ಹಾಲಿ ಶಾಸಕ ವೆಂಕಟರಮಣಯ್ಯಗೆ ಟಿಕೆಟ್ ಬೇಡ;‌ ಟಿಕೆಟ್ ಕೊಟ್ಟರೆ ಸೋಲಿಸುತ್ತೇವೆ- ಸ್ವಾಭಿಮಾನಿ ಕಾಂಗ್ರೆಸ್ ಟೀಮ್ ಎಚ್ಚರಿಕೆ

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಭದ್ರಕೋಟೆಯಾಗಿದೆ. ಈ ಕಾಂಗ್ರೆಸ್ ಭದ್ರಕೋಟೆಗೆ ಸೂಕ್ತ ಅಭ್ಯರ್ಥಿ ಬೇಕಿದೆ. ಹತ್ತು ವರ್ಷದಿಂದ ಶಾಸಕರಾಗಿರುವ ವೆಂಕಟರಮಣಯ್ಯಗೆ ಜನ ವಿರೋಧಿ ಅಲೆ ಸೃಷ್ಟಿಯಾಗಿದೆ, ಹೀಗಾಗಿ ಅಭ್ಯರ್ಥಿ ಬದಲಿಸುವಂತೆ ಹೈಕಮಾಂಡ್ ಗೆ ನಮ್ಮ ಮನವಿ ಸಲ್ಲಿಸಿದ್ದೇವೆ. ಒಂದು ವೇಳೆ ಸಿದ್ದರಾಮಯ್ಯ ಕ್ಷೇತ್ರಕ್ಕೆ ಬಂದು ಸ್ಪರ್ಧಿಸಿದರೆ ಯಾವುದೇ ಅಭ್ಯಂತರವಿಲ್ಲ, ನಾವು ಗೆಲ್ಲಿಸಿ ಕಳಿಸುತ್ತೇವೆ ಎಂದು ಸ್ವಾಭಿಮಾನ ಕಾಂಗ್ರೆಸ್ ತಂಡದ ಮುಖಂಡರಾದ ತಿ.ರಂಗರಾಜು, ಎಂ.ಜಿ ಶ್ರೀನಿವಾಸ ಹೇಳಿದರು.

ನಗರ ಖಾಸಗಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕ್ಷೇತ್ರದಲ್ಲಿ ಕಾಂಗ್ರೆಸ್ ಉಳಿಯಬೇಕಾದರೆ ಹಾಲಿ ಶಾಸಕರಿಗೆ ಟಿಕೆಟ್ ಕೊಡುವುದು ಬೇಡ, ಮಾಜಿ ಸಿಎಂ ಸಿದ್ದರಾಮಯ್ಯ ನಮ್ಮ ಕ್ಷೇತ್ರದಲ್ಲಿ ಸ್ಪರ್ಧಿಸಲಿ ನಾವು ಒಂದಾಗಿ ಒಗ್ಗಟ್ಟಿನಿಂದ ಕೆಲಸ ಮಾಡಿ ಗೆಲ್ಲಿಸಿ ಕಳಿಸುತ್ತೇವೆ.

ಒಂದು ವೇಳೆ ಮತ್ತೊಮ್ಮೆ ಹಾಲಿ ಶಾಸಕರಿಗೆ ಮಣೆ ಹಾಕಿದರೆ ಕಾಂಗ್ರೆಸ್ ಭದ್ರಕೋಟೆಯಾಗಿರುವ ದೊಡ್ಡಬಳ್ಳಾಪುರ ಕ್ಷೇತ್ರ ಕೈಜಾರಲಿದೆ ಆದ್ದರಿಂದ ಸಿದ್ದರಾಮಯ್ಯ ಕೇವಲ ನಾಮಿನೇಷನ್ ಹಾಕಲಿ, ನಾವು ಗೆಲ್ಲಿಸುತ್ತೇವೆ. ಸಿದ್ದರಾಮಯ್ಯನವರೇ ನೀವೇ ಬನ್ನಿ ಇಲ್ಲವಾದರೆ ಅಭ್ಯರ್ಥಿ ಬದಲಿಸಿ ಎಂದು ಮನವಿ ಮಾಡಿದರು.

ಸರ್ವೆಗಳಲ್ಲಿ ಸೋಲುವ ಭೀತಿ:

ಕೇಂದ್ರ ಮತ್ತು ರಾಜ್ಯ ನಾಯಕರು ನಡೆಸಿರುವ ವರದಿಗಳಲ್ಲೂ ಹಾಲಿ ಶಾಸಕರಿಗೆ ಸೋಲುವ ಭೀತಿ ಎದುರಾಗಿದೆ. ಈ ಬಗ್ಗೆ ಹೈಕಮಾಂಡ್ ಸೂಕ್ಷ್ಮವಾಗಿ ಚಿಂತಿಸಿ ಕ್ರಮ ತೆಗೆದುಕೊಳ್ಳಬೇಕು. ಶಾಸಕ ವೆಂಕಟರಮಣಯ್ಯಗೆ ಟಿಕೆಟ್ ನೀಡಿದರೆ ನಾವೇ ಸೋಲಿಸುತ್ತೇವೆ ಎಂದು ಮುಖಂಡ ಎಂಜಿ ಶ್ರೀನಿವಾಸ ತಿಳಿಸಿದರು.

ಚುನಾವಣೆಯಲ್ಲಿ ಸ್ಪರ್ಧೆ ಬೇಡ:

ಶಾಸಕ ವೆಂಕಟರಮಣಯ್ಯನವರೇ ದಯವಿಟ್ಟು ಚುನಾವಣೆಯಲ್ಲಿ ಸ್ಪರ್ಧಿಸಲು ಪ್ರಯತ್ನಿಸಬೇಡಿ ಖಚಿತವಾಗಿ ಸೋಲುತ್ತೀರಾ, ನಾವೇ ನಿಮ್ಮ ವಿರುದ್ಧ ಮತಯಾಚನೆ ಮಾಡಿ ನಿಮ್ಮನ್ನು ಸೋಲಿಸುತ್ತೇವೆ ಎಂದು ಹಿರಿಯ ಮುಖಂಡ ತಿ.ರಂಗರಾಜು ಆಕ್ರೋಶ ವ್ಯಕ್ತಪಡಿಸಿದರು.

ಪಕ್ಷದ ಮೇಲೆ ವಿಶ್ವಾಸವಿದೆ:

ಪಕ್ಷದ ರಾಜ್ಯ ನಾಯಕರ ಮೇಲೆ ನಮಗೆ ಬಲವಾದ ವಿಶ್ವಾಸ, ನಂಬಿಕೆ ಇದೆ. ರಾಜ್ಯದಲ್ಲಿ ಕಾಂಗ್ರೆಸ್ ಗೆ ಉತ್ತಮವಾದ ವಾತಾವರಣವಿದೆ. ಇಂತಹ ಸಮಯದಲ್ಲಿಯೂ ಸೋಲುವ ಭೀತಿಯಲ್ಲಿರುವ ಶಾಸಕ ವೆಂಕಟರಮಣಯ್ಯಗೆ ಟಿಕೆಟ್ ನೀಡುವುದು ಬೇಡ. ಬೇರೆ ಯಾರೇ ಅಭ್ಯರ್ಥಿಯಾದರೂ ನಾವು ಗೆಲ್ಲಿಸುತ್ತೇವೆ. ಪಕ್ಷದ ಹೈಕಮಾಂಡ್ ನಡೆಸಿರುವ ಸರ್ವೆಯ ಮಾನದಂಡದಂತೆ ಪಾರದರ್ಶಕವಾಗಿ ಟಿಕೆಟ್ ಹಂಚಿಕೆ ಮಾಡಲಿದ್ದಾರೆ ಎಂಬ ಭರವಸೆ ಇದೆ ಎಂದರು. ಸೂಕ್ತ ಅಭ್ಯರ್ಥಿಯನ್ನು ಕ್ಷೇತ್ರಕ್ಕೆ ನೀಡಿ ಕಾಂಗ್ರೆಸ್ ಉಳಿಸಿ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಹಿರಿಯ ಮುಖಂಡರಾದ ಬಿ.ಎಚ್ ಕೆಂಪಣ್ಣ, ವೆಂಕಟರಾಮ್, ಪ್ರಕಾಶ್, ಆನಂದ್ ಕುಮಾರ್, ರಾಘವೇಂದ್ರ, ಕಸವನಹಳ್ಳಿ ಅಂಬರೀಶ್, ಮನ್ಸೂರ್, ಸಿದ್ದಬೈರೇಗೌಡ ಸೇರಿದಂತೆ ನೂರಾರು ಮುಖಂಡರು ಭಾಗವಹಿಸಿದ್ದರು.

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

57 minutes ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

5 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

6 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

10 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

22 hours ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

22 hours ago