ಹಾಲಿನ ದರ ಏರಿಕೆ ಮಾಡಲಾಗಿದೆ ಎಂದು ಆರೋಪಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು, ಹಸುಗಳನ್ನು ಹಿಡಿದು ವಿಭಿನ್ನವಾಗಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ನಗರದ ತಾಲೂಕು ಕಚೇರಿ ವೃತ್ತದಲ್ಲಿ ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ಸೋಮವಾರ ಪ್ರತಿಭಟನೆ ನಡೆಸಿದರು.
ಬೆಂಗಳೂರು ಗ್ರಾಮಾಂತರ ಬಿಜೆಪಿ ಜಿಲ್ಲಾಧ್ಯಕ್ಷ ರಾಮಕೃಷ್ಣ ಮಾತನಾಡಿ, ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅಗತ್ಯ ವಸ್ತುಗಳ ಬೆಲೆಗಳನ್ನು ಹೆಚ್ಚಳ ಮಾಡಿದೆ. ಅದರಲ್ಲಿಯೂ 50 ಮಿ.ಲೀ ಹಾಲನ್ನು ಕೊಟ್ಟಂತೆ ಮಾಡಿ ಪ್ರತಿ ಹಾಲಿನ ಪ್ಯಾಕೆಟ್ ಮೇಲೆ 2.10 ರೂ. ಹೆಚ್ಚಳ ಮಾಡಿರುವುದು ಮನೆ ಮುರುಕ ನಿರ್ಧಾರವಾಗಿದೆ ಎಂದು ದೂರಿದರು.
ಕಾಂಗ್ರೆಸ್ ಸರಕಾರ ಹಾಲಿನ ದರ ಹೆಚ್ಚು ಮಾಡಿರುವುದು ಮನೆ ಮುರುಕ ನಿರ್ಧಾರ. ಕೇವಲ 50 ಮಿಲಿ ಲೀಟರ್ ಹೆಚ್ಚು ಹಾಲು ಬೇಕು ಎಂದು ಯಾರು ಕೇಳಿದ್ದರು. ಜನರು ಕೇಳಿದ್ದನ್ನು ಮೊದಲು ಕೊಡಿ. ರಾಜ್ಯ ಸರ್ಕಾರಕ್ಕೆ ಜ್ವರ ಬಂದರೆ, ರಾಜ್ಯದ ಜನತೆಗೆ ಬರೆ ಹಾಕುತ್ತಿದೆ. ಇದು ಬರೆ ಹಾಕುವ ಸರ್ಕಾರ. ಜನರ ವಿರೋಧಿ ಸರಕಾರ. ನೀವು ಹಾಲಿನ ಬೆಲೆ ಹೆಚ್ಚಳ ಮಾಡಿದ್ದಕ್ಕೆ ಕಾಫಿ, ಟೀ ಬೆಲೆಗಳು ಕೂಡ ಹೆಚ್ಚಳ ಆಗತ್ತಿದೆ. ಇದು ಎಲ್ಲರ ಮೇಲೆ ಪರಿಣಾಮ ಬೀರುತ್ತದೆ ಎಂದು ಪ್ರತಿಭಟನಾಕಾರರು ಕಿಡಿಕಾರಿದರು.
ಡೀಸೆಲ್, ಪೆಟ್ರೋಲ್ ದರವನ್ನೂ ಹೆಚ್ಚಳ ಮಾಡಿದ್ದಾರೆ. ಇದರಿಂದ ಸರಕು ಸಾಗಣೆ ಬೆಲೆ ಹೆಚ್ಚಳವಾಗಿದೆ. ಸರಕಾರ ರಾಜ್ಯದ ಜನ ಜೀವನದ ಮೇಲೆ ಚೆಲ್ಲಾಟ ಆಡುತ್ತಿದೆ. ನೀವು ಬೆಲೆ ನಿಯಂತ್ರಣ ಮಾಡುವುದಾಗಿ ಭರವಸೆ ಕೊಟ್ಟು ಅಧಿಕಾರಕ್ಕೆ ಬಂದು ನೀವು ಅಗತ್ಯ ವಸ್ತುಗಳ ಬೆಲೆಗಳನ್ನು ಇಳಿಕೆ ಮಾಡಬೇಕು. ಸರಕಾರಕ್ಕೆ ಮನುಷ್ಯತ್ವ ಇದ್ದರೆ ಬೆಲೆಗಳನ್ನು ಇಳಿಕೆ ಮಾಡಿ. ಇನ್ನು ಸಿದ್ದರಾಮಯ್ಯ ದೀನ ದಲಿತರ ಪರ ಎನ್ನುತ್ತಿದ್ದರು. ಆದರೆ, ಈ ಸರಕಾರ ದೀನ ದಲಿತರ ಪರ ಇಲ್ಲ ಎಂದು ಆಕ್ರೋಶ ಹೊರಹಾಕಿದರು.
ಈ ಸರಕಾರ ವಿದ್ಯಾರ್ಥಿಗಳು, ರೈತರ ಖಾತೆಗೆ ಹಣ ಹಾಕಲ್ಲ. ಯಾರ ಖಾತೆಗೆ ಹಣ ಹಾಕಿದರೆ ತನಗೆ ವಾಪಸ್ ಕೊಡುತ್ತಾರೋ ಅಂತವರ ಖಾತೆಗೆ ಹಣ ಹಾಕುತ್ತಾರೆ. ರಾಜ್ಯದಲ್ಲಿ ಡೆಂಗ್ಯೂ ಮನೆ ಮನೆಗೆ ಹಬ್ಬಿದೆ. ಕೇಳೊದಕ್ಕೆ ಡಾಕ್ಟರ್ ಇಲ್ಲ. ಚಿಕಿತ್ಸೆ ಪಡೆದುಕೊಂಡರೆ ಔಷಧ ಇಲ್ಲ. ವೈದ್ಯಕೀಯ ಸಚಿವರು ನಾಪತ್ತೆ ಆಗಿದ್ದಾರೆ ಎಂದು ಆರೋಪ ಮಾಡಿದರು.
ಈ ವೇಳೆ ಬಿಜೆಪಿಯ ಮುಖಂಡರು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…