ಹಾಲಿ ಮತ್ತು ಮಾಜಿ ಶಾಸಕರ ಇಬ್ಬಗೆಯ ಧೋರಣೆಯಿಂದ ಕ್ಷೇತ್ರದ ಜನ ಬೇಸತ್ತು ಹೋಗಿದ್ದಾರೆ- ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಆಕ್ರೋಶ

ದೊಡ್ಡಬಳ್ಳಾಪುರ: ಕ್ಷೇತ್ರದ ಜನತೆಗೆ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಹಾಗೂ ಹಾಲಿ ಶಾಸಕ ಧೀರಜ್ ಮುನಿರಾಜು ಅವರಿಂದ ನಯಾಪೈಸೆ ಉಪಯೋಗ ಆಗುತ್ತಿಲ್ಲ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಆಕ್ರೋಶ ವ್ಯಕ್ತಪಡಿಸಿದರು.

ಹಾಲಿ ಮತ್ತು ಮಾಜಿ ಶಾಸಕರ ಇಬ್ಬಗೆಯ ಧೋರಣೆಯಿಂದ ಜನ ಬೇಸತ್ತು ಹೋಗಿದ್ದಾರೆ

ನಗರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ದೊಡ್ಡಬಳ್ಳಾಪುರ ಕೈಗಾರಿಕಾ ಪ್ರದೇಶಕ್ಕೆ ಅತ್ಯಗತ್ಯವಾಗಿ ಬೇಕಾಗಿರುವ ಇಎಸ್ಐ ಆಸ್ಪತ್ರೆ ನಿರ್ಮಾಣವಾಗಿ ಐದಾರು ವರ್ಷ ಕಳೆದರೂ ಅದರ ಕಾರ್ಯಾರಂಭ ಮಾಡಿಸಿಲ್ಲ. ಕೊನಘಟ್ಟ, ನಾಗದೇನಹಳ್ಳಿ, ಆದಿನಾರಾಯಣ ಹೊಸಹಳ್ಳಿ ಸೇರಿ ಸುತ್ತಮುತ್ತಲಿನ ಗ್ರಾಮಗಳ ರೈತರಿಗೆ ಆಗುತ್ತಿರುವ ಅನ್ಯಾಯಕ್ಕೆ ಯಾರೊಬ್ಬರೂ ಸ್ಪಂದಿಸಿಲ್ಲ. ಹಾಲಿ ಮತ್ತು ಮಾಜಿ ಶಾಸಕರ ಈ ಇಬ್ಬಗೆಯ ಧೋರಣೆಯನ್ನು ಜನ ಗಮನಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಕಳೆದ ನಾಲ್ಕು ದಿನಗಳ ಹಿಂದೆ ಕುಂದಾಣ ಹೋಬಳಿಗೆ ಆಗಮಿಸಿದ್ದ ಮುಖ್ಯಮಂತ್ರಿಗಳ ಬಳಿಗೆ ರೈತರನ್ನು ಕರೆದೋಯ್ದು ಸಮಸ್ಯೆ ಬಗೆಹರಿಸುವ ಪ್ರಯತ್ನ ಮಾಡಿಲ್ಲ ಎಂದು ದೂರಿದರು.

ನನಗೆ ಯಾವ ಸಾಂವಿಧಾನಿಕ ಹುದ್ದೆ, ಅಧಿಕಾರ ಇಲ್ಲದಿದ್ದರೂ ರೈತರ ಸಮಸ್ಯೆಗೆ ಸ್ಪಂದಿಸುತ್ತಿದ್ದೇನೆ. ನಾಲ್ಕೈದು ಬಾರಿ ಧರಣಿನಿರತ ರೈತರನ್ನು ಅಧಿಕಾರಿಗಳು, ಮಾಜಿ ಸಿಎಂ ಕುಮಾರಸ್ವಾಮಿ ಅವರ ಬಳಿಗೆ ಕರೆದೋಯ್ದು ಬೇಡಿಕೆ ಈಡೇರಿಸಲು ಪ್ರಯತ್ನಿಸಿದ್ದೇನೆ. ಹಾಲಿ ಮತ್ತು ಮಾಜಿ ಶಾಸಕರಿಗೆ ರೈತರ ಕುರಿತು ಕಿಂಚಿತ್ತು ಕಾಳಜಿ ಇದ್ದರೆ ಕೂಡಲೇ ಸಿಎಂ, ಸಚಿವರು, ಎಲ್ಲ ಪಕ್ಷಗಳ ನಾಯಕರ ಭೇಟಿಗೂ ಮುಂದಾಗಲಿ. ಸಾಧ್ಯವಾದರೆ ರಾಷ್ಟ್ರಮಟ್ಟಕ್ಕೆ ಹೋಗಲು ನಾವು ಸಹಕಾರ ನೀಡುತ್ತೇವೆ ಎಂದರು.

ಜನರಿಂದ ಆಯ್ಕೆಯಾದ ಜನಪ್ರತಿನಿಧಿಗಳಿಗೆ ಸರ್ಕಾರದಿಂದ ಅನುದಾನ ತಂದು ಕ್ಷೇತ್ರವನ್ನು ಅಭಿವೃದ್ಧಿ ಮಾಡುವ ಜಾಣ್ಮೆ, ಇಚ್ಛಾಶಕ್ತಿ ಇರಬೇಕು. ಯಾರು ಏನು ತಂದರು ಎಂಬುದನ್ನು ಜನ ತೀರ್ಮಾನ ಮಾಡುತ್ತಾರೆ. ಇಬ್ಬರೂ ಕೂಡ ಕೆಸರೆರಚಾಟ ಬಿಟ್ಟು ಕ್ಷೇತ್ರದ ಅಭಿವೃದ್ಧಿಗೆ ಗಮನ ಹರಿಸಬೇಕು ಎಂದು ಹೇಳಿದರು.

ಈಗಾಗಲೇ ಎಲ್ಲೆಡೆ ಬರ ಪರಿಸ್ಥಿತಿ ಬಿಗಡಾಯಿಸಿದೆ. ಕುಡಿಯುವ ನೀರಿಲ್ಲದೇ ಜನ, ಜಾನುವಾರು, ಪ್ರಾಣಿ ಪಕ್ಷಿಗಳು ತತ್ತರಿಸಿ‌ ಹೋಗುತ್ತಿವೆ. ಕ್ಷೇತ್ರದಲ್ಲೂ ನೀರಿಗೆ ಹಾಹಾಕಾರ ಎದುರಾಗುವ ಸಾಧ್ಯತೆ ಇದೆ. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಮೊದಲು ಎಲ್ಲರಿಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡುವ ಕಡೆ ಗಮನ ಹರಿಸಬೇಕಿದೆ ಎಂದರು.

ಪ್ರದೀಪ್ ಈಶ್ವರ್ ಕ್ಷಮೆಯಾಚಿಸಲಿ

ಚಿಕ್ಕಬಳ್ಳಾಪುರದ ಶಾಸಕ ಪ್ರದೀಪ್ ಈಶ್ವರ್ ಅವರು ಜನರಿಂದ ಆಯ್ಕೆಯಾದ ಜನಪ್ರತಿನಿಧಿ. ಸಾಕಷ್ಟು ವಿದ್ಯಾರ್ಥಿಗಳಿಗೆ ವಿದ್ಯಾದಾನ ಮಾಡುತ್ತಿರುವ ವ್ಯಕ್ತಿ. ಆದರೆ, ಮಾಜಿ ಸಚಿವ ಡಾ.ಕೆ.ಸುಧಾಕರ್ ವಿರುದ್ಧ ಅವರು ಇಷ್ಟು ಕೆಳಮಟ್ಟಕ್ಕೆ ಇಳಿದು‌ ಮಾತನಾಡುತ್ತಾರೆ ಎಂದು ಭಾವಿಸಿರಲಿಲ್ಲ. ಕೂಡಲೇ ಪ್ರದೀಪ್ ಈಶ್ವರ್ ಆಡಿರುವ ಮಾತುಗಳನ್ನು ವಾಪಸ್ ಪಡೆಯಬೇಕು. ಸಾರ್ವಜನಿಕವಾಗಿ ಚಿಕ್ಕಬಳ್ಳಾಪುರ ಜನತೆಗೆ ಕ್ಷಮೆ‌ ಕೇಳಬೇಕು ಎಂದು ಹರೀಶ್ ಗೌಡ ಆಗ್ರಹಿಸಿದರು.

ಅಧಿಕಾರ ಯಾರಿಗೂ ಶಾಶ್ವತ ಅಲ್ಲ. ಪ್ರದೀಪ್ ಈಶ್ವರ ಅವರ ಗೆಲುವು ನಮ್ಮ‌ ಪಕ್ಷದ ಅಭ್ಯರ್ಥಿಯ‌ ನ್ಯೂನತೆಗಳಿಂದ ದೊರೆತಿದೆಯೇ ಹೊರತು ಮತ್ತೇನು ಅಲ್ಲ ಎಂದರು.

‘ಸಂಸದ ಅನಂತ್ ಕುಮಾರ್ ಹೆಗಡೆ ಒಬ್ಬ ಅರೆ ಹುಚ್ಚ’

ಸಂವಿಧಾನ ಬದಲಾವಣೆ ಕುರಿತು ಉತ್ತರ ಕನ್ನಡ ಸಂಸದ ಅನಂತಕುಮಾರ್ ಹೆಗಡೆ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಆತ ಒಬ್ಬ ಅರೆ ಹುಚ್ಚ. ಅವರು ಈ ದೇಶದ ಪ್ರಜೆ ಆಗಲೂ ಅನರ್ಹ. ತಾನು ಐದು ಬಾರಿ ಸಂಸದನಾಗಲು ಸಂವಿಧಾನವೇ ಕಾರಣ ಎಂಬುದನ್ನು ಸಂವಿಧಾನವೇ ಕಾರಣ ಎಂಬುದನ್ನು ಮರೆತು ಬದಲಾವಣೆಯ ಮಾತನ್ನಾಡಿದ್ದಾರೆ. ಇಂತಹ ಮಾತುಗಳು ಸರಿ‌ಯಲ್ಲ ಎಂದು ವಾಗ್ದಾಳಿ ನಡೆಸಿದರು.

Ramesh Babu

Journalist

Recent Posts

ಯುವತಿಯ ಕುರಿತು ಅಪಪ್ರಚಾರದ ದ್ವೇಷ: ರೌಡಿ ಶೀಟರ್ ಖಲೀಮ್‌ನ ಬರ್ಬರ ಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಕುಟುಂಬದ ಬಗ್ಗೆ ಅವಹೇಳನ ಆರೋಪ: 7 ಮಂದಿಯ ತಂಡದ ಸಂಚು, 5 ಆರೋಪಿಗಳ ಬಂಧನ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…

3 hours ago

ನಗರಸಭೆ ವ್ಯಾಪ್ತಿಯ ವಾರ್ಡ್‌ಗಳಲ್ಲಿ ಸೌಕರ್ಯ ಕೊರತೆ: ಜನ ಹೈರಾಣ

ರೇಷ್ಮೆ ನಗರಿ, ಕೈಗಾರಿಕಾ ನಗರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ದೊಡ್ಡಬಳ್ಳಾಪುರ ನಗರ ಇಂದು ಅಭಿವೃದ್ಧಿಯ ಅವಕಾಶಗಳ ಜೊತೆಗೆ ಮೂಲ ಸಮಸ್ಯೆಗಳ…

6 hours ago

ಮಾದಕ ದ್ರವ್ಯ ಮುಕ್ತ ಕರ್ನಾಟಕ ನಿರ್ಮಾಣಕ್ಕಾಗಿ ಕಟ್ಟುನಿಟ್ಟಿನ ಕ್ರಮ

ಇಂದು ವಿಕಾಸಸೌಧದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಹಿರಿಯ ಪೊಲೀಸ್‌ ಅಧಿಕಾರಿಗಳು ಹಾಗೂ ವಿವಿಧ ಇಲಾಖಾ ಮುಖ್ಯಸ್ಥರ ಸಮ್ಮುಖದಲ್ಲಿ ನಡೆದ ಪರಿಶೀಲನಾ…

18 hours ago

ಬೈಕ್ ಗೆ ಕಾರು ಡಿಕ್ಕಿ: ಹಲವರಿಗೆ ಗಂಭೀರ ಗಾಯ

ಬೈಕ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಗೆ ಗಂಭೀರ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಬಳಿ‌‌ ನಡೆದಿದೆ..…

20 hours ago

ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಮೈಸೂರಿನ ತಿ. ನರಸೀಪುರ ತಾಲೂಕಿನ ಕೆಂಪಯ್ಯನ ಹುಂಡಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದಾರೆ.…

22 hours ago

ಇಂದು ತಾಲೂಕಿನ ಹಲವೆಡೆ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಇಂದು (ಜೂ.22) 66/11ಕೆವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಸದರಿ ಉಪಕೇಂದ್ರದಲ್ಲಿರುವ ಎಲ್ಲಾ ವಿದ್ಯುತ್…

1 day ago