ಹೃದಯಾಘಾತ ಸೇರಿದಂತೆ ಹಾವು ಹಾಗೂ ನಾಯಿ ಕಡಿತಕ್ಕೆ ಅಗತ್ಯ ಔಷಧಿ ಲಭ್ಯವಿರುವುದಾಗಿ ವೖದ್ಯರು ಮಾಹಿತಿ ನೀಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಚ್ ಮುನಿಯಪ್ಪ ಹೇಳಿದರು.
ದೇವನಹಳ್ಳಿ ತಾಲೂಕು ಆಸ್ಪತ್ರೆಯಲ್ಲಿ ಶನಿವಾರ ನಡೆದ ಆರೋಗ್ಯ ರಕ್ಷಾ ಸಮಿತಿ ಸಭೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಾರ್ವಜನಿಕರ ಒತ್ತಾಯದ ಮೇರೆಗೆ ಶೀಘ್ರದಲ್ಲಿಯೇ ಕಿದ್ವಾಯಿ ಆಸ್ಪತ್ರೆ ಸಹಯೋಗದೊಂದಿಗೆ ಕ್ಯಾನ್ಸರ್ ತಪಾಸಣಾ ಶಿಬಿರವನ್ನು ಆಯೋಜಿಸಲು ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖಾ ಸಚಿವರೊಂದಿಗೆ ಸಮಾಲೋಚಿಸಲಾಗುವುದು ಎಂದರು.
ಆಸ್ಪತ್ರೆಗೆ ಬರುವ ಹೊರ ರೋಗಿಗಳ ತಪಾಸಣಾ ಶುಲ್ಕ 5 ರೂ. ಇದ್ದು ಬೇರೆ ಸಾರ್ವಜನಿಕ ಆಸ್ಪತ್ರೆಗಳಲ್ಲಿರುವಂತೆ 10 ರೂ.ಗಳಿಗೆ ಹೆಚ್ಚಿಸಲು ಸಮಿತಿಯಲ್ಲಿ ತೀರ್ಮಾನಿಸಲಾಯಿತು.
ಪ್ರತಿನಿತ್ಯ ಆಸ್ಪತ್ರೆಗೆ 400 ಕ್ಕೂ ಹೆಚ್ಚು ರೋಗಿಗಳು ತಪಾಸಣೆಗೆ ಆಗಮಿಸುತಿದ್ದು, ವೖದ್ಯರ ಮೇಲೆ ಒತ್ತಡ ಇದ್ದರೂ ಅಗತ್ಯದಷ್ಟು ಸಿಬ್ಬಂದಿಯಿರುವುದರಿಂದ ಒಳ್ಳೆಯ ಸೇವೆ ದೊರೆಯುತ್ತಿದೆ. ನೂರು ಹಾಸಿಗೆ ಸಾಮರ್ಥ್ಯದ ವ್ಯವಸ್ಥೆಯೊಂದಿಗೆ ತಾಯಿ ಮಕ್ಕಳ ಆಸ್ಪತ್ರೆಯೂ ಕಾರ್ಯನಿರ್ವಹಿಸುತಿದ್ದು, ಮೂಲ ಸೌಕರ್ಯಗಳನ್ನು ಹೆಚ್ಚಿಸಲಾಗುವುದು.
ಕುಡಿಯುವ ನೀರಿಗೆ ತಕ್ಷಣ ಬೋರ್ವೆಲ್ ಕೊರೆಯುವುಸದರೊಂದಿಗೆ, ಆಸ್ಪತ್ರೆ ತ್ಯಾಜ್ಯ ಹೊರ ಹೋಗುವ ಚರಂಡಿ ಸರಿಪಡಿಸಲು ಸೂಚಿಸಲಾಗಿದೆ.
ಅವೈಜ್ಞಾನಿಕವಾಗಿರುವ ಶವಾಗಾರದ ರ್ಯಾಂಪ್ ಸರಿಪಡಿಸಲು ಹಾಗೂ ಆಸ್ಪತ್ರೆ ಆವರಣಕ್ಕೆ ಬರುವ ನಾಯಿಗಳ ನಿಯಂತ್ರಣಕ್ಕೂ ಸೂಚಿಸಲಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಆಸ್ಪತ್ರೆಗೆ ತರಿಸಲಾಗಿರುವ ಹೊಸ ಡಿಜಿಟಲ್ ಎಕ್ಸರೇ ಯಂತ್ರವನ್ನು ಸಚಿವರು ವೀಕ್ಷಿಸಿ ದರು.
ಸಭೆಯಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷರಾದ ರಾಜಣ್ಣ, ತಾಲೂಕು ಅಧ್ಯಕ್ಷರಾದ ಜಗನ್ನಾಥ್, ಆರೋಗ್ಯ ರಕ್ಷಾ ಸಮಿತಿ ಸದಸ್ಯರುಗಳು, ವೖದ್ಯರು ಹಾಗೂ ಸಿಬ್ಬಂದಿ ಇದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…