Categories: ಕೋಲಾರ

ಹಾಲು ಉತ್ಪಾದಕರ ನೌಕರರ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ಕೋಮುಲ್ ಆಡಳಿತಾಧಿಕಾರಿ ಮೈತ್ರಿಗೆ ಮನವಿ

ಕೋಲಾರ: ಹಾಲು ಉತ್ಪಾದಕರಿಗೆ ಲೀಟರ್ ಗೆ 5 ರೂ ಹೆಚ್ಚಳ ಸೇರಿದಂತೆ ಉತ್ಪಾದಕರ ಮತ್ತು ನೌಕರರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಹಾಲು ಡೇರಿ ಸಹಕಾರ ಸಂಘಗಳ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ಶುಕ್ರವಾರ ಕೋಮುಲ್ ಆಡಳಿತಾಧಿಕಾರಿ ಡಾ.ಮೈತ್ರಿ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ವಿಟ್ಟಪ್ಪನಹಳ್ಳಿ ಡೇರಿ ವೆಂಕಟೇಶ್ ಮಾತನಾಡಿ ಪ್ರತಿ ವರ್ಷ ಸಂಕ್ರಾಂತಿ ಸಂದರ್ಭದಲ್ಲಿ ಹಾಲು ಖರೀದಿ ದರ ಹೆಚ್ಚಿಸಲಾಗುತ್ತಿತ್ತು ಈ ಬಾರಿ ಬೇಸಿಗೆ ಪ್ರಾರಂಭವಾಗಿದ್ದರೂ ಹೆಚ್ಚಳ ಮಾಡಿಲ್ಲ ಕೂಡಲೇ ಹಾಲಿನ ದರ ಲೀ.5 ರೂ ಹೆಚ್ಚಳ ಮಾಡಬೇಕು ಒಕ್ಕೂಟದಿಂದ ಪ್ರಾಥಮಿಕ ಸಂಘಳಿಗೆ ಮೂರು ವಾರಗಳ ಬಟವಾಡೆ ಬಾಕಿ ಇದ್ದು ಸಂಘಗಳು ಮತ್ತು ಉತ್ಪಾದಕರ ಮಧ್ಯೆ ಗಲಾಟೆಗಳಿಗೆ ಕಾರಣವಾಗಿದ್ದು ಬಾಕಿ ಉಳಿದಿಕೊಂಡಿರುವ ಬಟವಾಡೆವನ್ನು ಕೂಡಲೇ ಸಂಘಗಳ ಖಾತೆಗೆ ವರ್ಗಾವಣೆ ಮಾಡುವಂತೆ ಒತ್ತಾಯಿಸಿದರು.

ಈಗಾಗಲೇ ಬೇಸಿಗೆ ಕಾಲ ಪ್ರಾರಂಭವಾಗಿದ್ದು ವಾತಾವರಣದ ಪರಿಣಾಮ ಹಾಲಿನ ಗುಣಮಟ್ಟ ಕಡಿಮೆಯಾಗುತ್ತಿದೆ ಒಕ್ಕೂಟದ 0.5 ಗುಣಮಟ್ಟದ ವ್ಯತ್ಯಾಸವನ್ನು ಪರಿಗಣಿಸಿ ಉತ್ಪಾದಕರಿಗೆ ಉಂಟಾಗುವ ನಷ್ಟವನ್ನು ಸರಿಪಡಿಸಬೇಕು, ಉತ್ಪಾದಕರ ಬಳಿ ರಾಸುಗಳಿಗೆ ವಿಮೆ ಮಾಡಿಸುವ ಸಂದರ್ಭದಲ್ಲೇ ಡೇರಿಯ ಬಟವಾಡದಲ್ಲಿ ಹಣ ಕಡಿತ ಮಾಡಲಾಗುತ್ತದೆ ಆದರೆ ರಾಸುಗಳಿಗೆ ಕೊಡಬೇಕಾದರೆ ಕನಿಷ್ಠ ಆರು ತಿಂಗಳು ಆಗುತ್ತದೆ ರಾಸುಗಳು ಮರಣ ಹೊಂದಿದ ಕೂಡಲೇ ವಿಮಾ ಮೊತ್ತವನ್ನು ಉತ್ಪಾದಕರ ಕೈಸೇರುವಂತೆ ಮಾಡಬೇಕು ಬಿಎಂಸಿಗಳ ನಿರ್ವಹಣಾ ವೆಚ್ಚ ಹೆಚ್ಚಳ ಮಾಡಬೇಕು ಎಂದು ಮನವಿ ಮಾಡಿದರು.

ವಿವಿಧ ಸಂಘಗಳ ಕಾರ್ಯದರ್ಶಿಗಳು ಮಾತನಾಡಿ ಪ್ರಾಥಮಿಕ ಡೇರಿಗಳಿಂದ ಒಕ್ಕೂಟವಿದೆ ಎಂಬುದನ್ನು ಅಧಿಕಾರಿಗಳು ಮರೆಯಬಾರದು ಸಾಫ್ಟ್‌ವೇರ್ ಹೆಸರಿನಲ್ಲಿ ಸಂಘಗಳಿಗೆ ತೊಂದರೆಯಾಗಿದೆ ಮೊದಲು ಒಕ್ಕೂಟದಲ್ಲಿ ಸಾಫ್ಟ್‌ವೇರ್ ಅಳವಡಿಸಿಕೊಳ್ಳಿ ನಂತರ ಸಂಘಗಳಿಗೆ ಆದೇಶ ಮಾಡಲಿ, ಮೂಲಭೂತ ಸೌಕರ್ಯಗಳ ಹೆಸರಿನಲ್ಲಿ ಹಗಲು ದರೋಡೆ ಮಾಡಲಾಗುತ್ತಿದೆ ಅದರ ಬಗ್ಗೆ ಮೊದಲು ಕ್ರಮವಾಗಬೇಕು ಎಂದು ವ್ಯವಸ್ಥಾಪಕ ನಿರ್ದೇಶಕ ಗೋಪಾಲಮೂರ್ತಿ ಹಾಗೂ ಮ್ಯಾನೇಜರ್ ಚೇತನ್ ಅವರನ್ನು ತರಾಟೆಗೆ ತೆಗೆದುಕೊಂಡರು.

ಮನವಿ ಸ್ವೀಕರಿಸಿ ಮಾತನಾಡಿದ ಆಡಳಿತಾಧಿಕಾರಿ ಡಾ.ಮೈತ್ರಿ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡದೇ ಇರುವುದೇ ಇಂತಹ ಸಮಸ್ಯೆಗಳಿಗೆ ಕಾರಣವಾಗಿದೆ ಹಾಲು ಉತ್ಪಾದಕರು ಹಾಗೂ ಡೇರಿ ನೌಕರರಿಗೆ ಅನುಕೂಲ ಮಾಡಲು ನಾನು ಇರುವಷ್ಟು ದಿನದಲ್ಲಿ ಪ್ರಾಮಾಣಿಕವಾಗಿ ಮಾಡತ್ತೇನೆ ಜೊತೆಗೆ ರಾಸುಗಳಿಗೆ ವಿತರಿಸುತ್ತಿರುವ ವಿಮಾ ಏಜೆನ್ಸಿಯನ್ನು ಬದಲಾವಣೆ ಮಾಡಲಾಗುತ್ತದೆ ಈ ತಿಂಗಳೊಳಗೆ ನಿಮ್ಮ ಬೇಡಿಕೆಗಳ ಈಡೇರಿಕೆಗೆ ಕೂಡಲೇ ಸಭೆ ಕರೆದು ತೀರ್ಮಾನ ತೆಗೆದುಕೊಂಡು ಉತ್ಪಾದಕರ ಮತ್ತು ನೌಕರರ ಹಿತ ಕಾಯುವ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು

ಈ ಸಂದರ್ಭದಲ್ಲಿ ನೌಕರರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾ ಗೌರವಾಧ್ಯಕ್ಷ ಚಿನ್ನಹಳ್ಳಿ ಗೋಪಾಲ್, ಉಪಾಧ್ಯಕ್ಷ ಮಿಂಡಹಳ್ಳಿ ಮುನಿರಾಜು, ಪ್ರಧಾನ ಕಾರ್ಯದರ್ಶಿ ಬಗಲಹಳ್ಳಿ ನಾಗೇಶಗೌಡ, ಖಜಾಂಚಿ ವಕ್ಕಲೇರಿ ನಾಗರಾಜ್, ಚಿಂತಾಮಣಿ ಕೆಂಪರೆಡ್ಡಿ, ಜಿಲ್ಲಾ ಸಮಿತಿ ನಿರ್ದೇಶಕರಾದ ಎಸ್.ಎಂ ಗೋಪಾಲ್, ಮದನಹಳ್ಳಿ ರಮೇಶ್, ತಾಲೂಕು ಅಧ್ಯಕ್ಷ ತೊಂಡಾಲ ಮಂಜುನಾಥ್, ಪ್ರಧಾನ ಕಾರ್ಯದರ್ಶಿ ತಿಮ್ಮೇಗೌಡ, ಮುಖಂಡರಾದ ಗಂಗಾಪುರ ಬಾಬು, ಮಿಟ್ಟಮಾಲಹಳ್ಳಿ ಮಂಜುನಾಥ್, ಮುದುವಾಡಿಹೊಸಹಳ್ಳಿ ಮೋಹನ್, ಚಿನಪನಹಳ್ಳಿ ಗೋಪಾಲ್, ವೆಂಕಟಾಪುರ ಶ್ರೀನಿವಾಸ್, ಅಲಹಳ್ಳಿ ಮಂಜುನಾಥ್ ಮುಂತಾದವರು ಇದ್ದರು

Ramesh Babu

Journalist

Recent Posts

ಬಿಸವನಹಳ್ಳಿಯಲ್ಲಿ ಅದ್ವಿತಾ ಜನ್ಮದಿನ ಅರ್ಥಪೂರ್ಣ ಆಚರಣೆ

ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…

12 hours ago

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

15 hours ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

1 day ago

ಜೂ..7ರಂದು ‘ವಾಸ್ತುವಿನ ನಡಿಗೆ ಗ್ರಾಮದ ಕಡೆಗೆ’ ಕಾರ್ಯಕ್ರಮ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭಾಗಿ- ಪೂತಮಾನಸ ಜ್ಯೋತಿಷ್ಯಾಲಯ ವ್ಯವಸ್ಥಾಪಕ ಡಾ.ಗಿರೀಶ್ ಕೆ

ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…

1 day ago

ಜೂ. 20 ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅರಂಭ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…

1 day ago

ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ

  ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…

1 day ago