ಕೋಲಾರ: ಜಿಲ್ಲೆಯಲ್ಲಿನ ಹಾಲು ಉತ್ಪಾದಕರ ಹಿತ ದೃಷ್ಟಿಯಿಂದ ಕೋಮುಲ್ ಮತ್ತು ಕೆಎಂಎಫ್ ವತಿಯಿಂದ ಉತ್ಪಾದಿಸುವ ನಂದಿನಿ ಉತ್ಪನ್ನಗಳನ್ನು ಹೆಚ್ಚಾಗಿ ಬಳಕೆ ಮಾಡುವ ಮೂಲಕ ಉತ್ತಮ ಅರೋಗ್ಯ ಕಾಪಾಡುವ ಜೊತೆಗೆ ಹಾಲು ಉತ್ಪಾದಕರ ಹಿತ ಕಾಪಾಡಬಹುದಾಗಿದೆ ಎಂದು ಕೋಮಲ್ ನಿರ್ದೇಶಕ ವಡಗೂರು ಡಿ.ವಿ ಹರೀಶ್ ತಿಳಿಸಿದರು.
ತಾಲೂಕಿನ ಮುದುವಾಡಿ ಗ್ರಾಮದಲ್ಲಿ ಶುಕ್ರವಾರ ಕೋಮುಲ್ ವತಿಯಿಂದ ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆಯನ್ನು ಉದ್ಘಾಟಿಸಿ ಮಾತನಾಡಿದ ಅವರು ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಜನರನ್ನು ಹೈನುಗಾರಿಕೆಯ ಉದ್ಯಮ ಕೈಹಿಡಿದಿದೆ ಹಾಲು ಉತ್ಪಾದನೆಯ ಜೊತೆಗೆ ಗುಣಮಟ್ಟದಲ್ಲಿ ಕೂಡ ಜಿಲ್ಲೆ ಎರಡನೇ ಸ್ಥಾನದಲ್ಲಿ ಇದ್ದು ನಂದಿನಿ ಉತ್ಪನ್ನಗಳ ಬಳಕೆ ಇದಕ್ಕೆ ಉತ್ತರ ಆಯ್ಕೆಯಾಗಿದೆ ಜಿಲ್ಲೆಯ ರೈತರು ಮಳೆ ಬೆಳೆ ಇಲ್ಲದೆ ಪರಿತಪಿಸುತ್ತಾ ಬರದ ಛಾಯೇಯಲ್ಲಿ ಇರುವುದನ್ನು ಗಮನಿಸಿ ಎಂ.ವಿ ಕೃಷ್ಣಪ್ಪ ನವರು ದೂರದೃಷ್ಟಿಯಿಂದ ವಿದೇಶಿ ಹಾಲು ಉತ್ಪಾದನಾ ತಳಿಗಳನ್ನು ಪರಿಚಯಿಸಿದ ಕಾರಣ ಕೋಲಾರ ಜಿಲ್ಲೆಯ ರೈತರು ಇಂದು ತಮ್ಮ ಜೀವಾಳವನ್ನಾಗಿ ಹಾಲು ಉತ್ಪಾದನೆಯಲ್ಲಿ ತೊಡಗಿಸಿಕೊಳ್ಳುವಂತಾಗಿದೆ ಎಂದರು.
ಪ್ರಸ್ತುತ ಮಾರುಕಟ್ಟೆಯಲ್ಲಿ ಮಾರಾಟವಾಗುವ ಕಲಬೆರಕೆಯ ಹಾಲಿನ ಉತ್ಪನ್ನಗಳ ಬಗ್ಗೆ ಗ್ರಾಹಕರು ಜಾಗೃತಿ ವಹಿಸಬೇಕು ಪರಿಶುದ್ಧವಾಗಿ ಹಾಲು ಉತ್ಪಾದಕರಿಂದ ನೇರವಾಗಿ ಖರೀದಿಸಿದ ಹಾಲಿನಿಂದ ತಯಾರಿಸಲಾಗುವ ನಂದಿನಿ ಉತ್ಪನ್ನಗಳ ಖರೀದಿಗೆ ಆದ್ಯತೆ ನೀಡಬೇಕು ಕೋಮಲ್ ಮತ್ತು ಹಾಲು ಮಹಾ ಮಂಡಳಿಯಿಂದ ಸಿಗುವ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್, ಕೋಮುಲ್ ಉಪ ವ್ಯವಸ್ಥಾಪಕ ಡಾ.ಮಹೇಶ್, ಮಾರುಕಟ್ಟೆ ವ್ಯವಸ್ಥಾಪಕ ಲಕ್ಷ್ಮೀನಾರಾಯಣ, ಉಪ ವ್ಯವಸ್ಥಾಪಕ ನಂಜುಂಡಗೌಡ, ಸಹಾಯಕ ವ್ಯವಸ್ಥಾಪಕ ಲೋಕೇಶ್, ಮುದುವಾಡಿ ಗ್ರಾಮ ಪಂಚಾಯತಿ ಅಧ್ಯಕ್ಷ ಹರೀಶ್ ಬಾಬು, ಮುಖಂಡರಾದ ಜನಪನಹಳ್ಳಿ ಆನಂದ್, ಗದ್ದೆಕಣ್ಣೂರು ಚೌಡರೆಡ್ಡಿ, ಯಾನಾದನಹಳ್ಳಿ ಗೋಪಾಲ್, ಹೊಲ್ಲಂಬಳ್ಳಿ ಚಂದ್ರಶೇಖರ್, ರೆಡ್ಡಿಬಾಬು, ಮಳಿಗೆ ಮಾಲೀಕ ರಾಜಶೇಖರ್ ಮುಂತಾದವರು ಇದ್ದರು.
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಲಕ್ಷ್ಮೀಪುರ ಗೇಟ್ ಸಮೀಪದ ರಾಷ್ಟ್ರೀಯ ಹೆದ್ದಾರಿ–648ರಲ್ಲಿ ಲಾರಿ ಚಾಲಕನ ಅಜಾಗರೂಕತೆಯಿಂದ ಭೀಕರ…
ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…