Categories: ಕೋಲಾರ

ಹಾಲು ಖರೀದಿ ಧರ ಇಳಿಕೆ ಆದೇಶ ವಾಪಸು ಪಡೆಯುವಂತೆ ಕೆ.ಪಿ.ಆರ್.ಎಸ್ ನೇತೃತ್ವದಲ್ಲಿ ಪ್ರತಿಭಟನೆ

ಕೋಲಾರ: ಹಾಲು ಉತ್ಪಾದಕರ ಖರೀದಿ ಧರ 2 ರೂ ಇಳಿಕೆ, ಸರ್ಕಾರ ಬಾಕಿ ಉಳಿಸಿಕೊಂಡಿರುವ ಹಾಲಿನ ಪ್ರೋತ್ಸಾಹ ದನ ಬಿಡುಗಡೆ ಸೇರಿದಂತೆ ಹೈನುಗಾರಿಕೆ ಉಳಿವಿಗಾಗಿ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ಹಾಲು‌ ಉತ್ಪಾದಕರ ನೇತೃತ್ವದಲ್ಲಿ ಸೋಮವಾರ ಕೋಚಿಮುಲ್ ಒಕ್ಕೂಟ ಮುಂದೆ ಪ್ರತಿಭಟನೆ ನಡೆಸಿ ಒತ್ತಾಯಿಸಲಾಯಿತು.

ಈ ಸಂದರ್ಭದಲ್ಲಿ ಪ್ರಾಂತ ರೈತ ಸಂಘದ ಜಿಲ್ಲಾ ಅಧ್ಯಕ್ಷ ಟಿ.ಎಂ ವೆಂಕಟೇಶ್ ಮಾತನಾಡಿ, ಕೃಷಿ ರಂಗದಲ್ಲಿ ಹೈನುಗಾರಿಕೆ ಕ್ಷೇತ್ರ ಪ್ರಮುಖ ಪಾತ್ರ ನಿರ್ವಹಿಸುತ್ತಿದೆ. ಹೈನುಗಾರಿಕೆ ಬಹುತೇಕ ರೈತಾಪಿ ಕೃಷಿ ಕೂಲಿಕಾರರ ಕುಟುಂಬಗಳ ಆರ್ಥಿಕ ಮೂಲವಾಗಿದ್ದು, ಮಹಿಳೆಯರ ಶ್ರಮವೇ ಪ್ರಧಾನವಾಗಿರುವ ಈ ಹೈನುಗಾರಿಕೆಯು ಆನೇಕ ಬಿಕ್ಕಟ್ಟುಗಳನ್ನು ಎದುರುಸುತ್ತಿದೆ. ರಾಜ್ಯದಲ್ಲಿ ಸುಮಾರು 14900 ಪ್ರಾಥಮಿಕ ಹಾಲು ಉತ್ಪಾದಕರ ಸಹಕಾರಿ ಸಂಘಗಳ ಮೂಲಕ 22.5ಲಕ್ಷ ಸದಸ್ಯರಿಂದ ಪ್ರತಿದಿನ 1 ಕೋಟಿ ಲೀಟರ್ ಹಾಲು ಸಂಗ್ರಹವಾಗುತ್ತಿದೆ. ಆದರೆ ದಿನೇದಿನೇ ಹೆಚ್ಚುತ್ತಿರುವ ಪಶು ಆಹಾರ ಬೆಲೆ ಏರಿಕೆ ಇನ್ನಿತರೆ ಕಾರಣಗಳಿಂದ ಲೀಟರ್ ಹಾಲಿನ ಉತ್ಪಾದನೆ ವೆಚ್ಚವು ಸರಿ ಸುಮಾರು 45 ರೂ ಆಗಿದ್ದು ಜಿಲ್ಲಾ ಒಕ್ಕೂಟ ಮತ್ತು ರಾಜ್ಯ ಸರ್ಕಾರ ನೀಡುತ್ತಿರುವ ಪ್ರೋತ್ಸಾಹ ಧರ ಸೇರಿ 36 ರೂ ಉತ್ಪಾದಕರಿಗೆ ಪಾವತಿಸಲಾಗುತ್ತಿದ್ದು ಇದು ಯಾವುದಕ್ಕೂ ಸಾಲದಾಗಿದೆ ಎಂದು ಆರೋಪಿಸಿದರು.

ಹಾಲು ಉತ್ಪಾದಕರ ಪ್ರತಿ ಲೀಟರ್ ಮೇಲೆ 8 ರಿಂದ 9 ರೂ ನಷ್ಟವಾಗುತ್ತಿರುವ ಈ ಸಂದರ್ಭದಲ್ಲೇ ರಾಜ್ಯ ಸರ್ಕಾರ ಪ್ರೋತ್ಸಾಹ ಧನವನ್ನು 8 ತಿಂಗಳಿಂದ ಬಂದಿಲ್ಲ ತೀವ್ರ ಬರಗಾಲದಿಂದ ತತ್ತರಿಸಿರುವ ಹಾಲು ಉತ್ಪಾದಕರಿಗೆ ಗಾಯದ ಮೇಲೆ ಮತ್ತೊಂದು ಬರೆ ಎಳೆದಂತಾಗಿದೆ. ಇದರಿಂದ ಈಗಾಗಲೆ ಸರ್ಕಾರಗಳ ರೈತವಿರೋಧಿ ಧೋರಣೆಗಳಿಂದ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರುವ ಹಾಲು ಉತ್ಪಾದಕರು ಹೈನುಗಾರಿಕೆಯಿಂದಲು ದೂರ ಉಳಿಯಲು ಹೆಚ್ಚಾಗುತ್ತಿರುವುದರಿಂದ ಕೋಚಿಮುಲ್ ಇಳಿಕೆ ಮಾಡಿರುವ ಹಾಲಿನ ಧರದ ಆದೇಶವನ್ನು ವಾಪಸು ಪಡೆಯಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ನುಕ್ಕನಹಳ್ಳಿ ಶ್ರೀರಾಮ್ ಮಾತನಾಡಿ
ಸಹಕಾರಿ ತತ್ವದಲ್ಲಿ ಬಲಗೊಂಡಿರುವ ನಂದಿನಿ ಸಂಸ್ಥೆಯ ಮಾರುಕಟ್ಟೆಗಳನ್ನು ವಿಸ್ತರಿಸಿ, ಹಾಲು ಉತ್ಪಾದಕರನ್ನು ಸಂರಕ್ಷಿಸಿ, ಹೈನುಗಾರಿಕೆಯನ್ನು ಉಳಿಸಬೇಕಾಗಿದ್ದ ಸರ್ಕಾರವೇ ಈ ಕ್ಷೇತ್ರದಲ್ಲಿ ಬಹುರಾಷ್ಟ್ರೀಯ ಕಂಪನಿಯಗಳಿಗೆ ಮತ್ತು ಖಾಸಗಿ ಕಂಪನಿಗಳಿಗೆ ಅವಕಾಶ ಮಾಡಿಕೊಟ್ಟಂತಾಗುತ್ತದೆ ಕೂಡಲೆ ಬಾಕಿ ಉಳಿಸಿಕೊಂಡಿರುವ ಪ್ರೋತ್ಸಾಹದನ ಬಿಡುಗಡೆ ಮಾಡಬೇಕು ಸಹಕಾರ ಸಂಘಗಳು ಸರಬರಾಜು ಮಾಡಿರುವ ಹಾಲಿಗೆ ಒಕ್ಕೂಟದಿಂದ ನೀಡುವ ಹಣ ಸರಿಯಾದ ಸಮಯಕ್ಕೆ ನೀಡಬೇಕು ಪ್ರೋತ್ಸಾಹ ಧನ 5 ರೂಗಳ ಬದಲಿಗೆ 10 ರೂಗಳಿಗೆ ಏರಿಕೆ ಮಾಡಬೇಕು ಎಂದು ಒತ್ತಾಯಿಸಿದರು.

ಹಸುಗಳ ಬೆಲೆ ಏರಿಕೆ ಸೇರಿದಂತೆ ಉತ್ಪಾದನ ವೆಚ್ಚ ವಿಪರೀತ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಡಾ ಎಂ.ಎಸ್. ಸ್ವಾಮಿನಾಥನ್ ಆಯೋಗದ ಶಿಫಾರಸು ಪ್ರಕಾರ ಲೀಟರ್ ಹಾಲಿಗೆ 50 ರೂಪಾಯಿ ಬೆಲೆ ನಿಗಧಿ ಮಾಡಬೇಕು ಪ್ರತಿ ಜಿಲ್ಲೆಗೊಂದು ಕೆ.ಎಂ.ಎಫ್ ನಿಂದ ಹಾಲು ಉತ್ಪಾದಕರ ಮಕ್ಕಳಿಗೆ ವಿದ್ಯಾರ್ಥಿಗಳ ವಸತಿ ನಿಲಯ ಪ್ರಾರಂಭಿಸಬೇಕು ಪಶು ಆಹಾರಗಳ ಗುಣಮಟ್ಟ ಕಾಯ್ದುಕೊಳ್ಳಬೇಕು. ಪಶು ಆಹಾರಗಳ ಬೆಲೆ ಇಳಿಸಿ ಹಾಗೂ ಬೆಲೆ ಏರಿಕೆ ನಿಯಂತ್ರಣ ಮಾಡಲು ಕೆ.ಎಂ.ಎಫ್. ನಿಂದ ಸಬ್ಸಿಡಿಯನ್ನು ಹೆಚ್ಚಿಸಬೇಕು ಎಂದರು.

ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳ ಮಾರಾಟ ಕೇಂದ್ರಗಳನ್ನು ವ್ಯಾಪಕವಾಗಿ ಹೆಚ್ಚಿಸಬೇಕು ಹಾಲಿನ ಉತ್ಪನ್ನಗಳು ಮತ್ತು ಯಂತ್ರೋಪಕರಣಗಳ ಮೇಲಿನ ಜಿ.ಎಸ್.ಟಿ. ತೆರಿಗೆಯನ್ನು ಕೇಂದ್ರ ಸರ್ಕಾರ ರದ್ದು ಮಾಡಬೇಕು ಹೈನುಗಾರಿಕೆಗೆ ಸರ್ಕಾರ ಸಬ್ಸಿಡಿ ಸಹಿತ ಸಾಲವಿತರಣೆ ನೀಡಬೇಕು ಕೋಚಿಮುಲ್ ಒಕ್ಕೂಟದಲ್ಲಿ ನೇಮಕಾತಿ, ಟೆಂಡರ್‌ಗಳ ಹೆಸರಿನಲ್ಲಿ ಹಾಗೂ ಇತರೆ ಕಾಮಗಾರಿಗಳಲ್ಲಿ ಭ್ರಷ್ಟಾಚಾರ ತಡೆಗಟ್ಟಬೇಕು ಮತ್ತು ಸೂಕ್ತ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ಈ ಪ್ರತಿಭಟನೆ ನೇತೃತ್ವವನ್ನು ಸಂಘಟನೆ ಮುಖಂಡರಾದ ಅಲಹಳ್ಳಿ ವೆಂಕಟೇಶಪ್ಪ, ರಾಮರೆಡ್ಡಿ, ನಾರಾಯಣಸ್ವಾಮಿ, ಶ್ರೀನಿವಾಸ್, ರಾಜೇಶ್, ಚಿನ್ನಮ್ಮ, ರಾಜೇಂದ್ರ, ಮುನಿರತ್ನಮ್ಮ,ವಿವಿಧ ಹಾಲು ಉತ್ಪಾದಕರ ಸಂಘಗಳ ಅಧ್ಯಕ್ಷರಾದ ವಾನರಾಶಪ್ಪ, ಸರೋಜಮ್ಮ, ಮಂಜುನಾಥ್, ಚಂದ್ರಪ್ಪ, ಭೈರಪ್ಪ, ಮಂಜುನಾಥ್, ಸೂರ್ಯನಾರಾಯಣಪ್ಪ ಹಸಾಳ ಮಂಜುನಾಥ್, ನೌಕರರ ಸಂಘದ ಅಧ್ಯಕ್ಷ ಡಿ. ಶಿವರುದ್ರಯ್ಯ, ಕಾರ್ಯದರ್ಶಿ ಮಂಜುನಾಥ್, ಸದಸ್ಯರಾದ ಕೆಂಪಣ್ಣ, ಸುಬ್ಬಣ್ಣ, ಮುಂತಾದವರಿದ್ದರು.

Ramesh Babu

Journalist

Recent Posts

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

4 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

6 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

9 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

23 hours ago

ಕೃಷಿ ಹೊಂಡಗಳಲ್ಲಿ ಅನಾಹುತ ತಡೆಗೆ ಜಾಗೃತಿ ಸಭೆ: ಸುರಕ್ಷತೆಗೆ ಕಟ್ಟುನಿಟ್ಟಿನ ಸೂಚನೆ

ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…

1 day ago

0% ಭ್ರಷ್ಟಾಚಾರ: ಯಾರು ಕೂಡ ಸರ್ಕಾರಿ ಕಚೇರಿಗಳಲ್ಲಿ 10 ರೂಪಾಯಿ ಕೂಡಾ ಲಂಚ ನೀಡಬಾರದು- ಸಿಎಂ‌ ಡಿಕೆಶಿ

ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್‌ಪಿ, ಸಿಇಒ, ಡಿಎಫ್‌ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…

1 day ago