Categories: ಕೋಲಾರ

ಹಾಲು ಖರೀದಿ ಧರ ಇಳಿಕೆ ಆದೇಶ ವಾಪಸು ಪಡೆದು ಉತ್ಪಾದಕರ ರಕ್ಷಣೆಗೆ ನಿಲ್ಲುವಂತೆ ಒಕ್ಕೂಟಕ್ಕೆ ಒತ್ತಾಯ

ಕೋಲಾರ: ಕೋಚಿಮುಲ್‌ ಒಕ್ಕೂಟವು ಹಾಲು ಉತ್ಪಾದಕರಿಂದ ಖರೀದಿಸುವ ಹಾಲಿನ ಧರ ಲೀಟರ್ ಗೆ 2 ರೂಪಾಯಿ ಇಳಿಕೆ ಮಾಡಿರುವ ಆಡಳಿತ ಮಂಡಳಿ ನಿರ್ಧಾರವನ್ನು ಕೂಡಲೇ ವಾಪಸ್‌ ಪಡೆದು ಜಿಲ್ಲೆಯ ಹಾಲು ಉತ್ಪಾದಕರನ್ನು ರಕ್ಷಣೆಗೆ ಒಕ್ಕೂಟವು ನಿಲ್ಲುವಂತೆ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಸಿ.ಅಮರೇಶ್ ಒತ್ತಾಯಿಸಿದರು.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಅವಿಭಜಿತ ಕೋಲಾರ ಜಿಲ್ಲೆಯಲ್ಲಿನ ಜನರ ಬದುಕು ಹೈನುಗಾರಿಕೆಯಾಗಿದೆ. ಇಲ್ಲಿನ ರೈತರು, ಕೂಲಿಕಾರರು ಹೈನುಗಾರಿಕೆಯನ್ನೇ ನಂಬಿ ತಮ್ಮ ಕುಟುಂಬಗಳ ಬದುಕನ್ನು ರೂಪಿಸಿಕೊಂಡಿದ್ದಾರೆ. ಪಶು ಆಹಾರ ಸೇರಿದಂತೆ ಹೈನುಗಾರಿಕೆಗೆ ಬೇಕಾದ ವಸ್ತುಗಳ ಬೆಲೆ ಏರಿಕೆಯ ಬಗ್ಗೆ ನಿಯಂತ್ರಿಸಲು ಸಾಧ್ಯವಾಗದ ಒಕ್ಕೂಟ ಮತ್ತು ಸರಕಾರಗಳು ರೈತರ ಹಾಲಿನ ಬೆಲೆ ಕಡಿಮೆ ಮಾಡಿರುವುದಕ್ಕೆ ಯಾವುದೇ ನೈತಿಕತೆ ಇಲ್ಲ. ಈ ಕೂಡಲೇ ಆದೇಶವನ್ನು ವಾಪಸು ಪಡೆಯುವಂತೆ ಒಕ್ಕೂಟವನ್ನು ಒತ್ತಾಯಿಸಿದರು.

ಕೋಲಾರ ಜಿಲ್ಲೆಯಲ್ಲಿ ಈ ವರ್ಷ ಹೇಳಿಕೊಳ್ಳುವಷ್ಟು ಮಳೆಯಾಗಿಲ್ಲ. ಪ್ರತಿ ವರ್ಷದಂತೆ ಈ ವರ್ಷವೂ ಬರಗಾಲದ ಪರಿಸ್ಥಿತಿ ಕಾಣುತ್ತಿದ್ದೇವೆ. ರಾಸುಗಳಿಗೆ ಮೇವಿನ ಕೊರತೆ ಜತೆಗೆ ಪಶು ಆಹಾರದ ಬೆಲೆ ಹೆಚ್ಚಳದಿಂದ ಉತ್ಪಾದಕರು ಜಾನುವಾರುಗಳನ್ನು ನಿರ್ವಹಣೆ ಮಾಡಿ ಹಾಲು ಉತ್ಪಾದಿಸುವುದು ತುಂಬಾ ಕಷ್ಟದ ಕೆಲಸವಾಗಿದೆ. ಇಂತಹ ಸಂದರ್ಭಗಳಲ್ಲಿ ಹಾಲಿನ ಬೆಲೆ ಕಡಿಮೆ ಮಾಡಿರುವುದು ಸರಿಯಲ್ಲ ಎಂದು ಆಡಳಿತ ಮಂಡಳಿಯ ಕ್ರಮವನ್ನು ಖಂಡಿಸಿದರು.

ರೈತರು ಉತ್ಪಾದಿಸುವ ಹಾಲಿನ ಉತ್ಪನ್ನಗಳಿಗೆ ಸರಿಯಾದ ಮಾರುಕಟ್ಟೆ ವ್ಯವಸ್ಥೆ ಸ್ಥಾಪಿಸಲು ಸಾಧ್ಯವಾಗದ ಕೆಎಂಎಫ್‌ ಮತ್ತು ಕೋಚಿಮುಲ್ ಒಕ್ಕೂಟವು ಹೆಚ್ಚುವರಿ ಹಾಲಿನ ಸಂಗ್ರಹದ ಹೆಸರಿನಲ್ಲಿ ಏಕಾಏಕಿ ಹಾಲಿನ ದರ ಕಡಿಮೆ ಮಾಡಿದೆ. ಜೊತೆಗೆ ಗ್ರಾಹಕರಿಗೂ ಪ್ಯಾಕೆಟ್ ಮೇಲೆ 50 ಎಂಎಲ್ ಹಾಲು ಹೆಚ್ಚುವರಿಯಾಗಿ ನೀಡಿ 2 ರೂಪಾಯಿ ಹೆಚ್ಚಳ ಮಾಡಿದ್ದು ಅದು ಕೂಡ ಒಕ್ಕೂಟಕ್ಕೆ ಲಾಭವಾಗಿದೆ ಹೊರತು ಉತ್ಪಾದಕರಿಗೆ ಯಾವುದೇ ಲಾಭವಾಗಿಲ್ಲ ಇರುವ ಬೆಲೆಯಲ್ಲೇ ಕಡಿಮೆ ಮಾಡಿದ್ದಾರೆ ಎಂದು ದೂರಿದರು.

ರೈತರ ಮತ್ತು ಜಿಲ್ಲೆಯ ಹೈನುಗಾರಿಕೆಯ ಹಿತದೃಷ್ಟಿಯಿಂದ ಕೂಡಲೇ ಆಡಳಿತ ಮಂಡಳಿ ಹಾಲಿನ ದರ ಇಳಿಕೆಯ ಆದೇಶವನ್ನು ವಾಪಸ್‌ ಪಡೆದು ಇವತ್ತಿನ ಹೈನುಗಾರಿಕೆ ನಿರ್ವಹಣೆಗೆ ಅನುಗುಣವಾಗಿ ಪ್ರತಿ ಲೀಟರ್‌ ಹಾಲಿಗೆ ಕನಿಷ್ಠ 40 ರೂ ನಿಗದಿ ಮಾಡಬೇಕು ಮತ್ತು ಕೋಚಿಮುಲ್‌ ವತಿಯಿಂದ ಸರಬರಾಜು ಆಗುವ ಪಶು ಆಹಾರ ಬೆಲೆ ಕಡಿಮೆ ಮಾಡಲು ಕೋಚಿಮುಲ್‌ ನಿರ್ದೇಶಕರು ಮತ್ತು ಆಡಳಿತ ಮಂಡಳಿ ಕ್ರಮ ವಹಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಹಾಲು ಉತ್ಪಾದಕರ ಉಳಿವು ಕಷ್ಟವಾಗುತ್ತದೆ ಎಂದು ಸಿ.ಅಮರೇಶ್ ತಿಳಿಸಿದರು

Ramesh Babu

Journalist

Recent Posts

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

5 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

16 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

17 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

17 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

19 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

23 hours ago