ಹಾವು, ನಾಯಿ ಕಡಿತಕ್ಕೆ ಔಷಧಿ ಅಗತ್ಯ ದಾಸ್ತಾನು – ಸಚಿವ ಕೆ. ಎಚ್. ಮುನಿಯಪ್ಪ

ಹೃದಯಾಘಾತ ಸೇರಿದಂತೆ ಹಾವು ಹಾಗೂ ನಾಯಿ ಕಡಿತಕ್ಕೆ ಅಗತ್ಯ ಔಷಧಿ ಲಭ್ಯವಿರುವುದಾಗಿ ವೖದ್ಯರು ಮಾಹಿತಿ ನೀಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಚ್ ಮುನಿಯಪ್ಪ ಹೇಳಿದರು.

ದೇವನಹಳ್ಳಿ ತಾಲೂಕು ಆಸ್ಪತ್ರೆಯಲ್ಲಿ ಶನಿವಾರ ನಡೆದ ಆರೋಗ್ಯ ರಕ್ಷಾ ಸಮಿತಿ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಾರ್ವಜನಿಕರ ಒತ್ತಾಯದ ಮೇರೆಗೆ ಶೀಘ್ರದಲ್ಲಿಯೇ ಕಿದ್ವಾಯಿ ಆಸ್ಪತ್ರೆ ಸಹಯೋಗದೊಂದಿಗೆ ಕ್ಯಾನ್ಸರ್ ತಪಾಸಣಾ ಶಿಬಿರವನ್ನು ಆಯೋಜಿಸಲು ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖಾ ಸಚಿವರೊಂದಿಗೆ ಸಮಾಲೋಚಿಸಲಾಗುವುದು ಎಂದರು.

ಆಸ್ಪತ್ರೆಗೆ ಬರುವ ಹೊರ ರೋಗಿಗಳ ತಪಾಸಣಾ ಶುಲ್ಕ 5 ರೂ. ಇದ್ದು ಬೇರೆ ಸಾರ್ವಜನಿಕ ಆಸ್ಪತ್ರೆಗಳಲ್ಲಿರುವಂತೆ 10 ರೂ.ಗಳಿಗೆ ಹೆಚ್ಚಿಸಲು ಸಮಿತಿಯಲ್ಲಿ ತೀರ್ಮಾನಿಸಲಾಯಿತು.

ಪ್ರತಿನಿತ್ಯ ಆಸ್ಪತ್ರೆಗೆ 400 ಕ್ಕೂ ಹೆಚ್ಚು ರೋಗಿಗಳು ತಪಾಸಣೆಗೆ ಆಗಮಿಸುತಿದ್ದು, ವೖದ್ಯರ ಮೇಲೆ ಒತ್ತಡ ಇದ್ದರೂ ಅಗತ್ಯದಷ್ಟು ಸಿಬ್ಬಂದಿಯಿರುವುದರಿಂದ ಒಳ್ಳೆಯ ಸೇವೆ ದೊರೆಯುತ್ತಿದೆ. ನೂರು ಹಾಸಿಗೆ ಸಾಮರ್ಥ್ಯದ ವ್ಯವಸ್ಥೆಯೊಂದಿಗೆ ತಾಯಿ ಮಕ್ಕಳ ಆಸ್ಪತ್ರೆಯೂ ಕಾರ್ಯನಿರ್ವಹಿಸುತಿದ್ದು, ಮೂಲ ಸೌಕರ್ಯಗಳನ್ನು ಹೆಚ್ಚಿಸಲಾಗುವುದು.

ಕುಡಿಯುವ ನೀರಿಗೆ ತಕ್ಷಣ ಬೋರ್ವೆಲ್ ಕೊರೆಯುವುಸದರೊಂದಿಗೆ, ಆಸ್ಪತ್ರೆ ತ್ಯಾಜ್ಯ ಹೊರ ಹೋಗುವ ಚರಂಡಿ ಸರಿಪಡಿಸಲು ಸೂಚಿಸಲಾಗಿದೆ.

ಅವೈಜ್ಞಾನಿಕವಾಗಿರುವ ಶವಾಗಾರದ ರ್ಯಾಂಪ್ ಸರಿಪಡಿಸಲು ಹಾಗೂ ಆಸ್ಪತ್ರೆ ಆವರಣಕ್ಕೆ ಬರುವ ನಾಯಿಗಳ ನಿಯಂತ್ರಣಕ್ಕೂ ಸೂಚಿಸಲಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಆಸ್ಪತ್ರೆಗೆ ತರಿಸಲಾಗಿರುವ ಹೊಸ ಡಿಜಿಟಲ್ ಎಕ್ಸರೇ ಯಂತ್ರವನ್ನು ಸಚಿವರು ವೀಕ್ಷಿಸಿ ದರು.

ಸಭೆಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷರಾದ ರಾಜಣ್ಣ, ತಾಲೂಕು ಅಧ್ಯಕ್ಷರಾದ ಜಗನ್ನಾಥ್, ಆರೋಗ್ಯ ರಕ್ಷಾ ಸಮಿತಿ ಸದಸ್ಯರುಗಳು, ವೖದ್ಯರು ಹಾಗೂ ಸಿಬ್ಬಂದಿ ಇದ್ದರು.

Ramesh Babu

Journalist

Recent Posts

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

1 minute ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

54 minutes ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

7 hours ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

8 hours ago

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

13 hours ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

1 day ago