ಕೋಲಾರ: ಹಾಲು ಉತ್ಪಾದಕರಿಗೆ ಲೀಟರ್ ಗೆ 5 ರೂ ಹೆಚ್ಚಳ ಸೇರಿದಂತೆ ಉತ್ಪಾದಕರ ಮತ್ತು ನೌಕರರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಹಾಲು ಡೇರಿ ಸಹಕಾರ ಸಂಘಗಳ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ಶುಕ್ರವಾರ ಕೋಮುಲ್ ಆಡಳಿತಾಧಿಕಾರಿ ಡಾ.ಮೈತ್ರಿ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ವಿಟ್ಟಪ್ಪನಹಳ್ಳಿ ಡೇರಿ ವೆಂಕಟೇಶ್ ಮಾತನಾಡಿ ಪ್ರತಿ ವರ್ಷ ಸಂಕ್ರಾಂತಿ ಸಂದರ್ಭದಲ್ಲಿ ಹಾಲು ಖರೀದಿ ದರ ಹೆಚ್ಚಿಸಲಾಗುತ್ತಿತ್ತು ಈ ಬಾರಿ ಬೇಸಿಗೆ ಪ್ರಾರಂಭವಾಗಿದ್ದರೂ ಹೆಚ್ಚಳ ಮಾಡಿಲ್ಲ ಕೂಡಲೇ ಹಾಲಿನ ದರ ಲೀ.5 ರೂ ಹೆಚ್ಚಳ ಮಾಡಬೇಕು ಒಕ್ಕೂಟದಿಂದ ಪ್ರಾಥಮಿಕ ಸಂಘಳಿಗೆ ಮೂರು ವಾರಗಳ ಬಟವಾಡೆ ಬಾಕಿ ಇದ್ದು ಸಂಘಗಳು ಮತ್ತು ಉತ್ಪಾದಕರ ಮಧ್ಯೆ ಗಲಾಟೆಗಳಿಗೆ ಕಾರಣವಾಗಿದ್ದು ಬಾಕಿ ಉಳಿದಿಕೊಂಡಿರುವ ಬಟವಾಡೆವನ್ನು ಕೂಡಲೇ ಸಂಘಗಳ ಖಾತೆಗೆ ವರ್ಗಾವಣೆ ಮಾಡುವಂತೆ ಒತ್ತಾಯಿಸಿದರು.
ಈಗಾಗಲೇ ಬೇಸಿಗೆ ಕಾಲ ಪ್ರಾರಂಭವಾಗಿದ್ದು ವಾತಾವರಣದ ಪರಿಣಾಮ ಹಾಲಿನ ಗುಣಮಟ್ಟ ಕಡಿಮೆಯಾಗುತ್ತಿದೆ ಒಕ್ಕೂಟದ 0.5 ಗುಣಮಟ್ಟದ ವ್ಯತ್ಯಾಸವನ್ನು ಪರಿಗಣಿಸಿ ಉತ್ಪಾದಕರಿಗೆ ಉಂಟಾಗುವ ನಷ್ಟವನ್ನು ಸರಿಪಡಿಸಬೇಕು, ಉತ್ಪಾದಕರ ಬಳಿ ರಾಸುಗಳಿಗೆ ವಿಮೆ ಮಾಡಿಸುವ ಸಂದರ್ಭದಲ್ಲೇ ಡೇರಿಯ ಬಟವಾಡದಲ್ಲಿ ಹಣ ಕಡಿತ ಮಾಡಲಾಗುತ್ತದೆ ಆದರೆ ರಾಸುಗಳಿಗೆ ಕೊಡಬೇಕಾದರೆ ಕನಿಷ್ಠ ಆರು ತಿಂಗಳು ಆಗುತ್ತದೆ ರಾಸುಗಳು ಮರಣ ಹೊಂದಿದ ಕೂಡಲೇ ವಿಮಾ ಮೊತ್ತವನ್ನು ಉತ್ಪಾದಕರ ಕೈಸೇರುವಂತೆ ಮಾಡಬೇಕು ಬಿಎಂಸಿಗಳ ನಿರ್ವಹಣಾ ವೆಚ್ಚ ಹೆಚ್ಚಳ ಮಾಡಬೇಕು ಎಂದು ಮನವಿ ಮಾಡಿದರು.
ವಿವಿಧ ಸಂಘಗಳ ಕಾರ್ಯದರ್ಶಿಗಳು ಮಾತನಾಡಿ ಪ್ರಾಥಮಿಕ ಡೇರಿಗಳಿಂದ ಒಕ್ಕೂಟವಿದೆ ಎಂಬುದನ್ನು ಅಧಿಕಾರಿಗಳು ಮರೆಯಬಾರದು ಸಾಫ್ಟ್ವೇರ್ ಹೆಸರಿನಲ್ಲಿ ಸಂಘಗಳಿಗೆ ತೊಂದರೆಯಾಗಿದೆ ಮೊದಲು ಒಕ್ಕೂಟದಲ್ಲಿ ಸಾಫ್ಟ್ವೇರ್ ಅಳವಡಿಸಿಕೊಳ್ಳಿ ನಂತರ ಸಂಘಗಳಿಗೆ ಆದೇಶ ಮಾಡಲಿ, ಮೂಲಭೂತ ಸೌಕರ್ಯಗಳ ಹೆಸರಿನಲ್ಲಿ ಹಗಲು ದರೋಡೆ ಮಾಡಲಾಗುತ್ತಿದೆ ಅದರ ಬಗ್ಗೆ ಮೊದಲು ಕ್ರಮವಾಗಬೇಕು ಎಂದು ವ್ಯವಸ್ಥಾಪಕ ನಿರ್ದೇಶಕ ಗೋಪಾಲಮೂರ್ತಿ ಹಾಗೂ ಮ್ಯಾನೇಜರ್ ಚೇತನ್ ಅವರನ್ನು ತರಾಟೆಗೆ ತೆಗೆದುಕೊಂಡರು.
ಮನವಿ ಸ್ವೀಕರಿಸಿ ಮಾತನಾಡಿದ ಆಡಳಿತಾಧಿಕಾರಿ ಡಾ.ಮೈತ್ರಿ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡದೇ ಇರುವುದೇ ಇಂತಹ ಸಮಸ್ಯೆಗಳಿಗೆ ಕಾರಣವಾಗಿದೆ ಹಾಲು ಉತ್ಪಾದಕರು ಹಾಗೂ ಡೇರಿ ನೌಕರರಿಗೆ ಅನುಕೂಲ ಮಾಡಲು ನಾನು ಇರುವಷ್ಟು ದಿನದಲ್ಲಿ ಪ್ರಾಮಾಣಿಕವಾಗಿ ಮಾಡತ್ತೇನೆ ಜೊತೆಗೆ ರಾಸುಗಳಿಗೆ ವಿತರಿಸುತ್ತಿರುವ ವಿಮಾ ಏಜೆನ್ಸಿಯನ್ನು ಬದಲಾವಣೆ ಮಾಡಲಾಗುತ್ತದೆ ಈ ತಿಂಗಳೊಳಗೆ ನಿಮ್ಮ ಬೇಡಿಕೆಗಳ ಈಡೇರಿಕೆಗೆ ಕೂಡಲೇ ಸಭೆ ಕರೆದು ತೀರ್ಮಾನ ತೆಗೆದುಕೊಂಡು ಉತ್ಪಾದಕರ ಮತ್ತು ನೌಕರರ ಹಿತ ಕಾಯುವ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು
ಈ ಸಂದರ್ಭದಲ್ಲಿ ನೌಕರರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಗೌರವಾಧ್ಯಕ್ಷ ಚಿನ್ನಹಳ್ಳಿ ಗೋಪಾಲ್, ಉಪಾಧ್ಯಕ್ಷ ಮಿಂಡಹಳ್ಳಿ ಮುನಿರಾಜು, ಪ್ರಧಾನ ಕಾರ್ಯದರ್ಶಿ ಬಗಲಹಳ್ಳಿ ನಾಗೇಶಗೌಡ, ಖಜಾಂಚಿ ವಕ್ಕಲೇರಿ ನಾಗರಾಜ್, ಚಿಂತಾಮಣಿ ಕೆಂಪರೆಡ್ಡಿ, ಜಿಲ್ಲಾ ಸಮಿತಿ ನಿರ್ದೇಶಕರಾದ ಎಸ್.ಎಂ ಗೋಪಾಲ್, ಮದನಹಳ್ಳಿ ರಮೇಶ್, ತಾಲೂಕು ಅಧ್ಯಕ್ಷ ತೊಂಡಾಲ ಮಂಜುನಾಥ್, ಪ್ರಧಾನ ಕಾರ್ಯದರ್ಶಿ ತಿಮ್ಮೇಗೌಡ, ಮುಖಂಡರಾದ ಗಂಗಾಪುರ ಬಾಬು, ಮಿಟ್ಟಮಾಲಹಳ್ಳಿ ಮಂಜುನಾಥ್, ಮುದುವಾಡಿಹೊಸಹಳ್ಳಿ ಮೋಹನ್, ಚಿನಪನಹಳ್ಳಿ ಗೋಪಾಲ್, ವೆಂಕಟಾಪುರ ಶ್ರೀನಿವಾಸ್, ಅಲಹಳ್ಳಿ ಮಂಜುನಾಥ್ ಮುಂತಾದವರು ಇದ್ದರು
ಎಲ್ಲಾ ವರ್ಗದ ಬಡವರಿಗೆ ಸೂರು, ಸೈಟ್ ನೀಡುವುದು ನಮ್ಮ ಸರ್ಕಾರದ ಗುರಿಯಾಗಿದ್ದು ದೇವನಹಳ್ಳಿ ತಾಲ್ಲೂಕು ವ್ಯಾಪ್ತಿಯಲ್ಲಿ ಅರ್ಹ ಫಲಾನುಭವಿಗಳಿಗೆ ನಿವೇಶನ,…
ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ರಾಜಕೀಯದಲ್ಲಿ ಹಾಲಿ ಶಾಸಕ ಧೀರಜ್ ಮುನಿರಾಜು ಹಾಗೂ ಮಾಜಿ ಶಾಸಕ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ…
ದೊಡ್ಡಬಳ್ಳಾಪುರ: ಜಿಲ್ಲೆಯಲ್ಲಿ ಡಿಜೆ ಬಳಕೆಗೆ ನಿಷೇಧವಿದ್ದರೂ ಗಣೇಶೋತ್ಸವ ಮೆರವಣಿಗೆಯಲ್ಲಿ ಡಿಜೆ ಬಳಸಿದ ಆರೋಪದ ಮೇರೆಗೆ ಡಿಜೆ ವಾಹನವನ್ನು ಜಪ್ತಿ ಮಾಡಿರುವ…
ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್ಗೆ ತೆರಳಿದ್ದ 21 ವರ್ಷದ ಮಹಿಳೆ ಅನುಮಾನಾಸ್ಪದವಾಗಿ ಮೃತಪಟ್ಟ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪ್ರಕರಣದಲ್ಲಿ…
ದೊಡ್ಡಬಳ್ಳಾಪುರ: ಕಾಂಗ್ರೆಸ್ನಲ್ಲಿ ಒಗ್ಗಟ್ಟು ಅಗತ್ಯವಾಗಿದ್ದು, ಮುಖಂಡರು ಹಾಗೂ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡಿದರೆ ಮುಂಬರುವ ಎಲ್ಲ ಚುನಾವಣೆಗಳಲ್ಲೂ ಪಕ್ಷದ ಗೆಲುವು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…