ಹಾಲಿ ಶಾಸಕ ವೆಂಕಟರಮಣಯ್ಯಗೆ ಟಿಕೆಟ್ ಬೇಡ;‌ ಟಿಕೆಟ್ ಕೊಟ್ಟರೆ ಸೋಲಿಸುತ್ತೇವೆ- ಸ್ವಾಭಿಮಾನಿ ಕಾಂಗ್ರೆಸ್ ಟೀಮ್ ಎಚ್ಚರಿಕೆ

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಭದ್ರಕೋಟೆಯಾಗಿದೆ. ಈ ಕಾಂಗ್ರೆಸ್ ಭದ್ರಕೋಟೆಗೆ ಸೂಕ್ತ ಅಭ್ಯರ್ಥಿ ಬೇಕಿದೆ. ಹತ್ತು ವರ್ಷದಿಂದ ಶಾಸಕರಾಗಿರುವ ವೆಂಕಟರಮಣಯ್ಯಗೆ ಜನ ವಿರೋಧಿ ಅಲೆ ಸೃಷ್ಟಿಯಾಗಿದೆ, ಹೀಗಾಗಿ ಅಭ್ಯರ್ಥಿ ಬದಲಿಸುವಂತೆ ಹೈಕಮಾಂಡ್ ಗೆ ನಮ್ಮ ಮನವಿ ಸಲ್ಲಿಸಿದ್ದೇವೆ. ಒಂದು ವೇಳೆ ಸಿದ್ದರಾಮಯ್ಯ ಕ್ಷೇತ್ರಕ್ಕೆ ಬಂದು ಸ್ಪರ್ಧಿಸಿದರೆ ಯಾವುದೇ ಅಭ್ಯಂತರವಿಲ್ಲ, ನಾವು ಗೆಲ್ಲಿಸಿ ಕಳಿಸುತ್ತೇವೆ ಎಂದು ಸ್ವಾಭಿಮಾನ ಕಾಂಗ್ರೆಸ್ ತಂಡದ ಮುಖಂಡರಾದ ತಿ.ರಂಗರಾಜು, ಎಂ.ಜಿ ಶ್ರೀನಿವಾಸ ಹೇಳಿದರು.

ನಗರ ಖಾಸಗಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕ್ಷೇತ್ರದಲ್ಲಿ ಕಾಂಗ್ರೆಸ್ ಉಳಿಯಬೇಕಾದರೆ ಹಾಲಿ ಶಾಸಕರಿಗೆ ಟಿಕೆಟ್ ಕೊಡುವುದು ಬೇಡ, ಮಾಜಿ ಸಿಎಂ ಸಿದ್ದರಾಮಯ್ಯ ನಮ್ಮ ಕ್ಷೇತ್ರದಲ್ಲಿ ಸ್ಪರ್ಧಿಸಲಿ ನಾವು ಒಂದಾಗಿ ಒಗ್ಗಟ್ಟಿನಿಂದ ಕೆಲಸ ಮಾಡಿ ಗೆಲ್ಲಿಸಿ ಕಳಿಸುತ್ತೇವೆ.

ಒಂದು ವೇಳೆ ಮತ್ತೊಮ್ಮೆ ಹಾಲಿ ಶಾಸಕರಿಗೆ ಮಣೆ ಹಾಕಿದರೆ ಕಾಂಗ್ರೆಸ್ ಭದ್ರಕೋಟೆಯಾಗಿರುವ ದೊಡ್ಡಬಳ್ಳಾಪುರ ಕ್ಷೇತ್ರ ಕೈಜಾರಲಿದೆ ಆದ್ದರಿಂದ ಸಿದ್ದರಾಮಯ್ಯ ಕೇವಲ ನಾಮಿನೇಷನ್ ಹಾಕಲಿ, ನಾವು ಗೆಲ್ಲಿಸುತ್ತೇವೆ. ಸಿದ್ದರಾಮಯ್ಯನವರೇ ನೀವೇ ಬನ್ನಿ ಇಲ್ಲವಾದರೆ ಅಭ್ಯರ್ಥಿ ಬದಲಿಸಿ ಎಂದು ಮನವಿ ಮಾಡಿದರು.

ಸರ್ವೆಗಳಲ್ಲಿ ಸೋಲುವ ಭೀತಿ:

ಕೇಂದ್ರ ಮತ್ತು ರಾಜ್ಯ ನಾಯಕರು ನಡೆಸಿರುವ ವರದಿಗಳಲ್ಲೂ ಹಾಲಿ ಶಾಸಕರಿಗೆ ಸೋಲುವ ಭೀತಿ ಎದುರಾಗಿದೆ. ಈ ಬಗ್ಗೆ ಹೈಕಮಾಂಡ್ ಸೂಕ್ಷ್ಮವಾಗಿ ಚಿಂತಿಸಿ ಕ್ರಮ ತೆಗೆದುಕೊಳ್ಳಬೇಕು. ಶಾಸಕ ವೆಂಕಟರಮಣಯ್ಯಗೆ ಟಿಕೆಟ್ ನೀಡಿದರೆ ನಾವೇ ಸೋಲಿಸುತ್ತೇವೆ ಎಂದು ಮುಖಂಡ ಎಂಜಿ ಶ್ರೀನಿವಾಸ ತಿಳಿಸಿದರು.

ಚುನಾವಣೆಯಲ್ಲಿ ಸ್ಪರ್ಧೆ ಬೇಡ:

ಶಾಸಕ ವೆಂಕಟರಮಣಯ್ಯನವರೇ ದಯವಿಟ್ಟು ಚುನಾವಣೆಯಲ್ಲಿ ಸ್ಪರ್ಧಿಸಲು ಪ್ರಯತ್ನಿಸಬೇಡಿ ಖಚಿತವಾಗಿ ಸೋಲುತ್ತೀರಾ, ನಾವೇ ನಿಮ್ಮ ವಿರುದ್ಧ ಮತಯಾಚನೆ ಮಾಡಿ ನಿಮ್ಮನ್ನು ಸೋಲಿಸುತ್ತೇವೆ ಎಂದು ಹಿರಿಯ ಮುಖಂಡ ತಿ.ರಂಗರಾಜು ಆಕ್ರೋಶ ವ್ಯಕ್ತಪಡಿಸಿದರು.

ಪಕ್ಷದ ಮೇಲೆ ವಿಶ್ವಾಸವಿದೆ:

ಪಕ್ಷದ ರಾಜ್ಯ ನಾಯಕರ ಮೇಲೆ ನಮಗೆ ಬಲವಾದ ವಿಶ್ವಾಸ, ನಂಬಿಕೆ ಇದೆ. ರಾಜ್ಯದಲ್ಲಿ ಕಾಂಗ್ರೆಸ್ ಗೆ ಉತ್ತಮವಾದ ವಾತಾವರಣವಿದೆ. ಇಂತಹ ಸಮಯದಲ್ಲಿಯೂ ಸೋಲುವ ಭೀತಿಯಲ್ಲಿರುವ ಶಾಸಕ ವೆಂಕಟರಮಣಯ್ಯಗೆ ಟಿಕೆಟ್ ನೀಡುವುದು ಬೇಡ. ಬೇರೆ ಯಾರೇ ಅಭ್ಯರ್ಥಿಯಾದರೂ ನಾವು ಗೆಲ್ಲಿಸುತ್ತೇವೆ. ಪಕ್ಷದ ಹೈಕಮಾಂಡ್ ನಡೆಸಿರುವ ಸರ್ವೆಯ ಮಾನದಂಡದಂತೆ ಪಾರದರ್ಶಕವಾಗಿ ಟಿಕೆಟ್ ಹಂಚಿಕೆ ಮಾಡಲಿದ್ದಾರೆ ಎಂಬ ಭರವಸೆ ಇದೆ ಎಂದರು. ಸೂಕ್ತ ಅಭ್ಯರ್ಥಿಯನ್ನು ಕ್ಷೇತ್ರಕ್ಕೆ ನೀಡಿ ಕಾಂಗ್ರೆಸ್ ಉಳಿಸಿ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಹಿರಿಯ ಮುಖಂಡರಾದ ಬಿ.ಎಚ್ ಕೆಂಪಣ್ಣ, ವೆಂಕಟರಾಮ್, ಪ್ರಕಾಶ್, ಆನಂದ್ ಕುಮಾರ್, ರಾಘವೇಂದ್ರ, ಕಸವನಹಳ್ಳಿ ಅಂಬರೀಶ್, ಮನ್ಸೂರ್, ಸಿದ್ದಬೈರೇಗೌಡ ಸೇರಿದಂತೆ ನೂರಾರು ಮುಖಂಡರು ಭಾಗವಹಿಸಿದ್ದರು.

Ramesh Babu

Journalist

Recent Posts

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

5 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

16 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

17 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

17 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

20 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

23 hours ago