Categories: ಕೋಲಾರ

ಹಾಲು ಖರೀದಿ ದರ ಏರಿಕೆಗೆ ಪ್ರಾಂತ ರೈತ ಸಂಘ ಒತ್ತಾಯ

ಕೋಲಾರ: ಹಾಲು ಉತ್ಪಾದಕರ ಖರೀದಿ ದರವನ್ನು ಐದು ರೂ ಏರಿಸಿ ಉತ್ಪಾದಕರಿಗೆ ಬಾಕಿ ಇರುವ ಪ್ರೋತ್ಸಾಹವನ್ನು ಕೂಡಲೇ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದಿಂದ ಕೋಮುಲ್ ಆಡಳಿತ ವಿಭಾಗದ ವ್ಯವಸ್ಥಾಪಕ ನಾಗೇಶ್ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಅಧ್ಯಕ್ಷ ಟಿ.ಎಂ ವೆಂಕಟೇಶ್ ಮಾತನಾಡಿ, ಕೃಷಿ ರಂಗದಲ್ಲಿ ಹೈನುಗಾರಿಕೆ ಕ್ಷೇತ್ರ ಪ್ರಮುಖ ಪಾತ್ರ ನಿರ್ವಹಿಸುತ್ತಿದೆ. ಹೈನುಗಾರಿಕೆ ಬಹುತೇಕ ರೈತಾಪಿ ಕೃಷಿ ಕೂಲಿಕಾರರ ಕುಟುಂಬಗಳ ಆರ್ಥಿಕ ಮೂಲವು ಆಗಿದೆ. ಮಹಿಳೆಯರ ಶ್ರಮವೇ ಪ್ರಧಾನವಾಗಿರುವ ಈ ಕ್ಷೇತ್ರವು ಅನೇಕ ಬಿಕ್ಕಟ್ಟುಗಳನ್ನು ಎದುರಿಸುತ್ತಿದೆ. ರಾಜ್ಯದ ಕೆಎಂಎಫ್ ಅಡಿಯಲ್ಲಿ 16 ಹಾಲು ಒಕ್ಕೂಟಗಳು ಇದ್ದು 14900 ಪ್ರಾಥಮಿಕ ಹಾಲು ಉತ್ಪಾದಕರ ಸಹಕಾರ ಸಂಘಗಳ ಮೂಲಕ 22.5 ಲಕ್ಷ ಸದಸ್ಯರಿಂದ ಪ್ರತಿದಿನ 90 ಲಕ್ಷ ದಿಂದ 1 ಕೋಟಿ ಲೀಟರ್ ಹಾಲು ಸಂಗ್ರಹವಾಗುತ್ತಿದೆ. ಆದರೆ ದಿನೇ ದಿನೇ ಹೆಚ್ಚುತ್ತಿರುವ ಪಶು ಆಹಾರ ಬೆಲೆ ಏರಿಕೆ, ಪಶುಗಳ ಖರೀದಿ ದರ, ನಿರ್ವಹಣೆ ಹಾಗೂ ಇನ್ನಿತರೆ ಕಾರಣಗಳಿಂದ ಲೀಟರ್ ಹಾಲಿನ ಉತ್ಪಾದನಾ ವೆಚ್ಚವು ಸರಿಸುಮಾರು 45 ರೂ. ಖರ್ಚು ಬರುತ್ತಿದೆ ಒಕ್ಕೂಟ ನೀಡುವ ಹಣ ಸಾಲದಾಗಿದೆ ಎಂದರು.

ರಾಜ್ಯದ ಕೆ.ಎಂ.ಎಫ್.ಗಳು ಜಿಲ್ಲಾ ಒಕ್ಕೂಟಗಳು ಮತ್ತು ರಾಜ್ಯ ಸರ್ಕಾರ ನೀಡುತ್ತಿರುವ ಪ್ರೋತ್ಸಾಹಧನ ಸೇರಿ 36 ರೂ. ಉತ್ಪಾದಕರಿಗೆ ಪಾವತಿಸಲಾಗುತ್ತಿದ್ದು. ಈ ಹಣದಲ್ಲಿಯೂ ಪ್ರತಿ ಲೀಟರ್ ಮೇಲೆ 8 ರಿಂದ 9 ರೂ. ನಷ್ಟವಾಗುತ್ತಿದೆ. ಇತ್ತೀಚೆಗೆ ನಡೆದ ಕೋಮುಲ್ ಸರ್ವ ಸದಸ್ಯರ ಸಭೆಯಲ್ಲಿ ಹಾಲಿನ ದರವನ್ನು ಏರಿಕೆ ಮಾಡುವುದಾಗಿ ಭರವಸೆ ನೀಡಿದ್ದರೂ ಇಲ್ಲಿನ ತನಕ ಏರಿಕೆ ಮಾಡಿಲ್ಲ. ಆದ್ದರಿಂದ ಕೂಡಲೇ ಹಾಲಿನ ದರವನ್ನು ಪ್ರತಿ ಲೀಟರ್‌ಗೆ ಐದು ರೂ ಏರಿಸಬೇಕು ಪಶು ಆಹಾರ ಗುಣಮಟ್ಟ ಕಾಯ್ದುಕೊಳ್ಳಬೇಕು ಪಶು ಆಹಾರಗಳ ಬೆಲೆ ಇಳಿಸಿ ಹಾಗೂ ಬೆಲೆ ಏರಿಕೆಯನ್ನು ನಿಯಂತ್ರಣ ಮಾಡಲು ಕೆ.ಎಂ.ಎಫ್‌ನಿಂದ ಸಬ್ಸಿಡಿಯನ್ನು ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.

ಜಿಲ್ಲೆಯಲ್ಲಿ ಮಿಶ್ರತಳಿ ರಾಸುಗಳಲ್ಲಿ ಶೇ.4.0 ರಷ್ಟು ಕೊಬ್ಬಿನಾಂಶ ಬಂದಿರುವುದಿಲ್ಲವೆಂದು ಎನ್.ಡಿ.ಆರ್.ಐ. ವಿಜ್ಞಾನಿಗಳ ವರದಿಯಲ್ಲಿ ತಿಳಿಸಿದ್ದರೂ ಕನಿಷ್ಠ 4.0 ಕೊಬ್ಬಿನಾಂಶವನ್ನು ಕಡ್ಡಾಯ ಮಾಡಿರುವುದನ್ನು ಕೈಬಿಡಬೇಕು ಪ್ರಾಥಮಿಕ ಸಹಕಾರಿ ಸಂಘಗಳಲ್ಲಿ ದುಡಿಯುವ ನೌಕರರಿಗೆ ಸೇವಾ ಭದ್ರತೆ ಇತ್ಯಾದಿ ಸೌಲಭ್ಯಗಳನ್ನು ಖಾತ್ರಿ ಮಾಡಬೇಕು ಪ್ರಾಥಮಿಕ ಸಹಕಾರ ಸಂಘಗಳು ಸರಬರಾಜು ಮಾಡುವ ಹಾಲಿಗೆ ಒಕ್ಕೂಟದಿಂದ ನೀಡುವ ಬಿಲ್‌ಗಳನ್ನು ಸರಿಯಾದ ಸಮಯಕ್ಕೆ ನೀಡಬೇಕು ಬಿಎಂಸಿಗಳಿಗೆ ಬರುವ ಲಾಭಂಶವನ್ನು ಪ್ರಾಥಮಿಕ ಸಹಕಾರ ಸಂಘಗಳಿಗೆ ಶೇಕಡವಾರು ಹಂಚಿಕೆ ಮಾಡಬೇಕು ಎಂದು ಒತ್ತಾಯಿಸಿದರು.

ಮನವಿ ನೀಡುವ ಸಂದರ್ಭದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಎನ್.ಎನ್.ಶ್ರೀರಾಮ್, ತಾಲೂಕು ಅಧ್ಯಕ್ಷ ಅಲಹಳ್ಳಿ ವೆಂಕಟೇಶಪ್ಪ, ಕಾರ್ಯದರ್ಶಿ ವಿ.ನಾರಾಯಣರೆಡ್ಡಿ, ಮುಖಂಡರಾದ ಹೊಲ್ಲಂಬಳ್ಳಿ ವೆಂಕಟೇಶಪ್ಪ, ಮಂಜುನಾಥ್ ಮುಂತಾದವರು ಇದ್ದರು.

Ramesh Babu

Journalist

Recent Posts

ಗರಿಗೆದರಿದ “TEAM MSS” ಚಟುವಟಿಕೆ: ಯಾರದ್ದು, ಏನಿದು ‘ಟೀಂ ಎಂಎಸ್ ಎಸ್’….? ಸಂಪೂರ್ಣ ಮಾಹಿತಿಗಾಗಿ ಈ ಸುದ್ದಿಯನ್ನು ಓದಿ….

ಒಂದು ಉಪಚುನಾವಣೆ ಒಳಗೊಂಡಂತೆ ನಾಲ್ಕು ವಿಧಾನಸಭೆ ಚುನಾವಣೆಗಳನ್ನು ಎದುರಿಸಿದ ಬಿ.ಮುನೇಗೌಡ ತಾಲೂಕಿಗೆ ನೀರು, ಕಲ್ಲು ಮುನೇಗೌಡ ಎಂದೇ ಚಿರಪರಿಚಿತರಾಗಿದ್ದಾರೆ...ಇತ್ತೀಚೆಗೆ ನಡೆದ…

42 minutes ago

ಇಂದಿನಿಂದ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01 ಆರಂಭ: ಪರೀಕ್ಷೆಗೆ ಬಂದ ವಿದ್ಯಾರ್ಥಿಗಳಿಗೆ ಗುಲಾಬಿ ನೀಡಿ ಸ್ವಾಗತಿಸಿದ ಬಿಇಒ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು  ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

4 hours ago

ಯುಗಾದಿ…..

ವಿಶ್ವ ಮಹಾಯುದ್ಧದ ಕಾರ್ಮೋಡಗಳ ನಡುವೆ, ಅತ್ಯಂತ ಅಗತ್ಯದ ಗ್ಯಾಸ್ ಸಿಲಿಂಡರ್ಗಳ ಅಭಾವದ ನಡುವೆ, ಪ್ರಕ್ಷ್ಯುಬ್ಧ ಮನಸ್ಥಿತಿಯ ನಡುವೆ, ಸಂಭ್ರಮದ ಹೊಸ…

6 hours ago

ಯುವ ಆಪದ್ ಮಿತ್ರ ಯೋಜನೆ: ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಶಿಬಿರ

ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…

17 hours ago

ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅಮಾನತು

ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…

17 hours ago

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

18 hours ago