ಕೋಲಾರ: ಜಿಲ್ಲಾ ಸಹಕಾರಿ ಹಾಲು ಒಕ್ಕೂಟವು ರೈತರಿಂದ ಖರೀದಿಸುವ ಲೀಟರ್ ಹಾಲಿಗೆ 2 ರೂಪಾಯಿ ಹೆಚ್ಚಿಸಿದ್ದು ಸ್ವಾಗತಿಸುತ್ತೇವೆ ಇದರಿಂದಾಗಿ ಹಾಲು ಉತ್ಪಾದಕರು ಸಂತಸಗೊಂಡಿದ್ದಾರೆ ಅದೇ ರೀತಿ ಪಶು ಆಹಾರ ಬೆಲೆಯನ್ನು ಕಡಿಮೆ ಮಾಡುವ ಮೂಲಕ ಹಾಲು ಉತ್ಪಾದಕರ ಹಿತ ಕಾಯುವಂತಾಗಬೇಕು ಎಂದು ಸೀಸಂದ್ರ ಹಾಲು ಡೇರಿ ಅಧ್ಯಕ್ಷ ಸೀಸಂದ್ರ ಗೋಪಾಲಗೌಡ ಸರ್ಕಾರವನ್ನು ಒತ್ತಾಯಿಸಿದರು.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು ಈಗಾಗಲೇ ಕೋಲಾರ ಹಾಲು ಒಕ್ಕೂಟವು ರೈತರಿಂದ ಲೀಟರ್ ಹಾಲಿಗೆ 30.15 ಕೊಡಲಾಗುತ್ತಿದೆ ಸರ್ಕಾರವು 2 ರೂ ಹೆಚ್ಚಿಸಿದ್ದರಿಂದ 32.15 ಕೊಡಲಾಗುತ್ತದೆ ಇದು ಒಂದು ಕಡೆ ಸಂತಸ ಆದರೆ ಬೇಸಿಗೆಯಲ್ಲಿ ಹೈನುಗಾರಿಕೆ ತುಂಬಾ ಕಷ್ಟವಾಗುತ್ತದೆ ಹಾಲು ಉತ್ಪಾದನೆ ಕಡಮೆ ಜೊತೆಗೆ ನಿರ್ವಹಣಾ ವೆಚ್ಚ ಅಧಿಕವಾಗಿರುತ್ತದೆ ಕೂಡಲೇ ಪಶು ಆಹಾರ ದರವನ್ನು ಕಡಮೆ ಮಾಡಿದರೆ ಉತ್ಪಾದಕರಿಗೆ ಅನುಕೂಲವಾಗುತ್ತದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಹಾಗೂ ಜಿಲ್ಲೆಯ ಎಲ್ಲಾ ಶಾಸಕರು ಗಮನ ಹರಿಸಬೇಕು ಎಂದು ಒತ್ತಾಯಿಸಿದರು
ಈಗಾಗಲೇ ರಾಜ್ಯದಲ್ಲಿ ಬೇಸಿಗೆ ಕಾಲವು ಪ್ರಾರಂಭವಾಗಿದೆ ಹಾಲು ಉತ್ಪಾದಕ ರೈತರು ತೀವ್ರ ಸಂಕಷ್ಟದಲ್ಲಿರುವುದನ್ನು ಸಿಎಂ ಸಿದ್ದರಾಮಯ್ಯ ಗಮನಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಹಾಲು ಉತ್ಪಾದಕರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ರೈತರ ಖರೀದಿ ದರ 2 ರೂಪಾಯಿ ಹೆಚ್ಚಿಸಿದ್ದಾರೆ ಹಾಲು ಉತ್ಪಾದಕರಿಗೆ ನೆರವಾಗುವ ಉದ್ದೇಶವೇ ಒಕ್ಕೂಟಕ್ಕೆ ಮುಖ್ಯವಾಗಬೇಕು ಅದೇ ರೀತಿ ಸುಮಾರು ಆರೇಳು ತಿಂಗಳಗಳ ಹಾಲು ಉತ್ಪಾದಕರಿಗೆ ನೀಡುವ ಪ್ರೋತ್ಸಾಹಧನ ಬಾಕಿ ಉಳಿಸಿಕೊಂಡಿದ್ದು ಕೂಡಲೇ ಬಿಡುಗಡೆ ಮಾಡುವ ಮೂಲಕ ಹಾಲು ಉತ್ಪಾದಕರ ನೆರವಿಗೆ ಧಾವಿಸುವಂತೆ ಸೀಸಂದ್ರ ಗೋಪಾಲಗೌಡ ಒತ್ತಾಯ ಮಾಡಿದರು.
ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…
ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…
ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…
ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…
The desert sun has always promised a bright future for Arizona residents, but the rising…
ಪಿ. ಲಂಕೇಶ್........ ಮಾರ್ಚ್ 8, 1935, ಜನವರಿ 25, 2000.... ಎರಡು ವೈರುಧ್ಯಗಳ ಚಿಂತನೆಯ ಜನರಲ್ಲಿ ಪ್ರೀತಿ - ದ್ವೇಷ…