Categories: ಕೋಲಾರ

ಹಾಲು ಉತ್ಪಾದಕರ ನೌಕರರ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ಕೋಮುಲ್ ಆಡಳಿತಾಧಿಕಾರಿ ಮೈತ್ರಿಗೆ ಮನವಿ

ಕೋಲಾರ: ಹಾಲು ಉತ್ಪಾದಕರಿಗೆ ಲೀಟರ್ ಗೆ 5 ರೂ ಹೆಚ್ಚಳ ಸೇರಿದಂತೆ ಉತ್ಪಾದಕರ ಮತ್ತು ನೌಕರರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಹಾಲು ಡೇರಿ ಸಹಕಾರ ಸಂಘಗಳ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ಶುಕ್ರವಾರ ಕೋಮುಲ್ ಆಡಳಿತಾಧಿಕಾರಿ ಡಾ.ಮೈತ್ರಿ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ವಿಟ್ಟಪ್ಪನಹಳ್ಳಿ ಡೇರಿ ವೆಂಕಟೇಶ್ ಮಾತನಾಡಿ ಪ್ರತಿ ವರ್ಷ ಸಂಕ್ರಾಂತಿ ಸಂದರ್ಭದಲ್ಲಿ ಹಾಲು ಖರೀದಿ ದರ ಹೆಚ್ಚಿಸಲಾಗುತ್ತಿತ್ತು ಈ ಬಾರಿ ಬೇಸಿಗೆ ಪ್ರಾರಂಭವಾಗಿದ್ದರೂ ಹೆಚ್ಚಳ ಮಾಡಿಲ್ಲ ಕೂಡಲೇ ಹಾಲಿನ ದರ ಲೀ.5 ರೂ ಹೆಚ್ಚಳ ಮಾಡಬೇಕು ಒಕ್ಕೂಟದಿಂದ ಪ್ರಾಥಮಿಕ ಸಂಘಳಿಗೆ ಮೂರು ವಾರಗಳ ಬಟವಾಡೆ ಬಾಕಿ ಇದ್ದು ಸಂಘಗಳು ಮತ್ತು ಉತ್ಪಾದಕರ ಮಧ್ಯೆ ಗಲಾಟೆಗಳಿಗೆ ಕಾರಣವಾಗಿದ್ದು ಬಾಕಿ ಉಳಿದಿಕೊಂಡಿರುವ ಬಟವಾಡೆವನ್ನು ಕೂಡಲೇ ಸಂಘಗಳ ಖಾತೆಗೆ ವರ್ಗಾವಣೆ ಮಾಡುವಂತೆ ಒತ್ತಾಯಿಸಿದರು.

ಈಗಾಗಲೇ ಬೇಸಿಗೆ ಕಾಲ ಪ್ರಾರಂಭವಾಗಿದ್ದು ವಾತಾವರಣದ ಪರಿಣಾಮ ಹಾಲಿನ ಗುಣಮಟ್ಟ ಕಡಿಮೆಯಾಗುತ್ತಿದೆ ಒಕ್ಕೂಟದ 0.5 ಗುಣಮಟ್ಟದ ವ್ಯತ್ಯಾಸವನ್ನು ಪರಿಗಣಿಸಿ ಉತ್ಪಾದಕರಿಗೆ ಉಂಟಾಗುವ ನಷ್ಟವನ್ನು ಸರಿಪಡಿಸಬೇಕು, ಉತ್ಪಾದಕರ ಬಳಿ ರಾಸುಗಳಿಗೆ ವಿಮೆ ಮಾಡಿಸುವ ಸಂದರ್ಭದಲ್ಲೇ ಡೇರಿಯ ಬಟವಾಡದಲ್ಲಿ ಹಣ ಕಡಿತ ಮಾಡಲಾಗುತ್ತದೆ ಆದರೆ ರಾಸುಗಳಿಗೆ ಕೊಡಬೇಕಾದರೆ ಕನಿಷ್ಠ ಆರು ತಿಂಗಳು ಆಗುತ್ತದೆ ರಾಸುಗಳು ಮರಣ ಹೊಂದಿದ ಕೂಡಲೇ ವಿಮಾ ಮೊತ್ತವನ್ನು ಉತ್ಪಾದಕರ ಕೈಸೇರುವಂತೆ ಮಾಡಬೇಕು ಬಿಎಂಸಿಗಳ ನಿರ್ವಹಣಾ ವೆಚ್ಚ ಹೆಚ್ಚಳ ಮಾಡಬೇಕು ಎಂದು ಮನವಿ ಮಾಡಿದರು.

ವಿವಿಧ ಸಂಘಗಳ ಕಾರ್ಯದರ್ಶಿಗಳು ಮಾತನಾಡಿ ಪ್ರಾಥಮಿಕ ಡೇರಿಗಳಿಂದ ಒಕ್ಕೂಟವಿದೆ ಎಂಬುದನ್ನು ಅಧಿಕಾರಿಗಳು ಮರೆಯಬಾರದು ಸಾಫ್ಟ್‌ವೇರ್ ಹೆಸರಿನಲ್ಲಿ ಸಂಘಗಳಿಗೆ ತೊಂದರೆಯಾಗಿದೆ ಮೊದಲು ಒಕ್ಕೂಟದಲ್ಲಿ ಸಾಫ್ಟ್‌ವೇರ್ ಅಳವಡಿಸಿಕೊಳ್ಳಿ ನಂತರ ಸಂಘಗಳಿಗೆ ಆದೇಶ ಮಾಡಲಿ, ಮೂಲಭೂತ ಸೌಕರ್ಯಗಳ ಹೆಸರಿನಲ್ಲಿ ಹಗಲು ದರೋಡೆ ಮಾಡಲಾಗುತ್ತಿದೆ ಅದರ ಬಗ್ಗೆ ಮೊದಲು ಕ್ರಮವಾಗಬೇಕು ಎಂದು ವ್ಯವಸ್ಥಾಪಕ ನಿರ್ದೇಶಕ ಗೋಪಾಲಮೂರ್ತಿ ಹಾಗೂ ಮ್ಯಾನೇಜರ್ ಚೇತನ್ ಅವರನ್ನು ತರಾಟೆಗೆ ತೆಗೆದುಕೊಂಡರು.

ಮನವಿ ಸ್ವೀಕರಿಸಿ ಮಾತನಾಡಿದ ಆಡಳಿತಾಧಿಕಾರಿ ಡಾ.ಮೈತ್ರಿ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡದೇ ಇರುವುದೇ ಇಂತಹ ಸಮಸ್ಯೆಗಳಿಗೆ ಕಾರಣವಾಗಿದೆ ಹಾಲು ಉತ್ಪಾದಕರು ಹಾಗೂ ಡೇರಿ ನೌಕರರಿಗೆ ಅನುಕೂಲ ಮಾಡಲು ನಾನು ಇರುವಷ್ಟು ದಿನದಲ್ಲಿ ಪ್ರಾಮಾಣಿಕವಾಗಿ ಮಾಡತ್ತೇನೆ ಜೊತೆಗೆ ರಾಸುಗಳಿಗೆ ವಿತರಿಸುತ್ತಿರುವ ವಿಮಾ ಏಜೆನ್ಸಿಯನ್ನು ಬದಲಾವಣೆ ಮಾಡಲಾಗುತ್ತದೆ ಈ ತಿಂಗಳೊಳಗೆ ನಿಮ್ಮ ಬೇಡಿಕೆಗಳ ಈಡೇರಿಕೆಗೆ ಕೂಡಲೇ ಸಭೆ ಕರೆದು ತೀರ್ಮಾನ ತೆಗೆದುಕೊಂಡು ಉತ್ಪಾದಕರ ಮತ್ತು ನೌಕರರ ಹಿತ ಕಾಯುವ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು

ಈ ಸಂದರ್ಭದಲ್ಲಿ ನೌಕರರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಗೌರವಾಧ್ಯಕ್ಷ ಚಿನ್ನಹಳ್ಳಿ ಗೋಪಾಲ್, ಉಪಾಧ್ಯಕ್ಷ ಮಿಂಡಹಳ್ಳಿ ಮುನಿರಾಜು, ಪ್ರಧಾನ ಕಾರ್ಯದರ್ಶಿ ಬಗಲಹಳ್ಳಿ ನಾಗೇಶಗೌಡ, ಖಜಾಂಚಿ ವಕ್ಕಲೇರಿ ನಾಗರಾಜ್, ಚಿಂತಾಮಣಿ ಕೆಂಪರೆಡ್ಡಿ, ಜಿಲ್ಲಾ ಸಮಿತಿ ನಿರ್ದೇಶಕರಾದ ಎಸ್.ಎಂ ಗೋಪಾಲ್, ಮದನಹಳ್ಳಿ ರಮೇಶ್, ತಾಲೂಕು ಅಧ್ಯಕ್ಷ ತೊಂಡಾಲ ಮಂಜುನಾಥ್, ಪ್ರಧಾನ ಕಾರ್ಯದರ್ಶಿ ತಿಮ್ಮೇಗೌಡ, ಮುಖಂಡರಾದ ಗಂಗಾಪುರ ಬಾಬು, ಮಿಟ್ಟಮಾಲಹಳ್ಳಿ ಮಂಜುನಾಥ್, ಮುದುವಾಡಿಹೊಸಹಳ್ಳಿ ಮೋಹನ್, ಚಿನಪನಹಳ್ಳಿ ಗೋಪಾಲ್, ವೆಂಕಟಾಪುರ ಶ್ರೀನಿವಾಸ್, ಅಲಹಳ್ಳಿ ಮಂಜುನಾಥ್ ಮುಂತಾದವರು ಇದ್ದರು

Ramesh Babu

Journalist

Recent Posts

ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳ ವಿವೇಚನೆ ಮತ್ತು ಜವಾಬ್ದಾರಿ‌……..

ರಾಜಕೀಯ ಪಕ್ಷಗಳ ಭಿನ್ನಮತದ ಸುತ್ತ, ಅಧಿಕಾರ ಕುರ್ಚಿಯ ಹಾವು ಏಣಿ ಆಟದ ಸುತ್ತ, ಸ್ವಾಮೀಜಿಗಳ ಪೀಠದ ಸುತ್ತ, ಧರ್ಮಸ್ಥಳದ ನಿಗೂಢ…

4 hours ago

ನಾಳೆ (ಜು.29) ರಂದು ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬ: ಭಕ್ತರಿಗೆ ವಿಶೇಷ ಆಹ್ವಾನ: ವಿಶೇಷ ಪೂಜೆ, ಭಕ್ತರಿಗೆ ಭೋಜನೆ ವ್ಯವಸ್ಥೆ

ನಾಳೆ (ಜು.29) ರಂದು ದೊಡ್ಡಬಳ್ಳಾಪುರ ತಾಲೂಕಿನ ಪವಿತ್ರ ಹಾಗೂ ಪುಣ್ಯ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬವನ್ನು…

16 hours ago

“ಉತ್ತರ ಕರ್ನಾಟಕದ ಗ್ರಾಮೀಣ ನಾಗರ ಪಂಚಮಿ: ಹೆಣ್ಮಕ್ಕಳ ಜೋಕಾಲಿ ಸಂಭ್ರಮ”

ಭಾರತೀಯರು ಹಬ್ಬ-ಹರಿದಿನಗಳ ಪ್ರಿಯರು ಒಂದೋದು ಹಬ್ಬಕ್ಕೆ ತನ್ನದೇಯಾದ ವೈಶಿಷ್ಟತೆಯನ್ನು ನೀಡುತ್ತಾ, ಭಕ್ತಿ-ಭಾವದಿಂದ ನೂರಾರು ತಲೆಮಾರುಗಳಿಂದ ಆಚರಿಸಿಕೊಂಡು ಬರುತ್ತಿದ್ದಾರೆ. ಅದರಲ್ಲಿ ಉತ್ತರ…

16 hours ago

ಗ್ರಾಪಂ ನೌಕರರ ಬೇಡಿಕೆಗಳ ಈಡೇರಿಕೆಗೆ ಜಿಪಂ ಮುಂದೆ ಪ್ರತಿಭಟನೆ

ಕೋಲಾರ: ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಸಿಐಟಿಯು ನೇತೃತ್ವದ ಗ್ರಾಮ…

18 hours ago

RCB ಕಾಲ್ತುಳಿತ ಪ್ರಕರಣ: ಪೊಲಿಸ್ ಅಧಿಕಾರಿಗಳ ಅಮಾನತು ಆದೇಶ ಹಿಂಪಡೆದ ರಾಜ್ಯ ಸರ್ಕಾರ: ಅಚ್ಚರಿ ಹಾಗೂ ಚರ್ಚೆಗೆ ಗ್ರಾಸವಾದ ಸರ್ಕಾರದ ನಡೆ

ಜೂನ್ 4 ರಂದು ಐಪಿಎಲ್ ಟ್ರೋಫಿ ಗೆದ್ದ ಆರ್‌ಸಿಬಿ ತಂಡವನ್ನು ಅಭಿನಂದಿಸಲು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದ ವೇಳೆ ಕಾಲ್ತುಳಿತ…

18 hours ago

ದೇವಸ್ಥಾನದಲ್ಲಿ ಕಳ್ಳನ ಕೈಚಳಕ: ಬೈಕ್ ಸಮೇತ ಕಳ್ಳನ ಬಂಧನ

ಭಟ್ಕಳದ ಹೆಬಳೆ ತೆಂಗಿನಗುಂಡಿಯಲ್ಲಿರುವ ಶ್ರೀ ಬ್ರಹ್ಮಲಿಂಗೇಶ್ವರ ನಾಗದೇವತಾ ಪ್ರಸನ್ನ ದೇವಸ್ಥಾನದಲ್ಲಿ ಭಾನುವಾರ ಹಾಡುಹಗಲೇ ನಡೆದ ಕಳ್ಳತನ ಪ್ರಕರಣದ ಆರೋಪಿಯನ್ನು ಭಟ್ಕಳ…

21 hours ago