Categories: ಕೋಲಾರ

ಹಾಲು ಉತ್ಪಾದಕರ ನೌಕರರ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ಕೋಮುಲ್ ಆಡಳಿತಾಧಿಕಾರಿ ಮೈತ್ರಿಗೆ ಮನವಿ

ಕೋಲಾರ: ಹಾಲು ಉತ್ಪಾದಕರಿಗೆ ಲೀಟರ್ ಗೆ 5 ರೂ ಹೆಚ್ಚಳ ಸೇರಿದಂತೆ ಉತ್ಪಾದಕರ ಮತ್ತು ನೌಕರರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಹಾಲು ಡೇರಿ ಸಹಕಾರ ಸಂಘಗಳ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ಶುಕ್ರವಾರ ಕೋಮುಲ್ ಆಡಳಿತಾಧಿಕಾರಿ ಡಾ.ಮೈತ್ರಿ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ವಿಟ್ಟಪ್ಪನಹಳ್ಳಿ ಡೇರಿ ವೆಂಕಟೇಶ್ ಮಾತನಾಡಿ ಪ್ರತಿ ವರ್ಷ ಸಂಕ್ರಾಂತಿ ಸಂದರ್ಭದಲ್ಲಿ ಹಾಲು ಖರೀದಿ ದರ ಹೆಚ್ಚಿಸಲಾಗುತ್ತಿತ್ತು ಈ ಬಾರಿ ಬೇಸಿಗೆ ಪ್ರಾರಂಭವಾಗಿದ್ದರೂ ಹೆಚ್ಚಳ ಮಾಡಿಲ್ಲ ಕೂಡಲೇ ಹಾಲಿನ ದರ ಲೀ.5 ರೂ ಹೆಚ್ಚಳ ಮಾಡಬೇಕು ಒಕ್ಕೂಟದಿಂದ ಪ್ರಾಥಮಿಕ ಸಂಘಳಿಗೆ ಮೂರು ವಾರಗಳ ಬಟವಾಡೆ ಬಾಕಿ ಇದ್ದು ಸಂಘಗಳು ಮತ್ತು ಉತ್ಪಾದಕರ ಮಧ್ಯೆ ಗಲಾಟೆಗಳಿಗೆ ಕಾರಣವಾಗಿದ್ದು ಬಾಕಿ ಉಳಿದಿಕೊಂಡಿರುವ ಬಟವಾಡೆವನ್ನು ಕೂಡಲೇ ಸಂಘಗಳ ಖಾತೆಗೆ ವರ್ಗಾವಣೆ ಮಾಡುವಂತೆ ಒತ್ತಾಯಿಸಿದರು.

ಈಗಾಗಲೇ ಬೇಸಿಗೆ ಕಾಲ ಪ್ರಾರಂಭವಾಗಿದ್ದು ವಾತಾವರಣದ ಪರಿಣಾಮ ಹಾಲಿನ ಗುಣಮಟ್ಟ ಕಡಿಮೆಯಾಗುತ್ತಿದೆ ಒಕ್ಕೂಟದ 0.5 ಗುಣಮಟ್ಟದ ವ್ಯತ್ಯಾಸವನ್ನು ಪರಿಗಣಿಸಿ ಉತ್ಪಾದಕರಿಗೆ ಉಂಟಾಗುವ ನಷ್ಟವನ್ನು ಸರಿಪಡಿಸಬೇಕು, ಉತ್ಪಾದಕರ ಬಳಿ ರಾಸುಗಳಿಗೆ ವಿಮೆ ಮಾಡಿಸುವ ಸಂದರ್ಭದಲ್ಲೇ ಡೇರಿಯ ಬಟವಾಡದಲ್ಲಿ ಹಣ ಕಡಿತ ಮಾಡಲಾಗುತ್ತದೆ ಆದರೆ ರಾಸುಗಳಿಗೆ ಕೊಡಬೇಕಾದರೆ ಕನಿಷ್ಠ ಆರು ತಿಂಗಳು ಆಗುತ್ತದೆ ರಾಸುಗಳು ಮರಣ ಹೊಂದಿದ ಕೂಡಲೇ ವಿಮಾ ಮೊತ್ತವನ್ನು ಉತ್ಪಾದಕರ ಕೈಸೇರುವಂತೆ ಮಾಡಬೇಕು ಬಿಎಂಸಿಗಳ ನಿರ್ವಹಣಾ ವೆಚ್ಚ ಹೆಚ್ಚಳ ಮಾಡಬೇಕು ಎಂದು ಮನವಿ ಮಾಡಿದರು.

ವಿವಿಧ ಸಂಘಗಳ ಕಾರ್ಯದರ್ಶಿಗಳು ಮಾತನಾಡಿ ಪ್ರಾಥಮಿಕ ಡೇರಿಗಳಿಂದ ಒಕ್ಕೂಟವಿದೆ ಎಂಬುದನ್ನು ಅಧಿಕಾರಿಗಳು ಮರೆಯಬಾರದು ಸಾಫ್ಟ್‌ವೇರ್ ಹೆಸರಿನಲ್ಲಿ ಸಂಘಗಳಿಗೆ ತೊಂದರೆಯಾಗಿದೆ ಮೊದಲು ಒಕ್ಕೂಟದಲ್ಲಿ ಸಾಫ್ಟ್‌ವೇರ್ ಅಳವಡಿಸಿಕೊಳ್ಳಿ ನಂತರ ಸಂಘಗಳಿಗೆ ಆದೇಶ ಮಾಡಲಿ, ಮೂಲಭೂತ ಸೌಕರ್ಯಗಳ ಹೆಸರಿನಲ್ಲಿ ಹಗಲು ದರೋಡೆ ಮಾಡಲಾಗುತ್ತಿದೆ ಅದರ ಬಗ್ಗೆ ಮೊದಲು ಕ್ರಮವಾಗಬೇಕು ಎಂದು ವ್ಯವಸ್ಥಾಪಕ ನಿರ್ದೇಶಕ ಗೋಪಾಲಮೂರ್ತಿ ಹಾಗೂ ಮ್ಯಾನೇಜರ್ ಚೇತನ್ ಅವರನ್ನು ತರಾಟೆಗೆ ತೆಗೆದುಕೊಂಡರು.

ಮನವಿ ಸ್ವೀಕರಿಸಿ ಮಾತನಾಡಿದ ಆಡಳಿತಾಧಿಕಾರಿ ಡಾ.ಮೈತ್ರಿ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡದೇ ಇರುವುದೇ ಇಂತಹ ಸಮಸ್ಯೆಗಳಿಗೆ ಕಾರಣವಾಗಿದೆ ಹಾಲು ಉತ್ಪಾದಕರು ಹಾಗೂ ಡೇರಿ ನೌಕರರಿಗೆ ಅನುಕೂಲ ಮಾಡಲು ನಾನು ಇರುವಷ್ಟು ದಿನದಲ್ಲಿ ಪ್ರಾಮಾಣಿಕವಾಗಿ ಮಾಡತ್ತೇನೆ ಜೊತೆಗೆ ರಾಸುಗಳಿಗೆ ವಿತರಿಸುತ್ತಿರುವ ವಿಮಾ ಏಜೆನ್ಸಿಯನ್ನು ಬದಲಾವಣೆ ಮಾಡಲಾಗುತ್ತದೆ ಈ ತಿಂಗಳೊಳಗೆ ನಿಮ್ಮ ಬೇಡಿಕೆಗಳ ಈಡೇರಿಕೆಗೆ ಕೂಡಲೇ ಸಭೆ ಕರೆದು ತೀರ್ಮಾನ ತೆಗೆದುಕೊಂಡು ಉತ್ಪಾದಕರ ಮತ್ತು ನೌಕರರ ಹಿತ ಕಾಯುವ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು

ಈ ಸಂದರ್ಭದಲ್ಲಿ ನೌಕರರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಗೌರವಾಧ್ಯಕ್ಷ ಚಿನ್ನಹಳ್ಳಿ ಗೋಪಾಲ್, ಉಪಾಧ್ಯಕ್ಷ ಮಿಂಡಹಳ್ಳಿ ಮುನಿರಾಜು, ಪ್ರಧಾನ ಕಾರ್ಯದರ್ಶಿ ಬಗಲಹಳ್ಳಿ ನಾಗೇಶಗೌಡ, ಖಜಾಂಚಿ ವಕ್ಕಲೇರಿ ನಾಗರಾಜ್, ಚಿಂತಾಮಣಿ ಕೆಂಪರೆಡ್ಡಿ, ಜಿಲ್ಲಾ ಸಮಿತಿ ನಿರ್ದೇಶಕರಾದ ಎಸ್.ಎಂ ಗೋಪಾಲ್, ಮದನಹಳ್ಳಿ ರಮೇಶ್, ತಾಲೂಕು ಅಧ್ಯಕ್ಷ ತೊಂಡಾಲ ಮಂಜುನಾಥ್, ಪ್ರಧಾನ ಕಾರ್ಯದರ್ಶಿ ತಿಮ್ಮೇಗೌಡ, ಮುಖಂಡರಾದ ಗಂಗಾಪುರ ಬಾಬು, ಮಿಟ್ಟಮಾಲಹಳ್ಳಿ ಮಂಜುನಾಥ್, ಮುದುವಾಡಿಹೊಸಹಳ್ಳಿ ಮೋಹನ್, ಚಿನಪನಹಳ್ಳಿ ಗೋಪಾಲ್, ವೆಂಕಟಾಪುರ ಶ್ರೀನಿವಾಸ್, ಅಲಹಳ್ಳಿ ಮಂಜುನಾಥ್ ಮುಂತಾದವರು ಇದ್ದರು

Ramesh Babu

Journalist

Recent Posts

ಟಾಕ್ಸಿಕ್

ಕ್ರಿಯಾತ್ಮಕತೆ ಮತ್ತು ಪ್ರಯತ್ನಗಳಿಗೂ ಒಂದಷ್ಟು ಮಿತಿ ಇರುತ್ತದೆ. ಏಕೆಂದರೆ ನಾವು ಸಾಮಾನ್ಯ ಮನುಷ್ಯರು. ಹಣ, ಜನಪ್ರಿಯತೆ, ಅಧಿಕಾರ ಬಂದ ತಕ್ಷಣ…

1 day ago

ಚಿ.ನಾ.ಹಳ್ಳಿ ತಾಲ್ಲೂಕಿಗೆ ಸಿಇಒ ದಿಢೀರ್ ಭೇಟಿ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…

2 days ago

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ ನಾಲ್ವರು ಬಲಿ

ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್‌ಸ್ಪೆಕ್ಟರ್…

2 days ago

ರಕ್ಷಾ ಬಂಧನ ಮತ್ತು ಮದರ್ ತೆರೇಸಾ

ಮದರ್‌ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…

2 days ago

ರೈತಪರ ಯೋಜನೆ : ವಿಬಿ-ಜಿ ರಾಮ್ ಜಿ ಯೋಜನೆ

ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…

3 days ago

ಮೂರು ತಾಲೂಕು ಬರದ ಪಟ್ಟಿಗೆ; ದೊಡ್ಡಬಳ್ಳಾಪುರಕ್ಕೆ ವಿನಾಯಿತಿ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

3 days ago