ಕೋಲಾರ: ಜಿಲ್ಲಾ ಸಹಕಾರಿ ಹಾಲು ಒಕ್ಕೂಟವು ರೈತರಿಂದ ಖರೀದಿಸುವ ಲೀಟರ್ ಹಾಲಿಗೆ 2 ರೂಪಾಯಿ ಹೆಚ್ಚಿಸಿದ್ದು ಸ್ವಾಗತಿಸುತ್ತೇವೆ ಇದರಿಂದಾಗಿ ಹಾಲು ಉತ್ಪಾದಕರು ಸಂತಸಗೊಂಡಿದ್ದಾರೆ ಅದೇ ರೀತಿ ಪಶು ಆಹಾರ ಬೆಲೆಯನ್ನು ಕಡಿಮೆ ಮಾಡುವ ಮೂಲಕ ಹಾಲು ಉತ್ಪಾದಕರ ಹಿತ ಕಾಯುವಂತಾಗಬೇಕು ಎಂದು ಸೀಸಂದ್ರ ಹಾಲು ಡೇರಿ ಅಧ್ಯಕ್ಷ ಸೀಸಂದ್ರ ಗೋಪಾಲಗೌಡ ಸರ್ಕಾರವನ್ನು ಒತ್ತಾಯಿಸಿದರು.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು ಈಗಾಗಲೇ ಕೋಲಾರ ಹಾಲು ಒಕ್ಕೂಟವು ರೈತರಿಂದ ಲೀಟರ್ ಹಾಲಿಗೆ 30.15 ಕೊಡಲಾಗುತ್ತಿದೆ ಸರ್ಕಾರವು 2 ರೂ ಹೆಚ್ಚಿಸಿದ್ದರಿಂದ 32.15 ಕೊಡಲಾಗುತ್ತದೆ ಇದು ಒಂದು ಕಡೆ ಸಂತಸ ಆದರೆ ಬೇಸಿಗೆಯಲ್ಲಿ ಹೈನುಗಾರಿಕೆ ತುಂಬಾ ಕಷ್ಟವಾಗುತ್ತದೆ ಹಾಲು ಉತ್ಪಾದನೆ ಕಡಮೆ ಜೊತೆಗೆ ನಿರ್ವಹಣಾ ವೆಚ್ಚ ಅಧಿಕವಾಗಿರುತ್ತದೆ ಕೂಡಲೇ ಪಶು ಆಹಾರ ದರವನ್ನು ಕಡಮೆ ಮಾಡಿದರೆ ಉತ್ಪಾದಕರಿಗೆ ಅನುಕೂಲವಾಗುತ್ತದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಹಾಗೂ ಜಿಲ್ಲೆಯ ಎಲ್ಲಾ ಶಾಸಕರು ಗಮನ ಹರಿಸಬೇಕು ಎಂದು ಒತ್ತಾಯಿಸಿದರು
ಈಗಾಗಲೇ ರಾಜ್ಯದಲ್ಲಿ ಬೇಸಿಗೆ ಕಾಲವು ಪ್ರಾರಂಭವಾಗಿದೆ ಹಾಲು ಉತ್ಪಾದಕ ರೈತರು ತೀವ್ರ ಸಂಕಷ್ಟದಲ್ಲಿರುವುದನ್ನು ಸಿಎಂ ಸಿದ್ದರಾಮಯ್ಯ ಗಮನಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಹಾಲು ಉತ್ಪಾದಕರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ರೈತರ ಖರೀದಿ ದರ 2 ರೂಪಾಯಿ ಹೆಚ್ಚಿಸಿದ್ದಾರೆ ಹಾಲು ಉತ್ಪಾದಕರಿಗೆ ನೆರವಾಗುವ ಉದ್ದೇಶವೇ ಒಕ್ಕೂಟಕ್ಕೆ ಮುಖ್ಯವಾಗಬೇಕು ಅದೇ ರೀತಿ ಸುಮಾರು ಆರೇಳು ತಿಂಗಳಗಳ ಹಾಲು ಉತ್ಪಾದಕರಿಗೆ ನೀಡುವ ಪ್ರೋತ್ಸಾಹಧನ ಬಾಕಿ ಉಳಿಸಿಕೊಂಡಿದ್ದು ಕೂಡಲೇ ಬಿಡುಗಡೆ ಮಾಡುವ ಮೂಲಕ ಹಾಲು ಉತ್ಪಾದಕರ ನೆರವಿಗೆ ಧಾವಿಸುವಂತೆ ಸೀಸಂದ್ರ ಗೋಪಾಲಗೌಡ ಒತ್ತಾಯ ಮಾಡಿದರು.
ದೊಡ್ಡಬಳ್ಳಾಪುರ: ಸಾಯಿರಾಂ ಡ್ರಿಪ್ ಇರಿಗೇಷನ್ ಹಾಗೂ ಕನ್ಸ್ಟ್ರಕ್ಷನ್ ಸಂಸ್ಥೆಯ ಮಾಲೀಕರಾದ ಬಿ. ಮಹೇಂದ್ರ ಬಾಬು ಅವರ 46ನೇ ವರ್ಷದ ಹುಟ್ಟುಹಬ್ಬವನ್ನು…
ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…
ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…
ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…
ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…
ರಕ್ತ ಸಿಕ್ತ ದೆಹಲಿ...... ಇದು ಒಳ್ಳೆಯ ಬೆಳವಣಿಗೆಯಲ್ಲ.... ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ ಲಾಟಿಚಾರ್ಜ್ ಹಂತಕ್ಕೆ ತಲುಪುವ ಮೊದಲೇ ಸರ್ಕಾರ ಒಂದಷ್ಟು…