ಹೃದಯಾಘಾತ ಸೇರಿದಂತೆ ಹಾವು ಹಾಗೂ ನಾಯಿ ಕಡಿತಕ್ಕೆ ಅಗತ್ಯ ಔಷಧಿ ಲಭ್ಯವಿರುವುದಾಗಿ ವೖದ್ಯರು ಮಾಹಿತಿ ನೀಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಚ್ ಮುನಿಯಪ್ಪ ಹೇಳಿದರು.
ದೇವನಹಳ್ಳಿ ತಾಲೂಕು ಆಸ್ಪತ್ರೆಯಲ್ಲಿ ಶನಿವಾರ ನಡೆದ ಆರೋಗ್ಯ ರಕ್ಷಾ ಸಮಿತಿ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಾರ್ವಜನಿಕರ ಒತ್ತಾಯದ ಮೇರೆಗೆ ಶೀಘ್ರದಲ್ಲಿಯೇ ಕಿದ್ವಾಯಿ ಆಸ್ಪತ್ರೆ ಸಹಯೋಗದೊಂದಿಗೆ ಕ್ಯಾನ್ಸರ್ ತಪಾಸಣಾ ಶಿಬಿರವನ್ನು ಆಯೋಜಿಸಲು ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖಾ ಸಚಿವರೊಂದಿಗೆ ಸಮಾಲೋಚಿಸಲಾಗುವುದು ಎಂದರು.
ಆಸ್ಪತ್ರೆಗೆ ಬರುವ ಹೊರ ರೋಗಿಗಳ ತಪಾಸಣಾ ಶುಲ್ಕ 5 ರೂ. ಇದ್ದು ಬೇರೆ ಸಾರ್ವಜನಿಕ ಆಸ್ಪತ್ರೆಗಳಲ್ಲಿರುವಂತೆ 10 ರೂ.ಗಳಿಗೆ ಹೆಚ್ಚಿಸಲು ಸಮಿತಿಯಲ್ಲಿ ತೀರ್ಮಾನಿಸಲಾಯಿತು.
ಪ್ರತಿನಿತ್ಯ ಆಸ್ಪತ್ರೆಗೆ 400 ಕ್ಕೂ ಹೆಚ್ಚು ರೋಗಿಗಳು ತಪಾಸಣೆಗೆ ಆಗಮಿಸುತಿದ್ದು, ವೖದ್ಯರ ಮೇಲೆ ಒತ್ತಡ ಇದ್ದರೂ ಅಗತ್ಯದಷ್ಟು ಸಿಬ್ಬಂದಿಯಿರುವುದರಿಂದ ಒಳ್ಳೆಯ ಸೇವೆ ದೊರೆಯುತ್ತಿದೆ. ನೂರು ಹಾಸಿಗೆ ಸಾಮರ್ಥ್ಯದ ವ್ಯವಸ್ಥೆಯೊಂದಿಗೆ ತಾಯಿ ಮಕ್ಕಳ ಆಸ್ಪತ್ರೆಯೂ ಕಾರ್ಯನಿರ್ವಹಿಸುತಿದ್ದು, ಮೂಲ ಸೌಕರ್ಯಗಳನ್ನು ಹೆಚ್ಚಿಸಲಾಗುವುದು.
ಕುಡಿಯುವ ನೀರಿಗೆ ತಕ್ಷಣ ಬೋರ್ವೆಲ್ ಕೊರೆಯುವುಸದರೊಂದಿಗೆ, ಆಸ್ಪತ್ರೆ ತ್ಯಾಜ್ಯ ಹೊರ ಹೋಗುವ ಚರಂಡಿ ಸರಿಪಡಿಸಲು ಸೂಚಿಸಲಾಗಿದೆ.
ಅವೈಜ್ಞಾನಿಕವಾಗಿರುವ ಶವಾಗಾರದ ರ್ಯಾಂಪ್ ಸರಿಪಡಿಸಲು ಹಾಗೂ ಆಸ್ಪತ್ರೆ ಆವರಣಕ್ಕೆ ಬರುವ ನಾಯಿಗಳ ನಿಯಂತ್ರಣಕ್ಕೂ ಸೂಚಿಸಲಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಆಸ್ಪತ್ರೆಗೆ ತರಿಸಲಾಗಿರುವ ಹೊಸ ಡಿಜಿಟಲ್ ಎಕ್ಸರೇ ಯಂತ್ರವನ್ನು ಸಚಿವರು ವೀಕ್ಷಿಸಿ ದರು.
ಸಭೆಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷರಾದ ರಾಜಣ್ಣ, ತಾಲೂಕು ಅಧ್ಯಕ್ಷರಾದ ಜಗನ್ನಾಥ್, ಆರೋಗ್ಯ ರಕ್ಷಾ ಸಮಿತಿ ಸದಸ್ಯರುಗಳು, ವೖದ್ಯರು ಹಾಗೂ ಸಿಬ್ಬಂದಿ ಇದ್ದರು.
ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…
ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…
ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…
ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…
The desert sun has always promised a bright future for Arizona residents, but the rising…
ಪಿ. ಲಂಕೇಶ್........ ಮಾರ್ಚ್ 8, 1935, ಜನವರಿ 25, 2000.... ಎರಡು ವೈರುಧ್ಯಗಳ ಚಿಂತನೆಯ ಜನರಲ್ಲಿ ಪ್ರೀತಿ - ದ್ವೇಷ…