ಹಾಲಿನ ದರ ಏರಿಕೆ ಖಂಡಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

ಹಾಲಿನ ದರ ಏರಿಕೆ ಮಾಡಲಾಗಿದೆ ಎಂದು ಆರೋಪಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು, ಹಸುಗಳನ್ನು ಹಿಡಿದು ವಿಭಿನ್ನವಾಗಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ನಗರದ ತಾಲೂಕು ಕಚೇರಿ ವೃತ್ತದಲ್ಲಿ ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ಸೋಮವಾರ ಪ್ರತಿಭಟನೆ ನಡೆಸಿದರು.

ಬೆಂಗಳೂರು ಗ್ರಾಮಾಂತರ ಬಿಜೆಪಿ ಜಿಲ್ಲಾಧ್ಯಕ್ಷ ರಾಮಕೃಷ್ಣ ಮಾತನಾಡಿ, ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅಗತ್ಯ ವಸ್ತುಗಳ ಬೆಲೆಗಳನ್ನು ಹೆಚ್ಚಳ ಮಾಡಿದೆ. ಅದರಲ್ಲಿಯೂ 50 ಮಿ.ಲೀ ಹಾಲನ್ನು ಕೊಟ್ಟಂತೆ ಮಾಡಿ ಪ್ರತಿ ಹಾಲಿನ ಪ್ಯಾಕೆಟ್ ಮೇಲೆ 2.10 ರೂ. ಹೆಚ್ಚಳ ಮಾಡಿರುವುದು ಮನೆ ಮುರುಕ ನಿರ್ಧಾರವಾಗಿದೆ ಎಂದು ದೂರಿದರು.

ಕಾಂಗ್ರೆಸ್ ಸರಕಾರ ಹಾಲಿನ ದರ ಹೆಚ್ಚು ಮಾಡಿರುವುದು ಮನೆ ಮುರುಕ ನಿರ್ಧಾರ. ಕೇವಲ 50 ಮಿಲಿ ಲೀಟರ್ ಹೆಚ್ಚು ಹಾಲು ಬೇಕು ಎಂದು ಯಾರು ಕೇಳಿದ್ದರು. ಜನರು ಕೇಳಿದ್ದನ್ನು ಮೊದಲು ಕೊಡಿ. ರಾಜ್ಯ ಸರ್ಕಾರಕ್ಕೆ ಜ್ವರ ಬಂದರೆ, ರಾಜ್ಯದ ಜನತೆಗೆ ಬರೆ ಹಾಕುತ್ತಿದೆ. ಇದು ಬರೆ ಹಾಕುವ ಸರ್ಕಾರ. ಜನರ ವಿರೋಧಿ ಸರಕಾರ. ನೀವು ಹಾಲಿನ ಬೆಲೆ ಹೆಚ್ಚಳ ಮಾಡಿದ್ದಕ್ಕೆ ಕಾಫಿ, ಟೀ ಬೆಲೆಗಳು ಕೂಡ ಹೆಚ್ಚಳ ಆಗತ್ತಿದೆ. ಇದು ಎಲ್ಲರ ಮೇಲೆ ಪರಿಣಾಮ ಬೀರುತ್ತದೆ ಎಂದು ಪ್ರತಿಭಟನಾಕಾರರು ಕಿಡಿಕಾರಿದರು.

ಡೀಸೆಲ್, ಪೆಟ್ರೋಲ್ ದರವನ್ನೂ ಹೆಚ್ಚಳ ಮಾಡಿದ್ದಾರೆ. ಇದರಿಂದ ಸರಕು ಸಾಗಣೆ ಬೆಲೆ ಹೆಚ್ಚಳವಾಗಿದೆ. ಸರಕಾರ ರಾಜ್ಯದ ಜನ ಜೀವನದ ಮೇಲೆ ಚೆಲ್ಲಾಟ ಆಡುತ್ತಿದೆ. ನೀವು ಬೆಲೆ ನಿಯಂತ್ರಣ ಮಾಡುವುದಾಗಿ ಭರವಸೆ ಕೊಟ್ಟು ಅಧಿಕಾರಕ್ಕೆ ಬಂದು ನೀವು ಅಗತ್ಯ ವಸ್ತುಗಳ ಬೆಲೆಗಳನ್ನು ಇಳಿಕೆ ಮಾಡಬೇಕು. ಸರಕಾರಕ್ಕೆ ಮನುಷ್ಯತ್ವ ಇದ್ದರೆ ಬೆಲೆಗಳನ್ನು ಇಳಿಕೆ ಮಾಡಿ. ಇನ್ನು ಸಿದ್ದರಾಮಯ್ಯ ದೀನ ದಲಿತರ ಪರ ಎನ್ನುತ್ತಿದ್ದರು. ಆದರೆ, ಈ ಸರಕಾರ ದೀನ ದಲಿತರ ಪರ ಇಲ್ಲ ಎಂದು ಆಕ್ರೋಶ ಹೊರಹಾಕಿದರು.

ಈ ಸರಕಾರ ವಿದ್ಯಾರ್ಥಿಗಳು, ರೈತರ ಖಾತೆಗೆ ಹಣ ಹಾಕಲ್ಲ. ಯಾರ ಖಾತೆಗೆ ಹಣ ಹಾಕಿದರೆ ತನಗೆ ವಾಪಸ್ ಕೊಡುತ್ತಾರೋ ಅಂತವರ ಖಾತೆಗೆ ಹಣ ಹಾಕುತ್ತಾರೆ. ರಾಜ್ಯದಲ್ಲಿ ಡೆಂಗ್ಯೂ ಮನೆ ಮನೆಗೆ ಹಬ್ಬಿದೆ. ಕೇಳೊದಕ್ಕೆ ಡಾಕ್ಟರ್ ಇಲ್ಲ. ಚಿಕಿತ್ಸೆ ಪಡೆದುಕೊಂಡರೆ ಔಷಧ ಇಲ್ಲ. ವೈದ್ಯಕೀಯ ಸಚಿವರು ನಾಪತ್ತೆ ಆಗಿದ್ದಾರೆ ಎಂದು ಆರೋಪ ಮಾಡಿದರು.

ಈ ವೇಳೆ ಬಿಜೆಪಿಯ ಮುಖಂಡರು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Ramesh Babu

Journalist

Recent Posts

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

10 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

11 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

11 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

13 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

16 hours ago

ಮಳೆ ಕೊರತೆ ನೀಗಿಸಲು ಸರ್ಕಾರದ ಮಾಸ್ಟರ್ ಪ್ಲ್ಯಾನ್: ಎಚ್.ಎ.ಎಲ್‌ನಲ್ಲಿ ಮೋಡ ಬಿತ್ತನೆಗೆ ಜಲ ಸಂಪನ್ಮೂಲ ಸಚಿವರಿಂದ ಚಾಲನೆ

ರಾಜ್ಯದಲ್ಲಿ ಎದುರಾಗಿರುವ ಮಳೆ‌ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…

17 hours ago