ಕೋಲಾರ: ಜಿಲ್ಲಾ ಸಹಕಾರಿ ಹಾಲು ಒಕ್ಕೂಟವು ರೈತರಿಂದ ಖರೀದಿಸುವ ಲೀಟರ್ ಹಾಲಿಗೆ 2 ರೂಪಾಯಿ ಹೆಚ್ಚಿಸಿದ್ದು ಸ್ವಾಗತಿಸುತ್ತೇವೆ ಇದರಿಂದಾಗಿ ಹಾಲು ಉತ್ಪಾದಕರು ಸಂತಸಗೊಂಡಿದ್ದಾರೆ ಅದೇ ರೀತಿ ಪಶು ಆಹಾರ ಬೆಲೆಯನ್ನು ಕಡಿಮೆ ಮಾಡುವ ಮೂಲಕ ಹಾಲು ಉತ್ಪಾದಕರ ಹಿತ ಕಾಯುವಂತಾಗಬೇಕು ಎಂದು ಸೀಸಂದ್ರ ಹಾಲು ಡೇರಿ ಅಧ್ಯಕ್ಷ ಸೀಸಂದ್ರ ಗೋಪಾಲಗೌಡ ಸರ್ಕಾರವನ್ನು ಒತ್ತಾಯಿಸಿದರು.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು ಈಗಾಗಲೇ ಕೋಲಾರ ಹಾಲು ಒಕ್ಕೂಟವು ರೈತರಿಂದ ಲೀಟರ್ ಹಾಲಿಗೆ 30.15 ಕೊಡಲಾಗುತ್ತಿದೆ ಸರ್ಕಾರವು 2 ರೂ ಹೆಚ್ಚಿಸಿದ್ದರಿಂದ 32.15 ಕೊಡಲಾಗುತ್ತದೆ ಇದು ಒಂದು ಕಡೆ ಸಂತಸ ಆದರೆ ಬೇಸಿಗೆಯಲ್ಲಿ ಹೈನುಗಾರಿಕೆ ತುಂಬಾ ಕಷ್ಟವಾಗುತ್ತದೆ ಹಾಲು ಉತ್ಪಾದನೆ ಕಡಮೆ ಜೊತೆಗೆ ನಿರ್ವಹಣಾ ವೆಚ್ಚ ಅಧಿಕವಾಗಿರುತ್ತದೆ ಕೂಡಲೇ ಪಶು ಆಹಾರ ದರವನ್ನು ಕಡಮೆ ಮಾಡಿದರೆ ಉತ್ಪಾದಕರಿಗೆ ಅನುಕೂಲವಾಗುತ್ತದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಹಾಗೂ ಜಿಲ್ಲೆಯ ಎಲ್ಲಾ ಶಾಸಕರು ಗಮನ ಹರಿಸಬೇಕು ಎಂದು ಒತ್ತಾಯಿಸಿದರು
ಈಗಾಗಲೇ ರಾಜ್ಯದಲ್ಲಿ ಬೇಸಿಗೆ ಕಾಲವು ಪ್ರಾರಂಭವಾಗಿದೆ ಹಾಲು ಉತ್ಪಾದಕ ರೈತರು ತೀವ್ರ ಸಂಕಷ್ಟದಲ್ಲಿರುವುದನ್ನು ಸಿಎಂ ಸಿದ್ದರಾಮಯ್ಯ ಗಮನಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಹಾಲು ಉತ್ಪಾದಕರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ರೈತರ ಖರೀದಿ ದರ 2 ರೂಪಾಯಿ ಹೆಚ್ಚಿಸಿದ್ದಾರೆ ಹಾಲು ಉತ್ಪಾದಕರಿಗೆ ನೆರವಾಗುವ ಉದ್ದೇಶವೇ ಒಕ್ಕೂಟಕ್ಕೆ ಮುಖ್ಯವಾಗಬೇಕು ಅದೇ ರೀತಿ ಸುಮಾರು ಆರೇಳು ತಿಂಗಳಗಳ ಹಾಲು ಉತ್ಪಾದಕರಿಗೆ ನೀಡುವ ಪ್ರೋತ್ಸಾಹಧನ ಬಾಕಿ ಉಳಿಸಿಕೊಂಡಿದ್ದು ಕೂಡಲೇ ಬಿಡುಗಡೆ ಮಾಡುವ ಮೂಲಕ ಹಾಲು ಉತ್ಪಾದಕರ ನೆರವಿಗೆ ಧಾವಿಸುವಂತೆ ಸೀಸಂದ್ರ ಗೋಪಾಲಗೌಡ ಒತ್ತಾಯ ಮಾಡಿದರು.
ಬೆಂಗಳೂರು: ಬೆಂಗಳೂರು ನಗರ ಹಾಗೂ ಗ್ರಾಮಾಂತರ ಭಾಗಗಳಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿಎಂಟಿಸಿ(Bangalore Metropolitan Transport Corporation) ಮೇ 18ರಿಂದ…
ದೊಡ್ಡಬಳ್ಳಾಪುರ: ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.…
ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದನ್ನು ರಾಜ್ಯ ಸರ್ಕಾರ ಖಂಡಿಸಲಿದ್ದು, ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತೇವೆ ಎಂದು ಸಿಎಂ…
ಬಾಲ್ಯ ವಿವಾಹಗಳನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಕಳೆದ ಆರ್ಥಿಕ ವರ್ಷ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ಪ್ರಕರಣಗಳನ್ನು…
ಸರ್ಕಾರಿ ಸಂಸ್ಥೆಗಳು ಹಾಗೂ ಸರ್ಕಾರಿ ಕೆಲಸಗಳ ಸೇವೆಯಲ್ಲಿ ಕೆ-ಜಿಐಎಸ್ 2.0 ಪೋರ್ಟಲ್ ಬಳಕೆಯಿಂದ ಆಡಳಿತದ ದಕ್ಷತೆ ಹೆಚ್ಚಲಿದೆ ಎಂದು ಜಿಲ್ಲಾಧಿಕಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 349 ಗೃಹರಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳು ಮೇ…