Categories: ಕೋಲಾರ

ಹಾಲು ಖರೀದಿ ದರ ಇಳಿಕೆ ಆದೇಶ ವಾಪಸ್ ಮಾಡುವಂತೆ ಜೆಡಿಎಸ್‌ ಬಿಜೆಪಿ ಮೈತ್ರಿ ಪಕ್ಷಗಳಿಂದ ಗಡುವು

ಕೋಲಾರ: ಕೋಚಿಮುಲ್ ಆಡಳಿತ ಮಂಡಳಿಯು ಹಾಲು ಉತ್ಪಾದಕರ ಖರೀದಿ ದರವನ್ನು 2 ರೂಪಾಯಿ ಇಳಿಕೆ ಮಾಡಿರುವ ಆದೇಶವನ್ನು ಒಂದು ವಾರದ ಒಳಗೆ ವಾಪಸ್ ಪಡೆಯುವಂತೆ ಕೋಚಿಮುಲ್ ಆಡಳಿತ ಮಂಡಳಿಗೆ ಜೆಡಿಎಸ್‌-ಬಿಜೆಪಿ ಮೈತ್ರಿಕೂಟದಿಂದ ಗಡುವು ನೀಡಿದರು.

ನಗರದಲ್ಲಿ ಗುರುವಾರ ಬಿಜೆಪಿ ಮುಖಂಡ ಓಂಶಕ್ತಿ ಚಲಪತಿ ಕಚೇರಿಯಲ್ಲಿ ಜೆಡಿಎಸ್‌-ಬಿಜೆಪಿ ಮೈತ್ರಿಕೂಟದಿಂದ ನಡೆದ ಪೂರ್ವಭಾವಿ ಸಭೆಯಲ್ಲಿ ಚರ್ಚಿಸಿದ ಮುಖಂಡರು ಎರಡು ಪಕ್ಷದ ಮುಖಂಡರಿಂದ ಶುಕ್ರವಾರ ಸಾಂಕೇತಿಕವಾಗಿ ಕೋಚಿಮುಲ್ ವ್ಯವಸ್ಥಾಪಕ ನಿರ್ದೇಶಕರಿಗೆ, ಜಿಲ್ಲಾಧಿಕಾರಿಗೆ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ನೀಡಿ ಒಂದು ವಾರದೊಳಗೆ ಆದೇಶವನ್ನು ವಾಪಸ್ ಪಡೆದು ಜಿಲ್ಲೆಯ ರೈತರನ್ನು ರಕ್ಷಣೆಗೆ ಮುಂದಾಗಬೇಕು. ಒತ್ತಾಯಿಸುವುದು ಇಲ್ಲದೇ ಹೋದರೆ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟಕ್ಕೆ ಮುಂದಾಗುವಂತೆ ಸಭೆಯಲ್ಲಿ ನಿರ್ಧರಿಸಲಾಯಿತು.

ಸಭೆಯಲ್ಲಿ ಜೆಡಿಎಸ್‌ ಮುಖಂಡ ಸಿಎಂಆರ್ ಶ್ರೀನಾಥ್ ಮಾತನಾಡಿ ಜಿಲ್ಲೆಯ ರೈತರ ಜೀವನಾಧಾರವಾಗಿ ಹೈನುಗಾರಿಕೆಯನ್ನು ನಂಬಿ ಬದುಕನ್ನು ಕಂಡುಕೊಂಡಿದ್ದಾರೆ. ಆದರೆ, ಇವತ್ತು ಕೋಚಿಮುಲ್ ಆಡಳಿತ ಮಂಡಳಿಯ ತಪ್ಪು ನಿರ್ಧಾರಗಳಿಂದ ಜಿಲ್ಲೆಯ ಜನ ಹೈನುಗಾರಿಕೆಯಿಂದ ದೂರ ಉಳಿಯುವಂತ ವಾತಾವರಣವನ್ನು ಸೃಷ್ಟಿಸಿದ್ದಾರೆ. ರಾಜ್ಯದಲ್ಲಿ ಜೆಡಿಎಸ್‌-ಬಿಜೆಪಿ ಪಕ್ಷಗಳು ಜನರ ಪರವಾಗಿ ನಿರಂತರವಾಗಿ ಹೋರಾಟಗಳ ಮೂಲಕ ತಮ್ಮ ಹಕ್ಕುಗಳನ್ನು ಪಡೆದುಕೊಂಡು ಬಂದಿದ್ದಾರೆ ಮುಂದೆಯೂ ಹೋರಾಟದಿಂದಲ್ಲೇ ಕೋಚಿಮುಲ್ ಆಡಳಿತ ಮಂಡಳಿಗೆ ಎಚ್ಚರಿಕೆಯನ್ನು ನೀಡಬೇಕಾಗಿದೆ ಎಂದು ಸಭೆಗೆ ತಿಳಿಸಿದರು.

ಜಿಲ್ಲೆಯ ಜ್ವಲಂತ ಸಮಸ್ಯೆಗಳನ್ನು ಗುರುತಿಸಿ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ರಾಜ್ಯದಲ್ಲಿ ಒಗ್ಗಟ್ಟಿನಿಂದ ಹೋಗಲಿದ್ದೇವೆ. ರಾಜ್ಯದಲ್ಲಿ ಮೈತ್ರಿಕೂಟದ ಪಕ್ಷಗಳಿಂದ ವಿರೋಧ ಪಕ್ಷವಾಗಿ ಸಮರ್ಥವಾಗಿ ಎದುರಿಸಲಿದ್ದೇವೆ. ಆಡಳಿತ ಪಕ್ಷ ಕಾಂಗ್ರೆಸ್ ಸರಕಾರದ ರೈತರು ಕಾರ್ಮಿಕರ, ಬಡವರ ವಿರೋಧಿ ನೀತಿಗಳನ್ನು ಹಿಮ್ಮೆಟ್ಟಿಸುವ ನಿಟ್ಟಿನಲ್ಲಿ ಜನಕ್ಕೆ ಜಾಗೃತಿ ಮೂಡಿಸಲಾಗುತ್ತದೆ. ಕಾಂಗ್ರೆಸ್ ಪಕ್ಷದ ಸಹವಾಸ ಜನಕ್ಕೆ ಸಾಕಾಗಿದೆ ಮುಂದಿನ ದಿನಗಳಲ್ಲಿ ಜನರೇ ಉತ್ತರ ಕೊಡುವ ಕಾಲ ಹತ್ತಿರಕ್ಕೆ ಬಂದಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಓಂಶಕ್ತಿ ಚಲಪತಿ ಮಾತನಾಡಿ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಹಾಲು ಒಕ್ಕೂಟವು ದಿಢೀರ್‌ನೆ ಪ್ರತಿ ಲೀಟರ್‌ ಹಾಲಿನ ಮೇಲೆ 2 ರೂ.ದರ ಕಡಮೆ ಮಾಡಿದ್ದಾರೆ ಈಗಾಗಲೇ ಮಳೆಯ ಕೊರತೆಯ ನಡುವೆ ಕೋಚಿಮುಲ್‌ ಆಡಳಿತ ಮಂಡಳಿ ರೈತರ ನೆರವಿಗೆ ಧಾವಿಸದೇ ಗಾಯದ ಮೇಲೆ ಬರೆ ಎಳೆದಂತೆ ಮಾಡಿದ್ದಾರೆ. ಪ್ರತಿ ಲೀಟರ್‌ ಹಾಲು ಉತ್ಪಾದನೆಗೆ ಕನಿಷ್ಠ 40 ರೂ ಖರ್ಚು ಆಗುತ್ತದೆ ಆದರೆ ಇದೀಗ 2 ರೂ. ದರ ಕಡಿತಗೊಳಿಸಿದ್ದು, ರೈತರಿಗೆ ಪ್ರತಿ ಲೀಟರ್‌ಗೆ 31 ರೂ ಸಿಗಲಿದೆ. ಬರಗಾಲದ ಸಂದರ್ಭದಲ್ಲಿ ಹಾಲು ಉತ್ಪಾದಕರ ಸಂಕಷ್ಟದಲ್ಲಿರುವಾಗ ಬೆಲೆ ಕಡಿತ ಎಷ್ಟು ಸರಿ ಎಂದು ಒಕ್ಕೂಟವನ್ನು ಪ್ರಶ್ನಿಸಿದರು.

ಜೆಡಿಎಸ್‌ ತಾಲೂಕು ಅಧ್ಯಕ್ಷ ಬಾಬು ಮೌನಿ ಮಾತನಾಡಿ, ಜಿಲ್ಲೆಯ ಹಾಲು ಉತ್ಪಾದಕರ ನೆರವಿಗೆ ಈ ಕೂಡಲೇ ಸರ್ಕಾರ ಮತ್ತು ಒಕ್ಕೂಟವು ಧಾವಿಸಬೇಕು ಕೋವಿಡ್‌ ಸಂದರ್ಭದಲ್ಲಿ ಹೈನುಗಾರಿಕೆ ಹಾಗೂ ರೈತರಿಗೂ ತೊಂದರೆ ಆಗಿತ್ತು ಕ್ರಮೇಣವಾಗಿ ಚೇತರಿಸಿಕೊಳ್ಳುವ ಹಂತದಲ್ಲಿ ಹಾಲು ಖರೀದಿ ದರ ಕಡಿಮೆ ಮಾಡಿದ್ದು ರೈತರಿಗೆ ಹಾಗೂ ಹಾಲು ಉತ್ಪಾದಕರಿಗೆ ಮಾಡಿದ ಮೋಸವಾಗಿದೆ ಕೂಡಲೇ ಆದೇಶವನ್ನು ವಾಪಸು ಪಡೆಯಬೇಕು ಇಲ್ಲದೇ ಹೋದರೆ ಜೆಡಿಎಸ್‌ ಮತ್ತು ಬಿಜೆಪಿ ನೇತೃತ್ವದಲ್ಲಿ ರಾಜ್ಯಾದ್ಯಂತ ಜಂಟಿಯಾಗಿ ಹೋರಾಟವನ್ನು ನಡೆಸಲಾಗುತ್ತದೆ ಎಂದರು.

ಸಭೆಯಲ್ಲಿ ಜೆಡಿಎಸ್‌ ಜಿಲ್ಲಾ ಕಾರ್ಯಾಧ್ಯಕ್ಷ ಬಣಕನಹಳ್ಳಿ ನಟರಾಜ್, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಯಲವಾರ ಸೊಣ್ಣೇಗೌಡ, ಕುಡಾ ಮಾಜಿ ಅಧ್ಯಕ್ಷ ವಿಜಯಕುಮಾರ್, ಟಿಎಪಿಸಿಎಂಎಸ್ ಅಧ್ಯಕ್ಷ ವಡಗೂರು ರಾಮು, ಜಿಲ್ಲಾ ಬಿಜೆಪಿ ಮಹಿಳಾ ಅಧ್ಯಕ್ಷೆ ಅರುಣಮ್ಮ, ಜೆಡಿಎಸ್‌ ತಾಲೂಕು ಕಾರ್ಯಾಧ್ಯಕ್ಷ ಜನಪನಹಳ್ಳಿ ಆನಂದ್, ಪ್ರಧಾನ ಕಾರ್ಯದರ್ಶಿ ದಿಂಬ ನಾಗರಾಜಗೌಡ, ಮೈತ್ರಿ ಪಕ್ಷದ ಮುಖಂಡರಾದ ಸಾ.ಮಾ ಬಾಬು, ನಾಮಲ್ ಮಂಜು, ತೋಟಗಳ ಅಶೋಕ್, ರೋಟರಿ ಸುಧಾಕರ್, ಮಂಜುನಾಥ್, ಎಬಿವಿಪಿ ಹರೀಶ್ ಮುಂತಾದವರು ಇದ್ದರು,

Ramesh Babu

Journalist

Recent Posts

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

1 hour ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

5 hours ago

ಮಳೆ ಕೊರತೆ ನೀಗಿಸಲು ಸರ್ಕಾರದ ಮಾಸ್ಟರ್ ಪ್ಲ್ಯಾನ್: ಎಚ್.ಎ.ಎಲ್‌ನಲ್ಲಿ ಮೋಡ ಬಿತ್ತನೆಗೆ ಜಲ ಸಂಪನ್ಮೂಲ ಸಚಿವರಿಂದ ಚಾಲನೆ

ರಾಜ್ಯದಲ್ಲಿ ಎದುರಾಗಿರುವ ಮಳೆ‌ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…

5 hours ago

ಕಡಿದಾದ ತಿರುವಿನಲ್ಲಿ ನಿಯಂತ್ರಣ ತಪ್ಪಿದ ಸಿಮೆಂಟ್ ಲಾರಿ; ಚಾಲಕ ಸ್ಥಳದಲ್ಲೇ ಸಾವು ಗುಂಡಮ್ಮಗೆರೆ–ಹೊಸಹಳ್ಳಿ ರಸ್ತೆಯಲ್ಲಿ ಮುಂಜಾನೆ ದುರಂತ | ರಸ್ತೆಗೆ ಚೆಲ್ಲಾಪಿಲ್ಲಿಯಾದ ಸಿಮೆಂಟ್ ಮೂಟೆಗಳು

  ದೊಡ್ಡಬಳ್ಳಾಪುರ: ಕಡಿದಾದ ತಿರುವಿನಲ್ಲಿ ಸಿಮೆಂಟ್ ಮೂಟೆಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ…

8 hours ago

ಬಸ್ ಏರಿದ್ರೆ ಗಮ್ಯಸ್ಥಾನ ಸೇರುತ್ತೇವೆ ಅನ್ನೋ ಗ್ಯಾರಂಟಿ ಇಲ್ಲ!: ಗುಂಡಮ್ಮಗೆರೆ–ಹೊಸಹಳ್ಳಿ ಮಾರ್ಗದಲ್ಲಿ ಪದೇ ಪದೇ ಕೆಟ್ಟು ನಿಲ್ಲುವ ಸಾರಿಗೆ ಬಸ್‌ಗಳು

ದೊಡ್ಡಬಳ್ಳಾಪುರ: ಗುಂಡಮ್ಮಗೆರೆ–ಹೊಸಹಳ್ಳಿ ರಸ್ತೆಯಲ್ಲಿ ಸಂಚರಿಸುವ ಸಾರಿಗೆ ಬಸ್‌ಗಳು ಪದೇ ಪದೇ ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುತ್ತಿರುವುದರಿಂದ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.…

9 hours ago

ಕೃಷ್ಣ ಜನ್ಮಾಷ್ಟಮಿಯ ನೆಪದಲ್ಲಿ ಒಂದಷ್ಟು ಚಿಂತನೆ……

ಭಾರತದ ನೆಲದಲ್ಲಿ, ತಮ್ಮ ವ್ಯಕ್ತಿತ್ವದ ರೂಪದಲ್ಲಿ ಅತ್ಯಂತ ಹೆಚ್ಚು ಪರಿಣಾಮ ಬೀರಿದ ನಾಲ್ಕು ಪಾತ್ರಗಳೆಂದರೆ ಕೃಷ್ಣ, ರಾಮ, ಗಾಂಧಿ, ಮತ್ತು…

11 hours ago