ಕೋಲಾರ: ಜಿಲ್ಲೆಯ ಬಹುತೇಕ ಜನರ ಜೀವನಾಧಾರ ಹೈನುಗಾರಿಕೆಯಾಗಿದೆ. ಮಹಿಳೆಯರು ಮತ್ತು ರೈತರ ಬೆವರು ಇದರಲ್ಲಿ ಅಡಗಿದೆ.ಹಾಲಿನ ಹಣ ತಿಂದವರು ಯಾವುದೇ ಕಾರಣಕ್ಕೂ ಉದ್ದಾರವಾಗಲ್ಲ ಎಂದು ಕೋಮುಲ್ ನಿರ್ದೇಶಕ ಚಂಜಿಮಲೆ ಬಿ ರಮೇಶ್ ತಿಳಿಸಿದರು.
ತಾಲೂಕಿನ ಚಂಜಿಮಲೆ ಹಾಲು ಉತ್ಪಾದಕರ ಸಹಕಾರ ಸಂಘದ 2024-25 ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯನ್ನು ಬುಧವಾರ ಉದ್ಘಾಟಿಸಿ ಮಾತನಾಡಿದ ಅವರು ಹಾಲಿಗೂ ನೀರಿಗೂ ತುಂಬಾ ವ್ಯತ್ಯಾಸವಿದೆ. ಕಲಬೆರಕೆ ಮಾಡಬೇಡಿ. ಯಾವುದಾದರೂ ತಪ್ಪು ಕಂಡುಬಂದರೆ ಕೂಡಲೇ ಪ್ರಶ್ನೆ ಮಾಡಬೇಕು. ಹಾಲಿನ ದುಡ್ಡು ತಿನ್ನಂದರೆ ರೈತರು ಮಹಿಳೆಯರ ಶಾಪ ತಟ್ಟುತ್ತದೆ ಹಾಲು ದುಡ್ಡು ಯಾವುದೇ ಕಾರಣಕ್ಕೂ ಅನ್ಯಾಯವಾಗದಂತೆ ನೋಡಿಕೊಳ್ಳಬೇಕು ಎಂದರು.
ಚಂಜಿಮಲೆ ಡೇರಿಯಲ್ಲಿ ಈ ಸಾಲಿನಲ್ಲಿ 13 ಲಕ್ಷ ವ್ಯಾಪಾರ ಗಳಿಸಿದ್ದು ಅದರಲ್ಲಿ 7.46 ಲಕ್ಷದಷ್ಟು ನಿವ್ವಳ ಲಾಭಗಳಿಸಿದೆ ಉತ್ಪಾದಕರು ಡೇರಿಗೆ ಗುಣಮಟ್ಟದ ಹಾಲು ಪೂರೈಕೆ ಮಾಡಿ ಉತ್ತಮ ಲಾಭಾಂಶವನ್ನು ಪಡೆಯಬೇಕು ಕಾಲಕಾಲಕ್ಕೆ ರಾಸುಗಳಿಗೆ ವಿಮೆ, ವಾಕ್ಸಿನ್ ಮಾಡಿಸಬೇಕು ಜೊತೆಗೆ ಉತ್ಪಾದಕರು ಕಡ್ಡಾಯವಾಗಿ ಯಶಸ್ವಿನಿ ಯೋಜನೆ ಮಾಡಿಸಿ ಅದರ ಪ್ರಯೋಜನವನ್ನು ಪಡೆಯಬೇಕು ಕೋಮುಲ್ ವತಿಯಿಂದ ಎಂವಿಕೆ ಡೇರಿ, ಸೋಲಾರ್ ಘಟಕದ ಮೂಲಕ ಹಾಲು ಉತ್ಪಾದಕರಿಗೆ ಅನುಕೂಲವಾಗುವಂತೆ ಒಕ್ಕೂಟ ಮಾಡಲಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ನಿರ್ದೇಶಕ ಮುನೇಶ್ ಮಾತನಾಡಿ ಒಕ್ಕೂಟಕ್ಕೆ ಸಂಘಗಳು ಆಧಾರಸ್ಥಂಭವಾಗಿದ್ದು ಯಾವುದೇ ಕಾರಣಕ್ಕೂ ಒಕ್ಕೂಟದಲ್ಲಿ ಹಣ ಪೋಲು ಆಗದಂತೆ ಚಂಜಿಮಲೆ ಡೇರಿಯಿಂದ ಪ್ರತಿನಿಧಿಸಿ ಆಯ್ಕೆಯಾದ ಕೋಮುಲ್ ನೂತನ ನಿರ್ದೇಶಕರು ಕ್ರಮ ವಹಿಸಬೇಕಾಗಿದೆ ಮಹಿಳೆಯರು ರೈತರ ಧ್ವನಿಯಾಗಿ ಕೋಮುಲ್ ಆಡಳಿತ ಮಂಡಳಿ ನಡೆದುಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಈ ಸಂದರ್ಭದಲ್ಲಿ ಚಂಜಿಮಲೆ ಡೇರಿ ಉಪಾಧ್ಯಕ್ಷ ಎನ್ ಶ್ರೀರಾಮಪ್ಪ, ನಿರ್ದೇಶಕರಾದ ಇ ಚಂದ್ರಪ್ಪ, ನರಸಿಂಹಪ್ಪ, ಪ್ರಸನ್ನ, ಅಲ್ಲಾಭಕಾಷ್, ದೇವರಾಜ್, ರಾಜಪ್ಪ, ಪುಷ್ಪ, ಗೌರಮ್ಮ, ಮಾಜಿ ಅಧ್ಯಕ್ಷ ಗೋಪಾಲಕೃಷ್ಣ, ಕಾರ್ಯದರ್ಶಿ ಸಿ.ಎನ್ ಪಾಪಣ್ಣ, ಹಾಲು ಪರೀಕ್ಷಕ ಶ್ರೀನಿವಾಸಯ್ಯ, ಸಹಾಯಕ ಮೋಹನ್ ಸೇರಿದಂತೆ ಹಾಲು ಉತ್ಪಾದಕರ ಗ್ರಾಮಸ್ಥರು ಇದ್ದರು.
ರಾಜ್ಯದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…
ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…
ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…
ಕೋಲಾರ: ಅಮೆಜಾನ್ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…
ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್ಸ್ಪೆಕ್ಟರ್ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…
ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್…