Categories: ಕೋಲಾರ

ಹಾಲು ಉತ್ಪಾದಕರ ನೌಕರರ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ಕೋಮುಲ್ ಆಡಳಿತಾಧಿಕಾರಿ ಮೈತ್ರಿಗೆ ಮನವಿ

ಕೋಲಾರ: ಹಾಲು ಉತ್ಪಾದಕರಿಗೆ ಲೀಟರ್ ಗೆ 5 ರೂ ಹೆಚ್ಚಳ ಸೇರಿದಂತೆ ಉತ್ಪಾದಕರ ಮತ್ತು ನೌಕರರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಹಾಲು ಡೇರಿ ಸಹಕಾರ ಸಂಘಗಳ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ಶುಕ್ರವಾರ ಕೋಮುಲ್ ಆಡಳಿತಾಧಿಕಾರಿ ಡಾ.ಮೈತ್ರಿ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ವಿಟ್ಟಪ್ಪನಹಳ್ಳಿ ಡೇರಿ ವೆಂಕಟೇಶ್ ಮಾತನಾಡಿ ಪ್ರತಿ ವರ್ಷ ಸಂಕ್ರಾಂತಿ ಸಂದರ್ಭದಲ್ಲಿ ಹಾಲು ಖರೀದಿ ದರ ಹೆಚ್ಚಿಸಲಾಗುತ್ತಿತ್ತು ಈ ಬಾರಿ ಬೇಸಿಗೆ ಪ್ರಾರಂಭವಾಗಿದ್ದರೂ ಹೆಚ್ಚಳ ಮಾಡಿಲ್ಲ ಕೂಡಲೇ ಹಾಲಿನ ದರ ಲೀ.5 ರೂ ಹೆಚ್ಚಳ ಮಾಡಬೇಕು ಒಕ್ಕೂಟದಿಂದ ಪ್ರಾಥಮಿಕ ಸಂಘಳಿಗೆ ಮೂರು ವಾರಗಳ ಬಟವಾಡೆ ಬಾಕಿ ಇದ್ದು ಸಂಘಗಳು ಮತ್ತು ಉತ್ಪಾದಕರ ಮಧ್ಯೆ ಗಲಾಟೆಗಳಿಗೆ ಕಾರಣವಾಗಿದ್ದು ಬಾಕಿ ಉಳಿದಿಕೊಂಡಿರುವ ಬಟವಾಡೆವನ್ನು ಕೂಡಲೇ ಸಂಘಗಳ ಖಾತೆಗೆ ವರ್ಗಾವಣೆ ಮಾಡುವಂತೆ ಒತ್ತಾಯಿಸಿದರು.

ಈಗಾಗಲೇ ಬೇಸಿಗೆ ಕಾಲ ಪ್ರಾರಂಭವಾಗಿದ್ದು ವಾತಾವರಣದ ಪರಿಣಾಮ ಹಾಲಿನ ಗುಣಮಟ್ಟ ಕಡಿಮೆಯಾಗುತ್ತಿದೆ ಒಕ್ಕೂಟದ 0.5 ಗುಣಮಟ್ಟದ ವ್ಯತ್ಯಾಸವನ್ನು ಪರಿಗಣಿಸಿ ಉತ್ಪಾದಕರಿಗೆ ಉಂಟಾಗುವ ನಷ್ಟವನ್ನು ಸರಿಪಡಿಸಬೇಕು, ಉತ್ಪಾದಕರ ಬಳಿ ರಾಸುಗಳಿಗೆ ವಿಮೆ ಮಾಡಿಸುವ ಸಂದರ್ಭದಲ್ಲೇ ಡೇರಿಯ ಬಟವಾಡದಲ್ಲಿ ಹಣ ಕಡಿತ ಮಾಡಲಾಗುತ್ತದೆ ಆದರೆ ರಾಸುಗಳಿಗೆ ಕೊಡಬೇಕಾದರೆ ಕನಿಷ್ಠ ಆರು ತಿಂಗಳು ಆಗುತ್ತದೆ ರಾಸುಗಳು ಮರಣ ಹೊಂದಿದ ಕೂಡಲೇ ವಿಮಾ ಮೊತ್ತವನ್ನು ಉತ್ಪಾದಕರ ಕೈಸೇರುವಂತೆ ಮಾಡಬೇಕು ಬಿಎಂಸಿಗಳ ನಿರ್ವಹಣಾ ವೆಚ್ಚ ಹೆಚ್ಚಳ ಮಾಡಬೇಕು ಎಂದು ಮನವಿ ಮಾಡಿದರು.

ವಿವಿಧ ಸಂಘಗಳ ಕಾರ್ಯದರ್ಶಿಗಳು ಮಾತನಾಡಿ ಪ್ರಾಥಮಿಕ ಡೇರಿಗಳಿಂದ ಒಕ್ಕೂಟವಿದೆ ಎಂಬುದನ್ನು ಅಧಿಕಾರಿಗಳು ಮರೆಯಬಾರದು ಸಾಫ್ಟ್‌ವೇರ್ ಹೆಸರಿನಲ್ಲಿ ಸಂಘಗಳಿಗೆ ತೊಂದರೆಯಾಗಿದೆ ಮೊದಲು ಒಕ್ಕೂಟದಲ್ಲಿ ಸಾಫ್ಟ್‌ವೇರ್ ಅಳವಡಿಸಿಕೊಳ್ಳಿ ನಂತರ ಸಂಘಗಳಿಗೆ ಆದೇಶ ಮಾಡಲಿ, ಮೂಲಭೂತ ಸೌಕರ್ಯಗಳ ಹೆಸರಿನಲ್ಲಿ ಹಗಲು ದರೋಡೆ ಮಾಡಲಾಗುತ್ತಿದೆ ಅದರ ಬಗ್ಗೆ ಮೊದಲು ಕ್ರಮವಾಗಬೇಕು ಎಂದು ವ್ಯವಸ್ಥಾಪಕ ನಿರ್ದೇಶಕ ಗೋಪಾಲಮೂರ್ತಿ ಹಾಗೂ ಮ್ಯಾನೇಜರ್ ಚೇತನ್ ಅವರನ್ನು ತರಾಟೆಗೆ ತೆಗೆದುಕೊಂಡರು.

ಮನವಿ ಸ್ವೀಕರಿಸಿ ಮಾತನಾಡಿದ ಆಡಳಿತಾಧಿಕಾರಿ ಡಾ.ಮೈತ್ರಿ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡದೇ ಇರುವುದೇ ಇಂತಹ ಸಮಸ್ಯೆಗಳಿಗೆ ಕಾರಣವಾಗಿದೆ ಹಾಲು ಉತ್ಪಾದಕರು ಹಾಗೂ ಡೇರಿ ನೌಕರರಿಗೆ ಅನುಕೂಲ ಮಾಡಲು ನಾನು ಇರುವಷ್ಟು ದಿನದಲ್ಲಿ ಪ್ರಾಮಾಣಿಕವಾಗಿ ಮಾಡತ್ತೇನೆ ಜೊತೆಗೆ ರಾಸುಗಳಿಗೆ ವಿತರಿಸುತ್ತಿರುವ ವಿಮಾ ಏಜೆನ್ಸಿಯನ್ನು ಬದಲಾವಣೆ ಮಾಡಲಾಗುತ್ತದೆ ಈ ತಿಂಗಳೊಳಗೆ ನಿಮ್ಮ ಬೇಡಿಕೆಗಳ ಈಡೇರಿಕೆಗೆ ಕೂಡಲೇ ಸಭೆ ಕರೆದು ತೀರ್ಮಾನ ತೆಗೆದುಕೊಂಡು ಉತ್ಪಾದಕರ ಮತ್ತು ನೌಕರರ ಹಿತ ಕಾಯುವ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು

ಈ ಸಂದರ್ಭದಲ್ಲಿ ನೌಕರರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಗೌರವಾಧ್ಯಕ್ಷ ಚಿನ್ನಹಳ್ಳಿ ಗೋಪಾಲ್, ಉಪಾಧ್ಯಕ್ಷ ಮಿಂಡಹಳ್ಳಿ ಮುನಿರಾಜು, ಪ್ರಧಾನ ಕಾರ್ಯದರ್ಶಿ ಬಗಲಹಳ್ಳಿ ನಾಗೇಶಗೌಡ, ಖಜಾಂಚಿ ವಕ್ಕಲೇರಿ ನಾಗರಾಜ್, ಚಿಂತಾಮಣಿ ಕೆಂಪರೆಡ್ಡಿ, ಜಿಲ್ಲಾ ಸಮಿತಿ ನಿರ್ದೇಶಕರಾದ ಎಸ್.ಎಂ ಗೋಪಾಲ್, ಮದನಹಳ್ಳಿ ರಮೇಶ್, ತಾಲೂಕು ಅಧ್ಯಕ್ಷ ತೊಂಡಾಲ ಮಂಜುನಾಥ್, ಪ್ರಧಾನ ಕಾರ್ಯದರ್ಶಿ ತಿಮ್ಮೇಗೌಡ, ಮುಖಂಡರಾದ ಗಂಗಾಪುರ ಬಾಬು, ಮಿಟ್ಟಮಾಲಹಳ್ಳಿ ಮಂಜುನಾಥ್, ಮುದುವಾಡಿಹೊಸಹಳ್ಳಿ ಮೋಹನ್, ಚಿನಪನಹಳ್ಳಿ ಗೋಪಾಲ್, ವೆಂಕಟಾಪುರ ಶ್ರೀನಿವಾಸ್, ಅಲಹಳ್ಳಿ ಮಂಜುನಾಥ್ ಮುಂತಾದವರು ಇದ್ದರು

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

8 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

13 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

13 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

18 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

1 day ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

1 day ago