Categories: ಕೋಲಾರ

ಹಾಲು ಉತ್ಪಾದಕರ ನೌಕರರ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ಕೋಮುಲ್ ಆಡಳಿತಾಧಿಕಾರಿ ಮೈತ್ರಿಗೆ ಮನವಿ

ಕೋಲಾರ: ಹಾಲು ಉತ್ಪಾದಕರಿಗೆ ಲೀಟರ್ ಗೆ 5 ರೂ ಹೆಚ್ಚಳ ಸೇರಿದಂತೆ ಉತ್ಪಾದಕರ ಮತ್ತು ನೌಕರರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಹಾಲು ಡೇರಿ ಸಹಕಾರ ಸಂಘಗಳ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ಶುಕ್ರವಾರ ಕೋಮುಲ್ ಆಡಳಿತಾಧಿಕಾರಿ ಡಾ.ಮೈತ್ರಿ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ವಿಟ್ಟಪ್ಪನಹಳ್ಳಿ ಡೇರಿ ವೆಂಕಟೇಶ್ ಮಾತನಾಡಿ ಪ್ರತಿ ವರ್ಷ ಸಂಕ್ರಾಂತಿ ಸಂದರ್ಭದಲ್ಲಿ ಹಾಲು ಖರೀದಿ ದರ ಹೆಚ್ಚಿಸಲಾಗುತ್ತಿತ್ತು ಈ ಬಾರಿ ಬೇಸಿಗೆ ಪ್ರಾರಂಭವಾಗಿದ್ದರೂ ಹೆಚ್ಚಳ ಮಾಡಿಲ್ಲ ಕೂಡಲೇ ಹಾಲಿನ ದರ ಲೀ.5 ರೂ ಹೆಚ್ಚಳ ಮಾಡಬೇಕು ಒಕ್ಕೂಟದಿಂದ ಪ್ರಾಥಮಿಕ ಸಂಘಳಿಗೆ ಮೂರು ವಾರಗಳ ಬಟವಾಡೆ ಬಾಕಿ ಇದ್ದು ಸಂಘಗಳು ಮತ್ತು ಉತ್ಪಾದಕರ ಮಧ್ಯೆ ಗಲಾಟೆಗಳಿಗೆ ಕಾರಣವಾಗಿದ್ದು ಬಾಕಿ ಉಳಿದಿಕೊಂಡಿರುವ ಬಟವಾಡೆವನ್ನು ಕೂಡಲೇ ಸಂಘಗಳ ಖಾತೆಗೆ ವರ್ಗಾವಣೆ ಮಾಡುವಂತೆ ಒತ್ತಾಯಿಸಿದರು.

ಈಗಾಗಲೇ ಬೇಸಿಗೆ ಕಾಲ ಪ್ರಾರಂಭವಾಗಿದ್ದು ವಾತಾವರಣದ ಪರಿಣಾಮ ಹಾಲಿನ ಗುಣಮಟ್ಟ ಕಡಿಮೆಯಾಗುತ್ತಿದೆ ಒಕ್ಕೂಟದ 0.5 ಗುಣಮಟ್ಟದ ವ್ಯತ್ಯಾಸವನ್ನು ಪರಿಗಣಿಸಿ ಉತ್ಪಾದಕರಿಗೆ ಉಂಟಾಗುವ ನಷ್ಟವನ್ನು ಸರಿಪಡಿಸಬೇಕು, ಉತ್ಪಾದಕರ ಬಳಿ ರಾಸುಗಳಿಗೆ ವಿಮೆ ಮಾಡಿಸುವ ಸಂದರ್ಭದಲ್ಲೇ ಡೇರಿಯ ಬಟವಾಡದಲ್ಲಿ ಹಣ ಕಡಿತ ಮಾಡಲಾಗುತ್ತದೆ ಆದರೆ ರಾಸುಗಳಿಗೆ ಕೊಡಬೇಕಾದರೆ ಕನಿಷ್ಠ ಆರು ತಿಂಗಳು ಆಗುತ್ತದೆ ರಾಸುಗಳು ಮರಣ ಹೊಂದಿದ ಕೂಡಲೇ ವಿಮಾ ಮೊತ್ತವನ್ನು ಉತ್ಪಾದಕರ ಕೈಸೇರುವಂತೆ ಮಾಡಬೇಕು ಬಿಎಂಸಿಗಳ ನಿರ್ವಹಣಾ ವೆಚ್ಚ ಹೆಚ್ಚಳ ಮಾಡಬೇಕು ಎಂದು ಮನವಿ ಮಾಡಿದರು.

ವಿವಿಧ ಸಂಘಗಳ ಕಾರ್ಯದರ್ಶಿಗಳು ಮಾತನಾಡಿ ಪ್ರಾಥಮಿಕ ಡೇರಿಗಳಿಂದ ಒಕ್ಕೂಟವಿದೆ ಎಂಬುದನ್ನು ಅಧಿಕಾರಿಗಳು ಮರೆಯಬಾರದು ಸಾಫ್ಟ್‌ವೇರ್ ಹೆಸರಿನಲ್ಲಿ ಸಂಘಗಳಿಗೆ ತೊಂದರೆಯಾಗಿದೆ ಮೊದಲು ಒಕ್ಕೂಟದಲ್ಲಿ ಸಾಫ್ಟ್‌ವೇರ್ ಅಳವಡಿಸಿಕೊಳ್ಳಿ ನಂತರ ಸಂಘಗಳಿಗೆ ಆದೇಶ ಮಾಡಲಿ, ಮೂಲಭೂತ ಸೌಕರ್ಯಗಳ ಹೆಸರಿನಲ್ಲಿ ಹಗಲು ದರೋಡೆ ಮಾಡಲಾಗುತ್ತಿದೆ ಅದರ ಬಗ್ಗೆ ಮೊದಲು ಕ್ರಮವಾಗಬೇಕು ಎಂದು ವ್ಯವಸ್ಥಾಪಕ ನಿರ್ದೇಶಕ ಗೋಪಾಲಮೂರ್ತಿ ಹಾಗೂ ಮ್ಯಾನೇಜರ್ ಚೇತನ್ ಅವರನ್ನು ತರಾಟೆಗೆ ತೆಗೆದುಕೊಂಡರು.

ಮನವಿ ಸ್ವೀಕರಿಸಿ ಮಾತನಾಡಿದ ಆಡಳಿತಾಧಿಕಾರಿ ಡಾ.ಮೈತ್ರಿ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡದೇ ಇರುವುದೇ ಇಂತಹ ಸಮಸ್ಯೆಗಳಿಗೆ ಕಾರಣವಾಗಿದೆ ಹಾಲು ಉತ್ಪಾದಕರು ಹಾಗೂ ಡೇರಿ ನೌಕರರಿಗೆ ಅನುಕೂಲ ಮಾಡಲು ನಾನು ಇರುವಷ್ಟು ದಿನದಲ್ಲಿ ಪ್ರಾಮಾಣಿಕವಾಗಿ ಮಾಡತ್ತೇನೆ ಜೊತೆಗೆ ರಾಸುಗಳಿಗೆ ವಿತರಿಸುತ್ತಿರುವ ವಿಮಾ ಏಜೆನ್ಸಿಯನ್ನು ಬದಲಾವಣೆ ಮಾಡಲಾಗುತ್ತದೆ ಈ ತಿಂಗಳೊಳಗೆ ನಿಮ್ಮ ಬೇಡಿಕೆಗಳ ಈಡೇರಿಕೆಗೆ ಕೂಡಲೇ ಸಭೆ ಕರೆದು ತೀರ್ಮಾನ ತೆಗೆದುಕೊಂಡು ಉತ್ಪಾದಕರ ಮತ್ತು ನೌಕರರ ಹಿತ ಕಾಯುವ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು

ಈ ಸಂದರ್ಭದಲ್ಲಿ ನೌಕರರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಗೌರವಾಧ್ಯಕ್ಷ ಚಿನ್ನಹಳ್ಳಿ ಗೋಪಾಲ್, ಉಪಾಧ್ಯಕ್ಷ ಮಿಂಡಹಳ್ಳಿ ಮುನಿರಾಜು, ಪ್ರಧಾನ ಕಾರ್ಯದರ್ಶಿ ಬಗಲಹಳ್ಳಿ ನಾಗೇಶಗೌಡ, ಖಜಾಂಚಿ ವಕ್ಕಲೇರಿ ನಾಗರಾಜ್, ಚಿಂತಾಮಣಿ ಕೆಂಪರೆಡ್ಡಿ, ಜಿಲ್ಲಾ ಸಮಿತಿ ನಿರ್ದೇಶಕರಾದ ಎಸ್.ಎಂ ಗೋಪಾಲ್, ಮದನಹಳ್ಳಿ ರಮೇಶ್, ತಾಲೂಕು ಅಧ್ಯಕ್ಷ ತೊಂಡಾಲ ಮಂಜುನಾಥ್, ಪ್ರಧಾನ ಕಾರ್ಯದರ್ಶಿ ತಿಮ್ಮೇಗೌಡ, ಮುಖಂಡರಾದ ಗಂಗಾಪುರ ಬಾಬು, ಮಿಟ್ಟಮಾಲಹಳ್ಳಿ ಮಂಜುನಾಥ್, ಮುದುವಾಡಿಹೊಸಹಳ್ಳಿ ಮೋಹನ್, ಚಿನಪನಹಳ್ಳಿ ಗೋಪಾಲ್, ವೆಂಕಟಾಪುರ ಶ್ರೀನಿವಾಸ್, ಅಲಹಳ್ಳಿ ಮಂಜುನಾಥ್ ಮುಂತಾದವರು ಇದ್ದರು

Ramesh Babu

Journalist

Recent Posts

ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿ: ಚಿಕಿ*ತ್ಸೆ ಫಲಕಾರಿಯಾಗದೆ ಸಾವು: ಪ್ರತಿಭಟನೆ ಮತ್ತು ಪ್ರಕರಣ ದಾಖಲು

ಹಾಸನ: ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಯೊಬ್ಬರು ಚಿಕಿ*ತ್ಸೆ ಫಲಕಾರಿಯಾಗದೆ ಮೃ*ಪಟ್ಟ ಘಟನೆ ಹಾಸನ ನಗರದ ಹಿಮ್ಸ್ (HIMS) ಆಸ್ಪತ್ರೆಯಲ್ಲಿ ನಡೆದಿದೆ.…

7 hours ago

ತೂಬಗೆರೆಯ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ: ಹುಂಡಿ, ತಾಳಿ, ಆಭರಣ ಕಳವು

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಮಂಗಳವಾರ ಬೆಳಿಗ್ಗೆ ದೇವಾಲಯದ ಬಾಗಿಲಿನ ಬೀಗ…

8 hours ago

ಸಂಬಳಕ್ಕಾಗಿ ಕಾರ್ಮಿಕರಿಂದ ಕಾರ್ಖಾನೆ ಮುಂದೆ ಪ್ರತಿಭಟನೆ

ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆ(ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್)ಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ…

9 hours ago

ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ ಜಿಲ್ಲಾಧಿಕಾರಿ ಎಬಿ ಬಸವರಾಜು ಆದೇಶ

ಕರ್ನಾಟಕ ಸ್ಥಳೀಯ ಸಂಸ್ಥೆಗಳ(ಪಕ್ಷಾಂತರ ನಿಷೇಧ) ಅಧಿನಿಯಮ 4(2)(|||) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ…

11 hours ago

ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯ ಹತ್ಯೆ

ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ…

18 hours ago

ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು..! ಕುಟುಂಬದ ಹುಡುಗಿಯೊಬ್ಬಳ ಮಿಸ್ಸಿಂಗ್ ವಿಚಾರಕ್ಕೆ ಹಲ್ಲೆ.!

ವ್ಯಕ್ತಿಯ ಮೇಲೆ ಅತ್ಯಂತ ಕ್ರೂರವಾಗಿ ದೌರ್ಜನ್ಯ ನಡೆಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ... ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು. ಮಂಡ್ಯದ…

18 hours ago