ಕೋಲಾರ: ಜಿಲ್ಲಾ ಸಹಕಾರಿ ಹಾಲು ಒಕ್ಕೂಟವು ರೈತರಿಂದ ಖರೀದಿಸುವ ಲೀಟರ್ ಹಾಲಿಗೆ 2 ರೂಪಾಯಿ ಹೆಚ್ಚಿಸಿದ್ದು ಸ್ವಾಗತಿಸುತ್ತೇವೆ ಇದರಿಂದಾಗಿ ಹಾಲು ಉತ್ಪಾದಕರು ಸಂತಸಗೊಂಡಿದ್ದಾರೆ ಅದೇ ರೀತಿ ಪಶು ಆಹಾರ ಬೆಲೆಯನ್ನು ಕಡಿಮೆ ಮಾಡುವ ಮೂಲಕ ಹಾಲು ಉತ್ಪಾದಕರ ಹಿತ ಕಾಯುವಂತಾಗಬೇಕು ಎಂದು ಸೀಸಂದ್ರ ಹಾಲು ಡೇರಿ ಅಧ್ಯಕ್ಷ ಸೀಸಂದ್ರ ಗೋಪಾಲಗೌಡ ಸರ್ಕಾರವನ್ನು ಒತ್ತಾಯಿಸಿದರು.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು ಈಗಾಗಲೇ ಕೋಲಾರ ಹಾಲು ಒಕ್ಕೂಟವು ರೈತರಿಂದ ಲೀಟರ್ ಹಾಲಿಗೆ 30.15 ಕೊಡಲಾಗುತ್ತಿದೆ ಸರ್ಕಾರವು 2 ರೂ ಹೆಚ್ಚಿಸಿದ್ದರಿಂದ 32.15 ಕೊಡಲಾಗುತ್ತದೆ ಇದು ಒಂದು ಕಡೆ ಸಂತಸ ಆದರೆ ಬೇಸಿಗೆಯಲ್ಲಿ ಹೈನುಗಾರಿಕೆ ತುಂಬಾ ಕಷ್ಟವಾಗುತ್ತದೆ ಹಾಲು ಉತ್ಪಾದನೆ ಕಡಮೆ ಜೊತೆಗೆ ನಿರ್ವಹಣಾ ವೆಚ್ಚ ಅಧಿಕವಾಗಿರುತ್ತದೆ ಕೂಡಲೇ ಪಶು ಆಹಾರ ದರವನ್ನು ಕಡಮೆ ಮಾಡಿದರೆ ಉತ್ಪಾದಕರಿಗೆ ಅನುಕೂಲವಾಗುತ್ತದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಹಾಗೂ ಜಿಲ್ಲೆಯ ಎಲ್ಲಾ ಶಾಸಕರು ಗಮನ ಹರಿಸಬೇಕು ಎಂದು ಒತ್ತಾಯಿಸಿದರು
ಈಗಾಗಲೇ ರಾಜ್ಯದಲ್ಲಿ ಬೇಸಿಗೆ ಕಾಲವು ಪ್ರಾರಂಭವಾಗಿದೆ ಹಾಲು ಉತ್ಪಾದಕ ರೈತರು ತೀವ್ರ ಸಂಕಷ್ಟದಲ್ಲಿರುವುದನ್ನು ಸಿಎಂ ಸಿದ್ದರಾಮಯ್ಯ ಗಮನಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಹಾಲು ಉತ್ಪಾದಕರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ರೈತರ ಖರೀದಿ ದರ 2 ರೂಪಾಯಿ ಹೆಚ್ಚಿಸಿದ್ದಾರೆ ಹಾಲು ಉತ್ಪಾದಕರಿಗೆ ನೆರವಾಗುವ ಉದ್ದೇಶವೇ ಒಕ್ಕೂಟಕ್ಕೆ ಮುಖ್ಯವಾಗಬೇಕು ಅದೇ ರೀತಿ ಸುಮಾರು ಆರೇಳು ತಿಂಗಳಗಳ ಹಾಲು ಉತ್ಪಾದಕರಿಗೆ ನೀಡುವ ಪ್ರೋತ್ಸಾಹಧನ ಬಾಕಿ ಉಳಿಸಿಕೊಂಡಿದ್ದು ಕೂಡಲೇ ಬಿಡುಗಡೆ ಮಾಡುವ ಮೂಲಕ ಹಾಲು ಉತ್ಪಾದಕರ ನೆರವಿಗೆ ಧಾವಿಸುವಂತೆ ಸೀಸಂದ್ರ ಗೋಪಾಲಗೌಡ ಒತ್ತಾಯ ಮಾಡಿದರು.
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…