Categories: ಕೋಲಾರ

ಹಾಲು ಉತ್ಪಾದಕರ ಹಿತದೃಷ್ಟಿಯಿಂದ ನಂದಿನಿ ಉತ್ಪನ್ನಗಳನ್ನೇ ಬಳಸಿ- ಡಿ.ವಿ ಹರೀಶ್

ಕೋಲಾರ: ಜಿಲ್ಲೆಯಲ್ಲಿನ ಹಾಲು ಉತ್ಪಾದಕರ ಹಿತ ದೃಷ್ಟಿಯಿಂದ ಕೋಮುಲ್ ಮತ್ತು ಕೆಎಂಎಫ್ ವತಿಯಿಂದ ಉತ್ಪಾದಿಸುವ ನಂದಿನಿ ಉತ್ಪನ್ನಗಳನ್ನು ಹೆಚ್ಚಾಗಿ ಬಳಕೆ ಮಾಡುವ ಮೂಲಕ ಉತ್ತಮ ಅರೋಗ್ಯ ಕಾಪಾಡುವ ಜೊತೆಗೆ ಹಾಲು ಉತ್ಪಾದಕರ ಹಿತ ಕಾಪಾಡಬಹುದಾಗಿದೆ ಎಂದು ಕೋಮಲ್‌ ನಿರ್ದೇಶಕ ವಡಗೂರು ಡಿ.ವಿ ಹರೀಶ್ ತಿಳಿಸಿದರು.

ತಾಲೂಕಿನ ಮುದುವಾಡಿ ಗ್ರಾಮದಲ್ಲಿ ಶುಕ್ರವಾರ ಕೋಮುಲ್ ವತಿಯಿಂದ ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆಯನ್ನು ಉದ್ಘಾಟಿಸಿ ಮಾತನಾಡಿದ ಅವರು ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಜನರನ್ನು ಹೈನುಗಾರಿಕೆಯ ಉದ್ಯಮ ಕೈಹಿಡಿದಿದೆ ಹಾಲು ಉತ್ಪಾದನೆಯ ಜೊತೆಗೆ ಗುಣಮಟ್ಟದಲ್ಲಿ ಕೂಡ ಜಿಲ್ಲೆ ಎರಡನೇ ಸ್ಥಾನದಲ್ಲಿ ಇದ್ದು ನಂದಿನಿ ಉತ್ಪನ್ನಗಳ ಬಳಕೆ ಇದಕ್ಕೆ ಉತ್ತರ ಆಯ್ಕೆಯಾಗಿದೆ ಜಿಲ್ಲೆಯ ರೈತರು ಮಳೆ ಬೆಳೆ ಇಲ್ಲದೆ ಪರಿತಪಿಸುತ್ತಾ ಬರದ ಛಾಯೇಯಲ್ಲಿ ಇರುವುದನ್ನು ಗಮನಿಸಿ ಎಂ.ವಿ ಕೃಷ್ಣಪ್ಪ ನವರು ದೂರದೃಷ್ಟಿಯಿಂದ ವಿದೇಶಿ ಹಾಲು ಉತ್ಪಾದನಾ ತಳಿಗಳನ್ನು ಪರಿಚಯಿಸಿದ ಕಾರಣ ಕೋಲಾರ ಜಿಲ್ಲೆಯ ರೈತರು ಇಂದು ತಮ್ಮ ಜೀವಾಳವನ್ನಾಗಿ ಹಾಲು ಉತ್ಪಾದನೆಯಲ್ಲಿ ತೊಡಗಿಸಿಕೊಳ್ಳುವಂತಾಗಿದೆ ಎಂದರು.

ಪ್ರಸ್ತುತ ಮಾರುಕಟ್ಟೆಯಲ್ಲಿ ಮಾರಾಟವಾಗುವ ಕಲಬೆರಕೆಯ ಹಾಲಿನ ಉತ್ಪನ್ನಗಳ ಬಗ್ಗೆ ಗ್ರಾಹಕರು ಜಾಗೃತಿ ವಹಿಸಬೇಕು ಪರಿಶುದ್ಧವಾಗಿ ಹಾಲು ಉತ್ಪಾದಕರಿಂದ ನೇರವಾಗಿ ಖರೀದಿಸಿದ ಹಾಲಿನಿಂದ ತಯಾರಿಸಲಾಗುವ ನಂದಿನಿ ಉತ್ಪನ್ನಗಳ ಖರೀದಿಗೆ ಆದ್ಯತೆ ನೀಡಬೇಕು ಕೋಮಲ್ ಮತ್ತು ಹಾಲು ಮಹಾ ಮಂಡಳಿಯಿಂದ ಸಿಗುವ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಜೆಡಿಎಸ್‌ ಮುಖಂಡ ಸಿಎಂಆರ್ ಶ್ರೀನಾಥ್, ಕೋಮುಲ್ ಉಪ ವ್ಯವಸ್ಥಾಪಕ ಡಾ.ಮಹೇಶ್, ಮಾರುಕಟ್ಟೆ ವ್ಯವಸ್ಥಾಪಕ ಲಕ್ಷ್ಮೀನಾರಾಯಣ, ಉಪ ವ್ಯವಸ್ಥಾಪಕ ನಂಜುಂಡಗೌಡ, ಸಹಾಯಕ ವ್ಯವಸ್ಥಾಪಕ ಲೋಕೇಶ್, ಮುದುವಾಡಿ ಗ್ರಾಮ ಪಂಚಾಯತಿ ಅಧ್ಯಕ್ಷ ಹರೀಶ್ ಬಾಬು, ಮುಖಂಡರಾದ ಜನಪನಹಳ್ಳಿ ಆನಂದ್, ಗದ್ದೆಕಣ್ಣೂರು ಚೌಡರೆಡ್ಡಿ, ಯಾನಾದನಹಳ್ಳಿ ಗೋಪಾಲ್, ಹೊಲ್ಲಂಬಳ್ಳಿ ಚಂದ್ರಶೇಖರ್, ರೆಡ್ಡಿಬಾಬು, ಮಳಿಗೆ ಮಾಲೀಕ ರಾಜಶೇಖರ್ ಮುಂತಾದವರು ಇದ್ದರು.

Ramesh Babu

Journalist

Recent Posts

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

15 hours ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

21 hours ago

80ರ ಹೊಸ್ತಿಲಲ್ಲಿ ಭಾರತ…..

ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…

1 day ago

ಆಹಾರ ಭದ್ರತೆಯಲ್ಲಿ ಯಾವುದೇ ಲೋಪವಾಗದಿರಲಿ- ಆಹಾರ ಆಯೋಗ ಅಧ್ಯಕ್ಷ ಡಾ.ಹೆಚ್ ಕೃಷ್ಣ

ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…

1 day ago

ನಾಳೆ(ಆ.14) ತೂಬಗೆರೆ ಸೊಸೈಟಿಗೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…

2 days ago

“ನನಗೆ ನೀರು ಬೇಕು, ಮಾತಾಡಲ್ಲ” — ಬಾಯಿಗೆ ಪ್ಲಾಸ್ಟರ್ ಹಾಕಿದ ವಾಟಾಳ್ ನಾಗರಾಜ್

ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು…

2 days ago