Categories: ಕೋಲಾರ

ಹಾಲು ದುಡ್ಡು ತಿಂದವರು ಯಾರು ಉದ್ದಾರ ಆಗಲ್ಲ- ಕೋಮುಲ್ ನಿರ್ದೇಶಕ ಚಂಜಿಮಲೆ ರಮೇಶ್

ಕೋಲಾರ: ಜಿಲ್ಲೆಯ ಬಹುತೇಕ ಜನರ ಜೀವನಾಧಾರ ಹೈನುಗಾರಿಕೆಯಾಗಿದೆ. ಮಹಿಳೆಯರು ಮತ್ತು ರೈತರ ಬೆವರು ಇದರಲ್ಲಿ ಅಡಗಿದೆ.ಹಾಲಿನ ಹಣ ತಿಂದವರು ಯಾವುದೇ ಕಾರಣಕ್ಕೂ ಉದ್ದಾರವಾಗಲ್ಲ ಎಂದು ಕೋಮುಲ್ ನಿರ್ದೇಶಕ ಚಂಜಿಮಲೆ ಬಿ ರಮೇಶ್ ತಿಳಿಸಿದರು.

ತಾಲೂಕಿನ ಚಂಜಿಮಲೆ ಹಾಲು ಉತ್ಪಾದಕರ ಸಹಕಾರ ಸಂಘದ 2024-25 ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯನ್ನು ಬುಧವಾರ ಉದ್ಘಾಟಿಸಿ ಮಾತನಾಡಿದ ಅವರು ಹಾಲಿಗೂ ನೀರಿಗೂ ತುಂಬಾ ವ್ಯತ್ಯಾಸವಿದೆ. ಕಲಬೆರಕೆ ಮಾಡಬೇಡಿ. ಯಾವುದಾದರೂ ತಪ್ಪು ಕಂಡುಬಂದರೆ ಕೂಡಲೇ ಪ್ರಶ್ನೆ ಮಾಡಬೇಕು. ಹಾಲಿನ ದುಡ್ಡು ತಿನ್ನಂದರೆ ರೈತರು ಮಹಿಳೆಯರ ಶಾಪ ತಟ್ಟುತ್ತದೆ ಹಾಲು ದುಡ್ಡು ಯಾವುದೇ ಕಾರಣಕ್ಕೂ ಅನ್ಯಾಯವಾಗದಂತೆ ನೋಡಿಕೊಳ್ಳಬೇಕು ಎಂದರು.

ಚಂಜಿಮಲೆ ಡೇರಿಯಲ್ಲಿ ಈ ಸಾಲಿನಲ್ಲಿ 13 ಲಕ್ಷ ವ್ಯಾಪಾರ ಗಳಿಸಿದ್ದು ಅದರಲ್ಲಿ 7.46 ಲಕ್ಷದಷ್ಟು ನಿವ್ವಳ ಲಾಭಗಳಿಸಿದೆ ಉತ್ಪಾದಕರು ಡೇರಿಗೆ ಗುಣಮಟ್ಟದ ಹಾಲು ಪೂರೈಕೆ ಮಾಡಿ ಉತ್ತಮ ಲಾಭಾಂಶವನ್ನು ಪಡೆಯಬೇಕು ಕಾಲಕಾಲಕ್ಕೆ ರಾಸುಗಳಿಗೆ ವಿಮೆ, ವಾಕ್ಸಿನ್ ಮಾಡಿಸಬೇಕು ಜೊತೆಗೆ ಉತ್ಪಾದಕರು ಕಡ್ಡಾಯವಾಗಿ ಯಶಸ್ವಿನಿ ಯೋಜನೆ ಮಾಡಿಸಿ ಅದರ ಪ್ರಯೋಜನವನ್ನು ಪಡೆಯಬೇಕು ಕೋಮುಲ್ ವತಿಯಿಂದ ಎಂವಿಕೆ ಡೇರಿ, ಸೋಲಾರ್ ಘಟಕದ ಮೂಲಕ ಹಾಲು ಉತ್ಪಾದಕರಿಗೆ ಅನುಕೂಲವಾಗುವಂತೆ ಒಕ್ಕೂಟ ಮಾಡಲಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ನಿರ್ದೇಶಕ ಮುನೇಶ್ ಮಾತನಾಡಿ ಒಕ್ಕೂಟಕ್ಕೆ ಸಂಘಗಳು ಆಧಾರಸ್ಥಂಭವಾಗಿದ್ದು ಯಾವುದೇ ಕಾರಣಕ್ಕೂ ಒಕ್ಕೂಟದಲ್ಲಿ ಹಣ ಪೋಲು ಆಗದಂತೆ ಚಂಜಿಮಲೆ ಡೇರಿಯಿಂದ ಪ್ರತಿನಿಧಿಸಿ ಆಯ್ಕೆಯಾದ ಕೋಮುಲ್ ನೂತನ ನಿರ್ದೇಶಕರು ಕ್ರಮ ವಹಿಸಬೇಕಾಗಿದೆ ಮಹಿಳೆಯರು ರೈತರ ಧ್ವನಿಯಾಗಿ ಕೋಮುಲ್ ಆಡಳಿತ ಮಂಡಳಿ ನಡೆದುಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಈ ಸಂದರ್ಭದಲ್ಲಿ ಚಂಜಿಮಲೆ ಡೇರಿ ಉಪಾಧ್ಯಕ್ಷ ಎನ್ ಶ್ರೀರಾಮಪ್ಪ, ನಿರ್ದೇಶಕರಾದ ಇ ಚಂದ್ರಪ್ಪ, ನರಸಿಂಹಪ್ಪ, ಪ್ರಸನ್ನ, ಅಲ್ಲಾಭಕಾಷ್, ದೇವರಾಜ್, ರಾಜಪ್ಪ, ಪುಷ್ಪ, ಗೌರಮ್ಮ, ಮಾಜಿ ಅಧ್ಯಕ್ಷ ಗೋಪಾಲಕೃಷ್ಣ, ಕಾರ್ಯದರ್ಶಿ ಸಿ.ಎನ್ ಪಾಪಣ್ಣ, ಹಾಲು ಪರೀಕ್ಷಕ ಶ್ರೀನಿವಾಸಯ್ಯ, ಸಹಾಯಕ ಮೋಹನ್ ಸೇರಿದಂತೆ ಹಾಲು ಉತ್ಪಾದಕರ ಗ್ರಾಮಸ್ಥರು ಇದ್ದರು‌.

Ramesh Babu

Journalist

Recent Posts

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

1 hour ago

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

12 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

23 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

24 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

24 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

1 day ago