ಹೃದಯಾಘಾತ ಸೇರಿದಂತೆ ಹಾವು ಹಾಗೂ ನಾಯಿ ಕಡಿತಕ್ಕೆ ಅಗತ್ಯ ಔಷಧಿ ಲಭ್ಯವಿರುವುದಾಗಿ ವೖದ್ಯರು ಮಾಹಿತಿ ನೀಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಚ್ ಮುನಿಯಪ್ಪ ಹೇಳಿದರು.
ದೇವನಹಳ್ಳಿ ತಾಲೂಕು ಆಸ್ಪತ್ರೆಯಲ್ಲಿ ಶನಿವಾರ ನಡೆದ ಆರೋಗ್ಯ ರಕ್ಷಾ ಸಮಿತಿ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಾರ್ವಜನಿಕರ ಒತ್ತಾಯದ ಮೇರೆಗೆ ಶೀಘ್ರದಲ್ಲಿಯೇ ಕಿದ್ವಾಯಿ ಆಸ್ಪತ್ರೆ ಸಹಯೋಗದೊಂದಿಗೆ ಕ್ಯಾನ್ಸರ್ ತಪಾಸಣಾ ಶಿಬಿರವನ್ನು ಆಯೋಜಿಸಲು ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖಾ ಸಚಿವರೊಂದಿಗೆ ಸಮಾಲೋಚಿಸಲಾಗುವುದು ಎಂದರು.
ಆಸ್ಪತ್ರೆಗೆ ಬರುವ ಹೊರ ರೋಗಿಗಳ ತಪಾಸಣಾ ಶುಲ್ಕ 5 ರೂ. ಇದ್ದು ಬೇರೆ ಸಾರ್ವಜನಿಕ ಆಸ್ಪತ್ರೆಗಳಲ್ಲಿರುವಂತೆ 10 ರೂ.ಗಳಿಗೆ ಹೆಚ್ಚಿಸಲು ಸಮಿತಿಯಲ್ಲಿ ತೀರ್ಮಾನಿಸಲಾಯಿತು.
ಪ್ರತಿನಿತ್ಯ ಆಸ್ಪತ್ರೆಗೆ 400 ಕ್ಕೂ ಹೆಚ್ಚು ರೋಗಿಗಳು ತಪಾಸಣೆಗೆ ಆಗಮಿಸುತಿದ್ದು, ವೖದ್ಯರ ಮೇಲೆ ಒತ್ತಡ ಇದ್ದರೂ ಅಗತ್ಯದಷ್ಟು ಸಿಬ್ಬಂದಿಯಿರುವುದರಿಂದ ಒಳ್ಳೆಯ ಸೇವೆ ದೊರೆಯುತ್ತಿದೆ. ನೂರು ಹಾಸಿಗೆ ಸಾಮರ್ಥ್ಯದ ವ್ಯವಸ್ಥೆಯೊಂದಿಗೆ ತಾಯಿ ಮಕ್ಕಳ ಆಸ್ಪತ್ರೆಯೂ ಕಾರ್ಯನಿರ್ವಹಿಸುತಿದ್ದು, ಮೂಲ ಸೌಕರ್ಯಗಳನ್ನು ಹೆಚ್ಚಿಸಲಾಗುವುದು.
ಕುಡಿಯುವ ನೀರಿಗೆ ತಕ್ಷಣ ಬೋರ್ವೆಲ್ ಕೊರೆಯುವುಸದರೊಂದಿಗೆ, ಆಸ್ಪತ್ರೆ ತ್ಯಾಜ್ಯ ಹೊರ ಹೋಗುವ ಚರಂಡಿ ಸರಿಪಡಿಸಲು ಸೂಚಿಸಲಾಗಿದೆ.
ಅವೈಜ್ಞಾನಿಕವಾಗಿರುವ ಶವಾಗಾರದ ರ್ಯಾಂಪ್ ಸರಿಪಡಿಸಲು ಹಾಗೂ ಆಸ್ಪತ್ರೆ ಆವರಣಕ್ಕೆ ಬರುವ ನಾಯಿಗಳ ನಿಯಂತ್ರಣಕ್ಕೂ ಸೂಚಿಸಲಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಆಸ್ಪತ್ರೆಗೆ ತರಿಸಲಾಗಿರುವ ಹೊಸ ಡಿಜಿಟಲ್ ಎಕ್ಸರೇ ಯಂತ್ರವನ್ನು ಸಚಿವರು ವೀಕ್ಷಿಸಿ ದರು.
ಸಭೆಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷರಾದ ರಾಜಣ್ಣ, ತಾಲೂಕು ಅಧ್ಯಕ್ಷರಾದ ಜಗನ್ನಾಥ್, ಆರೋಗ್ಯ ರಕ್ಷಾ ಸಮಿತಿ ಸದಸ್ಯರುಗಳು, ವೖದ್ಯರು ಹಾಗೂ ಸಿಬ್ಬಂದಿ ಇದ್ದರು.
ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…
ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…
ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…
ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…