Categories: ಕೋಲಾರ

ಹಾಲು ಉತ್ಪಾದಕರ ಹಿತದೃಷ್ಟಿಯಿಂದ ನಂದಿನಿ ಉತ್ಪನ್ನಗಳನ್ನೇ ಬಳಸಿ- ಡಿ.ವಿ ಹರೀಶ್

ಕೋಲಾರ: ಜಿಲ್ಲೆಯಲ್ಲಿನ ಹಾಲು ಉತ್ಪಾದಕರ ಹಿತ ದೃಷ್ಟಿಯಿಂದ ಕೋಮುಲ್ ಮತ್ತು ಕೆಎಂಎಫ್ ವತಿಯಿಂದ ಉತ್ಪಾದಿಸುವ ನಂದಿನಿ ಉತ್ಪನ್ನಗಳನ್ನು ಹೆಚ್ಚಾಗಿ ಬಳಕೆ ಮಾಡುವ ಮೂಲಕ ಉತ್ತಮ ಅರೋಗ್ಯ ಕಾಪಾಡುವ ಜೊತೆಗೆ ಹಾಲು ಉತ್ಪಾದಕರ ಹಿತ ಕಾಪಾಡಬಹುದಾಗಿದೆ ಎಂದು ಕೋಮಲ್‌ ನಿರ್ದೇಶಕ ವಡಗೂರು ಡಿ.ವಿ ಹರೀಶ್ ತಿಳಿಸಿದರು.

ತಾಲೂಕಿನ ಮುದುವಾಡಿ ಗ್ರಾಮದಲ್ಲಿ ಶುಕ್ರವಾರ ಕೋಮುಲ್ ವತಿಯಿಂದ ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆಯನ್ನು ಉದ್ಘಾಟಿಸಿ ಮಾತನಾಡಿದ ಅವರು ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಜನರನ್ನು ಹೈನುಗಾರಿಕೆಯ ಉದ್ಯಮ ಕೈಹಿಡಿದಿದೆ ಹಾಲು ಉತ್ಪಾದನೆಯ ಜೊತೆಗೆ ಗುಣಮಟ್ಟದಲ್ಲಿ ಕೂಡ ಜಿಲ್ಲೆ ಎರಡನೇ ಸ್ಥಾನದಲ್ಲಿ ಇದ್ದು ನಂದಿನಿ ಉತ್ಪನ್ನಗಳ ಬಳಕೆ ಇದಕ್ಕೆ ಉತ್ತರ ಆಯ್ಕೆಯಾಗಿದೆ ಜಿಲ್ಲೆಯ ರೈತರು ಮಳೆ ಬೆಳೆ ಇಲ್ಲದೆ ಪರಿತಪಿಸುತ್ತಾ ಬರದ ಛಾಯೇಯಲ್ಲಿ ಇರುವುದನ್ನು ಗಮನಿಸಿ ಎಂ.ವಿ ಕೃಷ್ಣಪ್ಪ ನವರು ದೂರದೃಷ್ಟಿಯಿಂದ ವಿದೇಶಿ ಹಾಲು ಉತ್ಪಾದನಾ ತಳಿಗಳನ್ನು ಪರಿಚಯಿಸಿದ ಕಾರಣ ಕೋಲಾರ ಜಿಲ್ಲೆಯ ರೈತರು ಇಂದು ತಮ್ಮ ಜೀವಾಳವನ್ನಾಗಿ ಹಾಲು ಉತ್ಪಾದನೆಯಲ್ಲಿ ತೊಡಗಿಸಿಕೊಳ್ಳುವಂತಾಗಿದೆ ಎಂದರು.

ಪ್ರಸ್ತುತ ಮಾರುಕಟ್ಟೆಯಲ್ಲಿ ಮಾರಾಟವಾಗುವ ಕಲಬೆರಕೆಯ ಹಾಲಿನ ಉತ್ಪನ್ನಗಳ ಬಗ್ಗೆ ಗ್ರಾಹಕರು ಜಾಗೃತಿ ವಹಿಸಬೇಕು ಪರಿಶುದ್ಧವಾಗಿ ಹಾಲು ಉತ್ಪಾದಕರಿಂದ ನೇರವಾಗಿ ಖರೀದಿಸಿದ ಹಾಲಿನಿಂದ ತಯಾರಿಸಲಾಗುವ ನಂದಿನಿ ಉತ್ಪನ್ನಗಳ ಖರೀದಿಗೆ ಆದ್ಯತೆ ನೀಡಬೇಕು ಕೋಮಲ್ ಮತ್ತು ಹಾಲು ಮಹಾ ಮಂಡಳಿಯಿಂದ ಸಿಗುವ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಜೆಡಿಎಸ್‌ ಮುಖಂಡ ಸಿಎಂಆರ್ ಶ್ರೀನಾಥ್, ಕೋಮುಲ್ ಉಪ ವ್ಯವಸ್ಥಾಪಕ ಡಾ.ಮಹೇಶ್, ಮಾರುಕಟ್ಟೆ ವ್ಯವಸ್ಥಾಪಕ ಲಕ್ಷ್ಮೀನಾರಾಯಣ, ಉಪ ವ್ಯವಸ್ಥಾಪಕ ನಂಜುಂಡಗೌಡ, ಸಹಾಯಕ ವ್ಯವಸ್ಥಾಪಕ ಲೋಕೇಶ್, ಮುದುವಾಡಿ ಗ್ರಾಮ ಪಂಚಾಯತಿ ಅಧ್ಯಕ್ಷ ಹರೀಶ್ ಬಾಬು, ಮುಖಂಡರಾದ ಜನಪನಹಳ್ಳಿ ಆನಂದ್, ಗದ್ದೆಕಣ್ಣೂರು ಚೌಡರೆಡ್ಡಿ, ಯಾನಾದನಹಳ್ಳಿ ಗೋಪಾಲ್, ಹೊಲ್ಲಂಬಳ್ಳಿ ಚಂದ್ರಶೇಖರ್, ರೆಡ್ಡಿಬಾಬು, ಮಳಿಗೆ ಮಾಲೀಕ ರಾಜಶೇಖರ್ ಮುಂತಾದವರು ಇದ್ದರು.

Ramesh Babu

Journalist

Recent Posts

ನಂದಿಗಿರಿಧಾಮದಲ್ಲಿ ಕೆಎಸ್‌ಟಿಡಿಸಿಯ ನೂತನ ‘ಮಯೂರ ಸನ್‌ರೈಸ್ ರೆಸ್ಟೋರೆಂಟ್’ ಉದ್ಘಾಟನೆ: ನಂದಿಬೆಟ್ಟದ ಸಂಚಾರ ದಟ್ಟಣೆಗೆ ರೋಪ್‌ವೇ ಹಾಗೂ ಸಮಗ್ರ ಪಾರ್ಕಿಂಗ್ ಯೋಜನೆ- ಸಚಿವ ಕೆ.ಜೆ ಜಾರ್ಜ್

ರಾಜ್ಯದ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಜಾಗತಿಕ ಗುಣಮಟ್ಟಕ್ಕೆ ಏರಿಸುವ ಉದ್ದೇಶದಿಂದ, ಕರ್ನಾಟಕ ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯಲ್ಲಿರುವ ಮಯೂರ ಹೋಟೆಲ್‌ಗಳು ಹಾಗೂ ಇತರೆ…

3 hours ago

ಸಮಾಜಸೇವಕ ಮಹೇಂದ್ರ ಬಾಬುಗೆ ಅದ್ಧೂರಿ ಜನ್ಮದಿನ ಆಚರಣೆ

ದೊಡ್ಡಬಳ್ಳಾಪುರ: ಸಾಯಿರಾಂ ಡ್ರಿಪ್ ಇರಿಗೇಷನ್ ಹಾಗೂ ಕನ್‌ಸ್ಟ್ರಕ್ಷನ್ ಸಂಸ್ಥೆಯ ಮಾಲೀಕರಾದ ಬಿ. ಮಹೇಂದ್ರ ಬಾಬು ಅವರ 46ನೇ ವರ್ಷದ ಹುಟ್ಟುಹಬ್ಬವನ್ನು…

13 hours ago

ಕುಖ್ಯಾತ ಅಂತರರಾಜ್ಯ ಕೇಬಲ್ ಕಳ್ಳರ ಬಂಧನ: ₹15 ಲಕ್ಷ ಮೌಲ್ಯದ ಕೇಬಲ್ ವಶ

ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…

24 hours ago

RSS ನೋಂದಣಿಗೆ ಆಗ್ರಹಿಸಿ ಪ್ರತಿಭಟನೆ; ರಾಷ್ಟ್ರಪತಿಗಳಿಗೆ ಮನವಿ

ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…

1 day ago

ಕೊನೆಯ ಕ್ಷಣದಲ್ಲಿ ಅನುಮತಿ ನಿರಾಕರಣೆ: ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ರದ್ದು: ಮುಂದಿನ ದಿನಗಳಲ್ಲಿ ಕಾರ್ಯಕ್ರಮ ಆಯೋಜನೆ-ವಕೀಲ ಪ್ರತಾಪ್

ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…

1 day ago

ಮುಂಗಾರು ಮಳೆ ಕೊರತೆ, ಭೂಗರ್ಭದ ನೀರಿಗೆ ಭಾರೀ ಹೊಡೆತ: ಜಲಬಿಕ್ಕಟ್ಟಿನ ಮುನ್ಸೂಚನೆ

ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…

1 day ago