ಕೋಲಾರ: ಜಿಲ್ಲಾ ಸಹಕಾರಿ ಹಾಲು ಒಕ್ಕೂಟವು ರೈತರಿಂದ ಖರೀದಿಸುವ ಲೀಟರ್ ಹಾಲಿಗೆ 2 ರೂಪಾಯಿ ಹೆಚ್ಚಿಸಿದ್ದು ಸ್ವಾಗತಿಸುತ್ತೇವೆ ಇದರಿಂದಾಗಿ ಹಾಲು ಉತ್ಪಾದಕರು ಸಂತಸಗೊಂಡಿದ್ದಾರೆ ಅದೇ ರೀತಿ ಪಶು ಆಹಾರ ಬೆಲೆಯನ್ನು ಕಡಿಮೆ ಮಾಡುವ ಮೂಲಕ ಹಾಲು ಉತ್ಪಾದಕರ ಹಿತ ಕಾಯುವಂತಾಗಬೇಕು ಎಂದು ಸೀಸಂದ್ರ ಹಾಲು ಡೇರಿ ಅಧ್ಯಕ್ಷ ಸೀಸಂದ್ರ ಗೋಪಾಲಗೌಡ ಸರ್ಕಾರವನ್ನು ಒತ್ತಾಯಿಸಿದರು.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು ಈಗಾಗಲೇ ಕೋಲಾರ ಹಾಲು ಒಕ್ಕೂಟವು ರೈತರಿಂದ ಲೀಟರ್ ಹಾಲಿಗೆ 30.15 ಕೊಡಲಾಗುತ್ತಿದೆ ಸರ್ಕಾರವು 2 ರೂ ಹೆಚ್ಚಿಸಿದ್ದರಿಂದ 32.15 ಕೊಡಲಾಗುತ್ತದೆ ಇದು ಒಂದು ಕಡೆ ಸಂತಸ ಆದರೆ ಬೇಸಿಗೆಯಲ್ಲಿ ಹೈನುಗಾರಿಕೆ ತುಂಬಾ ಕಷ್ಟವಾಗುತ್ತದೆ ಹಾಲು ಉತ್ಪಾದನೆ ಕಡಮೆ ಜೊತೆಗೆ ನಿರ್ವಹಣಾ ವೆಚ್ಚ ಅಧಿಕವಾಗಿರುತ್ತದೆ ಕೂಡಲೇ ಪಶು ಆಹಾರ ದರವನ್ನು ಕಡಮೆ ಮಾಡಿದರೆ ಉತ್ಪಾದಕರಿಗೆ ಅನುಕೂಲವಾಗುತ್ತದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಹಾಗೂ ಜಿಲ್ಲೆಯ ಎಲ್ಲಾ ಶಾಸಕರು ಗಮನ ಹರಿಸಬೇಕು ಎಂದು ಒತ್ತಾಯಿಸಿದರು
ಈಗಾಗಲೇ ರಾಜ್ಯದಲ್ಲಿ ಬೇಸಿಗೆ ಕಾಲವು ಪ್ರಾರಂಭವಾಗಿದೆ ಹಾಲು ಉತ್ಪಾದಕ ರೈತರು ತೀವ್ರ ಸಂಕಷ್ಟದಲ್ಲಿರುವುದನ್ನು ಸಿಎಂ ಸಿದ್ದರಾಮಯ್ಯ ಗಮನಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಹಾಲು ಉತ್ಪಾದಕರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ರೈತರ ಖರೀದಿ ದರ 2 ರೂಪಾಯಿ ಹೆಚ್ಚಿಸಿದ್ದಾರೆ ಹಾಲು ಉತ್ಪಾದಕರಿಗೆ ನೆರವಾಗುವ ಉದ್ದೇಶವೇ ಒಕ್ಕೂಟಕ್ಕೆ ಮುಖ್ಯವಾಗಬೇಕು ಅದೇ ರೀತಿ ಸುಮಾರು ಆರೇಳು ತಿಂಗಳಗಳ ಹಾಲು ಉತ್ಪಾದಕರಿಗೆ ನೀಡುವ ಪ್ರೋತ್ಸಾಹಧನ ಬಾಕಿ ಉಳಿಸಿಕೊಂಡಿದ್ದು ಕೂಡಲೇ ಬಿಡುಗಡೆ ಮಾಡುವ ಮೂಲಕ ಹಾಲು ಉತ್ಪಾದಕರ ನೆರವಿಗೆ ಧಾವಿಸುವಂತೆ ಸೀಸಂದ್ರ ಗೋಪಾಲಗೌಡ ಒತ್ತಾಯ ಮಾಡಿದರು.
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…
ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…