರಕಾರ ದೀನ ದಲಿತರ ಪರ ಇಲ್ಲ ಎಂದು ಆಕ್ರೋಶ ಹೊರಹಾಕಿದರು.
ಈ ಸರಕಾರ ವಿದ್ಯಾರ್ಥಿಗಳು, ರೈತರ ಖಾತೆಗೆ ಹಣ ಹಾಕಲ್ಲ. ಯಾರ ಖಾತೆಗೆ ಹಣ ಹಾಕಿದರೆ ತನಗೆ ವಾಪಸ್ ಕೊಡುತ್ತಾರೋ ಅಂತವರ ಖಾತೆಗೆ ಹಣ ಹಾಕುತ್ತಾರೆ. ರಾಜ್ಯದಲ್ಲಿ ಡೆಂಗ್ಯೂ ಮನೆ ಮನೆಗೆ ಹಬ್ಬಿದೆ. ಕೇಳೊದಕ್ಕೆ ಡಾಕ್ಟರ್ ಇಲ್ಲ. ಚಿಕಿತ್ಸೆ ಪಡೆದುಕೊಂಡರೆ ಔಷಧ ಇಲ್ಲ. ವೈದ್ಯಕೀಯ ಸಚಿವರು ನಾಪತ್ತೆ ಆಗಿದ್ದಾರೆ ಎಂದು ಆರೋಪ ಮಾಡಿದರು.
ಈ ವೇಳೆ ಬಿಜೆಪಿಯ ಮುಖಂಡರು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…
ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…
ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…
ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್…
18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…
ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…