ಕೋಲಾರ: ಕೋಚಿಮುಲ್ ಒಕ್ಕೂಟವು ಹಾಲು ಉತ್ಪಾದಕರಿಂದ ಖರೀದಿಸುವ ಹಾಲಿನ ಧರ ಲೀಟರ್ ಗೆ 2 ರೂಪಾಯಿ ಇಳಿಕೆ ಮಾಡಿರುವ ಆಡಳಿತ ಮಂಡಳಿ ನಿರ್ಧಾರವನ್ನು ಕೂಡಲೇ ವಾಪಸ್ ಪಡೆದು ಜಿಲ್ಲೆಯ ಹಾಲು ಉತ್ಪಾದಕರನ್ನು ರಕ್ಷಣೆಗೆ ಒಕ್ಕೂಟವು ನಿಲ್ಲುವಂತೆ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಸಿ.ಅಮರೇಶ್ ಒತ್ತಾಯಿಸಿದರು.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಅವಿಭಜಿತ ಕೋಲಾರ ಜಿಲ್ಲೆಯಲ್ಲಿನ ಜನರ ಬದುಕು ಹೈನುಗಾರಿಕೆಯಾಗಿದೆ. ಇಲ್ಲಿನ ರೈತರು, ಕೂಲಿಕಾರರು ಹೈನುಗಾರಿಕೆಯನ್ನೇ ನಂಬಿ ತಮ್ಮ ಕುಟುಂಬಗಳ ಬದುಕನ್ನು ರೂಪಿಸಿಕೊಂಡಿದ್ದಾರೆ. ಪಶು ಆಹಾರ ಸೇರಿದಂತೆ ಹೈನುಗಾರಿಕೆಗೆ ಬೇಕಾದ ವಸ್ತುಗಳ ಬೆಲೆ ಏರಿಕೆಯ ಬಗ್ಗೆ ನಿಯಂತ್ರಿಸಲು ಸಾಧ್ಯವಾಗದ ಒಕ್ಕೂಟ ಮತ್ತು ಸರಕಾರಗಳು ರೈತರ ಹಾಲಿನ ಬೆಲೆ ಕಡಿಮೆ ಮಾಡಿರುವುದಕ್ಕೆ ಯಾವುದೇ ನೈತಿಕತೆ ಇಲ್ಲ. ಈ ಕೂಡಲೇ ಆದೇಶವನ್ನು ವಾಪಸು ಪಡೆಯುವಂತೆ ಒಕ್ಕೂಟವನ್ನು ಒತ್ತಾಯಿಸಿದರು.
ಕೋಲಾರ ಜಿಲ್ಲೆಯಲ್ಲಿ ಈ ವರ್ಷ ಹೇಳಿಕೊಳ್ಳುವಷ್ಟು ಮಳೆಯಾಗಿಲ್ಲ. ಪ್ರತಿ ವರ್ಷದಂತೆ ಈ ವರ್ಷವೂ ಬರಗಾಲದ ಪರಿಸ್ಥಿತಿ ಕಾಣುತ್ತಿದ್ದೇವೆ. ರಾಸುಗಳಿಗೆ ಮೇವಿನ ಕೊರತೆ ಜತೆಗೆ ಪಶು ಆಹಾರದ ಬೆಲೆ ಹೆಚ್ಚಳದಿಂದ ಉತ್ಪಾದಕರು ಜಾನುವಾರುಗಳನ್ನು ನಿರ್ವಹಣೆ ಮಾಡಿ ಹಾಲು ಉತ್ಪಾದಿಸುವುದು ತುಂಬಾ ಕಷ್ಟದ ಕೆಲಸವಾಗಿದೆ. ಇಂತಹ ಸಂದರ್ಭಗಳಲ್ಲಿ ಹಾಲಿನ ಬೆಲೆ ಕಡಿಮೆ ಮಾಡಿರುವುದು ಸರಿಯಲ್ಲ ಎಂದು ಆಡಳಿತ ಮಂಡಳಿಯ ಕ್ರಮವನ್ನು ಖಂಡಿಸಿದರು.
ರೈತರು ಉತ್ಪಾದಿಸುವ ಹಾಲಿನ ಉತ್ಪನ್ನಗಳಿಗೆ ಸರಿಯಾದ ಮಾರುಕಟ್ಟೆ ವ್ಯವಸ್ಥೆ ಸ್ಥಾಪಿಸಲು ಸಾಧ್ಯವಾಗದ ಕೆಎಂಎಫ್ ಮತ್ತು ಕೋಚಿಮುಲ್ ಒಕ್ಕೂಟವು ಹೆಚ್ಚುವರಿ ಹಾಲಿನ ಸಂಗ್ರಹದ ಹೆಸರಿನಲ್ಲಿ ಏಕಾಏಕಿ ಹಾಲಿನ ದರ ಕಡಿಮೆ ಮಾಡಿದೆ. ಜೊತೆಗೆ ಗ್ರಾಹಕರಿಗೂ ಪ್ಯಾಕೆಟ್ ಮೇಲೆ 50 ಎಂಎಲ್ ಹಾಲು ಹೆಚ್ಚುವರಿಯಾಗಿ ನೀಡಿ 2 ರೂಪಾಯಿ ಹೆಚ್ಚಳ ಮಾಡಿದ್ದು ಅದು ಕೂಡ ಒಕ್ಕೂಟಕ್ಕೆ ಲಾಭವಾಗಿದೆ ಹೊರತು ಉತ್ಪಾದಕರಿಗೆ ಯಾವುದೇ ಲಾಭವಾಗಿಲ್ಲ ಇರುವ ಬೆಲೆಯಲ್ಲೇ ಕಡಿಮೆ ಮಾಡಿದ್ದಾರೆ ಎಂದು ದೂರಿದರು.
ರೈತರ ಮತ್ತು ಜಿಲ್ಲೆಯ ಹೈನುಗಾರಿಕೆಯ ಹಿತದೃಷ್ಟಿಯಿಂದ ಕೂಡಲೇ ಆಡಳಿತ ಮಂಡಳಿ ಹಾಲಿನ ದರ ಇಳಿಕೆಯ ಆದೇಶವನ್ನು ವಾಪಸ್ ಪಡೆದು ಇವತ್ತಿನ ಹೈನುಗಾರಿಕೆ ನಿರ್ವಹಣೆಗೆ ಅನುಗುಣವಾಗಿ ಪ್ರತಿ ಲೀಟರ್ ಹಾಲಿಗೆ ಕನಿಷ್ಠ 40 ರೂ ನಿಗದಿ ಮಾಡಬೇಕು ಮತ್ತು ಕೋಚಿಮುಲ್ ವತಿಯಿಂದ ಸರಬರಾಜು ಆಗುವ ಪಶು ಆಹಾರ ಬೆಲೆ ಕಡಿಮೆ ಮಾಡಲು ಕೋಚಿಮುಲ್ ನಿರ್ದೇಶಕರು ಮತ್ತು ಆಡಳಿತ ಮಂಡಳಿ ಕ್ರಮ ವಹಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಹಾಲು ಉತ್ಪಾದಕರ ಉಳಿವು ಕಷ್ಟವಾಗುತ್ತದೆ ಎಂದು ಸಿ.ಅಮರೇಶ್ ತಿಳಿಸಿದರು
ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್ಎಸ್ಎಸ್ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…
ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…
"ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಕಾಯ್ದೆ, 2025" ಗ್ರಾಮೀಣ ಭಾರತದ ಸಮಗ್ರ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣದಲ್ಲಿ ಪತ್ತೆಹಚ್ಚಲಾಗಿದ್ದ ಬೆಲೆಬಾಳುವ ಚಿನ್ನಾಭರಣ ಹಾಗೂ ನಗದು…