ಹಾಲಿ ಮತ್ತು ಮಾಜಿ ಶಾಸಕರ ಇಬ್ಬಗೆಯ ಧೋರಣೆಯಿಂದ ಕ್ಷೇತ್ರದ ಜನ ಬೇಸತ್ತು ಹೋಗಿದ್ದಾರೆ- ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಆಕ್ರೋಶ

ದೊಡ್ಡಬಳ್ಳಾಪುರ: ಕ್ಷೇತ್ರದ ಜನತೆಗೆ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಹಾಗೂ ಹಾಲಿ ಶಾಸಕ ಧೀರಜ್ ಮುನಿರಾಜು ಅವರಿಂದ ನಯಾಪೈಸೆ ಉಪಯೋಗ ಆಗುತ್ತಿಲ್ಲ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಆಕ್ರೋಶ ವ್ಯಕ್ತಪಡಿಸಿದರು.

ಹಾಲಿ ಮತ್ತು ಮಾಜಿ ಶಾಸಕರ ಇಬ್ಬಗೆಯ ಧೋರಣೆಯಿಂದ ಜನ ಬೇಸತ್ತು ಹೋಗಿದ್ದಾರೆ

ನಗರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ದೊಡ್ಡಬಳ್ಳಾಪುರ ಕೈಗಾರಿಕಾ ಪ್ರದೇಶಕ್ಕೆ ಅತ್ಯಗತ್ಯವಾಗಿ ಬೇಕಾಗಿರುವ ಇಎಸ್ಐ ಆಸ್ಪತ್ರೆ ನಿರ್ಮಾಣವಾಗಿ ಐದಾರು ವರ್ಷ ಕಳೆದರೂ ಅದರ ಕಾರ್ಯಾರಂಭ ಮಾಡಿಸಿಲ್ಲ. ಕೊನಘಟ್ಟ, ನಾಗದೇನಹಳ್ಳಿ, ಆದಿನಾರಾಯಣ ಹೊಸಹಳ್ಳಿ ಸೇರಿ ಸುತ್ತಮುತ್ತಲಿನ ಗ್ರಾಮಗಳ ರೈತರಿಗೆ ಆಗುತ್ತಿರುವ ಅನ್ಯಾಯಕ್ಕೆ ಯಾರೊಬ್ಬರೂ ಸ್ಪಂದಿಸಿಲ್ಲ. ಹಾಲಿ ಮತ್ತು ಮಾಜಿ ಶಾಸಕರ ಈ ಇಬ್ಬಗೆಯ ಧೋರಣೆಯನ್ನು ಜನ ಗಮನಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಕಳೆದ ನಾಲ್ಕು ದಿನಗಳ ಹಿಂದೆ ಕುಂದಾಣ ಹೋಬಳಿಗೆ ಆಗಮಿಸಿದ್ದ ಮುಖ್ಯಮಂತ್ರಿಗಳ ಬಳಿಗೆ ರೈತರನ್ನು ಕರೆದೋಯ್ದು ಸಮಸ್ಯೆ ಬಗೆಹರಿಸುವ ಪ್ರಯತ್ನ ಮಾಡಿಲ್ಲ ಎಂದು ದೂರಿದರು.

ನನಗೆ ಯಾವ ಸಾಂವಿಧಾನಿಕ ಹುದ್ದೆ, ಅಧಿಕಾರ ಇಲ್ಲದಿದ್ದರೂ ರೈತರ ಸಮಸ್ಯೆಗೆ ಸ್ಪಂದಿಸುತ್ತಿದ್ದೇನೆ. ನಾಲ್ಕೈದು ಬಾರಿ ಧರಣಿನಿರತ ರೈತರನ್ನು ಅಧಿಕಾರಿಗಳು, ಮಾಜಿ ಸಿಎಂ ಕುಮಾರಸ್ವಾಮಿ ಅವರ ಬಳಿಗೆ ಕರೆದೋಯ್ದು ಬೇಡಿಕೆ ಈಡೇರಿಸಲು ಪ್ರಯತ್ನಿಸಿದ್ದೇನೆ. ಹಾಲಿ ಮತ್ತು ಮಾಜಿ ಶಾಸಕರಿಗೆ ರೈತರ ಕುರಿತು ಕಿಂಚಿತ್ತು ಕಾಳಜಿ ಇದ್ದರೆ ಕೂಡಲೇ ಸಿಎಂ, ಸಚಿವರು, ಎಲ್ಲ ಪಕ್ಷಗಳ ನಾಯಕರ ಭೇಟಿಗೂ ಮುಂದಾಗಲಿ. ಸಾಧ್ಯವಾದರೆ ರಾಷ್ಟ್ರಮಟ್ಟಕ್ಕೆ ಹೋಗಲು ನಾವು ಸಹಕಾರ ನೀಡುತ್ತೇವೆ ಎಂದರು.

ಜನರಿಂದ ಆಯ್ಕೆಯಾದ ಜನಪ್ರತಿನಿಧಿಗಳಿಗೆ ಸರ್ಕಾರದಿಂದ ಅನುದಾನ ತಂದು ಕ್ಷೇತ್ರವನ್ನು ಅಭಿವೃದ್ಧಿ ಮಾಡುವ ಜಾಣ್ಮೆ, ಇಚ್ಛಾಶಕ್ತಿ ಇರಬೇಕು. ಯಾರು ಏನು ತಂದರು ಎಂಬುದನ್ನು ಜನ ತೀರ್ಮಾನ ಮಾಡುತ್ತಾರೆ. ಇಬ್ಬರೂ ಕೂಡ ಕೆಸರೆರಚಾಟ ಬಿಟ್ಟು ಕ್ಷೇತ್ರದ ಅಭಿವೃದ್ಧಿಗೆ ಗಮನ ಹರಿಸಬೇಕು ಎಂದು ಹೇಳಿದರು.

ಈಗಾಗಲೇ ಎಲ್ಲೆಡೆ ಬರ ಪರಿಸ್ಥಿತಿ ಬಿಗಡಾಯಿಸಿದೆ. ಕುಡಿಯುವ ನೀರಿಲ್ಲದೇ ಜನ, ಜಾನುವಾರು, ಪ್ರಾಣಿ ಪಕ್ಷಿಗಳು ತತ್ತರಿಸಿ‌ ಹೋಗುತ್ತಿವೆ. ಕ್ಷೇತ್ರದಲ್ಲೂ ನೀರಿಗೆ ಹಾಹಾಕಾರ ಎದುರಾಗುವ ಸಾಧ್ಯತೆ ಇದೆ. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಮೊದಲು ಎಲ್ಲರಿಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡುವ ಕಡೆ ಗಮನ ಹರಿಸಬೇಕಿದೆ ಎಂದರು.

ಪ್ರದೀಪ್ ಈಶ್ವರ್ ಕ್ಷಮೆಯಾಚಿಸಲಿ

ಚಿಕ್ಕಬಳ್ಳಾಪುರದ ಶಾಸಕ ಪ್ರದೀಪ್ ಈಶ್ವರ್ ಅವರು ಜನರಿಂದ ಆಯ್ಕೆಯಾದ ಜನಪ್ರತಿನಿಧಿ. ಸಾಕಷ್ಟು ವಿದ್ಯಾರ್ಥಿಗಳಿಗೆ ವಿದ್ಯಾದಾನ ಮಾಡುತ್ತಿರುವ ವ್ಯಕ್ತಿ. ಆದರೆ, ಮಾಜಿ ಸಚಿವ ಡಾ.ಕೆ.ಸುಧಾಕರ್ ವಿರುದ್ಧ ಅವರು ಇಷ್ಟು ಕೆಳಮಟ್ಟಕ್ಕೆ ಇಳಿದು‌ ಮಾತನಾಡುತ್ತಾರೆ ಎಂದು ಭಾವಿಸಿರಲಿಲ್ಲ. ಕೂಡಲೇ ಪ್ರದೀಪ್ ಈಶ್ವರ್ ಆಡಿರುವ ಮಾತುಗಳನ್ನು ವಾಪಸ್ ಪಡೆಯಬೇಕು. ಸಾರ್ವಜನಿಕವಾಗಿ ಚಿಕ್ಕಬಳ್ಳಾಪುರ ಜನತೆಗೆ ಕ್ಷಮೆ‌ ಕೇಳಬೇಕು ಎಂದು ಹರೀಶ್ ಗೌಡ ಆಗ್ರಹಿಸಿದರು.

ಅಧಿಕಾರ ಯಾರಿಗೂ ಶಾಶ್ವತ ಅಲ್ಲ. ಪ್ರದೀಪ್ ಈಶ್ವರ ಅವರ ಗೆಲುವು ನಮ್ಮ‌ ಪಕ್ಷದ ಅಭ್ಯರ್ಥಿಯ‌ ನ್ಯೂನತೆಗಳಿಂದ ದೊರೆತಿದೆಯೇ ಹೊರತು ಮತ್ತೇನು ಅಲ್ಲ ಎಂದರು.

‘ಸಂಸದ ಅನಂತ್ ಕುಮಾರ್ ಹೆಗಡೆ ಒಬ್ಬ ಅರೆ ಹುಚ್ಚ’

ಸಂವಿಧಾನ ಬದಲಾವಣೆ ಕುರಿತು ಉತ್ತರ ಕನ್ನಡ ಸಂಸದ ಅನಂತಕುಮಾರ್ ಹೆಗಡೆ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಆತ ಒಬ್ಬ ಅರೆ ಹುಚ್ಚ. ಅವರು ಈ ದೇಶದ ಪ್ರಜೆ ಆಗಲೂ ಅನರ್ಹ. ತಾನು ಐದು ಬಾರಿ ಸಂಸದನಾಗಲು ಸಂವಿಧಾನವೇ ಕಾರಣ ಎಂಬುದನ್ನು ಸಂವಿಧಾನವೇ ಕಾರಣ ಎಂಬುದನ್ನು ಮರೆತು ಬದಲಾವಣೆಯ ಮಾತನ್ನಾಡಿದ್ದಾರೆ. ಇಂತಹ ಮಾತುಗಳು ಸರಿ‌ಯಲ್ಲ ಎಂದು ವಾಗ್ದಾಳಿ ನಡೆಸಿದರು.

Ramesh Babu

Journalist

Recent Posts

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

9 hours ago

ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ-ಇಂಧನ‌ ಸಚಿವ ಕೆ.ಜೆ.ಜಾರ್ಜ್

ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…

10 hours ago

ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಭೀಕರ ಅಪಘಾತ: ಬೈಕ್ ಸವಾರ ದುರ್ಮರಣ

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…

14 hours ago

‘ಪಬ್ಲಿಕ್ ಮಿರ್ಚಿ’ ವರದಿ ಫಲಶೃತಿ: ಕೊನೆಗೂ ಹೊಸಹಳ್ಳಿ ರಸ್ತೆಗೆ ಡಾಂಬರ್ ಭಾಗ್ಯ – ಜನರಲ್ಲಿ ಸಂತಸ

ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…

15 hours ago

ಐದು ದಶಕಗಳಿಂದ ಗುಡಿಸಲಲ್ಲೇ ಬದುಕು: ಮೂಲಭೂತ ಸೌಲಭ್ಯಕ್ಕಾಗಿ ಹಕ್ಕಿಪಿಕ್ಕಿ ಕುಟುಂಬಗಳ ನರಳಾಟ

ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…

21 hours ago

ಓದು ಮುಖ್ಯ. ಗ್ರಹಿಕೆ ಅತಿಮುಖ್ಯ. ಮಾನವೀಯ ಸ್ಪಂದನೆ ಎಲ್ಲಕ್ಕಿಂತ ಮುಖ್ಯ

ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…

22 hours ago