Categories: ಕೋಲಾರ

ಹಾಲು ಖರೀದಿ ದರ ಏರಿಕೆಗೆ ಪ್ರಾಂತ ರೈತ ಸಂಘ ಒತ್ತಾಯ

ಕೋಲಾರ: ಹಾಲು ಉತ್ಪಾದಕರ ಖರೀದಿ ದರವನ್ನು ಐದು ರೂ ಏರಿಸಿ ಉತ್ಪಾದಕರಿಗೆ ಬಾಕಿ ಇರುವ ಪ್ರೋತ್ಸಾಹವನ್ನು ಕೂಡಲೇ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದಿಂದ ಕೋಮುಲ್ ಆಡಳಿತ ವಿಭಾಗದ ವ್ಯವಸ್ಥಾಪಕ ನಾಗೇಶ್ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಅಧ್ಯಕ್ಷ ಟಿ.ಎಂ ವೆಂಕಟೇಶ್ ಮಾತನಾಡಿ, ಕೃಷಿ ರಂಗದಲ್ಲಿ ಹೈನುಗಾರಿಕೆ ಕ್ಷೇತ್ರ ಪ್ರಮುಖ ಪಾತ್ರ ನಿರ್ವಹಿಸುತ್ತಿದೆ. ಹೈನುಗಾರಿಕೆ ಬಹುತೇಕ ರೈತಾಪಿ ಕೃಷಿ ಕೂಲಿಕಾರರ ಕುಟುಂಬಗಳ ಆರ್ಥಿಕ ಮೂಲವು ಆಗಿದೆ. ಮಹಿಳೆಯರ ಶ್ರಮವೇ ಪ್ರಧಾನವಾಗಿರುವ ಈ ಕ್ಷೇತ್ರವು ಅನೇಕ ಬಿಕ್ಕಟ್ಟುಗಳನ್ನು ಎದುರಿಸುತ್ತಿದೆ. ರಾಜ್ಯದ ಕೆಎಂಎಫ್ ಅಡಿಯಲ್ಲಿ 16 ಹಾಲು ಒಕ್ಕೂಟಗಳು ಇದ್ದು 14900 ಪ್ರಾಥಮಿಕ ಹಾಲು ಉತ್ಪಾದಕರ ಸಹಕಾರ ಸಂಘಗಳ ಮೂಲಕ 22.5 ಲಕ್ಷ ಸದಸ್ಯರಿಂದ ಪ್ರತಿದಿನ 90 ಲಕ್ಷ ದಿಂದ 1 ಕೋಟಿ ಲೀಟರ್ ಹಾಲು ಸಂಗ್ರಹವಾಗುತ್ತಿದೆ. ಆದರೆ ದಿನೇ ದಿನೇ ಹೆಚ್ಚುತ್ತಿರುವ ಪಶು ಆಹಾರ ಬೆಲೆ ಏರಿಕೆ, ಪಶುಗಳ ಖರೀದಿ ದರ, ನಿರ್ವಹಣೆ ಹಾಗೂ ಇನ್ನಿತರೆ ಕಾರಣಗಳಿಂದ ಲೀಟರ್ ಹಾಲಿನ ಉತ್ಪಾದನಾ ವೆಚ್ಚವು ಸರಿಸುಮಾರು 45 ರೂ. ಖರ್ಚು ಬರುತ್ತಿದೆ ಒಕ್ಕೂಟ ನೀಡುವ ಹಣ ಸಾಲದಾಗಿದೆ ಎಂದರು.

ರಾಜ್ಯದ ಕೆ.ಎಂ.ಎಫ್.ಗಳು ಜಿಲ್ಲಾ ಒಕ್ಕೂಟಗಳು ಮತ್ತು ರಾಜ್ಯ ಸರ್ಕಾರ ನೀಡುತ್ತಿರುವ ಪ್ರೋತ್ಸಾಹಧನ ಸೇರಿ 36 ರೂ. ಉತ್ಪಾದಕರಿಗೆ ಪಾವತಿಸಲಾಗುತ್ತಿದ್ದು. ಈ ಹಣದಲ್ಲಿಯೂ ಪ್ರತಿ ಲೀಟರ್ ಮೇಲೆ 8 ರಿಂದ 9 ರೂ. ನಷ್ಟವಾಗುತ್ತಿದೆ. ಇತ್ತೀಚೆಗೆ ನಡೆದ ಕೋಮುಲ್ ಸರ್ವ ಸದಸ್ಯರ ಸಭೆಯಲ್ಲಿ ಹಾಲಿನ ದರವನ್ನು ಏರಿಕೆ ಮಾಡುವುದಾಗಿ ಭರವಸೆ ನೀಡಿದ್ದರೂ ಇಲ್ಲಿನ ತನಕ ಏರಿಕೆ ಮಾಡಿಲ್ಲ. ಆದ್ದರಿಂದ ಕೂಡಲೇ ಹಾಲಿನ ದರವನ್ನು ಪ್ರತಿ ಲೀಟರ್‌ಗೆ ಐದು ರೂ ಏರಿಸಬೇಕು ಪಶು ಆಹಾರ ಗುಣಮಟ್ಟ ಕಾಯ್ದುಕೊಳ್ಳಬೇಕು ಪಶು ಆಹಾರಗಳ ಬೆಲೆ ಇಳಿಸಿ ಹಾಗೂ ಬೆಲೆ ಏರಿಕೆಯನ್ನು ನಿಯಂತ್ರಣ ಮಾಡಲು ಕೆ.ಎಂ.ಎಫ್‌ನಿಂದ ಸಬ್ಸಿಡಿಯನ್ನು ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.

ಜಿಲ್ಲೆಯಲ್ಲಿ ಮಿಶ್ರತಳಿ ರಾಸುಗಳಲ್ಲಿ ಶೇ.4.0 ರಷ್ಟು ಕೊಬ್ಬಿನಾಂಶ ಬಂದಿರುವುದಿಲ್ಲವೆಂದು ಎನ್.ಡಿ.ಆರ್.ಐ. ವಿಜ್ಞಾನಿಗಳ ವರದಿಯಲ್ಲಿ ತಿಳಿಸಿದ್ದರೂ ಕನಿಷ್ಠ 4.0 ಕೊಬ್ಬಿನಾಂಶವನ್ನು ಕಡ್ಡಾಯ ಮಾಡಿರುವುದನ್ನು ಕೈಬಿಡಬೇಕು ಪ್ರಾಥಮಿಕ ಸಹಕಾರಿ ಸಂಘಗಳಲ್ಲಿ ದುಡಿಯುವ ನೌಕರರಿಗೆ ಸೇವಾ ಭದ್ರತೆ ಇತ್ಯಾದಿ ಸೌಲಭ್ಯಗಳನ್ನು ಖಾತ್ರಿ ಮಾಡಬೇಕು ಪ್ರಾಥಮಿಕ ಸಹಕಾರ ಸಂಘಗಳು ಸರಬರಾಜು ಮಾಡುವ ಹಾಲಿಗೆ ಒಕ್ಕೂಟದಿಂದ ನೀಡುವ ಬಿಲ್‌ಗಳನ್ನು ಸರಿಯಾದ ಸಮಯಕ್ಕೆ ನೀಡಬೇಕು ಬಿಎಂಸಿಗಳಿಗೆ ಬರುವ ಲಾಭಂಶವನ್ನು ಪ್ರಾಥಮಿಕ ಸಹಕಾರ ಸಂಘಗಳಿಗೆ ಶೇಕಡವಾರು ಹಂಚಿಕೆ ಮಾಡಬೇಕು ಎಂದು ಒತ್ತಾಯಿಸಿದರು.

ಮನವಿ ನೀಡುವ ಸಂದರ್ಭದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಎನ್.ಎನ್.ಶ್ರೀರಾಮ್, ತಾಲೂಕು ಅಧ್ಯಕ್ಷ ಅಲಹಳ್ಳಿ ವೆಂಕಟೇಶಪ್ಪ, ಕಾರ್ಯದರ್ಶಿ ವಿ.ನಾರಾಯಣರೆಡ್ಡಿ, ಮುಖಂಡರಾದ ಹೊಲ್ಲಂಬಳ್ಳಿ ವೆಂಕಟೇಶಪ್ಪ, ಮಂಜುನಾಥ್ ಮುಂತಾದವರು ಇದ್ದರು.

Ramesh Babu

Journalist

Share
Published by
Ramesh Babu

Recent Posts

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

42 minutes ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

4 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

4 hours ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

15 hours ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

16 hours ago

ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆಯ ಸಹಯೋಗದಿಂದ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ಮಾನವ ಸಂಪನ್ಮೂಲ ಅಭಿವೃದ್ಧಿ ಕೇಂದ್ರ ಕೋಲಾರ ಇವರ ಸಹಯೋಗದಲ್ಲಿ ರೇಮಂಡ್ ಕಂಪನಿ ಸಮೂಹದ ಸಿಲ್ವರ್ ಸ್ಪಾರ್ಕ್…

16 hours ago