Categories: ಕೋಲಾರ

ಹಾಲು ದುಡ್ಡು ತಿಂದವರು ಯಾರು ಉದ್ದಾರ ಆಗಲ್ಲ- ಕೋಮುಲ್ ನಿರ್ದೇಶಕ ಚಂಜಿಮಲೆ ರಮೇಶ್

ಕೋಲಾರ: ಜಿಲ್ಲೆಯ ಬಹುತೇಕ ಜನರ ಜೀವನಾಧಾರ ಹೈನುಗಾರಿಕೆಯಾಗಿದೆ. ಮಹಿಳೆಯರು ಮತ್ತು ರೈತರ ಬೆವರು ಇದರಲ್ಲಿ ಅಡಗಿದೆ.ಹಾಲಿನ ಹಣ ತಿಂದವರು ಯಾವುದೇ ಕಾರಣಕ್ಕೂ ಉದ್ದಾರವಾಗಲ್ಲ ಎಂದು ಕೋಮುಲ್ ನಿರ್ದೇಶಕ ಚಂಜಿಮಲೆ ಬಿ ರಮೇಶ್ ತಿಳಿಸಿದರು.

ತಾಲೂಕಿನ ಚಂಜಿಮಲೆ ಹಾಲು ಉತ್ಪಾದಕರ ಸಹಕಾರ ಸಂಘದ 2024-25 ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯನ್ನು ಬುಧವಾರ ಉದ್ಘಾಟಿಸಿ ಮಾತನಾಡಿದ ಅವರು ಹಾಲಿಗೂ ನೀರಿಗೂ ತುಂಬಾ ವ್ಯತ್ಯಾಸವಿದೆ. ಕಲಬೆರಕೆ ಮಾಡಬೇಡಿ. ಯಾವುದಾದರೂ ತಪ್ಪು ಕಂಡುಬಂದರೆ ಕೂಡಲೇ ಪ್ರಶ್ನೆ ಮಾಡಬೇಕು. ಹಾಲಿನ ದುಡ್ಡು ತಿನ್ನಂದರೆ ರೈತರು ಮಹಿಳೆಯರ ಶಾಪ ತಟ್ಟುತ್ತದೆ ಹಾಲು ದುಡ್ಡು ಯಾವುದೇ ಕಾರಣಕ್ಕೂ ಅನ್ಯಾಯವಾಗದಂತೆ ನೋಡಿಕೊಳ್ಳಬೇಕು ಎಂದರು.

ಚಂಜಿಮಲೆ ಡೇರಿಯಲ್ಲಿ ಈ ಸಾಲಿನಲ್ಲಿ 13 ಲಕ್ಷ ವ್ಯಾಪಾರ ಗಳಿಸಿದ್ದು ಅದರಲ್ಲಿ 7.46 ಲಕ್ಷದಷ್ಟು ನಿವ್ವಳ ಲಾಭಗಳಿಸಿದೆ ಉತ್ಪಾದಕರು ಡೇರಿಗೆ ಗುಣಮಟ್ಟದ ಹಾಲು ಪೂರೈಕೆ ಮಾಡಿ ಉತ್ತಮ ಲಾಭಾಂಶವನ್ನು ಪಡೆಯಬೇಕು ಕಾಲಕಾಲಕ್ಕೆ ರಾಸುಗಳಿಗೆ ವಿಮೆ, ವಾಕ್ಸಿನ್ ಮಾಡಿಸಬೇಕು ಜೊತೆಗೆ ಉತ್ಪಾದಕರು ಕಡ್ಡಾಯವಾಗಿ ಯಶಸ್ವಿನಿ ಯೋಜನೆ ಮಾಡಿಸಿ ಅದರ ಪ್ರಯೋಜನವನ್ನು ಪಡೆಯಬೇಕು ಕೋಮುಲ್ ವತಿಯಿಂದ ಎಂವಿಕೆ ಡೇರಿ, ಸೋಲಾರ್ ಘಟಕದ ಮೂಲಕ ಹಾಲು ಉತ್ಪಾದಕರಿಗೆ ಅನುಕೂಲವಾಗುವಂತೆ ಒಕ್ಕೂಟ ಮಾಡಲಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ನಿರ್ದೇಶಕ ಮುನೇಶ್ ಮಾತನಾಡಿ ಒಕ್ಕೂಟಕ್ಕೆ ಸಂಘಗಳು ಆಧಾರಸ್ಥಂಭವಾಗಿದ್ದು ಯಾವುದೇ ಕಾರಣಕ್ಕೂ ಒಕ್ಕೂಟದಲ್ಲಿ ಹಣ ಪೋಲು ಆಗದಂತೆ ಚಂಜಿಮಲೆ ಡೇರಿಯಿಂದ ಪ್ರತಿನಿಧಿಸಿ ಆಯ್ಕೆಯಾದ ಕೋಮುಲ್ ನೂತನ ನಿರ್ದೇಶಕರು ಕ್ರಮ ವಹಿಸಬೇಕಾಗಿದೆ ಮಹಿಳೆಯರು ರೈತರ ಧ್ವನಿಯಾಗಿ ಕೋಮುಲ್ ಆಡಳಿತ ಮಂಡಳಿ ನಡೆದುಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಈ ಸಂದರ್ಭದಲ್ಲಿ ಚಂಜಿಮಲೆ ಡೇರಿ ಉಪಾಧ್ಯಕ್ಷ ಎನ್ ಶ್ರೀರಾಮಪ್ಪ, ನಿರ್ದೇಶಕರಾದ ಇ ಚಂದ್ರಪ್ಪ, ನರಸಿಂಹಪ್ಪ, ಪ್ರಸನ್ನ, ಅಲ್ಲಾಭಕಾಷ್, ದೇವರಾಜ್, ರಾಜಪ್ಪ, ಪುಷ್ಪ, ಗೌರಮ್ಮ, ಮಾಜಿ ಅಧ್ಯಕ್ಷ ಗೋಪಾಲಕೃಷ್ಣ, ಕಾರ್ಯದರ್ಶಿ ಸಿ.ಎನ್ ಪಾಪಣ್ಣ, ಹಾಲು ಪರೀಕ್ಷಕ ಶ್ರೀನಿವಾಸಯ್ಯ, ಸಹಾಯಕ ಮೋಹನ್ ಸೇರಿದಂತೆ ಹಾಲು ಉತ್ಪಾದಕರ ಗ್ರಾಮಸ್ಥರು ಇದ್ದರು‌.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

7 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

11 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

11 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

14 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

1 day ago