ಹಾಲಿ ಶಾಸಕ ಅಂಬಾಸಿಡರ್ ಕಾರಿನ ಕಾಲದಲ್ಲೇ ಇದ್ದಾರೆ: ಕನಿಷ್ಠ 130 ಸ್ಥಾನಗಳನ್ನು ಗೆದ್ದೆ ಗೆಲ್ಲುತ್ತೇವೆ- ಅಣ್ಣಾಮಲೈ

ಕ್ಷೇತ್ರದ ಹಾಲಿ ಶಾಸಕ ಇನ್ನೂ ಅಂಬಾಸಿಡರ್ ಕಾರಿನ ಕಾಲದಲ್ಲೇ ಇದ್ದಾರೆ. ಆದರೆ ನಮ್ಮ ಪಕ್ಷದ ಅಭ್ಯರ್ಥಿ ಹೈಟೆಕ್ ತಂತ್ರಜ್ಞಾನವುಳ್ಳ ಕಾರಿನ ಕಾಲದಲ್ಲಿ ಇದ್ದು ಆ ನಿಟ್ಟಿನಲ್ಲಿ ಚಿಂತನೆ ಮಾಡಿ ಕ್ಷೇತ್ರ ಅಭಿವೃದ್ಧಿ ಮಾಡಲು ತುದಿಗಾಲಲ್ಲಿ ನಿಂತಿದ್ದಾರೆ ಎಂದು ರಾಜ್ಯ ಬಿಜೆಪಿ ಚುನಾವಣಾ ಸಹ ಉಸ್ತುವಾರಿ ಕೆ. ಅಣ್ಣಾಮಲೈ ಹೇಳಿದರು.

ನಗರದ ಖಾಸಗಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಬೂತ್ ಮಟ್ಟದ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಪಕ್ಷ ಸಂಘಟನೆ, ಐಡಿಯಾಲಜಿ, ಅಭ್ಯರ್ಥಿ ಕುರಿತು ಜನರಿಗೆ ಅರಿವು ಮೂಡಿಸಬೇಕು, ಬಿಜೆಪಿಯಲ್ಲಿ ಪ್ರತಿಯೊಬ್ಬರಿಗೂ ಸಮಾನ ಅವಕಾಶ ಕೊಡಲಾಗುತ್ತದೆ. ಸಾಮಾನ್ಯ ಕಾರ್ಯಕರ್ತರನ್ನು ಗುರುತಿಸಿ ಅವಕಾಶ ನೀಡುವ ಪಕ್ಷ ಬಿಜೆಪಿ ಎಂದರು.

ಪಕ್ಷಕ್ಕೆ ಕೆಲವರು ಬರುತ್ತಾರೆ. ಕೆಲವರು ಹೋಗುತ್ತಾರೆ. ಆದರೆ ಪಕ್ಷ ಬೆಳೆಯುತ್ತಲೇ ಇರುತ್ತದೆ. ವಿಶ್ವದಲ್ಲೇ ಅತ್ಯಂತ ಹೆಚ್ಚು ಕಾರ್ಯಕರ್ತರನ್ನು ಹೊಂದಿರುವ ಪಕ್ಷ ಬಿಜೆಪಿಯಾಗಿದೆ ಎಂದರು. ರಾಜ್ಯದಲ್ಲಿ ಕನಿಷ್ಠ 130 ಸ್ಥಾನಗಳನ್ನು ಗೆದ್ದು ಸ್ವತಂತ್ರವಾಗಿ ಅಧಿಕಾರಕ್ಕೆ ಬರಲು ಕಾರ್ಯಕರ್ತರು ಶ್ರಮಿಸಬೇಕು ಎಂದು ಕರೆ ನೀಡಿದರು.

ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಧೀರಜ್ ಮುನಿರಾಜ್ ಅವರನ್ನು ಹೆಚ್ಚು ಬಹುಮತದಿಂದ ಗೆಲ್ಲಿಸಿ ವಿಧಾನಸಭೆಗೆ ಕಳುಹಿಸಿಕೊಡಬೇಕು, ಈ ನಿಟ್ಟಿನಲ್ಲಿ ನಾವೆಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದರು.

ಪಕ್ಷದ ಚಿಂತನೆ, ಕಾರ್ಯಯೋಜನೆ, ಅಭಿವೃದ್ಧಿ ಕಾರ್ಯ, ಯೋಜನೆಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರತಿಯೊಬ್ಬರಿಗೂ ತಲುಪುವಂತೆ ಮಾಡಬೇಕು, ಗ್ರಾಮೀಣ ಭಾಗದಲ್ಲಿ ಖುದ್ದಾಗಿ ನಾವೇ ಮನೆ ಮನೆಗೆ ಹೋಗಿ ಅಭ್ಯರ್ಥಿ ಪರ ಪ್ರಚಾರ ಮಾಡಬೇಕು ಎಂದರು.

ಬಿಜೆಪಿ ಅಭ್ಯರ್ಥಿ ಧೀರಜ್ ಮುನಿರಾಜು ಮಾತನಾಡಿ ಶೇ. 99 ರಷ್ಟು ಮುಖಂಡರು, ಕಾರ್ಯಕರ್ತರು ಪಕ್ಷದ ತತ್ವ ಸಿದ್ಧಾಂತ ಒಪ್ಪಿ ಕೆಲಸ ಮಾಡುತ್ತಾರೆ.
ಕೇವಲ 1% ನಷ್ಟು ಮಾತ್ರ ಆಮಿಷಕ್ಕೆ ಒಳಾಗಾಗಿ ಪಕ್ಷ ಬಿಟ್ಟು ಹೋಗುತ್ತಾರೆ. ಪಕ್ಷದ ನಿಷ್ಠಾವಂತರಿಗೆ ಸಮಾನ ಅವಕಾಶ ನೀಡಲಾಗುತ್ತದೆ. ಅದಕ್ಕೆ ಉದಾಹರಣೆ‌ ನಾನು, ಒಬ್ಬ ಸಾಮಾನ್ಯ ನಿಷ್ಠಾವಂತ ಕಾರ್ಯಕರ್ತನನನ್ನು ಗುರುತಿಸಿ ಪಕ್ಷ ಟಿಕೆಟ್ ನೀಡಿದೆ ಎಂದರು.

ಎಲ್ಲರೂ ಒಗ್ಗಟ್ಟಾಗಿ, ಕ್ರಮಬದ್ಧವಾಗಿ ಚುನಾವಣೆಯನ್ನು ಎದುರಿಸಿದರೆ ಖಚಿತವಾಗಿ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಬಾವುಟ ಹಾರಿಸಬಹುದು ಎಂದರು.

ಕಾರ್ಯಕ್ರಮದಲ್ಲಿ ಗುಜರಾತ್ ಮಾಜಿ ಗೃಹ ಮಂತ್ರಿ ದೇವುಸಿನ್ ಚೌಹಾನ್, ರಾಜಸ್ಥಾನ ವಿರೋಧ ಪಕ್ಷದ ನಾಯಕ ಸತೀಶ್ ಪೂನಿಯಾ, ಎಂಎಲ್ಸಿ ಅ.ದೇವೇಗೌಡ, ಸಂಘಟನಾ ಕಾರ್ಯದರ್ಶಿ ಕಾಂತರಾಜು, ಹನುಮಂತರಾಯಪ್ಪ ಇದ್ದರು.

Ramesh Babu

Journalist

Recent Posts

ಪ್ರತಿಷ್ಠಿತ ಗೀತಂ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ

ದೊಡ್ಡಬಳ್ಳಾಪುರ ಹೊರವಲಯದಲ್ಲಿರುವ ನಾಗದೇನಹಳ್ಳಿಯ ಸಮೀಪದ‌ ಪ್ರತಿಷ್ಠಿತ ಗೀತಂ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ…

3 hours ago

ಪೊಲೀಸ್‌ ಡ್ರೆಸ್‌ನಲ್ಲಿ ಬಂದು ದರೋಡೆ – 20 ಲಕ್ಷ ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿ.!

ಸಬ್ ಇನ್ಸ್‌ಪೆಕ್ಟರ್‌ ಡ್ರೆಸ್‌ನಲ್ಲಿ ಬಂದು 20 ಲಕ್ಷ ರೂ. ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ…

5 hours ago

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…

16 hours ago

ನಟ ವಿಜಯ್ ದೇವರಕೊಂಡ – ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಅವರದ್ದು ಎನ್ನಲಾದ ವಿವಾಹ ಆಮಂತ್ರಣ ಪತ್ರಿಕೆ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್

ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್‌ನಲ್ಲಿದ್ದಾರೆ ಎನ್ನುವುದು…

17 hours ago

ಜಿಲ್ಲಾ ಮಟ್ಟದ ಕೈಗಾರಿಕಾ ಸಂವಾದ ಸಭೆ: ಸ್ಥಳೀಯರಿಗೆ ಉದ್ಯೋಗಾವಕಾಶ ಮೊದಲ ಆದ್ಯತೆ ಆಗಲಿ- ಸಚಿವ ಕೆ.ಎಚ್ ಮುನಿಯಪ್ಪ

ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…

19 hours ago

ಆಸ್ತಿ ವಿವರ ಮುಚ್ಚಿಟ್ಟು ಸುಳ್ಳು ಪ್ರಮಾಣಪತ್ರ ಸಲ್ಲಿಕೆ ವಿಚಾರ: ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್​ ಶಾಸಕ ಎಸ್‌.ಎನ್‌. ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ

ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್‌ ಆದೇಶ ನೀಡಿದೆ. ಚುನಾವಣಾ ಆಯೋಗ…

21 hours ago