Categories: ಕೋಲಾರ

ಹಾಲು ಉತ್ಪಾದಕರ ನೌಕರರ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ಕೋಮುಲ್ ಆಡಳಿತಾಧಿಕಾರಿ ಮೈತ್ರಿಗೆ ಮನವಿ

ಕೋಲಾರ: ಹಾಲು ಉತ್ಪಾದಕರಿಗೆ ಲೀಟರ್ ಗೆ 5 ರೂ ಹೆಚ್ಚಳ ಸೇರಿದಂತೆ ಉತ್ಪಾದಕರ ಮತ್ತು ನೌಕರರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಹಾಲು ಡೇರಿ ಸಹಕಾರ ಸಂಘಗಳ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ಶುಕ್ರವಾರ ಕೋಮುಲ್ ಆಡಳಿತಾಧಿಕಾರಿ ಡಾ.ಮೈತ್ರಿ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ವಿಟ್ಟಪ್ಪನಹಳ್ಳಿ ಡೇರಿ ವೆಂಕಟೇಶ್ ಮಾತನಾಡಿ ಪ್ರತಿ ವರ್ಷ ಸಂಕ್ರಾಂತಿ ಸಂದರ್ಭದಲ್ಲಿ ಹಾಲು ಖರೀದಿ ದರ ಹೆಚ್ಚಿಸಲಾಗುತ್ತಿತ್ತು ಈ ಬಾರಿ ಬೇಸಿಗೆ ಪ್ರಾರಂಭವಾಗಿದ್ದರೂ ಹೆಚ್ಚಳ ಮಾಡಿಲ್ಲ ಕೂಡಲೇ ಹಾಲಿನ ದರ ಲೀ.5 ರೂ ಹೆಚ್ಚಳ ಮಾಡಬೇಕು ಒಕ್ಕೂಟದಿಂದ ಪ್ರಾಥಮಿಕ ಸಂಘಳಿಗೆ ಮೂರು ವಾರಗಳ ಬಟವಾಡೆ ಬಾಕಿ ಇದ್ದು ಸಂಘಗಳು ಮತ್ತು ಉತ್ಪಾದಕರ ಮಧ್ಯೆ ಗಲಾಟೆಗಳಿಗೆ ಕಾರಣವಾಗಿದ್ದು ಬಾಕಿ ಉಳಿದಿಕೊಂಡಿರುವ ಬಟವಾಡೆವನ್ನು ಕೂಡಲೇ ಸಂಘಗಳ ಖಾತೆಗೆ ವರ್ಗಾವಣೆ ಮಾಡುವಂತೆ ಒತ್ತಾಯಿಸಿದರು.

ಈಗಾಗಲೇ ಬೇಸಿಗೆ ಕಾಲ ಪ್ರಾರಂಭವಾಗಿದ್ದು ವಾತಾವರಣದ ಪರಿಣಾಮ ಹಾಲಿನ ಗುಣಮಟ್ಟ ಕಡಿಮೆಯಾಗುತ್ತಿದೆ ಒಕ್ಕೂಟದ 0.5 ಗುಣಮಟ್ಟದ ವ್ಯತ್ಯಾಸವನ್ನು ಪರಿಗಣಿಸಿ ಉತ್ಪಾದಕರಿಗೆ ಉಂಟಾಗುವ ನಷ್ಟವನ್ನು ಸರಿಪಡಿಸಬೇಕು, ಉತ್ಪಾದಕರ ಬಳಿ ರಾಸುಗಳಿಗೆ ವಿಮೆ ಮಾಡಿಸುವ ಸಂದರ್ಭದಲ್ಲೇ ಡೇರಿಯ ಬಟವಾಡದಲ್ಲಿ ಹಣ ಕಡಿತ ಮಾಡಲಾಗುತ್ತದೆ ಆದರೆ ರಾಸುಗಳಿಗೆ ಕೊಡಬೇಕಾದರೆ ಕನಿಷ್ಠ ಆರು ತಿಂಗಳು ಆಗುತ್ತದೆ ರಾಸುಗಳು ಮರಣ ಹೊಂದಿದ ಕೂಡಲೇ ವಿಮಾ ಮೊತ್ತವನ್ನು ಉತ್ಪಾದಕರ ಕೈಸೇರುವಂತೆ ಮಾಡಬೇಕು ಬಿಎಂಸಿಗಳ ನಿರ್ವಹಣಾ ವೆಚ್ಚ ಹೆಚ್ಚಳ ಮಾಡಬೇಕು ಎಂದು ಮನವಿ ಮಾಡಿದರು.

ವಿವಿಧ ಸಂಘಗಳ ಕಾರ್ಯದರ್ಶಿಗಳು ಮಾತನಾಡಿ ಪ್ರಾಥಮಿಕ ಡೇರಿಗಳಿಂದ ಒಕ್ಕೂಟವಿದೆ ಎಂಬುದನ್ನು ಅಧಿಕಾರಿಗಳು ಮರೆಯಬಾರದು ಸಾಫ್ಟ್‌ವೇರ್ ಹೆಸರಿನಲ್ಲಿ ಸಂಘಗಳಿಗೆ ತೊಂದರೆಯಾಗಿದೆ ಮೊದಲು ಒಕ್ಕೂಟದಲ್ಲಿ ಸಾಫ್ಟ್‌ವೇರ್ ಅಳವಡಿಸಿಕೊಳ್ಳಿ ನಂತರ ಸಂಘಗಳಿಗೆ ಆದೇಶ ಮಾಡಲಿ, ಮೂಲಭೂತ ಸೌಕರ್ಯಗಳ ಹೆಸರಿನಲ್ಲಿ ಹಗಲು ದರೋಡೆ ಮಾಡಲಾಗುತ್ತಿದೆ ಅದರ ಬಗ್ಗೆ ಮೊದಲು ಕ್ರಮವಾಗಬೇಕು ಎಂದು ವ್ಯವಸ್ಥಾಪಕ ನಿರ್ದೇಶಕ ಗೋಪಾಲಮೂರ್ತಿ ಹಾಗೂ ಮ್ಯಾನೇಜರ್ ಚೇತನ್ ಅವರನ್ನು ತರಾಟೆಗೆ ತೆಗೆದುಕೊಂಡರು.

ಮನವಿ ಸ್ವೀಕರಿಸಿ ಮಾತನಾಡಿದ ಆಡಳಿತಾಧಿಕಾರಿ ಡಾ.ಮೈತ್ರಿ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡದೇ ಇರುವುದೇ ಇಂತಹ ಸಮಸ್ಯೆಗಳಿಗೆ ಕಾರಣವಾಗಿದೆ ಹಾಲು ಉತ್ಪಾದಕರು ಹಾಗೂ ಡೇರಿ ನೌಕರರಿಗೆ ಅನುಕೂಲ ಮಾಡಲು ನಾನು ಇರುವಷ್ಟು ದಿನದಲ್ಲಿ ಪ್ರಾಮಾಣಿಕವಾಗಿ ಮಾಡತ್ತೇನೆ ಜೊತೆಗೆ ರಾಸುಗಳಿಗೆ ವಿತರಿಸುತ್ತಿರುವ ವಿಮಾ ಏಜೆನ್ಸಿಯನ್ನು ಬದಲಾವಣೆ ಮಾಡಲಾಗುತ್ತದೆ ಈ ತಿಂಗಳೊಳಗೆ ನಿಮ್ಮ ಬೇಡಿಕೆಗಳ ಈಡೇರಿಕೆಗೆ ಕೂಡಲೇ ಸಭೆ ಕರೆದು ತೀರ್ಮಾನ ತೆಗೆದುಕೊಂಡು ಉತ್ಪಾದಕರ ಮತ್ತು ನೌಕರರ ಹಿತ ಕಾಯುವ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು

ಈ ಸಂದರ್ಭದಲ್ಲಿ ನೌಕರರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಗೌರವಾಧ್ಯಕ್ಷ ಚಿನ್ನಹಳ್ಳಿ ಗೋಪಾಲ್, ಉಪಾಧ್ಯಕ್ಷ ಮಿಂಡಹಳ್ಳಿ ಮುನಿರಾಜು, ಪ್ರಧಾನ ಕಾರ್ಯದರ್ಶಿ ಬಗಲಹಳ್ಳಿ ನಾಗೇಶಗೌಡ, ಖಜಾಂಚಿ ವಕ್ಕಲೇರಿ ನಾಗರಾಜ್, ಚಿಂತಾಮಣಿ ಕೆಂಪರೆಡ್ಡಿ, ಜಿಲ್ಲಾ ಸಮಿತಿ ನಿರ್ದೇಶಕರಾದ ಎಸ್.ಎಂ ಗೋಪಾಲ್, ಮದನಹಳ್ಳಿ ರಮೇಶ್, ತಾಲೂಕು ಅಧ್ಯಕ್ಷ ತೊಂಡಾಲ ಮಂಜುನಾಥ್, ಪ್ರಧಾನ ಕಾರ್ಯದರ್ಶಿ ತಿಮ್ಮೇಗೌಡ, ಮುಖಂಡರಾದ ಗಂಗಾಪುರ ಬಾಬು, ಮಿಟ್ಟಮಾಲಹಳ್ಳಿ ಮಂಜುನಾಥ್, ಮುದುವಾಡಿಹೊಸಹಳ್ಳಿ ಮೋಹನ್, ಚಿನಪನಹಳ್ಳಿ ಗೋಪಾಲ್, ವೆಂಕಟಾಪುರ ಶ್ರೀನಿವಾಸ್, ಅಲಹಳ್ಳಿ ಮಂಜುನಾಥ್ ಮುಂತಾದವರು ಇದ್ದರು

Ramesh Babu

Journalist

Recent Posts

ಬೆಳೆ ವಿಮೆ ಮಾಡಿಸಲು ಆ.14 ಕೊನೆಯ ದಿನ: ರೈತರು ತಪ್ಪದೇ ಬೆಳೆ ವಿಮೆ ಮಾಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ ವಾಡಿಕೆ ಮಳೆಗಿಂತ ಶೇಕಡ 33 ರಷ್ಟು ಮಳೆ ಕೊರತೆಯಾಗಿದ್ದು ಮುಂದಿನ ದಿನಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ…

8 hours ago

ಬರದ ನಡುವೆಯೂ ರಾಗಿ ರೈತರಿಗೆ ಆಸರೆ: ಫಸಲ್ ಬಿಮಾ ಪ್ರೀಮಿಯಂ ಭರಿಸುವುದಾಗಿ ಶಾಸಕ ಧೀರಜ್ ಮುನಿರಾಜ್ ಘೋಷಣೆ

ದೊಡ್ಡಬಳ್ಳಾಪುರ: ಸಮರ್ಪಕ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ಎದುರಿಸುತ್ತಿರುವ ದೊಡ್ಡಬಳ್ಳಾಪುರ ಕ್ಷೇತ್ರದ ರೈತರಿಗೆ ನೆರವಾಗುವ ಉದ್ದೇಶದಿಂದ, ಕ್ಷೇತ್ರದ ಪ್ರಮುಖ ಬೆಳೆಯಾದ…

10 hours ago

ಕೋಳಿ ವಿಚಾರದ ಜಗಳಕ್ಕೆ ಹೊಸ ಟ್ವಿಸ್ಟ್: ಎರಡೂ ಕಡೆಯಿಂದ ಹಲ್ಲೆ ಆರೋಪ, ಆಸ್ಪತ್ರೆಯಲ್ಲೂ ಗಲಾಟೆ

ಗೌರಿಬಿದನೂರು: ಕೋಳಿ ವಿಚಾರವಾಗಿ ಆರಂಭವಾದ ನೆರೆಹೊರೆಯವರ ನಡುವಿನ ಜಗಳ ಗಂಭೀರ ಸ್ವರೂಪ ಪಡೆದು, ಸಾರ್ವಜನಿಕ ಆಸ್ಪತ್ರೆಯೊಳಗೂ ಗಲಾಟೆ ನಡೆದ ಘಟನೆ…

11 hours ago

” ಕ್ಷಮೆ” ಎಂಬ ಭಾವದ ಸುತ್ತ……

ಕನ್ನಡದ ಖ್ಯಾತ, ಪ್ರತಿಭಾವಂತ ಚಲನಚಿತ್ರ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಅನಂತನಾಗ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ದೆಹಲಿಯ…

20 hours ago

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

1 day ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

1 day ago