Categories: ಕೋಲಾರ

ಹಾಲು ಖರೀದಿ ಧರ ಇಳಿಕೆ ಆದೇಶ ವಾಪಸು ಪಡೆಯುವಂತೆ ಕೆ.ಪಿ.ಆರ್.ಎಸ್ ನೇತೃತ್ವದಲ್ಲಿ ಪ್ರತಿಭಟನೆ

ಕೋಲಾರ: ಹಾಲು ಉತ್ಪಾದಕರ ಖರೀದಿ ಧರ 2 ರೂ ಇಳಿಕೆ, ಸರ್ಕಾರ ಬಾಕಿ ಉಳಿಸಿಕೊಂಡಿರುವ ಹಾಲಿನ ಪ್ರೋತ್ಸಾಹ ದನ ಬಿಡುಗಡೆ ಸೇರಿದಂತೆ ಹೈನುಗಾರಿಕೆ ಉಳಿವಿಗಾಗಿ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ಹಾಲು‌ ಉತ್ಪಾದಕರ ನೇತೃತ್ವದಲ್ಲಿ ಸೋಮವಾರ ಕೋಚಿಮುಲ್ ಒಕ್ಕೂಟ ಮುಂದೆ ಪ್ರತಿಭಟನೆ ನಡೆಸಿ ಒತ್ತಾಯಿಸಲಾಯಿತು.

ಈ ಸಂದರ್ಭದಲ್ಲಿ ಪ್ರಾಂತ ರೈತ ಸಂಘದ ಜಿಲ್ಲಾ ಅಧ್ಯಕ್ಷ ಟಿ.ಎಂ ವೆಂಕಟೇಶ್ ಮಾತನಾಡಿ, ಕೃಷಿ ರಂಗದಲ್ಲಿ ಹೈನುಗಾರಿಕೆ ಕ್ಷೇತ್ರ ಪ್ರಮುಖ ಪಾತ್ರ ನಿರ್ವಹಿಸುತ್ತಿದೆ. ಹೈನುಗಾರಿಕೆ ಬಹುತೇಕ ರೈತಾಪಿ ಕೃಷಿ ಕೂಲಿಕಾರರ ಕುಟುಂಬಗಳ ಆರ್ಥಿಕ ಮೂಲವಾಗಿದ್ದು, ಮಹಿಳೆಯರ ಶ್ರಮವೇ ಪ್ರಧಾನವಾಗಿರುವ ಈ ಹೈನುಗಾರಿಕೆಯು ಆನೇಕ ಬಿಕ್ಕಟ್ಟುಗಳನ್ನು ಎದುರುಸುತ್ತಿದೆ. ರಾಜ್ಯದಲ್ಲಿ ಸುಮಾರು 14900 ಪ್ರಾಥಮಿಕ ಹಾಲು ಉತ್ಪಾದಕರ ಸಹಕಾರಿ ಸಂಘಗಳ ಮೂಲಕ 22.5ಲಕ್ಷ ಸದಸ್ಯರಿಂದ ಪ್ರತಿದಿನ 1 ಕೋಟಿ ಲೀಟರ್ ಹಾಲು ಸಂಗ್ರಹವಾಗುತ್ತಿದೆ. ಆದರೆ ದಿನೇದಿನೇ ಹೆಚ್ಚುತ್ತಿರುವ ಪಶು ಆಹಾರ ಬೆಲೆ ಏರಿಕೆ ಇನ್ನಿತರೆ ಕಾರಣಗಳಿಂದ ಲೀಟರ್ ಹಾಲಿನ ಉತ್ಪಾದನೆ ವೆಚ್ಚವು ಸರಿ ಸುಮಾರು 45 ರೂ ಆಗಿದ್ದು ಜಿಲ್ಲಾ ಒಕ್ಕೂಟ ಮತ್ತು ರಾಜ್ಯ ಸರ್ಕಾರ ನೀಡುತ್ತಿರುವ ಪ್ರೋತ್ಸಾಹ ಧರ ಸೇರಿ 36 ರೂ ಉತ್ಪಾದಕರಿಗೆ ಪಾವತಿಸಲಾಗುತ್ತಿದ್ದು ಇದು ಯಾವುದಕ್ಕೂ ಸಾಲದಾಗಿದೆ ಎಂದು ಆರೋಪಿಸಿದರು.

ಹಾಲು ಉತ್ಪಾದಕರ ಪ್ರತಿ ಲೀಟರ್ ಮೇಲೆ 8 ರಿಂದ 9 ರೂ ನಷ್ಟವಾಗುತ್ತಿರುವ ಈ ಸಂದರ್ಭದಲ್ಲೇ ರಾಜ್ಯ ಸರ್ಕಾರ ಪ್ರೋತ್ಸಾಹ ಧನವನ್ನು 8 ತಿಂಗಳಿಂದ ಬಂದಿಲ್ಲ ತೀವ್ರ ಬರಗಾಲದಿಂದ ತತ್ತರಿಸಿರುವ ಹಾಲು ಉತ್ಪಾದಕರಿಗೆ ಗಾಯದ ಮೇಲೆ ಮತ್ತೊಂದು ಬರೆ ಎಳೆದಂತಾಗಿದೆ. ಇದರಿಂದ ಈಗಾಗಲೆ ಸರ್ಕಾರಗಳ ರೈತವಿರೋಧಿ ಧೋರಣೆಗಳಿಂದ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರುವ ಹಾಲು ಉತ್ಪಾದಕರು ಹೈನುಗಾರಿಕೆಯಿಂದಲು ದೂರ ಉಳಿಯಲು ಹೆಚ್ಚಾಗುತ್ತಿರುವುದರಿಂದ ಕೋಚಿಮುಲ್ ಇಳಿಕೆ ಮಾಡಿರುವ ಹಾಲಿನ ಧರದ ಆದೇಶವನ್ನು ವಾಪಸು ಪಡೆಯಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ನುಕ್ಕನಹಳ್ಳಿ ಶ್ರೀರಾಮ್ ಮಾತನಾಡಿ
ಸಹಕಾರಿ ತತ್ವದಲ್ಲಿ ಬಲಗೊಂಡಿರುವ ನಂದಿನಿ ಸಂಸ್ಥೆಯ ಮಾರುಕಟ್ಟೆಗಳನ್ನು ವಿಸ್ತರಿಸಿ, ಹಾಲು ಉತ್ಪಾದಕರನ್ನು ಸಂರಕ್ಷಿಸಿ, ಹೈನುಗಾರಿಕೆಯನ್ನು ಉಳಿಸಬೇಕಾಗಿದ್ದ ಸರ್ಕಾರವೇ ಈ ಕ್ಷೇತ್ರದಲ್ಲಿ ಬಹುರಾಷ್ಟ್ರೀಯ ಕಂಪನಿಯಗಳಿಗೆ ಮತ್ತು ಖಾಸಗಿ ಕಂಪನಿಗಳಿಗೆ ಅವಕಾಶ ಮಾಡಿಕೊಟ್ಟಂತಾಗುತ್ತದೆ ಕೂಡಲೆ ಬಾಕಿ ಉಳಿಸಿಕೊಂಡಿರುವ ಪ್ರೋತ್ಸಾಹದನ ಬಿಡುಗಡೆ ಮಾಡಬೇಕು ಸಹಕಾರ ಸಂಘಗಳು ಸರಬರಾಜು ಮಾಡಿರುವ ಹಾಲಿಗೆ ಒಕ್ಕೂಟದಿಂದ ನೀಡುವ ಹಣ ಸರಿಯಾದ ಸಮಯಕ್ಕೆ ನೀಡಬೇಕು ಪ್ರೋತ್ಸಾಹ ಧನ 5 ರೂಗಳ ಬದಲಿಗೆ 10 ರೂಗಳಿಗೆ ಏರಿಕೆ ಮಾಡಬೇಕು ಎಂದು ಒತ್ತಾಯಿಸಿದರು.

ಹಸುಗಳ ಬೆಲೆ ಏರಿಕೆ ಸೇರಿದಂತೆ ಉತ್ಪಾದನ ವೆಚ್ಚ ವಿಪರೀತ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಡಾ ಎಂ.ಎಸ್. ಸ್ವಾಮಿನಾಥನ್ ಆಯೋಗದ ಶಿಫಾರಸು ಪ್ರಕಾರ ಲೀಟರ್ ಹಾಲಿಗೆ 50 ರೂಪಾಯಿ ಬೆಲೆ ನಿಗಧಿ ಮಾಡಬೇಕು ಪ್ರತಿ ಜಿಲ್ಲೆಗೊಂದು ಕೆ.ಎಂ.ಎಫ್ ನಿಂದ ಹಾಲು ಉತ್ಪಾದಕರ ಮಕ್ಕಳಿಗೆ ವಿದ್ಯಾರ್ಥಿಗಳ ವಸತಿ ನಿಲಯ ಪ್ರಾರಂಭಿಸಬೇಕು ಪಶು ಆಹಾರಗಳ ಗುಣಮಟ್ಟ ಕಾಯ್ದುಕೊಳ್ಳಬೇಕು. ಪಶು ಆಹಾರಗಳ ಬೆಲೆ ಇಳಿಸಿ ಹಾಗೂ ಬೆಲೆ ಏರಿಕೆ ನಿಯಂತ್ರಣ ಮಾಡಲು ಕೆ.ಎಂ.ಎಫ್. ನಿಂದ ಸಬ್ಸಿಡಿಯನ್ನು ಹೆಚ್ಚಿಸಬೇಕು ಎಂದರು.

ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳ ಮಾರಾಟ ಕೇಂದ್ರಗಳನ್ನು ವ್ಯಾಪಕವಾಗಿ ಹೆಚ್ಚಿಸಬೇಕು ಹಾಲಿನ ಉತ್ಪನ್ನಗಳು ಮತ್ತು ಯಂತ್ರೋಪಕರಣಗಳ ಮೇಲಿನ ಜಿ.ಎಸ್.ಟಿ. ತೆರಿಗೆಯನ್ನು ಕೇಂದ್ರ ಸರ್ಕಾರ ರದ್ದು ಮಾಡಬೇಕು ಹೈನುಗಾರಿಕೆಗೆ ಸರ್ಕಾರ ಸಬ್ಸಿಡಿ ಸಹಿತ ಸಾಲವಿತರಣೆ ನೀಡಬೇಕು ಕೋಚಿಮುಲ್ ಒಕ್ಕೂಟದಲ್ಲಿ ನೇಮಕಾತಿ, ಟೆಂಡರ್‌ಗಳ ಹೆಸರಿನಲ್ಲಿ ಹಾಗೂ ಇತರೆ ಕಾಮಗಾರಿಗಳಲ್ಲಿ ಭ್ರಷ್ಟಾಚಾರ ತಡೆಗಟ್ಟಬೇಕು ಮತ್ತು ಸೂಕ್ತ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ಈ ಪ್ರತಿಭಟನೆ ನೇತೃತ್ವವನ್ನು ಸಂಘಟನೆ ಮುಖಂಡರಾದ ಅಲಹಳ್ಳಿ ವೆಂಕಟೇಶಪ್ಪ, ರಾಮರೆಡ್ಡಿ, ನಾರಾಯಣಸ್ವಾಮಿ, ಶ್ರೀನಿವಾಸ್, ರಾಜೇಶ್, ಚಿನ್ನಮ್ಮ, ರಾಜೇಂದ್ರ, ಮುನಿರತ್ನಮ್ಮ,ವಿವಿಧ ಹಾಲು ಉತ್ಪಾದಕರ ಸಂಘಗಳ ಅಧ್ಯಕ್ಷರಾದ ವಾನರಾಶಪ್ಪ, ಸರೋಜಮ್ಮ, ಮಂಜುನಾಥ್, ಚಂದ್ರಪ್ಪ, ಭೈರಪ್ಪ, ಮಂಜುನಾಥ್, ಸೂರ್ಯನಾರಾಯಣಪ್ಪ ಹಸಾಳ ಮಂಜುನಾಥ್, ನೌಕರರ ಸಂಘದ ಅಧ್ಯಕ್ಷ ಡಿ. ಶಿವರುದ್ರಯ್ಯ, ಕಾರ್ಯದರ್ಶಿ ಮಂಜುನಾಥ್, ಸದಸ್ಯರಾದ ಕೆಂಪಣ್ಣ, ಸುಬ್ಬಣ್ಣ, ಮುಂತಾದವರಿದ್ದರು.

Ramesh Babu

Journalist

Recent Posts

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

3 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

4 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

5 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

6 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

13 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

2 days ago