ಕೋಲಾರ: ಜಿಲ್ಲಾ ಸಹಕಾರಿ ಹಾಲು ಒಕ್ಕೂಟವು ರೈತರಿಂದ ಖರೀದಿಸುವ ಲೀಟರ್ ಹಾಲಿಗೆ 2 ರೂಪಾಯಿ ಹೆಚ್ಚಿಸಿದ್ದು ಸ್ವಾಗತಿಸುತ್ತೇವೆ ಇದರಿಂದಾಗಿ ಹಾಲು ಉತ್ಪಾದಕರು ಸಂತಸಗೊಂಡಿದ್ದಾರೆ ಅದೇ ರೀತಿ ಪಶು ಆಹಾರ ಬೆಲೆಯನ್ನು ಕಡಿಮೆ ಮಾಡುವ ಮೂಲಕ ಹಾಲು ಉತ್ಪಾದಕರ ಹಿತ ಕಾಯುವಂತಾಗಬೇಕು ಎಂದು ಸೀಸಂದ್ರ ಹಾಲು ಡೇರಿ ಅಧ್ಯಕ್ಷ ಸೀಸಂದ್ರ ಗೋಪಾಲಗೌಡ ಸರ್ಕಾರವನ್ನು ಒತ್ತಾಯಿಸಿದರು.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು ಈಗಾಗಲೇ ಕೋಲಾರ ಹಾಲು ಒಕ್ಕೂಟವು ರೈತರಿಂದ ಲೀಟರ್ ಹಾಲಿಗೆ 30.15 ಕೊಡಲಾಗುತ್ತಿದೆ ಸರ್ಕಾರವು 2 ರೂ ಹೆಚ್ಚಿಸಿದ್ದರಿಂದ 32.15 ಕೊಡಲಾಗುತ್ತದೆ ಇದು ಒಂದು ಕಡೆ ಸಂತಸ ಆದರೆ ಬೇಸಿಗೆಯಲ್ಲಿ ಹೈನುಗಾರಿಕೆ ತುಂಬಾ ಕಷ್ಟವಾಗುತ್ತದೆ ಹಾಲು ಉತ್ಪಾದನೆ ಕಡಮೆ ಜೊತೆಗೆ ನಿರ್ವಹಣಾ ವೆಚ್ಚ ಅಧಿಕವಾಗಿರುತ್ತದೆ ಕೂಡಲೇ ಪಶು ಆಹಾರ ದರವನ್ನು ಕಡಮೆ ಮಾಡಿದರೆ ಉತ್ಪಾದಕರಿಗೆ ಅನುಕೂಲವಾಗುತ್ತದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಹಾಗೂ ಜಿಲ್ಲೆಯ ಎಲ್ಲಾ ಶಾಸಕರು ಗಮನ ಹರಿಸಬೇಕು ಎಂದು ಒತ್ತಾಯಿಸಿದರು
ಈಗಾಗಲೇ ರಾಜ್ಯದಲ್ಲಿ ಬೇಸಿಗೆ ಕಾಲವು ಪ್ರಾರಂಭವಾಗಿದೆ ಹಾಲು ಉತ್ಪಾದಕ ರೈತರು ತೀವ್ರ ಸಂಕಷ್ಟದಲ್ಲಿರುವುದನ್ನು ಸಿಎಂ ಸಿದ್ದರಾಮಯ್ಯ ಗಮನಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಹಾಲು ಉತ್ಪಾದಕರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ರೈತರ ಖರೀದಿ ದರ 2 ರೂಪಾಯಿ ಹೆಚ್ಚಿಸಿದ್ದಾರೆ ಹಾಲು ಉತ್ಪಾದಕರಿಗೆ ನೆರವಾಗುವ ಉದ್ದೇಶವೇ ಒಕ್ಕೂಟಕ್ಕೆ ಮುಖ್ಯವಾಗಬೇಕು ಅದೇ ರೀತಿ ಸುಮಾರು ಆರೇಳು ತಿಂಗಳಗಳ ಹಾಲು ಉತ್ಪಾದಕರಿಗೆ ನೀಡುವ ಪ್ರೋತ್ಸಾಹಧನ ಬಾಕಿ ಉಳಿಸಿಕೊಂಡಿದ್ದು ಕೂಡಲೇ ಬಿಡುಗಡೆ ಮಾಡುವ ಮೂಲಕ ಹಾಲು ಉತ್ಪಾದಕರ ನೆರವಿಗೆ ಧಾವಿಸುವಂತೆ ಸೀಸಂದ್ರ ಗೋಪಾಲಗೌಡ ಒತ್ತಾಯ ಮಾಡಿದರು.
ದೇವರಹಿಪ್ಪರಗಿ: ಪತ್ನಿಯನ್ನು ತಾನೇ ಕೊಂ*ದು ಶವವನ್ನು ಮನೆಯ ಆವರಣದಲ್ಲೇ ಹೂತುಹಾಕಿ ಆಕೆ ನಾಪತ್ತೆಯಾಗಿದ್ದಾಳೆ ಎಂದು ಕಥೆ ಕಟ್ಟಿದ್ದ ಆರೋಪಿಯನ್ನು ಬಂಧಿಸುವಲ್ಲಿ…
ಬೈಕ್ ನಲ್ಲಿ ಪತ್ನಿಯೊಂದಿಗೆ ಸಂಬಂಧಿಕರ ಮನೆಯ ಸಾವಿಗೆ ತೆರಳುತ್ತಿದ್ದ ಬೈಕ್ ಸವಾರನೊಬ್ಬ ಹೆದ್ದಾರಿಯಲ್ಲಿ ವಾಹನ ತಪಾಸಣೆ ಮಾಡುತ್ತಿದ್ದ ಪೋಲೀಸರನ್ನು ಕಂಡು…
ಸ್ವಾಮಿಯೇ........ ಶರಣಂ ಅಯ್ಯಪ್ಪ......... ಮಹಿಳೆಯರಿಗೆ ಕೇರಳದ ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಪ್ರವೇಶ ನೀಡಬೇಕೆ ? ಬೇಡವೇ ? ಎಂಬ ಬಗ್ಗೆ…
ಕರ್ತವ್ಯದ ವೇಳೆ ಮಡಿದ ಬೆಸ್ಕಾಂನ ಮೂವರು ಸಿಬ್ಬಂದಿಯ ಕುಟುಂಬಸ್ಥರಿಗೆ ಇಂಧನ ಸಚಿವ ಕೆ.ಜೆ ಜಾರ್ಜ್ ತಲಾ ಒಂದು ಕೋಟಿ ರೂ.…
ಬೆಂಗಳೂರಿನ ಕಸವನ್ನು ವಿಲೇವಾರಿ ಮಾಡಲು ಮಹದೇವಪುರ ಮತ್ತು ಮೀಟಗಾನಹಳ್ಳಿಯ ವಿಲೇವಾರಿ ಘಟಕಗಳ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆ ಅಲ್ಲಿನ ಕಸದ…
ದೊಡ್ಡಬಳ್ಳಾಪುರ : ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ (ಇಂಟಕ್ ) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯೂತ್ ವಿಭಾಗದ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್…