Categories: ಕೋಲಾರ

ಹಾಲು ಖರೀದಿ ದರ ಏರಿಕೆಗೆ ಪ್ರಾಂತ ರೈತ ಸಂಘ ಒತ್ತಾಯ

ಕೋಲಾರ: ಹಾಲು ಉತ್ಪಾದಕರ ಖರೀದಿ ದರವನ್ನು ಐದು ರೂ ಏರಿಸಿ ಉತ್ಪಾದಕರಿಗೆ ಬಾಕಿ ಇರುವ ಪ್ರೋತ್ಸಾಹವನ್ನು ಕೂಡಲೇ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದಿಂದ ಕೋಮುಲ್ ಆಡಳಿತ ವಿಭಾಗದ ವ್ಯವಸ್ಥಾಪಕ ನಾಗೇಶ್ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಅಧ್ಯಕ್ಷ ಟಿ.ಎಂ ವೆಂಕಟೇಶ್ ಮಾತನಾಡಿ, ಕೃಷಿ ರಂಗದಲ್ಲಿ ಹೈನುಗಾರಿಕೆ ಕ್ಷೇತ್ರ ಪ್ರಮುಖ ಪಾತ್ರ ನಿರ್ವಹಿಸುತ್ತಿದೆ. ಹೈನುಗಾರಿಕೆ ಬಹುತೇಕ ರೈತಾಪಿ ಕೃಷಿ ಕೂಲಿಕಾರರ ಕುಟುಂಬಗಳ ಆರ್ಥಿಕ ಮೂಲವು ಆಗಿದೆ. ಮಹಿಳೆಯರ ಶ್ರಮವೇ ಪ್ರಧಾನವಾಗಿರುವ ಈ ಕ್ಷೇತ್ರವು ಅನೇಕ ಬಿಕ್ಕಟ್ಟುಗಳನ್ನು ಎದುರಿಸುತ್ತಿದೆ. ರಾಜ್ಯದ ಕೆಎಂಎಫ್ ಅಡಿಯಲ್ಲಿ 16 ಹಾಲು ಒಕ್ಕೂಟಗಳು ಇದ್ದು 14900 ಪ್ರಾಥಮಿಕ ಹಾಲು ಉತ್ಪಾದಕರ ಸಹಕಾರ ಸಂಘಗಳ ಮೂಲಕ 22.5 ಲಕ್ಷ ಸದಸ್ಯರಿಂದ ಪ್ರತಿದಿನ 90 ಲಕ್ಷ ದಿಂದ 1 ಕೋಟಿ ಲೀಟರ್ ಹಾಲು ಸಂಗ್ರಹವಾಗುತ್ತಿದೆ. ಆದರೆ ದಿನೇ ದಿನೇ ಹೆಚ್ಚುತ್ತಿರುವ ಪಶು ಆಹಾರ ಬೆಲೆ ಏರಿಕೆ, ಪಶುಗಳ ಖರೀದಿ ದರ, ನಿರ್ವಹಣೆ ಹಾಗೂ ಇನ್ನಿತರೆ ಕಾರಣಗಳಿಂದ ಲೀಟರ್ ಹಾಲಿನ ಉತ್ಪಾದನಾ ವೆಚ್ಚವು ಸರಿಸುಮಾರು 45 ರೂ. ಖರ್ಚು ಬರುತ್ತಿದೆ ಒಕ್ಕೂಟ ನೀಡುವ ಹಣ ಸಾಲದಾಗಿದೆ ಎಂದರು.

ರಾಜ್ಯದ ಕೆ.ಎಂ.ಎಫ್.ಗಳು ಜಿಲ್ಲಾ ಒಕ್ಕೂಟಗಳು ಮತ್ತು ರಾಜ್ಯ ಸರ್ಕಾರ ನೀಡುತ್ತಿರುವ ಪ್ರೋತ್ಸಾಹಧನ ಸೇರಿ 36 ರೂ. ಉತ್ಪಾದಕರಿಗೆ ಪಾವತಿಸಲಾಗುತ್ತಿದ್ದು. ಈ ಹಣದಲ್ಲಿಯೂ ಪ್ರತಿ ಲೀಟರ್ ಮೇಲೆ 8 ರಿಂದ 9 ರೂ. ನಷ್ಟವಾಗುತ್ತಿದೆ. ಇತ್ತೀಚೆಗೆ ನಡೆದ ಕೋಮುಲ್ ಸರ್ವ ಸದಸ್ಯರ ಸಭೆಯಲ್ಲಿ ಹಾಲಿನ ದರವನ್ನು ಏರಿಕೆ ಮಾಡುವುದಾಗಿ ಭರವಸೆ ನೀಡಿದ್ದರೂ ಇಲ್ಲಿನ ತನಕ ಏರಿಕೆ ಮಾಡಿಲ್ಲ. ಆದ್ದರಿಂದ ಕೂಡಲೇ ಹಾಲಿನ ದರವನ್ನು ಪ್ರತಿ ಲೀಟರ್‌ಗೆ ಐದು ರೂ ಏರಿಸಬೇಕು ಪಶು ಆಹಾರ ಗುಣಮಟ್ಟ ಕಾಯ್ದುಕೊಳ್ಳಬೇಕು ಪಶು ಆಹಾರಗಳ ಬೆಲೆ ಇಳಿಸಿ ಹಾಗೂ ಬೆಲೆ ಏರಿಕೆಯನ್ನು ನಿಯಂತ್ರಣ ಮಾಡಲು ಕೆ.ಎಂ.ಎಫ್‌ನಿಂದ ಸಬ್ಸಿಡಿಯನ್ನು ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.

ಜಿಲ್ಲೆಯಲ್ಲಿ ಮಿಶ್ರತಳಿ ರಾಸುಗಳಲ್ಲಿ ಶೇ.4.0 ರಷ್ಟು ಕೊಬ್ಬಿನಾಂಶ ಬಂದಿರುವುದಿಲ್ಲವೆಂದು ಎನ್.ಡಿ.ಆರ್.ಐ. ವಿಜ್ಞಾನಿಗಳ ವರದಿಯಲ್ಲಿ ತಿಳಿಸಿದ್ದರೂ ಕನಿಷ್ಠ 4.0 ಕೊಬ್ಬಿನಾಂಶವನ್ನು ಕಡ್ಡಾಯ ಮಾಡಿರುವುದನ್ನು ಕೈಬಿಡಬೇಕು ಪ್ರಾಥಮಿಕ ಸಹಕಾರಿ ಸಂಘಗಳಲ್ಲಿ ದುಡಿಯುವ ನೌಕರರಿಗೆ ಸೇವಾ ಭದ್ರತೆ ಇತ್ಯಾದಿ ಸೌಲಭ್ಯಗಳನ್ನು ಖಾತ್ರಿ ಮಾಡಬೇಕು ಪ್ರಾಥಮಿಕ ಸಹಕಾರ ಸಂಘಗಳು ಸರಬರಾಜು ಮಾಡುವ ಹಾಲಿಗೆ ಒಕ್ಕೂಟದಿಂದ ನೀಡುವ ಬಿಲ್‌ಗಳನ್ನು ಸರಿಯಾದ ಸಮಯಕ್ಕೆ ನೀಡಬೇಕು ಬಿಎಂಸಿಗಳಿಗೆ ಬರುವ ಲಾಭಂಶವನ್ನು ಪ್ರಾಥಮಿಕ ಸಹಕಾರ ಸಂಘಗಳಿಗೆ ಶೇಕಡವಾರು ಹಂಚಿಕೆ ಮಾಡಬೇಕು ಎಂದು ಒತ್ತಾಯಿಸಿದರು.

ಮನವಿ ನೀಡುವ ಸಂದರ್ಭದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಎನ್.ಎನ್.ಶ್ರೀರಾಮ್, ತಾಲೂಕು ಅಧ್ಯಕ್ಷ ಅಲಹಳ್ಳಿ ವೆಂಕಟೇಶಪ್ಪ, ಕಾರ್ಯದರ್ಶಿ ವಿ.ನಾರಾಯಣರೆಡ್ಡಿ, ಮುಖಂಡರಾದ ಹೊಲ್ಲಂಬಳ್ಳಿ ವೆಂಕಟೇಶಪ್ಪ, ಮಂಜುನಾಥ್ ಮುಂತಾದವರು ಇದ್ದರು.

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

11 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

15 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

15 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

20 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

1 day ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

1 day ago