ಕೋಲಾರ: ಹಾಲು ಉತ್ಪಾದಕರ ಖರೀದಿ ದರವನ್ನು ಐದು ರೂ ಏರಿಸಿ ಉತ್ಪಾದಕರಿಗೆ ಬಾಕಿ ಇರುವ ಪ್ರೋತ್ಸಾಹವನ್ನು ಕೂಡಲೇ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದಿಂದ ಕೋಮುಲ್ ಆಡಳಿತ ವಿಭಾಗದ ವ್ಯವಸ್ಥಾಪಕ ನಾಗೇಶ್ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ಅಧ್ಯಕ್ಷ ಟಿ.ಎಂ ವೆಂಕಟೇಶ್ ಮಾತನಾಡಿ, ಕೃಷಿ ರಂಗದಲ್ಲಿ ಹೈನುಗಾರಿಕೆ ಕ್ಷೇತ್ರ ಪ್ರಮುಖ ಪಾತ್ರ ನಿರ್ವಹಿಸುತ್ತಿದೆ. ಹೈನುಗಾರಿಕೆ ಬಹುತೇಕ ರೈತಾಪಿ ಕೃಷಿ ಕೂಲಿಕಾರರ ಕುಟುಂಬಗಳ ಆರ್ಥಿಕ ಮೂಲವು ಆಗಿದೆ. ಮಹಿಳೆಯರ ಶ್ರಮವೇ ಪ್ರಧಾನವಾಗಿರುವ ಈ ಕ್ಷೇತ್ರವು ಅನೇಕ ಬಿಕ್ಕಟ್ಟುಗಳನ್ನು ಎದುರಿಸುತ್ತಿದೆ. ರಾಜ್ಯದ ಕೆಎಂಎಫ್ ಅಡಿಯಲ್ಲಿ 16 ಹಾಲು ಒಕ್ಕೂಟಗಳು ಇದ್ದು 14900 ಪ್ರಾಥಮಿಕ ಹಾಲು ಉತ್ಪಾದಕರ ಸಹಕಾರ ಸಂಘಗಳ ಮೂಲಕ 22.5 ಲಕ್ಷ ಸದಸ್ಯರಿಂದ ಪ್ರತಿದಿನ 90 ಲಕ್ಷ ದಿಂದ 1 ಕೋಟಿ ಲೀಟರ್ ಹಾಲು ಸಂಗ್ರಹವಾಗುತ್ತಿದೆ. ಆದರೆ ದಿನೇ ದಿನೇ ಹೆಚ್ಚುತ್ತಿರುವ ಪಶು ಆಹಾರ ಬೆಲೆ ಏರಿಕೆ, ಪಶುಗಳ ಖರೀದಿ ದರ, ನಿರ್ವಹಣೆ ಹಾಗೂ ಇನ್ನಿತರೆ ಕಾರಣಗಳಿಂದ ಲೀಟರ್ ಹಾಲಿನ ಉತ್ಪಾದನಾ ವೆಚ್ಚವು ಸರಿಸುಮಾರು 45 ರೂ. ಖರ್ಚು ಬರುತ್ತಿದೆ ಒಕ್ಕೂಟ ನೀಡುವ ಹಣ ಸಾಲದಾಗಿದೆ ಎಂದರು.
ರಾಜ್ಯದ ಕೆ.ಎಂ.ಎಫ್.ಗಳು ಜಿಲ್ಲಾ ಒಕ್ಕೂಟಗಳು ಮತ್ತು ರಾಜ್ಯ ಸರ್ಕಾರ ನೀಡುತ್ತಿರುವ ಪ್ರೋತ್ಸಾಹಧನ ಸೇರಿ 36 ರೂ. ಉತ್ಪಾದಕರಿಗೆ ಪಾವತಿಸಲಾಗುತ್ತಿದ್ದು. ಈ ಹಣದಲ್ಲಿಯೂ ಪ್ರತಿ ಲೀಟರ್ ಮೇಲೆ 8 ರಿಂದ 9 ರೂ. ನಷ್ಟವಾಗುತ್ತಿದೆ. ಇತ್ತೀಚೆಗೆ ನಡೆದ ಕೋಮುಲ್ ಸರ್ವ ಸದಸ್ಯರ ಸಭೆಯಲ್ಲಿ ಹಾಲಿನ ದರವನ್ನು ಏರಿಕೆ ಮಾಡುವುದಾಗಿ ಭರವಸೆ ನೀಡಿದ್ದರೂ ಇಲ್ಲಿನ ತನಕ ಏರಿಕೆ ಮಾಡಿಲ್ಲ. ಆದ್ದರಿಂದ ಕೂಡಲೇ ಹಾಲಿನ ದರವನ್ನು ಪ್ರತಿ ಲೀಟರ್ಗೆ ಐದು ರೂ ಏರಿಸಬೇಕು ಪಶು ಆಹಾರ ಗುಣಮಟ್ಟ ಕಾಯ್ದುಕೊಳ್ಳಬೇಕು ಪಶು ಆಹಾರಗಳ ಬೆಲೆ ಇಳಿಸಿ ಹಾಗೂ ಬೆಲೆ ಏರಿಕೆಯನ್ನು ನಿಯಂತ್ರಣ ಮಾಡಲು ಕೆ.ಎಂ.ಎಫ್ನಿಂದ ಸಬ್ಸಿಡಿಯನ್ನು ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.
ಜಿಲ್ಲೆಯಲ್ಲಿ ಮಿಶ್ರತಳಿ ರಾಸುಗಳಲ್ಲಿ ಶೇ.4.0 ರಷ್ಟು ಕೊಬ್ಬಿನಾಂಶ ಬಂದಿರುವುದಿಲ್ಲವೆಂದು ಎನ್.ಡಿ.ಆರ್.ಐ. ವಿಜ್ಞಾನಿಗಳ ವರದಿಯಲ್ಲಿ ತಿಳಿಸಿದ್ದರೂ ಕನಿಷ್ಠ 4.0 ಕೊಬ್ಬಿನಾಂಶವನ್ನು ಕಡ್ಡಾಯ ಮಾಡಿರುವುದನ್ನು ಕೈಬಿಡಬೇಕು ಪ್ರಾಥಮಿಕ ಸಹಕಾರಿ ಸಂಘಗಳಲ್ಲಿ ದುಡಿಯುವ ನೌಕರರಿಗೆ ಸೇವಾ ಭದ್ರತೆ ಇತ್ಯಾದಿ ಸೌಲಭ್ಯಗಳನ್ನು ಖಾತ್ರಿ ಮಾಡಬೇಕು ಪ್ರಾಥಮಿಕ ಸಹಕಾರ ಸಂಘಗಳು ಸರಬರಾಜು ಮಾಡುವ ಹಾಲಿಗೆ ಒಕ್ಕೂಟದಿಂದ ನೀಡುವ ಬಿಲ್ಗಳನ್ನು ಸರಿಯಾದ ಸಮಯಕ್ಕೆ ನೀಡಬೇಕು ಬಿಎಂಸಿಗಳಿಗೆ ಬರುವ ಲಾಭಂಶವನ್ನು ಪ್ರಾಥಮಿಕ ಸಹಕಾರ ಸಂಘಗಳಿಗೆ ಶೇಕಡವಾರು ಹಂಚಿಕೆ ಮಾಡಬೇಕು ಎಂದು ಒತ್ತಾಯಿಸಿದರು.
ಮನವಿ ನೀಡುವ ಸಂದರ್ಭದಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಎನ್.ಎನ್.ಶ್ರೀರಾಮ್, ತಾಲೂಕು ಅಧ್ಯಕ್ಷ ಅಲಹಳ್ಳಿ ವೆಂಕಟೇಶಪ್ಪ, ಕಾರ್ಯದರ್ಶಿ ವಿ.ನಾರಾಯಣರೆಡ್ಡಿ, ಮುಖಂಡರಾದ ಹೊಲ್ಲಂಬಳ್ಳಿ ವೆಂಕಟೇಶಪ್ಪ, ಮಂಜುನಾಥ್ ಮುಂತಾದವರು ಇದ್ದರು.
ದೊಡ್ಡಬಳ್ಳಾಪುರ: ನಗರದ ದೇವರಾಜನಗರ ನಿವಾಸಿಗಳಾದ ಭರತ್ ಅವರ 1 ವರ್ಷ 4 ತಿಂಗಳ ಮಗ ಪೋಷಕ್ ಆರೋಗ್ಯದ ವ್ಯತ್ಯಯದಿಂದ ವಿಧಿವಶರಾದ…
ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿಯು ಶಿಕ್ಷಣಕ್ಕೆ ಪೂರಕವಾಗಿದೆ. ಇದನ್ನು ಸರ್ಕಾರ ಅರ್ಥ ಮಾಡಿಕೊಳ್ಳಬೇಕು ಎಂದು ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್ನ…
ದೊಡ್ಡಬಳ್ಳಾಪುರ: ಫ್ರಿಡ್ಜ್ ಸ್ವಚ್ಛಗೊಳಿಸುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ ದೊಡ್ಡಬಳ್ಳಾಪುರ ನಗರದ ಚೈತನ್ಯನಗರದಲ್ಲಿ ನಡೆದಿದೆ. ಮೃತರನ್ನು…
" ಎಲ್ಲವೂ ವಿಫಲವಾದಾಗ ತಾಳ್ಮೆಯು ಸಫಲವಾಗುತ್ತದೆ....." ಎಂಬ ದಾರ್ಶನಿಕರ ಮಾತು ಎಷ್ಟೊಂದು ಅನುಭಾವದ ಅರ್ಥಪೂರ್ಣ ಮಾತಲ್ಲವೇ.... ಇದಕ್ಕೆ ಅತ್ಯಂತ ನೈಜ…
ಎಲ್ರಿ ಅಧಿಕಾರಿಗಳು, ಜನ್ರ ಸಮಸ್ಯೆ ಕೇಳೋದ್ಯಾರು..?ಜನ ನನಗೆ ವೋಟ್ ಹಾಕಿದ್ಯಾಕೆ..? ಅಧಿಕಾರಿಗಳು ಇಲ್ಲಿದ್ರೆ ಜನರ ಸಮಸ್ಯೆ ಕೂಡಲೇ ಬಗೆಹರಿಸಬಹುದಲ್ವಾ.. ವೋಟ್…
ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕನಾಗಿರುವ ಜೊತೆಗೆ ಜಿಲ್ಲೆಯ ಉಸ್ತುವಾರಿ ಮಂತ್ರಿಯಾಗಿದ್ದು, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತಗಳ ಸರ್ವಾಂಗೀಣ ಅಭಿವೃದ್ಧಿಗಳಿಗೆ…