Categories: ಕೋಲಾರ

ಹಾಲು ಖರೀದಿ ದರ ಏರಿಕೆಗೆ ಪ್ರಾಂತ ರೈತ ಸಂಘ ಒತ್ತಾಯ

ಕೋಲಾರ: ಹಾಲು ಉತ್ಪಾದಕರ ಖರೀದಿ ದರವನ್ನು ಐದು ರೂ ಏರಿಸಿ ಉತ್ಪಾದಕರಿಗೆ ಬಾಕಿ ಇರುವ ಪ್ರೋತ್ಸಾಹವನ್ನು ಕೂಡಲೇ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದಿಂದ ಕೋಮುಲ್ ಆಡಳಿತ ವಿಭಾಗದ ವ್ಯವಸ್ಥಾಪಕ ನಾಗೇಶ್ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಅಧ್ಯಕ್ಷ ಟಿ.ಎಂ ವೆಂಕಟೇಶ್ ಮಾತನಾಡಿ, ಕೃಷಿ ರಂಗದಲ್ಲಿ ಹೈನುಗಾರಿಕೆ ಕ್ಷೇತ್ರ ಪ್ರಮುಖ ಪಾತ್ರ ನಿರ್ವಹಿಸುತ್ತಿದೆ. ಹೈನುಗಾರಿಕೆ ಬಹುತೇಕ ರೈತಾಪಿ ಕೃಷಿ ಕೂಲಿಕಾರರ ಕುಟುಂಬಗಳ ಆರ್ಥಿಕ ಮೂಲವು ಆಗಿದೆ. ಮಹಿಳೆಯರ ಶ್ರಮವೇ ಪ್ರಧಾನವಾಗಿರುವ ಈ ಕ್ಷೇತ್ರವು ಅನೇಕ ಬಿಕ್ಕಟ್ಟುಗಳನ್ನು ಎದುರಿಸುತ್ತಿದೆ. ರಾಜ್ಯದ ಕೆಎಂಎಫ್ ಅಡಿಯಲ್ಲಿ 16 ಹಾಲು ಒಕ್ಕೂಟಗಳು ಇದ್ದು 14900 ಪ್ರಾಥಮಿಕ ಹಾಲು ಉತ್ಪಾದಕರ ಸಹಕಾರ ಸಂಘಗಳ ಮೂಲಕ 22.5 ಲಕ್ಷ ಸದಸ್ಯರಿಂದ ಪ್ರತಿದಿನ 90 ಲಕ್ಷ ದಿಂದ 1 ಕೋಟಿ ಲೀಟರ್ ಹಾಲು ಸಂಗ್ರಹವಾಗುತ್ತಿದೆ. ಆದರೆ ದಿನೇ ದಿನೇ ಹೆಚ್ಚುತ್ತಿರುವ ಪಶು ಆಹಾರ ಬೆಲೆ ಏರಿಕೆ, ಪಶುಗಳ ಖರೀದಿ ದರ, ನಿರ್ವಹಣೆ ಹಾಗೂ ಇನ್ನಿತರೆ ಕಾರಣಗಳಿಂದ ಲೀಟರ್ ಹಾಲಿನ ಉತ್ಪಾದನಾ ವೆಚ್ಚವು ಸರಿಸುಮಾರು 45 ರೂ. ಖರ್ಚು ಬರುತ್ತಿದೆ ಒಕ್ಕೂಟ ನೀಡುವ ಹಣ ಸಾಲದಾಗಿದೆ ಎಂದರು.

ರಾಜ್ಯದ ಕೆ.ಎಂ.ಎಫ್.ಗಳು ಜಿಲ್ಲಾ ಒಕ್ಕೂಟಗಳು ಮತ್ತು ರಾಜ್ಯ ಸರ್ಕಾರ ನೀಡುತ್ತಿರುವ ಪ್ರೋತ್ಸಾಹಧನ ಸೇರಿ 36 ರೂ. ಉತ್ಪಾದಕರಿಗೆ ಪಾವತಿಸಲಾಗುತ್ತಿದ್ದು. ಈ ಹಣದಲ್ಲಿಯೂ ಪ್ರತಿ ಲೀಟರ್ ಮೇಲೆ 8 ರಿಂದ 9 ರೂ. ನಷ್ಟವಾಗುತ್ತಿದೆ. ಇತ್ತೀಚೆಗೆ ನಡೆದ ಕೋಮುಲ್ ಸರ್ವ ಸದಸ್ಯರ ಸಭೆಯಲ್ಲಿ ಹಾಲಿನ ದರವನ್ನು ಏರಿಕೆ ಮಾಡುವುದಾಗಿ ಭರವಸೆ ನೀಡಿದ್ದರೂ ಇಲ್ಲಿನ ತನಕ ಏರಿಕೆ ಮಾಡಿಲ್ಲ. ಆದ್ದರಿಂದ ಕೂಡಲೇ ಹಾಲಿನ ದರವನ್ನು ಪ್ರತಿ ಲೀಟರ್‌ಗೆ ಐದು ರೂ ಏರಿಸಬೇಕು ಪಶು ಆಹಾರ ಗುಣಮಟ್ಟ ಕಾಯ್ದುಕೊಳ್ಳಬೇಕು ಪಶು ಆಹಾರಗಳ ಬೆಲೆ ಇಳಿಸಿ ಹಾಗೂ ಬೆಲೆ ಏರಿಕೆಯನ್ನು ನಿಯಂತ್ರಣ ಮಾಡಲು ಕೆ.ಎಂ.ಎಫ್‌ನಿಂದ ಸಬ್ಸಿಡಿಯನ್ನು ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.

ಜಿಲ್ಲೆಯಲ್ಲಿ ಮಿಶ್ರತಳಿ ರಾಸುಗಳಲ್ಲಿ ಶೇ.4.0 ರಷ್ಟು ಕೊಬ್ಬಿನಾಂಶ ಬಂದಿರುವುದಿಲ್ಲವೆಂದು ಎನ್.ಡಿ.ಆರ್.ಐ. ವಿಜ್ಞಾನಿಗಳ ವರದಿಯಲ್ಲಿ ತಿಳಿಸಿದ್ದರೂ ಕನಿಷ್ಠ 4.0 ಕೊಬ್ಬಿನಾಂಶವನ್ನು ಕಡ್ಡಾಯ ಮಾಡಿರುವುದನ್ನು ಕೈಬಿಡಬೇಕು ಪ್ರಾಥಮಿಕ ಸಹಕಾರಿ ಸಂಘಗಳಲ್ಲಿ ದುಡಿಯುವ ನೌಕರರಿಗೆ ಸೇವಾ ಭದ್ರತೆ ಇತ್ಯಾದಿ ಸೌಲಭ್ಯಗಳನ್ನು ಖಾತ್ರಿ ಮಾಡಬೇಕು ಪ್ರಾಥಮಿಕ ಸಹಕಾರ ಸಂಘಗಳು ಸರಬರಾಜು ಮಾಡುವ ಹಾಲಿಗೆ ಒಕ್ಕೂಟದಿಂದ ನೀಡುವ ಬಿಲ್‌ಗಳನ್ನು ಸರಿಯಾದ ಸಮಯಕ್ಕೆ ನೀಡಬೇಕು ಬಿಎಂಸಿಗಳಿಗೆ ಬರುವ ಲಾಭಂಶವನ್ನು ಪ್ರಾಥಮಿಕ ಸಹಕಾರ ಸಂಘಗಳಿಗೆ ಶೇಕಡವಾರು ಹಂಚಿಕೆ ಮಾಡಬೇಕು ಎಂದು ಒತ್ತಾಯಿಸಿದರು.

ಮನವಿ ನೀಡುವ ಸಂದರ್ಭದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಎನ್.ಎನ್.ಶ್ರೀರಾಮ್, ತಾಲೂಕು ಅಧ್ಯಕ್ಷ ಅಲಹಳ್ಳಿ ವೆಂಕಟೇಶಪ್ಪ, ಕಾರ್ಯದರ್ಶಿ ವಿ.ನಾರಾಯಣರೆಡ್ಡಿ, ಮುಖಂಡರಾದ ಹೊಲ್ಲಂಬಳ್ಳಿ ವೆಂಕಟೇಶಪ್ಪ, ಮಂಜುನಾಥ್ ಮುಂತಾದವರು ಇದ್ದರು.

Ramesh Babu

Journalist

Recent Posts

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

8 hours ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

1 day ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

1 day ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

1 day ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

2 days ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

2 days ago