Categories: ಕೋಲಾರ

ಹಾಲು ಉತ್ಪಾದಕರ ನೌಕರರ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ಕೋಮುಲ್ ಆಡಳಿತಾಧಿಕಾರಿ ಮೈತ್ರಿಗೆ ಮನವಿ

ಕೋಲಾರ: ಹಾಲು ಉತ್ಪಾದಕರಿಗೆ ಲೀಟರ್ ಗೆ 5 ರೂ ಹೆಚ್ಚಳ ಸೇರಿದಂತೆ ಉತ್ಪಾದಕರ ಮತ್ತು ನೌಕರರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಹಾಲು ಡೇರಿ ಸಹಕಾರ ಸಂಘಗಳ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ಶುಕ್ರವಾರ ಕೋಮುಲ್ ಆಡಳಿತಾಧಿಕಾರಿ ಡಾ.ಮೈತ್ರಿ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ವಿಟ್ಟಪ್ಪನಹಳ್ಳಿ ಡೇರಿ ವೆಂಕಟೇಶ್ ಮಾತನಾಡಿ ಪ್ರತಿ ವರ್ಷ ಸಂಕ್ರಾಂತಿ ಸಂದರ್ಭದಲ್ಲಿ ಹಾಲು ಖರೀದಿ ದರ ಹೆಚ್ಚಿಸಲಾಗುತ್ತಿತ್ತು ಈ ಬಾರಿ ಬೇಸಿಗೆ ಪ್ರಾರಂಭವಾಗಿದ್ದರೂ ಹೆಚ್ಚಳ ಮಾಡಿಲ್ಲ ಕೂಡಲೇ ಹಾಲಿನ ದರ ಲೀ.5 ರೂ ಹೆಚ್ಚಳ ಮಾಡಬೇಕು ಒಕ್ಕೂಟದಿಂದ ಪ್ರಾಥಮಿಕ ಸಂಘಳಿಗೆ ಮೂರು ವಾರಗಳ ಬಟವಾಡೆ ಬಾಕಿ ಇದ್ದು ಸಂಘಗಳು ಮತ್ತು ಉತ್ಪಾದಕರ ಮಧ್ಯೆ ಗಲಾಟೆಗಳಿಗೆ ಕಾರಣವಾಗಿದ್ದು ಬಾಕಿ ಉಳಿದಿಕೊಂಡಿರುವ ಬಟವಾಡೆವನ್ನು ಕೂಡಲೇ ಸಂಘಗಳ ಖಾತೆಗೆ ವರ್ಗಾವಣೆ ಮಾಡುವಂತೆ ಒತ್ತಾಯಿಸಿದರು.

ಈಗಾಗಲೇ ಬೇಸಿಗೆ ಕಾಲ ಪ್ರಾರಂಭವಾಗಿದ್ದು ವಾತಾವರಣದ ಪರಿಣಾಮ ಹಾಲಿನ ಗುಣಮಟ್ಟ ಕಡಿಮೆಯಾಗುತ್ತಿದೆ ಒಕ್ಕೂಟದ 0.5 ಗುಣಮಟ್ಟದ ವ್ಯತ್ಯಾಸವನ್ನು ಪರಿಗಣಿಸಿ ಉತ್ಪಾದಕರಿಗೆ ಉಂಟಾಗುವ ನಷ್ಟವನ್ನು ಸರಿಪಡಿಸಬೇಕು, ಉತ್ಪಾದಕರ ಬಳಿ ರಾಸುಗಳಿಗೆ ವಿಮೆ ಮಾಡಿಸುವ ಸಂದರ್ಭದಲ್ಲೇ ಡೇರಿಯ ಬಟವಾಡದಲ್ಲಿ ಹಣ ಕಡಿತ ಮಾಡಲಾಗುತ್ತದೆ ಆದರೆ ರಾಸುಗಳಿಗೆ ಕೊಡಬೇಕಾದರೆ ಕನಿಷ್ಠ ಆರು ತಿಂಗಳು ಆಗುತ್ತದೆ ರಾಸುಗಳು ಮರಣ ಹೊಂದಿದ ಕೂಡಲೇ ವಿಮಾ ಮೊತ್ತವನ್ನು ಉತ್ಪಾದಕರ ಕೈಸೇರುವಂತೆ ಮಾಡಬೇಕು ಬಿಎಂಸಿಗಳ ನಿರ್ವಹಣಾ ವೆಚ್ಚ ಹೆಚ್ಚಳ ಮಾಡಬೇಕು ಎಂದು ಮನವಿ ಮಾಡಿದರು.

ವಿವಿಧ ಸಂಘಗಳ ಕಾರ್ಯದರ್ಶಿಗಳು ಮಾತನಾಡಿ ಪ್ರಾಥಮಿಕ ಡೇರಿಗಳಿಂದ ಒಕ್ಕೂಟವಿದೆ ಎಂಬುದನ್ನು ಅಧಿಕಾರಿಗಳು ಮರೆಯಬಾರದು ಸಾಫ್ಟ್‌ವೇರ್ ಹೆಸರಿನಲ್ಲಿ ಸಂಘಗಳಿಗೆ ತೊಂದರೆಯಾಗಿದೆ ಮೊದಲು ಒಕ್ಕೂಟದಲ್ಲಿ ಸಾಫ್ಟ್‌ವೇರ್ ಅಳವಡಿಸಿಕೊಳ್ಳಿ ನಂತರ ಸಂಘಗಳಿಗೆ ಆದೇಶ ಮಾಡಲಿ, ಮೂಲಭೂತ ಸೌಕರ್ಯಗಳ ಹೆಸರಿನಲ್ಲಿ ಹಗಲು ದರೋಡೆ ಮಾಡಲಾಗುತ್ತಿದೆ ಅದರ ಬಗ್ಗೆ ಮೊದಲು ಕ್ರಮವಾಗಬೇಕು ಎಂದು ವ್ಯವಸ್ಥಾಪಕ ನಿರ್ದೇಶಕ ಗೋಪಾಲಮೂರ್ತಿ ಹಾಗೂ ಮ್ಯಾನೇಜರ್ ಚೇತನ್ ಅವರನ್ನು ತರಾಟೆಗೆ ತೆಗೆದುಕೊಂಡರು.

ಮನವಿ ಸ್ವೀಕರಿಸಿ ಮಾತನಾಡಿದ ಆಡಳಿತಾಧಿಕಾರಿ ಡಾ.ಮೈತ್ರಿ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡದೇ ಇರುವುದೇ ಇಂತಹ ಸಮಸ್ಯೆಗಳಿಗೆ ಕಾರಣವಾಗಿದೆ ಹಾಲು ಉತ್ಪಾದಕರು ಹಾಗೂ ಡೇರಿ ನೌಕರರಿಗೆ ಅನುಕೂಲ ಮಾಡಲು ನಾನು ಇರುವಷ್ಟು ದಿನದಲ್ಲಿ ಪ್ರಾಮಾಣಿಕವಾಗಿ ಮಾಡತ್ತೇನೆ ಜೊತೆಗೆ ರಾಸುಗಳಿಗೆ ವಿತರಿಸುತ್ತಿರುವ ವಿಮಾ ಏಜೆನ್ಸಿಯನ್ನು ಬದಲಾವಣೆ ಮಾಡಲಾಗುತ್ತದೆ ಈ ತಿಂಗಳೊಳಗೆ ನಿಮ್ಮ ಬೇಡಿಕೆಗಳ ಈಡೇರಿಕೆಗೆ ಕೂಡಲೇ ಸಭೆ ಕರೆದು ತೀರ್ಮಾನ ತೆಗೆದುಕೊಂಡು ಉತ್ಪಾದಕರ ಮತ್ತು ನೌಕರರ ಹಿತ ಕಾಯುವ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು

ಈ ಸಂದರ್ಭದಲ್ಲಿ ನೌಕರರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಗೌರವಾಧ್ಯಕ್ಷ ಚಿನ್ನಹಳ್ಳಿ ಗೋಪಾಲ್, ಉಪಾಧ್ಯಕ್ಷ ಮಿಂಡಹಳ್ಳಿ ಮುನಿರಾಜು, ಪ್ರಧಾನ ಕಾರ್ಯದರ್ಶಿ ಬಗಲಹಳ್ಳಿ ನಾಗೇಶಗೌಡ, ಖಜಾಂಚಿ ವಕ್ಕಲೇರಿ ನಾಗರಾಜ್, ಚಿಂತಾಮಣಿ ಕೆಂಪರೆಡ್ಡಿ, ಜಿಲ್ಲಾ ಸಮಿತಿ ನಿರ್ದೇಶಕರಾದ ಎಸ್.ಎಂ ಗೋಪಾಲ್, ಮದನಹಳ್ಳಿ ರಮೇಶ್, ತಾಲೂಕು ಅಧ್ಯಕ್ಷ ತೊಂಡಾಲ ಮಂಜುನಾಥ್, ಪ್ರಧಾನ ಕಾರ್ಯದರ್ಶಿ ತಿಮ್ಮೇಗೌಡ, ಮುಖಂಡರಾದ ಗಂಗಾಪುರ ಬಾಬು, ಮಿಟ್ಟಮಾಲಹಳ್ಳಿ ಮಂಜುನಾಥ್, ಮುದುವಾಡಿಹೊಸಹಳ್ಳಿ ಮೋಹನ್, ಚಿನಪನಹಳ್ಳಿ ಗೋಪಾಲ್, ವೆಂಕಟಾಪುರ ಶ್ರೀನಿವಾಸ್, ಅಲಹಳ್ಳಿ ಮಂಜುನಾಥ್ ಮುಂತಾದವರು ಇದ್ದರು

Ramesh Babu

Journalist

Recent Posts

ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿದ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ

ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…

5 hours ago

ಜಗತ್ತಿನ ಬೆಳಕಿನ ಹಬ್ಬ – ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ…..

ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…

8 hours ago

ಖಾಸಗಿ ಬಸ್ ಲಾರಿಗೆ ಡಿಕ್ಕಿ: ಹೊತ್ತಿ ಉರಿದ ಬಸ್: 9 ಮಂದಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಬಸ್ ಒಳಗಡೆಯೇ ಸಜೀವ ದಹನ

ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…

8 hours ago

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು ಇಲ್ಲಿವೆ ನೋಡಿ…

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…

21 hours ago

ನಾಳೆ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವ: ಬ್ರಹ್ಮ ರಥೋತ್ಸವಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಇಂದು ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಭೇಟಿ, ಪರಿಶೀಲನೆ

ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…

23 hours ago